ಉಡುಪಿ ನಗರಸಭೆ ಸದಸ್ಯನಿಗೆ ಹಲ್ಲೆ: ದೂರು ದಾಖಲು
Team Udayavani, Feb 22, 2018, 9:03 AM IST
ಉಡುಪಿ: ಮೂವರು ವ್ಯಕ್ತಿಗಳು ತನಗೆ ಕೆನ್ನೆಗೆ ಹೊಡೆದು, ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ ಎಂದು ಉಡುಪಿ ನಗರಸಭೆಯ ಗುಂಡಿಬೈಲು ವಾರ್ಡ್ನ ಸದಸ್ಯ ರಮೇಶ್ ಪೂಜಾರಿ (52) ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣೇಶ ಆಚಾರ್ಯ, ಪ್ರಾಣೇಶ್, ಪ್ರಭಾಕರ ಪೂಜಾರಿ ಆರೋಪಿಗಳು.
ಗುಂಡಿಬೈಲು-ಕಲ್ಸಂಕ ಮಾರ್ಗದ ಶಾಲಿನಿ ಪೆಟ್ರೋಲ್ ಬಂಕ್ ಎದುರು ಭಾಗದಲ್ಲಿ ಉಡುಪಿ ನಗರಸಭೆಯ ಅಧೀನದಲ್ಲಿ ಟೆಂಡರ್ ಮುಖೇನ ನಡೆಯುತ್ತಿದ್ದ ರಸ್ತೆ ಕಾಮಗಾರಿಯ ಪ್ರಗತಿಯನ್ನು ಫೆ. 18ರ ಬೆಳಗ್ಗೆ ವೀಕ್ಷಿಸುತ್ತಿದ್ದಾಗ ಆರೋಪಿಗಳು ಅಕ್ರಮವಾಗಿ ತಡೆದು ನಿಲ್ಲಿಸಿ ಅವಾಚ್ಯವಾಗಿ ಬೈದು, ಕೈಯಿಂದ ಕೆನ್ನೆ, ಬೆನ್ನು, ಎದೆಗೆ ಹೊಡೆದು ನೆಲಕ್ಕೆ ಬೀಳಿಸಿ ಕಾಲಿನಿಂದ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ತನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನೂ ಆರೋಪಿಗಳು ತುಂಡರಿಸಿ ಕೊಂಡೊಯ್ದಿದ್ದಾರೆ ಹಾಗೂ ತಡೆಯಲು ಬಂದವರಿಗೂ ಬೈದು ಜೀವಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿಗಳ ವಿರುದ್ಧ ಕಲಂ 341, 504, 506, 394 ಹಾಗೂ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್