ನಮ್ಮನ್ನು ನಾವು ಮೊದಲು ಗೇಲಿ ಮಾಡಿಕೊಳ್ಳಬೇಕು; ಜಯಂತ್ ಕಾಯ್ಕಿಣಿ


Team Udayavani, Dec 6, 2018, 4:24 PM IST

cartoon-01.jpg

ಕುಂದಾಪುರ:ಮುಂಬೈನಿಂದ ಹುಟ್ಟೂರಾದ ಕುಂದಾಪುರಕ್ಕೆ ಬಂದು ಸತೀಶ್ ಆಚಾರ್ಯ ಅವರು ಪರಿಸರ(ಕಲೆಯ ಮೂಲಕ ಸಮಾಜದ ಅಂಕು,ಡೊಂಕು ಎತ್ತಿಹಿಡಿಯುವ) ಮಾಲಿನ್ಯವನ್ನು ನಿವಾರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕಲೆಯಲ್ಲಿ ಮನುಷ್ಯ ಜಾತ್ಯತೀತನಾಗುತ್ತಾನೆ. ಜಾತಿ, ಧರ್ಮ, ಮತ, ಮೂಢನಂಬಿಕೆಗಳ ಕಸದಲ್ಲಿ ಉಳ್ಳವರು ಸಮಾಜವನ್ನು ಹಾಳು ಮಾಡುತ್ತಿರುವ ಸಮಯದಲ್ಲಿ ಅದನ್ನು ಮೀರಿ ಕಾರ್ಟೂನ್ ಗಳ ಮೂಲಕ ಸಮಾಜವನ್ನು ಮಾನವೀಯ ಕಣ್ಣುಗಳಿಂದ ನೋಡುವುದು ನಿಜವಾದ ಆಧ್ಯಾತ್ಮಿಕತೆ, ಧಾರ್ಮಿಕತೆಯಾಗಿದೆ ಎಂದು ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಹೇಳಿದರು.

ಅವರು ಗುರುವಾರ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ಆಯೋಜಿಸಿರುವ ನಾಲ್ಕು ದಿನಗಳ ಕಾರ್ಟೂನ್ ಹಬ್ಬವನ್ನು ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಗುವಿನ ದೊಡ್ಡ ದೇವರು ಅಂದರೆ ಅದು ಚಾರ್ಲಿ ಚಾಪ್ಲಿನ್. ಆತನ ಚಿತ್ರಗಳನ್ನು ನೋಡಿ, ಸಣ್ಣ, ಸಣ್ಣ ಪ್ರಹಸನಗಳನ್ನು ನೋಡಿ…ಆತ ಮಾಡದಿರುವುದನ್ನು ನಾವ್ಯಾರು ಮಾಡಲಿಲ್ಲ. ಆತ ಮಾಡಿದ ಚಿತ್ರಗಳಿಗಿಂತ ನಾವು ಒಂದು ಶಾಟ್ ಕೂಡಾ ಮುಂದಿಲ್ಲ. ಅಂತಹ ಅದ್ಭುತ ನಟ ಚಾಪ್ಲಿನ್. ಆ ಚಾಪ್ಲಿನ್ ನ ಗುಣ ನಿಜವಾದ ಕಾರ್ಟೂನ್ ಗುಣ. ನಾವು ಅದನ್ನು ಕ್ರಿಟಿಕಲ್ ಇನ್ ಸೈಡರ್ ಎಂದು ಕರೆಯುತ್ತೇವೆ. ನಾವು ಒಳಗಿನವರು ಆಗಿದ್ದುಕೊಂಡೇ ತಮಾಷೆ ಮಾಡುವುದು. ಮೊದಲು ನಾವು ನಮ್ಮನ್ನು ನಾವು ಗೇಲಿ ಮಾಡಿಕೊಂಡರೆ ಮಾತ್ರ ಬೇರೆಯವರನ್ನು ಗೇಲಿ ಮಾಡಲು ಸಾಧ್ಯ ಎಂದರು.

ಮುಂಬೈಯಲ್ಲಿದ್ದ ಪ್ರತಿಯೊಬ್ಬರಿಗೂ ಸಿಗುವುದು ಒಂದು ಅನಾಮಿಕತೆ. ನಾನು ಕೂಡಾ ಬರೆಯುವಾಗ ಅನಾಮಿಕನಾಗಿದ್ದೆ, ಅದು ಸತೀಶ್ ಆಚಾರ್ಯ ಆಗಿರಲಿ, ಜೇಮ್ಸ್ ವಾಜ್ ಆಗಲಿ, ರಾವ್ ಬೈಲ್ ಆಗಲಿ ಅವರು ಚಿತ್ರ ಬರೆಯಲಿಕ್ಕೆ ಕುಳಿತಾಗ ಅನಾಮಿಕರಾಗಿರುತ್ತಾರೆ. ಲತಾ ಮಂಗೇಶ್ಕರ್ ಹಾಡುವಾಗ ಅನಾಮಿಕರಾಗಿರುತ್ತಾರೆ, ಸಚಿನ್ ತೆಂಡೂಲ್ಕರ್ ಆಡುತ್ತಿದ್ದಾಗ ಅನಾಮಿಕರಾಗಿರುತ್ತಾರೆ. ಆ ಅನಾಮಿಕತೆಯನ್ನು ನಮಗೆ ಮುಂಬೈ ಜೀವನ ಕೊಟ್ಟಿದೆ. ಮತ್ತು ಸರಳವಾಗಿ ಬದುಕುವುದನ್ನು ಮುಂಬೈ ಶಹರ ಕಲಿಸಿದೆ ಎಂದು ಹೇಳಿದರು.

ತಮ್ಮ ಮಾತಿನುದ್ದಕ್ಕೂ ಮುಂಬೈ ಬದುಕನ್ನು ನೆನಪಿಸಿಕೊಂಡ ಕಾಯ್ಕಿಣಿ ಅವರು ರಾವ್ ಬೈಲ್, ವ್ಯಾಸರಾಯ ಬಲ್ಲಾಳ್, ಯಶವಂತ ಚಿತ್ತಾಲ, ಬೇಂದ್ರೆ, ಕುವೆಂಪು ಸೇರಿದಂತೆ ಹಲವರ ಬಗ್ಗೆ ಉಲ್ಲೇಖಿಸಿ ಹಾಸ್ಯ ಚಟಾಕಿ ಹಾರಿಸಿದರು.

ವೇದಿಕೆಯಲ್ಲಿ ಹಿರಿಯ ಪತ್ರಕರ್ತ, ಬರಹಗಾರ ಶ್ರೀನಿವಾಸ ಜೋಕಟ್ಟೆ, ಹಿರಿಯ ಫೋಟೊ ಜರ್ನಲಿಸ್ಟ್ ಯಜ್ಞ ಮಂಗಳೂರು, ಪತ್ರಕರ್ತ ದಯಾನಂದ ಚೌಟ, ಪತ್ರಕರ್ತ ಯುಕೆ ಕುಮಾರನಾಥ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಿಡ್ ಡೇ ಕ್ರೀಡಾ ಪತ್ರಕರ್ತ ಸುರೇಶ್ ಕೆ.ಕರ್ಕೆರಾ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಉದ್ಘಾಟನೆಗೂ ಮುನ್ನ ನಮ್ಮನ್ನಗಲಿದ ಹಿರಿಯ ವ್ಯಂಗ್ಯಚಿತ್ರಕಾರ ರಾವ್ ಬೈಲ್ ಅವರಿಗೆ ಕಾರ್ಟೂನ್ ಕ್ಯಾರಿಕೇಚರ್ ಹಾಗೂ ಅವರ ಜೀವನಗಾಥೆಯ ವಿಡಿಯೋ ತುಣುಕು ಪ್ರದರ್ಶನದ ಮೂಲಕ ನಮನ ಸಲ್ಲಿಸಲಾಯಿತು. ಗಿರಿಧರ್ ಕಾರ್ಕಳ ಸ್ವಾಗತಿಸಿದರು, ರಾಮಕೃಷ್ಣ ಹೇರ್ಳೆ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಆಚಾರ್ಯ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.