ಉತ್ತರ ಕನ್ನಡ ಬಿಜೆಪಿ ಆಂತರಿಕ ಬಿಕ್ಕಟ್ಟು: ನಾಯಕರಿಗೆ ಇಕ್ಕಟ್ಟು


Team Udayavani, Apr 17, 2018, 2:50 PM IST

1-bb.jpg

ಕಾರವಾರ: ವಿಧಾನಸಭೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಭಟ್ಕಳಕ್ಕೆ ನಾಮಧಾರಿ ಸಮಾಜದ ಸುನೀಲ್‌ ನಾಯ್ಕ ಎಂಬ ಹೊಸ ಮುಖಕ್ಕೆ ಬಿಜೆಪಿ ಅವಕಾಶ ನೀಡಿದೆ. ಖಾಸಗಿ ಬ್ಯಾಂಕ್‌ ನಿರ್ದೇಶಕರಾಗಿ ಸಾಕಷ್ಟು ಹೆಸರು ಮಾಡಿರುವ ಸುನೀಲ್‌ ನಾಯ್ಕ ನಾಲ್ಕು ಜನರಲ್ಲಿ ಎದ್ದು ಕಾಣುವ ವ್ಯಕ್ತಿತ್ವ. ಬಿಜೆಪಿಯಲ್ಲಿ ಹಲವು ವರ್ಷಗಳಿಂದ ಕಾಣಿಸಿಕೊಂಡು ರಾಜಕೀಯ ಮಹತ್ವಾಕಾಂಕ್ಷಿಯಾಗಿದ್ದ ಅವರಿಗೆ ವರಿಷ್ಠರು ಟಿಕೆಟ್‌ ನೀಡಿದ್ದಾರೆ.

ಮಾಜಿ ಸಚಿವ ಶಿವಾನಂದ ನಾಯ್ಕ, ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ ಜೆ.ಡಿ. ನಾಯ್ಕ ಸಹ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಶಿವಾನಂದ ನಾಯ್ಕರನ್ನು ಹೇಗೋ ಯಡಿಯೂರಪ್ಪ ಸಮಾಧಾನಪಡಿಸಬಹುದು. ಜೆ.ಡಿ. ನಾಯ್ಕ ಕಾಂಗ್ರೆಸ್‌ ಸಂಸ್ಕೃತಿ ಮನುಷ್ಯ. ಅವರನ್ನು ಬಿಜೆಪಿ ಕಾರ್ಯಕರ್ತರು ಮನಃಪೂರ್ವಕವಾಗಿ ಸ್ವಾಗತಿಸಿರಲಿಲ್ಲ. ಹಾಗಾಗಿ ಅವರು ಬಂಡೇಳುವ ಲಕ್ಷಣಗಳು ಕಡಿಮೆ. ಕಳೆದ 5 ವರ್ಷಗಳಲ್ಲಿ ಕಾಂಗ್ರೆಸ್‌ ನೊಂದಿಗೆ ಅಂಥ ಸಂಬಂಧವೂ ಇರಲಿಲ್ಲ. ಪಕ್ಷೇತರ ಶಾಸಕ ಮಂಕಾಳು ವೈದ್ಯರು ಬಲಾಡ್ಯರಾಗಿದ್ದು, ಸಿಎಂ ಸಿದ್ದರಾಮಯ್ಯನವರಿಗೆ ಹತ್ತಿರದ ಮನುಷ್ಯ. ಇವರನ್ನು ಮಣಿಸಲು ಆರ್ಥಿಕವಾಗಿ ಸಬಲ ಮನುಷ್ಯನನ್ನು ಬಿಜೆಪಿ ಹುಡುಕಾಡುತ್ತಿತ್ತು. ಅಂತ ವೇಳೆ ಸಿಕ್ಕವರೇ ಸುನೀಲ್‌ ನಾಯ್ಕ. ಈಗ ಅವರು ಭಟ್ಕಳ ಕ್ಷೇತ್ರದ ಜನರ ಮನಗೆಲ್ಲುವರೇ ಎಂಬುದನ್ನು ಕಾದು ನೋಡಬೇಕು. ಸುನೀಲ್‌ ನಾಯ್ಕ ನಾಮಧಾರಿ ಸಮುದಾಯಕ್ಕೆ ಸೇರಿದವರಾದ ಕಾರಣ ಮಾಜಿ ಸಚಿವ ಶಿವಾನಂದ ನಾಯ್ಕ ಮತ್ತು ಅದೇ ಸಮುದಾಯದ ಜೆ.ಡಿ.ನಾಯ್ಕ ತಟಸ್ಥರಾಗಿ ಬೆಂಬಲಿಸುವ ನಿರ್ಧಾರಕ್ಕೆ ಬರುವ ಸಾಧ್ಯತೆಗಳೇ ಹೆಚ್ಚು.

ಹಳಿಯಾಳ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ್ದ ಸುನೀಲ್‌ ಹೆಗಡೆಗೆ ಟಿಕೆಟ್‌ ಸಿಕ್ಕಿದೆ. ಎರಡು ವರ್ಷಗಳಿಂದ ಬಿಜೆಪಿ ಸಂಸ್ಕೃತಿ ಮತ್ತು ಮಾತುಗಾರಿಕೆ ಸುನೀಲ್‌ ಹೆಗಡೆ ರೂಢಿಸಿಕೊಂಡಿದ್ದು, ಅವರು ಸಚಿವ ದೇಶಪಾಂಡೆಗೆ ಪ್ರಬಲ ಪ್ರತಿಸ್ಪರ್ಧೆ ನೀಡುವ ತರಾತುರಿಯಲ್ಲಿದ್ದಾರೆ. ಹಳಿಯಾಳದಲ್ಲಿ ಸುನೀಲ್‌ ಹೆಗಡೆ ಅವರ ವಿರುದ್ಧ ಬಿಜೆಪಿಯಲ್ಲಿ ಬಂಡಾಯ ಏಳುವವರು ಇಲ್ಲವಾಗಿದೆ.

ಯಲ್ಲಾಪುರ ಬಿಎಸ್‌ವೈ ಆಪ್ತರಿಗೆ
ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಸಹ ಕುತೂಹಲ ಹುಟ್ಟಿಸಿತ್ತು. ಇಲ್ಲಿ ಬಿಜೆಪಿ ಮಹಿಳೆಯರು ಸಹ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಕಾಂಗ್ರೆಸ್‌ನಿಂದ ಬಂದಿದ್ದ ಜಿಪಂ ಸದಸ್ಯ ಎಲ್‌.ಟಿ. ಪಾಟೀಲ್‌ ಸಹ ಆಕಾಂಕ್ಷಿಯಾಗಿದ್ದರು. ಸ್ವತಃ ಸಂಸದ, ಹಾಲಿ ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಸಹ ಇಲ್ಲಿಂದ ಸ್ಪರ್ಧಿಸಲಿದ್ದಾರೆಂಬ ಮಾತು ಇತ್ತು. ಅಲ್ಲದೇ ನರಸಿಂಹ ಕೋಣೆಮನೆ ಹೆಸರು ಸಹ ಕೇಳಿ ಬಂದಿತ್ತು. ಆದರೆ ಇವೆಲ್ಲಾ ರಾಜಕೀಯ ಲೆಕ್ಕಾಚಾರ ಹಿಂದಿಕ್ಕಿ, ಯಡಿಯೂರಪ್ಪ ಅವರ ಪರಮಾಪ್ತ ಶಾಸಕರಾಗಿದ್ದ ವಿ.ಎಸ್‌. ಪಾಟೀಲ್‌ ಮತ್ತೆ ಟಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಅವರ ಪಕ್ಷ ನಿಷ್ಠೆ ಮತ್ತು ಯಡಿಯೂರಪ್ಪ ಅವರಲ್ಲಿನ ಶ್ರದ್ಧೆಯೇ ಕಾರಣವಾಗಿದೆ. ಲಿಂಗಾಯತ ವೀರಶೈವ ಮತಗಳ ಜೊತೆ ನಿಗರ್ವಿಯಾಗಿರುವ ವಿ.ಎಸ್‌. ಪಾಟೀಲರು ಸಹ ಮಾಡಿದ್ದ ಸಾಕಷ್ಟು ಅಭಿವೃದ್ಧಿ ಕೆಲಸಗಳು ಅವರಿಗೆ ನೆರವಾಗುವ ಲಕ್ಷಣಗಳಿವೆ. ಶಿವರಾಮ ಹೆಬ್ಟಾರರನ್ನು ಎದುರಿಸಲು ಮಾಜಿ ಶಾಸಕ ವಿ.ಎಸ್‌. ಪಾಟೀಲರೇ ಸಮರ್ಥರು ಎಂದು ಪಕ್ಷ ಕೊನೆಗೂ ನಿರ್ಧರಿಸಿದೆ.

ಕಾರವಾರ ಕ್ಷೇತ್ರವನ್ನು ಹಿಂದುಳಿದ ವರ್ಗದ ಮಹಿಳೆಗೆ ಮೊಟ್ಟ ಮೊದಲ ಬಾರಿಗೆ ಟಿಕೆಟ್‌ ನೀಡಿ ಪ್ರಯೋಗಶೀಲತೆ ಮೆರೆದಿದೆ. ಅಲ್ಲದೇ ಮಹಿಳಾ ಮತದಾರರೇ ಹೆಚ್ಚಿರುವ ಕಾರವಾರ ಕ್ಷೇತ್ರದಲ್ಲಿ ರೂಪಾಲಿ ನಾಯ್ಕರಿಗೆ ಟಿಕೆಟ್‌ ನೀಡಿದ್ದು, ಹಾಲಿ ಶಾಸಕರ ವಿರುದ್ಧ ಇರುವ ಸ್ವಲ್ಪ ಮಟ್ಟಿನ ವಿರೋಧಿ ಅಲೆಯನ್ನು ಬಳಸಿಕೊಳ್ಳಲು ನಿರ್ಧರಿಸಿದೆ. ಇನ್ನು ಶಿರಸಿ ಕ್ಷೇತ್ರದಲ್ಲಿ ಹಿರಿಯ ರಾಜಕಾರಣಿ, 5 ಸಲ ಶಾಸಕರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅನಾಯಾಸವಾಗಿ ಟಿಕೆಟ್‌ ದಕ್ಕಿದೆ

ಸಾಮಾಜಿಕ ನ್ಯಾಯ ಕಾಪಾಡಿದ ಬಿಜೆಪಿ
ಉತ್ತರ ಕನ್ನಡ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಟಿಕೆಟ್‌ ನೀಡುವಾಗ ಬಿಜೆಪಿ ಸಾಮಾಜಿಕ ನ್ಯಾಯ ಕಾಪಾಡಿದೆ. ಹಳಿಯಾಳ, ಶಿರಸಿ ಕ್ಷೇತ್ರಗಳನ್ನು ಬ್ರಾಹ್ಮಣರಿಗೆ ನೀಡಿದೆ. ಯಲ್ಲಾಪುರ ಕ್ಷೇತ್ರವನ್ನು ಲಿಂಗಾಯತರಿಗೆ, ಭಟ್ಕಳದಲ್ಲಿ ಬಹುಸಂಖ್ಯಾತ ನಾಮಧಾರಿ ಸಮುದಾಯಕ್ಕೆ ನೀಡಿದೆ. ಕಾರವಾರದಲ್ಲಿ ಹಿಂದುಳಿದ ವರ್ಗದ ಮಹಿಳೆಗೆ ಮಣೆ ಹಾಕಿದೆ. ಕುಮಟಾವನ್ನು ಹಿಂದೂ ಸಮಾಜದ ಅತೀ ಸಣ್ಣ ಸಮುದಾಯ ಗಾಣಿಗ ಶೆಟ್ಟರಿಗೆ ನೀಡುತ್ತದೆಯೋ ಅಥವಾ ನಾಮಧಾರಿ ಸಮಾಜದ ಸೂರಜ್‌ ಸೋನಿಗೆ ಮತ್ತೂಮ್ಮೆ ಅವಕಾಶ ನೀಡುತ್ತದೆಯೋ ಅಥವಾ ಹಾಲಕ್ಕಿ ಮಹಿಳೆಯನ್ನು ದುತ್ತನೇ ಕಣಕ್ಕೆ ಇಳಿಸುತ್ತದೆಯೋ, ಮೀನುಗಾರ ಸಮುದಾಯಕ್ಕೆ ಅವಕಾಶ ಕಲ್ಪಿಸುತ್ತದೆಯೋ ಎಂಬುದನ್ನು ಕಾದು ನೋಡಬೇಕು. ಸದ್ಯದ ಟಿಕೆಟ್‌ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯ ಕಾಪಾಡಲಾಗಿದೆ.

ಕುಮಟಾ ಇನ್ನೂ ಕಗ್ಗಂಟು
ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಘೋಷಣೆ ಬಿಜೆಪಿ ಪಾಲಿಗೆ ಕಗ್ಗಂಟಾಗಿದೆ. ಅಲ್ಲಿ ಸೂರಜ್‌ ನಾಯ್ಕ, ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿರುವ ಮಾಜಿ ಶಾಸಕ ದಿನಕರ ಶೆಟ್ಟಿ ನಡುವೆ ಟಿಕೆಟ್‌ಗೆ ಭಾರೀ ಪೈಪೋಟಿ ನಡೆದಿದೆ. ದಿನಕರ ಶೆಟ್ಟಿಗೆ ಟಿಕೆಟ್‌ ನೀಡಿದರೆ ಬಿಜೆಪಿ ಬಂಡಾಯ ಅಭ್ಯರ್ಥಿ ಎದುರಿಸಬೇಕಾಗಿದೆ ಎಂಬ ಆಂತರಿಕ ವರದಿ ಪಕ್ಷಕ್ಕೆ ತಲುಪಿದೆ. ಹಾಗಾಗಿ ಬಿಜೆಪಿ ಬಿಕ್ಕಟ್ಟಿನ ಸನ್ನಿವೇಶವನ್ನು ಕುಮಟಾದಲ್ಲಿ ಎದುರಿಸುತ್ತಿದೆ. ಅಲ್ಲದೇ ಇನ್ನಿಬ್ಬರು ಟಿಕೆಟ್‌ ಆಕಾಂಕ್ಷಿಗಳಾದ ಉದ್ಯಮಿ ಯಶೋಧರ ನಾಯ್ಕ, ಮಾಜಿ ಅರಣ್ಯಾಧಿಕಾರಿ ನಾಗರಾಜ ನಾಯಕ ತೊರ್ಕೆ ಸಹ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಇದರಲ್ಲಿ ಯಶೋಧರ ನಾಯ್ಕ ನಾಮಧಾರಿ ಸಮುದಾಯದವರು. ನಾಗರಾಜ ನಾಯಕ ನಾಡವರ ಸಮಾಜದವರು. ನಾಮಧಾರಿ ಸಮಾಜಕ್ಕೆ ಭಟ್ಕಳದಲ್ಲಿ ಅವಕಾಶ ನೀಡಿರುವ ಕಾರಣ ದಿನಕರ ಶೆಟ್ಟಿ ಅವರಿಗೆ ಟಿಕೆಟ್‌ ಬಹುತೇಕ ಖಚಿತವಾಗಲಿದೆ. ಮೇಲಾಗಿ ಅವರು ಹಾಲಿ ಶಾಸಕಿ ಶಾರದಾ ಮೋಹನ ಶೆಟ್ಟಿ ವಿರುದ್ಧ ಅತ್ಯಲ್ಪ (420) ಮತಗಳಿಂದ ಸೋತಿದ್ದರು ಎಂಬ ಅನುಕಂಪ ಇದ್ದೇ ಇದೆ. ಕುಮಟಾ ಸದ್ಯಕ್ಕೆ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿದೆ.

ನಾಗರಾಜ್‌ ಹರಪನಹಳ್ಳಿ

ಟಾಪ್ ನ್ಯೂಸ್

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.