ನಮ್ಮನ್ನು ನಾವು ಮೊದಲು ಗೇಲಿ ಮಾಡಿಕೊಳ್ಳಬೇಕು; ಜಯಂತ್ ಕಾಯ್ಕಿಣಿ


Team Udayavani, Dec 6, 2018, 4:24 PM IST

cartoon-01.jpg

ಕುಂದಾಪುರ:ಮುಂಬೈನಿಂದ ಹುಟ್ಟೂರಾದ ಕುಂದಾಪುರಕ್ಕೆ ಬಂದು ಸತೀಶ್ ಆಚಾರ್ಯ ಅವರು ಪರಿಸರ(ಕಲೆಯ ಮೂಲಕ ಸಮಾಜದ ಅಂಕು,ಡೊಂಕು ಎತ್ತಿಹಿಡಿಯುವ) ಮಾಲಿನ್ಯವನ್ನು ನಿವಾರಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕಲೆಯಲ್ಲಿ ಮನುಷ್ಯ ಜಾತ್ಯತೀತನಾಗುತ್ತಾನೆ. ಜಾತಿ, ಧರ್ಮ, ಮತ, ಮೂಢನಂಬಿಕೆಗಳ ಕಸದಲ್ಲಿ ಉಳ್ಳವರು ಸಮಾಜವನ್ನು ಹಾಳು ಮಾಡುತ್ತಿರುವ ಸಮಯದಲ್ಲಿ ಅದನ್ನು ಮೀರಿ ಕಾರ್ಟೂನ್ ಗಳ ಮೂಲಕ ಸಮಾಜವನ್ನು ಮಾನವೀಯ ಕಣ್ಣುಗಳಿಂದ ನೋಡುವುದು ನಿಜವಾದ ಆಧ್ಯಾತ್ಮಿಕತೆ, ಧಾರ್ಮಿಕತೆಯಾಗಿದೆ ಎಂದು ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಹೇಳಿದರು.

ಅವರು ಗುರುವಾರ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ಆಯೋಜಿಸಿರುವ ನಾಲ್ಕು ದಿನಗಳ ಕಾರ್ಟೂನ್ ಹಬ್ಬವನ್ನು ಚಿತ್ರ ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ನಗುವಿನ ದೊಡ್ಡ ದೇವರು ಅಂದರೆ ಅದು ಚಾರ್ಲಿ ಚಾಪ್ಲಿನ್. ಆತನ ಚಿತ್ರಗಳನ್ನು ನೋಡಿ, ಸಣ್ಣ, ಸಣ್ಣ ಪ್ರಹಸನಗಳನ್ನು ನೋಡಿ…ಆತ ಮಾಡದಿರುವುದನ್ನು ನಾವ್ಯಾರು ಮಾಡಲಿಲ್ಲ. ಆತ ಮಾಡಿದ ಚಿತ್ರಗಳಿಗಿಂತ ನಾವು ಒಂದು ಶಾಟ್ ಕೂಡಾ ಮುಂದಿಲ್ಲ. ಅಂತಹ ಅದ್ಭುತ ನಟ ಚಾಪ್ಲಿನ್. ಆ ಚಾಪ್ಲಿನ್ ನ ಗುಣ ನಿಜವಾದ ಕಾರ್ಟೂನ್ ಗುಣ. ನಾವು ಅದನ್ನು ಕ್ರಿಟಿಕಲ್ ಇನ್ ಸೈಡರ್ ಎಂದು ಕರೆಯುತ್ತೇವೆ. ನಾವು ಒಳಗಿನವರು ಆಗಿದ್ದುಕೊಂಡೇ ತಮಾಷೆ ಮಾಡುವುದು. ಮೊದಲು ನಾವು ನಮ್ಮನ್ನು ನಾವು ಗೇಲಿ ಮಾಡಿಕೊಂಡರೆ ಮಾತ್ರ ಬೇರೆಯವರನ್ನು ಗೇಲಿ ಮಾಡಲು ಸಾಧ್ಯ ಎಂದರು.

ಮುಂಬೈಯಲ್ಲಿದ್ದ ಪ್ರತಿಯೊಬ್ಬರಿಗೂ ಸಿಗುವುದು ಒಂದು ಅನಾಮಿಕತೆ. ನಾನು ಕೂಡಾ ಬರೆಯುವಾಗ ಅನಾಮಿಕನಾಗಿದ್ದೆ, ಅದು ಸತೀಶ್ ಆಚಾರ್ಯ ಆಗಿರಲಿ, ಜೇಮ್ಸ್ ವಾಜ್ ಆಗಲಿ, ರಾವ್ ಬೈಲ್ ಆಗಲಿ ಅವರು ಚಿತ್ರ ಬರೆಯಲಿಕ್ಕೆ ಕುಳಿತಾಗ ಅನಾಮಿಕರಾಗಿರುತ್ತಾರೆ. ಲತಾ ಮಂಗೇಶ್ಕರ್ ಹಾಡುವಾಗ ಅನಾಮಿಕರಾಗಿರುತ್ತಾರೆ, ಸಚಿನ್ ತೆಂಡೂಲ್ಕರ್ ಆಡುತ್ತಿದ್ದಾಗ ಅನಾಮಿಕರಾಗಿರುತ್ತಾರೆ. ಆ ಅನಾಮಿಕತೆಯನ್ನು ನಮಗೆ ಮುಂಬೈ ಜೀವನ ಕೊಟ್ಟಿದೆ. ಮತ್ತು ಸರಳವಾಗಿ ಬದುಕುವುದನ್ನು ಮುಂಬೈ ಶಹರ ಕಲಿಸಿದೆ ಎಂದು ಹೇಳಿದರು.

ತಮ್ಮ ಮಾತಿನುದ್ದಕ್ಕೂ ಮುಂಬೈ ಬದುಕನ್ನು ನೆನಪಿಸಿಕೊಂಡ ಕಾಯ್ಕಿಣಿ ಅವರು ರಾವ್ ಬೈಲ್, ವ್ಯಾಸರಾಯ ಬಲ್ಲಾಳ್, ಯಶವಂತ ಚಿತ್ತಾಲ, ಬೇಂದ್ರೆ, ಕುವೆಂಪು ಸೇರಿದಂತೆ ಹಲವರ ಬಗ್ಗೆ ಉಲ್ಲೇಖಿಸಿ ಹಾಸ್ಯ ಚಟಾಕಿ ಹಾರಿಸಿದರು.

ವೇದಿಕೆಯಲ್ಲಿ ಹಿರಿಯ ಪತ್ರಕರ್ತ, ಬರಹಗಾರ ಶ್ರೀನಿವಾಸ ಜೋಕಟ್ಟೆ, ಹಿರಿಯ ಫೋಟೊ ಜರ್ನಲಿಸ್ಟ್ ಯಜ್ಞ ಮಂಗಳೂರು, ಪತ್ರಕರ್ತ ದಯಾನಂದ ಚೌಟ, ಪತ್ರಕರ್ತ ಯುಕೆ ಕುಮಾರನಾಥ್ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಿಡ್ ಡೇ ಕ್ರೀಡಾ ಪತ್ರಕರ್ತ ಸುರೇಶ್ ಕೆ.ಕರ್ಕೆರಾ ಅವರನ್ನು ಸನ್ಮಾನಿಸಲಾಯಿತು. ಸಮಾರಂಭದ ಉದ್ಘಾಟನೆಗೂ ಮುನ್ನ ನಮ್ಮನ್ನಗಲಿದ ಹಿರಿಯ ವ್ಯಂಗ್ಯಚಿತ್ರಕಾರ ರಾವ್ ಬೈಲ್ ಅವರಿಗೆ ಕಾರ್ಟೂನ್ ಕ್ಯಾರಿಕೇಚರ್ ಹಾಗೂ ಅವರ ಜೀವನಗಾಥೆಯ ವಿಡಿಯೋ ತುಣುಕು ಪ್ರದರ್ಶನದ ಮೂಲಕ ನಮನ ಸಲ್ಲಿಸಲಾಯಿತು. ಗಿರಿಧರ್ ಕಾರ್ಕಳ ಸ್ವಾಗತಿಸಿದರು, ರಾಮಕೃಷ್ಣ ಹೇರ್ಳೆ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಆಚಾರ್ಯ ವಂದಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.