ನಮ್ಮನ್ನು ನಾವು ಮೊದಲು ಗೇಲಿ ಮಾಡಿಕೊಳ್ಳಬೇಕು; ಜಯಂತ್ ಕಾಯ್ಕಿಣಿ


Team Udayavani, Dec 6, 2018, 4:24 PM IST

cartoon-01.jpg

ಕುಂದಾಪುರ:ಮುಂಬೈನಿಂದ ಹುಟ್ಟೂರಾದ ಕುಂದಾಪುರಕ್ಕೆ ಬಂದು ಸತೀಶ್ ಆಚಾರ್ಯ ಅವರು ಪರಿಸರ(ಕಲೆಯ ಮೂಲಕ ಸಮಾಜದ ಅಂಕು,ಡೊಂಕು ಎತ್ತಿಹಿಡಿಯುವ) ಮಾಲಿನ್ಯವನ್ನು ನಿವಾರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕಲೆಯಲ್ಲಿ ಮನುಷ್ಯ ಜಾತ್ಯತೀತನಾಗುತ್ತಾನೆ. ಜಾತಿ, ಧರ್ಮ, ಮತ, ಮೂಢನಂಬಿಕೆಗಳ ಕಸದಲ್ಲಿ ಉಳ್ಳವರು ಸಮಾಜವನ್ನು ಹಾಳು ಮಾಡುತ್ತಿರುವ ಸಮಯದಲ್ಲಿ ಅದನ್ನು ಮೀರಿ ಕಾರ್ಟೂನ್ ಗಳ ಮೂಲಕ ಸಮಾಜವನ್ನು ಮಾನವೀಯ ಕಣ್ಣುಗಳಿಂದ ನೋಡುವುದು ನಿಜವಾದ ಆಧ್ಯಾತ್ಮಿಕತೆ, ಧಾರ್ಮಿಕತೆಯಾಗಿದೆ ಎಂದು ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಹೇಳಿದರು.

ಅವರು ಗುರುವಾರ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ಆಯೋಜಿಸಿರುವ ನಾಲ್ಕು ದಿನಗಳ ಕಾರ್ಟೂನ್ ಹಬ್ಬವನ್ನು ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಗುವಿನ ದೊಡ್ಡ ದೇವರು ಅಂದರೆ ಅದು ಚಾರ್ಲಿ ಚಾಪ್ಲಿನ್. ಆತನ ಚಿತ್ರಗಳನ್ನು ನೋಡಿ, ಸಣ್ಣ, ಸಣ್ಣ ಪ್ರಹಸನಗಳನ್ನು ನೋಡಿ…ಆತ ಮಾಡದಿರುವುದನ್ನು ನಾವ್ಯಾರು ಮಾಡಲಿಲ್ಲ. ಆತ ಮಾಡಿದ ಚಿತ್ರಗಳಿಗಿಂತ ನಾವು ಒಂದು ಶಾಟ್ ಕೂಡಾ ಮುಂದಿಲ್ಲ. ಅಂತಹ ಅದ್ಭುತ ನಟ ಚಾಪ್ಲಿನ್. ಆ ಚಾಪ್ಲಿನ್ ನ ಗುಣ ನಿಜವಾದ ಕಾರ್ಟೂನ್ ಗುಣ. ನಾವು ಅದನ್ನು ಕ್ರಿಟಿಕಲ್ ಇನ್ ಸೈಡರ್ ಎಂದು ಕರೆಯುತ್ತೇವೆ. ನಾವು ಒಳಗಿನವರು ಆಗಿದ್ದುಕೊಂಡೇ ತಮಾಷೆ ಮಾಡುವುದು. ಮೊದಲು ನಾವು ನಮ್ಮನ್ನು ನಾವು ಗೇಲಿ ಮಾಡಿಕೊಂಡರೆ ಮಾತ್ರ ಬೇರೆಯವರನ್ನು ಗೇಲಿ ಮಾಡಲು ಸಾಧ್ಯ ಎಂದರು.

ಮುಂಬೈಯಲ್ಲಿದ್ದ ಪ್ರತಿಯೊಬ್ಬರಿಗೂ ಸಿಗುವುದು ಒಂದು ಅನಾಮಿಕತೆ. ನಾನು ಕೂಡಾ ಬರೆಯುವಾಗ ಅನಾಮಿಕನಾಗಿದ್ದೆ, ಅದು ಸತೀಶ್ ಆಚಾರ್ಯ ಆಗಿರಲಿ, ಜೇಮ್ಸ್ ವಾಜ್ ಆಗಲಿ, ರಾವ್ ಬೈಲ್ ಆಗಲಿ ಅವರು ಚಿತ್ರ ಬರೆಯಲಿಕ್ಕೆ ಕುಳಿತಾಗ ಅನಾಮಿಕರಾಗಿರುತ್ತಾರೆ. ಲತಾ ಮಂಗೇಶ್ಕರ್ ಹಾಡುವಾಗ ಅನಾಮಿಕರಾಗಿರುತ್ತಾರೆ, ಸಚಿನ್ ತೆಂಡೂಲ್ಕರ್ ಆಡುತ್ತಿದ್ದಾಗ ಅನಾಮಿಕರಾಗಿರುತ್ತಾರೆ. ಆ ಅನಾಮಿಕತೆಯನ್ನು ನಮಗೆ ಮುಂಬೈ ಜೀವನ ಕೊಟ್ಟಿದೆ. ಮತ್ತು ಸರಳವಾಗಿ ಬದುಕುವುದನ್ನು ಮುಂಬೈ ಶಹರ ಕಲಿಸಿದೆ ಎಂದು ಹೇಳಿದರು.

ತಮ್ಮ ಮಾತಿನುದ್ದಕ್ಕೂ ಮುಂಬೈ ಬದುಕನ್ನು ನೆನಪಿಸಿಕೊಂಡ ಕಾಯ್ಕಿಣಿ ಅವರು ರಾವ್ ಬೈಲ್, ವ್ಯಾಸರಾಯ ಬಲ್ಲಾಳ್, ಯಶವಂತ ಚಿತ್ತಾಲ, ಬೇಂದ್ರೆ, ಕುವೆಂಪು ಸೇರಿದಂತೆ ಹಲವರ ಬಗ್ಗೆ ಉಲ್ಲೇಖಿಸಿ ಹಾಸ್ಯ ಚಟಾಕಿ ಹಾರಿಸಿದರು.

ವೇದಿಕೆಯಲ್ಲಿ ಹಿರಿಯ ಪತ್ರಕರ್ತ, ಬರಹಗಾರ ಶ್ರೀನಿವಾಸ ಜೋಕಟ್ಟೆ, ಹಿರಿಯ ಫೋಟೊ ಜರ್ನಲಿಸ್ಟ್ ಯಜ್ಞ ಮಂಗಳೂರು, ಪತ್ರಕರ್ತ ದಯಾನಂದ ಚೌಟ, ಪತ್ರಕರ್ತ ಯುಕೆ ಕುಮಾರನಾಥ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಿಡ್ ಡೇ ಕ್ರೀಡಾ ಪತ್ರಕರ್ತ ಸುರೇಶ್ ಕೆ.ಕರ್ಕೆರಾ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಉದ್ಘಾಟನೆಗೂ ಮುನ್ನ ನಮ್ಮನ್ನಗಲಿದ ಹಿರಿಯ ವ್ಯಂಗ್ಯಚಿತ್ರಕಾರ ರಾವ್ ಬೈಲ್ ಅವರಿಗೆ ಕಾರ್ಟೂನ್ ಕ್ಯಾರಿಕೇಚರ್ ಹಾಗೂ ಅವರ ಜೀವನಗಾಥೆಯ ವಿಡಿಯೋ ತುಣುಕು ಪ್ರದರ್ಶನದ ಮೂಲಕ ನಮನ ಸಲ್ಲಿಸಲಾಯಿತು. ಗಿರಿಧರ್ ಕಾರ್ಕಳ ಸ್ವಾಗತಿಸಿದರು, ರಾಮಕೃಷ್ಣ ಹೇರ್ಳೆ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಆಚಾರ್ಯ ವಂದಿಸಿದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.