ಕುಮಟಾದಲ್ಲಿ ಪರಿಸ್ಥಿತಿ ಉದ್ವಿಗ್ನ; ಐಜಿಪಿ ನಿಂಬಾಳ್ಕರ್ ಕಾರಿಗೆ ಬೆಂಕಿ
Team Udayavani, Dec 11, 2017, 2:16 PM IST
ಕುಮಟಾ: ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ಕರೆ ನೀಡಿದ ಕಾರವಾರ ಬಂದ್ ಸೋಮವಾರ ಯಶಸ್ವಿಯಾಗಿದ್ದು, ಏತನ್ಮಧ್ಯೆ ಕುಮಟಾದಲ್ಲಿ ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಕುಮಟಾದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಈ ಸಂದರ್ಭದಲ್ಲಿ ಕುಮಟಾ ಪ್ರತಿಭಟನೆಯ ನಿಯಂತ್ರಣ ವ್ಯವಸ್ಥೆ ಪರಿಶೀಲನೆಯಲ್ಲಿದ್ದ ಐಜಿಪಿ ನಿಂಬಾಳ್ಕರ್ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದರು, ಘಟನೆಯಲ್ಲಿ ನಿಂಬಾಳ್ಕರ್ ವಾಹನದ ಚಾಲಕ ಗಾಯಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಪರಿಸ್ಥಿತಿಯನ್ನು ನಿಯಂತ್ರಿಸಲು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದೆ. ಪ್ರತಿಭಟನಾಕಾರರು ಪೊಲೀಸ್ ಪಡೆಯ ಮೇಲೆ ಕಲ್ಲುತೂರಾಟ ನಡೆಸಿದ ಘಟನೆ ನಡೆದಿದೆ.
ಕುಮಟಾ ಪಟ್ಟಣದಲ್ಲಿ ಸೆಕ್ಷನ್ ಜಾರಿ:
ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಸಾವಿನ ಪ್ರಕರಣದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಉತ್ತರಕನ್ನಡ ಜಿಲ್ಲೆ ಕುಮಟಾದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪೊಲೀಸ್ ವರಿಷ್ಠಾಧಿಕಾರಿ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ