ಯಕ್ಷಗಾನದಲ್ಲಿ ಮುಸ್ಲಿಂ ಸಮುದಾಯ ಅವಹೇಳನ ಆರೋಪ
Team Udayavani, Jan 12, 2018, 11:40 AM IST
ಮಂಗಳೂರು: ಯಕ್ಷಗಾನ ಪ್ರದರ್ಶನವೊಂದರಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪಿಸಿ, ಇದಕ್ಕೆ ವಿರೋಧ ವ್ಯಕ್ತಪಡಿಸುವಂತೆ ಮುಸ್ಲಿಂ ಸಂಘಟನೆಗಳಿಗೆ ಅನಾಮ ಧೇಯ ವ್ಯಕ್ತಿಗಳು ಕರೆ ನೀಡುವ ಬರಹಗಳು ಸಾಮಾಜಿಕ ಜಾಲ ತಾಣಗಳಲ್ಲಿ ರವಾನೆಯಾಗುತ್ತಿವೆ.
ಈ ಯಕ್ಷಗಾನ ಪ್ರಸಂಗದ ವಿರುದ್ಧ ಭಾರೀ ವಿರೋಧ ವ್ಯಕ್ತಪಡಿಸು ವಂತೆ ಜಾಲತಾಣಗಳಲ್ಲಿ ಬರಹ ಪ್ರಕಟಿಸ ಲಾಗಿದ್ದು, “ಯಕ್ಷಗಾನ ಪ್ರದರ್ಶನವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಅಭಿನಯಿಸಿದ ಕಲಾವಿದರು ದಾರಿ ಹೆಣವಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂಬ ಬೆದರಿಕೆ ಹಾಕಲಾಗಿದೆ. ಆದರೆ ಹೆಸರನ್ನು ಉಲ್ಲೇಖೀಸಲಾಗಿಲ್ಲ.
ಸಾಲಿಗ್ರಾಮ ಮೇಳದವರ ಪ್ರಸಂಗ ಇದಾಗಿದ್ದು, ಇದು ಹಳೆಯ ಪ್ರಸಂಗದ ವಿಡಿಯೋ ತುಣುಕು ಎಂದು ಹೇಳಲಾಗಿದೆ. “ಈ ಯಕ್ಷಗಾನದಲ್ಲಿ ಮುಸ್ಲಿಂ ಸಮುದಾಯ ಮತ್ತು ಮುಸ್ಲಿಂ ಹೆಣ್ಣುಮಕ್ಕಳ ಬಗ್ಗೆ ಅವಮಾನಿಸುವ ರೀತಿಯಲ್ಲಿ ಮಾತನಾಡಲಾಗಿದೆ. ಮುಸ್ಲಿಮರು ಎಲ್ಲಿಂದಲೋ ಬಂದ ವರು ಎಂದು ಉಲ್ಲೇಖೀಸಲಾಗಿದೆ ಎಂದು ಆರೋಪಿಸಲಾಗಿದ್ದು, ಮುಸ್ಲಿಂ ಸಂಘಟನೆಗಳು ಇದನ್ನು ಗಮನಿಸ ಬೇಕು ಹಾಗೂ ಕೇಸು ದಾಖಲಿಸ ಬೇಕು’ ಎಂದು ಬರೆಯಲಾಗಿದೆ.
ಕಮಿಷನರ್ ಹೇಳಿಕೆ: ಇದು ಹಳೆಯ ವಿಡಿಯೋ ಆಗಿದ್ದು, ಈ ರೀತಿ ಕೋಮು ಭಾವನೆ ಕೆರಳಿಸುವ ಸಂದೇಶ ರವಾನೆ ಸರಿಯಲ್ಲ. ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ