ಮಣಿಪಾಲ ಎಸ್ಒಸಿ: ಆರ್ಟಿಕಲ್ 19
Team Udayavani, Feb 9, 2018, 12:50 PM IST
ಉಡುಪಿ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಬೆಳೆಯಲು ಆತ್ಮಸ್ಥೈರ್ಯ, ಅಧಿಕ ಜನಸಂಪರ್ಕ, ಬಹು ಭಾಷೆಗಳ ಮೇಲೆ ಹಿಡಿತ ಮೊದಲಾದವು ಅವಶ್ಯ ಎಂದು ಪತ್ರಕರ್ತೆ ವಸಂತಿ ಹರಿಪ್ರಕಾಶ್ ಅಭಿಪ್ರಾಯಪಟ್ಟರು.
ಅವರು ಫೆ. 8ರಂದು ಮಣಿಪಾಲದ ಸ್ಕೂಲ್ ಆಫ್ ಕಮ್ಯುನಿಕೇಶನ್ (ಎಸ್ಒಸಿ)ನಲ್ಲಿ ಆರಂಭಗೊಂಡ “ಆರ್ಟಿಕಲ್ 19′ ವಿಶೇಷ ಉಪನ್ಯಾಸ, ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿ, ವಿಚಾರಗಳ ಕುರಿತಾದ ಕುತೂಹಲ, ಜ್ಞಾನ ಮತ್ತು ಇದಕ್ಕೆ ಪೂರಕವಾದ ಪರಿಶ್ರಮದಿಂದ ಯಶಸ್ಸು ಸಾಧ್ಯ ಎಂದು ಅವರು ಹೇಳಿದರು.
ಎಸ್ಒಸಿ ನಿರ್ದೇಶಕಿ ಡಾ| ಪದ್ಮರಾಣಿ ಸ್ವಾಗತಿಸಿದರು. ಪತ್ರಕರ್ತ ರಾಜೀವ್ ಭಟ್ಟಾಚಾರ್ಯ ಅವರು “ಈಶಾನ್ಯ ರಾಜ್ಯಗಳಲ್ಲಿ ಪ್ರಸ್ತುತ ಮಾಧ್ಯಮಗಳ ಕಾರ್ಯನಿರ್ವಹಣೆ’ ಕುರಿತು ಮಾತನಾಡಿದರು. ಉಪನ್ಯಾಸಕರಾದ ಪ್ರಸೀದ್ ನಾಯರ್ ಮತ್ತು ಶ್ರುತಿ ಶೆಟ್ಟಿ ಉಪಸ್ಥಿತರಿದ್ದರು. ಪ್ರೊ| ಪದ್ಮ ಕುಮಾರ್ ಅತಿಥಿಗಳನ್ನು ಪರಿಚಯಿಸಿದರು. ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಸುಬ್ರಹ್ಮಣ್ಯ ಕಿಣಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು