ಉತ್ತಮ ಮಳೆ: ಕೃಷಿ ಚಟುವಟಿಕೆಗೆ ಕಳೆ


Team Udayavani, May 25, 2018, 12:31 PM IST

2-sdd.jpg

ಕಾರವಾರ: ಕಳೆದ ವಾರದಿಂದ ಜಿಲ್ಲೆಯ ಎಲ್ಲೆಡೆ ಮಳೆಯಾಗುತ್ತಿದ್ದು, ಹದ ಮಳೆ ಬಿದ್ದಿದೆ. ಕೃಷಿಕರು ಹೊಲಗಳನ್ನು ಹಸನು ಮಾಡಿಕೊಳ್ಳುತ್ತಿದ್ದಾರೆ.

ಹೊಲಗಳನ್ನು ಹರಗುವ ಮತ್ತು ಸ್ವತ್ಛಗೊಳಿಸುವ ಕ್ರಿಯೆಯಲ್ಲಿ ತೊಡಗಿರುವ ರೈತ, ಬೀಜ, ಗೊಬ್ಬರಗಳನ್ನು ಸಂಗ್ರಹಿಸುತ್ತಿದ್ದಾನೆ. ಮುಂಗಾರು ಆರಂಭವಾಗುವ ವೇಳೆಗೆ ಜಿಲ್ಲೆಯ ಬಯಲು ಸೀಮೆಯ ಭೂಮಿ ಹದವಾಗಿದ್ದರೆ, ಕರಾವಳಿಯಲ್ಲಿ ಗದ್ದೆಗಳನ್ನು ಸಹ ಭತ್ತದ ಕೃಷಿಗೆ ಬೇಕಾಗುವಂತೆ ಸಜ್ಜು ಮಾಡಲಾಗುತ್ತಿದೆ. ಭತ್ತದ ಸಸಿ ಬೆಳೆಸಲು ಮಡಿ ಮಾಡಿಕೊಳ್ಳುವತ್ತ ಕರಾವಳಿ ಕೃಷಿಕರು ನಿರತರಾಗಿದ್ದಾರೆ. ಕೃಷಿ ಇಲಾಖೆ ಸಹ ರೈತರಿಗೆ ಬೇಕಾಗುವ ಬೀಜ ಗೊಬ್ಬರ ಪೂರೈಸಲು ಸಜ್ಜಾಗಿದೆ.

ಜಿಲ್ಲೆಯಲ್ಲಿ ಒಟ್ಟು 158 ಸಾವಿರ ಹೆಕ್ಟೇರ್‌ ಭೂಮಿ ಬಿತ್ತನೆಗಿದ್ದು, ಇದರಲ್ಲಿ 65 ಸಾವಿರ ಹೆಕ್ಟೇರ್‌ ಭತ್ತ ಬೆಳೆಗೆ ಮೀಸಲಾಗಿದೆ. ಭತ್ತ ಸಸಿ ಹಚ್ಚುವ ಕ್ರಿಯೆ ಜೂನ್‌ ಅಂತ್ಯ ಮತ್ತು ಜುಲೈ ಆರಂಭಕ್ಕೆ ಕರಾವಳಿಯಲ್ಲಿ ಆರಂಭವಾದರೆ, ಜೊಯಿಡಾದಲ್ಲಿ ಆಗಸ್ಟ್‌ ವೇಳೆಗೆ ಭತ್ತ ಸಸಿಗಳನ್ನು ನೆಡಲಾಗುತ್ತದೆ. ಜಿಲ್ಲೆಯಲ್ಲಿ ಈ ಸಲ 22 ಸಾವಿರ ಹೆಕ್ಟೇರ್‌ ಭೂಮಿಯಲ್ಲಿ ಮೆಕ್ಕೆಜೋಳ ಬೆಳೆಯಲು ಗುರಿ ಹೊಂದಲಾಗಿದೆ. ಕಬ್ಬು ಬೆಳೆಗೆ 6500 ಹೆಕ್ಟೇರ್‌ ಭೂಮಿ ಮೀಸಲಿದೆ. ಹತ್ತಿಯನ್ನು 1500 ಹೆಕ್ಟೇರ್‌ ಭೂಮಿಯಲ್ಲಿ ಬೆಳೆಯಲಾಗುತ್ತಿದ್ದು, ಸರಿಯಾದ ಬೆಲೆ ಸಿಗದ ಕಾರಣ, ಹೆಚ್ಚು ಕೀಟ ನಾಶಕ ಬಯಸುವ ಹತ್ತಿ ಬೆಳೆಯಿಂದ ರೈತ ನಿಧಾನಕ್ಕೆ ದೂರ ಸರಿಯುತ್ತಿದ್ದಾನೆ.

ಬಿತ್ತನೆ ಚಟುವಟಿಕೆಗೆ ಮೀಸಲು

 ಬಿತ್ತನೆ ಮಾಡಿ ಕೃಷಿ ಚಟುವಟಿಕೆಗೆ 81 ಸಾವಿರ ಹೆಕ್ಟೇರ್‌ ಭೂಮಿ ಇದೆ. ಇದನ್ನು ಪೂರ್ಣ ಪ್ರಮಾಣದಲ್ಲಿ ರೈತ ಕೃಷಿ ಮಾಡುವಂತೆ ಪ್ರೇರೇಪಿಸಲಾಗುತ್ತಿದೆ. ಯಾವ ಬೆಳೆ ಯಾವ ಸಮಯದಲ್ಲಿ ಸೂಕ್ತ, ಮಳೆಯ ವಾತಾವರಣ ಹೇಗಿದೆ ಎಂದು ಕೃಷಿಕರಿಗೆ ಕೃಷಿ ಸಹಾಯಕರು ಮಾರ್ಗದರ್ಶನ ಮಾಡಲು ಎಲ್ಲಾ ತಾಲೂಕುಗಳಲ್ಲಿ ಸಜ್ಜಾಗಿದ್ದಾರೆಂದು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ.

ಎಲ್ಲೆಲ್ಲೆ ಯಾವ ಬೆಳೆ ಪ್ರಧಾನ

ಮೆಕ್ಕೆಜೋಳವನ್ನು ಜಿಲ್ಲೆಯ ಮುಂಡಗೋಡ, ಹಳಿಯಾಳ, ಯಲ್ಲಾಪುರ ಹಾಗೂ ಬನವಾಸಿ ಭಾಗದಲ್ಲಿ ಮೆಕ್ಕೆಜೋಳ ಬೆಳೆಯಲು ಕೃಷಿಕರು ಉತ್ಸುಕರಾಗಿದ್ದು, ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಬಿತ್ತನೆ ಬೀಜಕ್ಕೆ ಸಹ ಹೆಚ್ಚಿನ ಬೇಡಿಕೆ ಬಂದಿದೆ. ಈಗಾಗಲೇ 500 ಕ್ವಿಂಟಾಲ್‌ ಮೆಕ್ಕೆ ಜೋಳ ಬೀಜ ಪೂರೈಸಲಾಗಿದೆ. ಕಳೆದ ಸಲ ಬಿತ್ತನೆ ಬೀಜ ಕೃಷಿ ಭೂಮಿ 63 ಸಾವಿರ ಹೆಕ್ಟೇರ್‌ ನಲ್ಲಿ ವ್ಯಾಪಿಸಿತ್ತು. ಈ ಸಲ ಇನ್ನು 22 ಸಾವಿರ ಹೆಕ್ಟೇರ್‌ ಭೂಮಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಕೃಷಿಗೆ ಹದ ಮಾಡಲಾಗಿದೆ. ಹಳಿಯಾಳ ಭಾಗದಲ್ಲಿ ಹೆಚ್ಚು ಹತ್ತಿ ಬೆಳೆಯಲಾಗುತ್ತಿತ್ತು. ಆದರೆ ದರ ಕುಸಿತ ಮತ್ತು ಹಳಿಯಾಳದಲ್ಲಿ ಬೀಳುತ್ತಿರುವ ಹೆಚ್ಚು ಮಳೆಯ ಕಾರಣ ಹತ್ತಿ ಬೆಳೆಯ ಭೂಮಿ 1500 ರಿಂದ 1200 ಹೆಕ್ಟೇರ್‌ಗೆ ಕುಸಿದಿದೆ. ಕಬ್ಬು ಬೆಳೆಯತ್ತ ಇಲ್ಲಿ ರೈತರು ವಾಲುತ್ತಿದ್ದಾರೆ.

ಕರಾವಳಿಯಲ್ಲಿ ಭತ್ತವೇ ಪ್ರಧಾನ: ಕಾರವಾರದಿಂದ ಭಟ್ಕಳದವರೆಗಿನ ತಾಲೂಕುಗಳಲ್ಲಿ ಕೃಷಿಕರು ಭತ್ತ ಬೆಳೆಗೆ ಆದ್ಯತೆ ನೀಡುತ್ತಿದ್ದಾರೆ. ಸಾಂಪ್ರದಾಯಿಕ ಭತ್ತ ಬೀಜಗಳನ್ನು ಬಳಸುವುದರ ಜೊತೆಗೆ ಇಂಟಾಲ್‌, ಜಯಾ ತಳಿಗಳನ್ನು ಈಚಿನ ವರ್ಷಗಳಲ್ಲಿ ಬೆಳೆಯುತ್ತಿದ್ದಾರೆ. ಬೀಜ ಸಂಗ್ರಹ ಮತ್ತು ಬೀಜೋತ್ಪಾದನಾ ಪದ್ಧತಿಗಳನ್ನು ಕೃಷಿಕರು ಅಳವಡಿಸಿಕೊಳ್ಳುತ್ತಿದ್ದಾರೆ. ಜಯಾ ಮತ್ತು ಇಂಟಾಲ್‌ ತಳಿಗಳ ಬೀಜ ಕೊಡಿ ಎಂದು ಕೃಷಿ ಇಲಾಖೆಗೆ ಬೇಡಿಕೆಗಳನ್ನು ರೈತರು ನೀಡಿದ್ದಾರೆ. ಇಲಾಖೆ ಸಹ ರೈತರ ಬೇಡಿಕೆಗಳನ್ನು ಪೂರೈಸಲು ಸಜ್ಜಾಗಿದೆ ಎಂದು ಕೃಷಿ ಇಲಾಖೆ ಹೇಳಿದೆ.

ಉತ್ತಮ ಮಳೆಯ ಸುಳಿವು

 ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಏಪ್ರಿಲ್‌ನಲ್ಲಿ ಒಂದು ಹದ ಮಳೆ ಬಂತು. ಮೇ ನಲ್ಲಿ ಸಹ ಕೃಷಿ ಚಟುವಟಿಕೆಗೆ ಪೂರಕವಾಗುವಂತೆ ಮಳೆ ಸುರಿದಿದೆ ಎಂದು ಕೃಷಿ ಇಲಾಖೆ ಅಧಿ ಕಾರಿ ವಿವರಿಸಿದರು. ಜನೇವರಿಯಿಂದ ಮೇ ತಿಂಗಳವರೆಗೆ ಸರಾಸರಿ 72 ಮಿ.ಮೀ ಮಳೆಯಾಗುತ್ತಿತ್ತು. ಈ ವರ್ಷ 129 ಮಿ.ಮೀ. ಮಳೆ ಸುರಿದಿದೆ. ಇದರಿಂದ ಜನ ಜಾನುವಾರಿಗೆ ಹೆಚ್ಚಿನ ಅನುಕೂಲವಾಗಿದೆ. ಮೇ ತಿಂಗಳಲ್ಲೇ 46 ಮಿ.ಮೀ. ವಾಡಿಕೆ ಮಳೆ. ಮೇ 1 ರಿಂದ ಮೇ 24 ಬೆಳಗಿನ 8 ಗಂಟೆಯ ತನಕ ಈ ಸಲ
98 ಮಿಮೀ ಮಳೆ ಸುರಿದಿದೆ.

ಹಳಿಯಾಳ ತಾಲೂಕಿನಲ್ಲೇ ಈ ಸಲ 176 ಮಿಮೀ ಮಳೆ ಮೇ ತಿಂಗಳಲ್ಲಿ ಬಿದ್ದಿದೆ. ಇದು ರೈತರಿಗೆ
ಅನುಕೂಲವಾಗಿದೆ.

ಜಿಲ್ಲೆಯಲ್ಲಿ ಭತ್ತದ ಬೀಜ ಬೇಡಿಕೆಗೆ ಅನುಸಾರವಾಗಿ ಬರಲಿದೆ. ರಸಗೊಬ್ಬರ ಕೊರತೆಯಾಗುವುದಿಲ್ಲ. ಈಗಾಗಲೇ ರಸ ಗೊಬ್ಬರ ಲಭ್ಯತೆ ಇದೆ. ರೈತರು ಆಧಾರ್‌ ಸಂಖ್ಯೆಯನ್ನು ಕೃಷಿ ಕಚೇರಿಯಲ್ಲಿ ನಮೂದಿಸಿ ರಸ ಗೊಬ್ಬರ ಪಡೆಯಬಹುದಾಗಿದೆ.
 ಡಾ| ಎಸ್‌.ಜಿ. ರಾಧಾಕೃಷ್ಣ,ಸಹಾಯಕ ನಿರ್ದೇಶಕ.ಕೃಷಿ ಇಲಾಖೆ. ಕಾರವಾರ.

ನಾಗರಾಜ ಹರಪನಹಳ್ಳಿ 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.