ಬಿಜೆಪಿಯಿಂದ ಮುಸ್ಲಿಂ ಮಹಿಳಾ ಅಭ್ಯರ್ಥಿ ಶಗುಪ್ತ ಕಣಕ್ಕೆ 


Team Udayavani, Aug 29, 2018, 3:46 PM IST

29-agust-19.jpg

ಕಾರವಾರ: ಭಯೋತ್ಪಾದನೆ ವಿರುದ್ಧ ವಿರೋಧಿ ಹೇಳಿಕೆಗಳನ್ನು ಆಗಾಗ ನೀಡುತ್ತಾ, ಮುಸ್ಲಿಂ ಮತಗಳು ನನಗೆ ಬೇಕಿಲ್ಲ ಎಂದು ಬಹಿರಂಗವಾಗಿಯೇ ಹೇಳುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಸಂಸದ ಹಾಗೂ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಈಗ ಮುಸ್ಲಿಂ ಸಮುದಾಯದ ಮಹಿಳೆ ಪರ ನಿಂತಿರುವುದು ಈಚಿನ ಅವರ ಕಾರವಾರ ಭೇಟಿಯಲ್ಲಿ ಸ್ಪಷ್ಟವಾಗಿದೆ. ಅನಂತಕುಮಾರ್‌ ಹೆಗಡೆ ಮೃದು ಹಿಂದುತ್ವದ ಮೊರೆ ಹೋದರೆ ಎಂಬ ಅನುಮಾನ ಅವರ ಕಟ್ಟಾ ಬೆಂಬಲಿಗರನ್ನು ಕಾಡುತ್ತಿದೆ.

ಕಾರವಾರ ನಗರಸಭೆ ಚುನಾವಣೆಯಲ್ಲಿ ವಾರ್ಡ್‌ ನಂ.15 ರಲ್ಲಿ ಬಿಜೆಪಿ ಶಗುಪ್ತಾ ಸಿದ್ದಿಕಿ ಅವರನ್ನು ಕಣಕ್ಕಿಳಿಸಿದೆ. ಕಾರವಾರ ನಗರಸಭೆ ಚುನಾವಣೆಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಮುಸ್ಲಿಂ ಮಹಿಳೆಯನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಇದು ಹಲವರ ಹುಬ್ಬೇರುವಂತೆ ಮಾಡಿದೆ.

ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಅಲ್ಪಸಂಂಖ್ಯಾತ ಸಮುದಾಯವೊಂದರ ವಿರುದ್ಧ ಉಗ್ರ ಭಾಷಣದ ಮೂಲಕ ಪ್ರಹಾರ ನಡೆಸಿದ್ದ ಕೇಂದ್ರ ಸಚಿವ ಹಿಂದೂ ಮತಬ್ಯಾಂಕ್‌ ಒಂದೆಡೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು. ಜಿಲ್ಲೆಯಲ್ಲಿ 4 ಬಿಜೆಪಿ ಶಾಸಕರು ಆಯ್ಕೆಯಾಗಲೂ ಸಹ ಕಾರಣರಾಗಿದ್ದರು. ಈ ಹಿಂದಿನ ಎರಡು ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಮುಸ್ಲಿಂರ ಮತದ ಅವಶ್ಯಕತೆ ನಮಗಿಲ್ಲ. ಮುಸ್ಲಿಂರು ತನಗೆ ಮತ ನೀಡುವುದು ಸಹ ಬೇಡ ಎಂದು ಬಹಿರಂಗವಾಗಿ ಹೇಳಿದ್ದರು. ಇದರಿಂದ ಜಿಲ್ಲೆಯ ಸುಮಾರು ಎರಡೂವರೆ ಲಕ್ಷದಷ್ಟು ಮುಸ್ಲಿಂ ಸಮುದಾಯದ ಮತಗಳು ಹೆಗಡೆ ವಿರುದ್ಧ ಚಲಾವಣೆಯಾಗುತ್ತವೆ ಎಂದು ಲೆಕ್ಕಾಚಾರ ಹಾಕಲಾಗಿತ್ತು. ಅವರ ಹೇಳಿಕೆಯಿಂದ ಹಿಂದೂ ಮತಗಳು ಧ್ರುವೀಕರಣವಾಗಿ ಒಟ್ಟಾಗಿ ಅತೀ ಹೆಚ್ಚಿನ ಅಂತರದಿಂದ ಅವರು ಗೆಲ್ಲಲು ಸಹಾಯವಾಗಿತ್ತು ಎಂಬುದು ರಾಜಕೀಯ ಲೆಕ್ಕಾಚಾರವಾಗಿತ್ತು. ಆದರೆ ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅನಂತಕುಮಾರ ಹೆಗಡೆ ತನ್ನ ಈ ಕಟ್ಟಾ ಹಿಂದುತ್ವದ ಧೋರಣೆ ಕೈ ಬಿಟ್ಟರೇ?.

ಬಿಜೆಪಿ ಅಭ್ಯರ್ಥಿ ಹೇಳುವುದು ಹೀಗೆ: ಕಳೆದ ಅನೇಕ ವರ್ಷಗಳಿಂದ ಪತಿ ಜೊತೆ ಗಲ್ಫ್ ನಲ್ಲಿದ್ದೆ. ತಾನು ಆಗಿನಿಂದಲೇ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿದ್ದೆ. ಬಿಜೆಪಿ ಮುಸ್ಲಿಂ ವಿರೋಧಿ  ಎಂಬುದು ಶುದ್ಧ ಸುಳ್ಳು. ವಾರ್ಡ್‌ ನಂ. 15ರಿಂದ ಟಿಕೆಟ್‌ ಬಯಸಿ ತಾನು ಬಿಜೆಪಿಯನ್ನು ಸಂಪರ್ಕಿಸಿದೆ. 15ನೇ ವಾರ್ಡ್‌ನಲ್ಲಿ ನಾಲ್ಕೈದು ಟಿಕೆಟ್‌ ಆಕಾಂಕ್ಷಿಗಳಿದ್ದರೂ ಸಹ, ಪಕ್ಷ ತನ್ನನ್ನು ಗುರುತಿಸಿ ಟಿಕೇಟ್‌ ನೀಡಿದೆ. ನನ್ನ ವಾರ್ಡ್‌ನಲ್ಲಿ ಮುಸ್ಲಿಂ ಸಮುದಾಯದ ಮತದಾರರು ಹೆಚ್ಚಿದ್ದು ಕಣದಲ್ಲಿ ನಾಲ್ಕು ಮುಸ್ಲಿಂ ಅಭ್ಯರ್ಥಿಗಳಿದ್ದಾರೆ. ಆದರೂ ಮುಸ್ಲಿಂ ಸಮುದಾಯದವರು ನನ್ನ ಬೆಂಬಲಿಸಲಿದ್ದಾರೆ ಹಾಗೂ ಮುಸ್ಲಿಂ ಮಹಿಳೆಯರು ಬಹಿರಂಗವಾಗಿ ನನಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಅನುಮಾನ: ಬಿಜೆಪಿಯು ಮುಸ್ಲಿಂ ಮಹಿಳೆಯನ್ನು ಕಣಕ್ಕಿಳಿಸಿರುವುದರ ಬಗ್ಗೆ ಇತರೆ ಪಕ್ಷ ಹಾಗೂ ಪಕ್ಷೇತರ ಮುಸ್ಲಿಂ ಅಭ್ಯರ್ಥಿಗಳು ಬಿಜೆಪಿಯ ನಡೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಸ್ಲಿಂ ಸಮುದಾಯವನ್ನು ಮಹಿಳೆ, ಪುರುಷರೆಂದು ವಿಭಜಿಸುತ್ತಿದೆ. ತ್ರಿವಳಿ ತಲಾಖ್‌ ನಿಷೇಧ ಇತ್ಯಾದಿ ಮೂಲಕ ಪ್ರಧಾನಿ ಮೋದಿ ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಪ್ರಚಾರ ಮಾಡಲಾಗುತ್ತಿದೆ. ಆದರೆ ಇಂಥ ಸುಳ್ಳಿನ ಆಟ ಬಹಳ ದಿನ ನಡೆಯದು ಎಂದು ಅಭ್ಯರ್ಥಿ ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.