ಸಾಹಿತ್ಯದ ಪರಿಗಣನೆಗೆ ಬಾರದ ಯಕ್ಷಗಾನ ಬರವಣಿಗೆ


Team Udayavani, Sep 2, 2018, 4:20 PM IST

2-september-22.jpg

ಶಿರಸಿ: ಯಕ್ಷಗಾನ ಸರಳ ಬರವಣಿಗೆಯ ಶಕ್ತಿ ಅಪಾರವಾಗಿದ್ದರೂ ಸಹ ಯಕ್ಷಗಾನ ಬರವಣಿಗೆ ಸಾಹಿತ್ಯ ಎಂದು ಪರಿಗಣನೆ ಆಗದಿರುವುದು ಬೇಸರದ ಸಂಗತಿ ಎಂದು ಯಕ್ಷಗಾನ ಸಂಘಟಕ, ಅಕಾಡೆಮಿ ಸದಸ್ಯ ನಾಗರಾಜ್‌ ಜೋಶಿ ವಿಷಾದ ವ್ಯಕ್ತಪಡಿಸಿದರು. ಅವರು ಶನಿವಾರ ನಗರದ ಯೋಗ ಮಂದಿರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಮಹಿಳಾ ಹಾಗೂ ಮಕ್ಕಳ ಯಕ್ಷಗಾನ ತಂಡ ಯಕ್ಷ ಗೆಜ್ಜೆ ಹಮ್ಮಿಕೊಂಡ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರತ್ಯೇಕ ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಲು ಯಕ್ಷಗಾನ ಸಂಘಟಕರು, ಕಲಾವಿದರ ಶ್ರಮ ಹೆಚ್ಚಿದೆ. ಆದರೆ ಬಯಲಾಟ ಹಾಗೂ ಯಕ್ಷಗಾನ ಅಕಾಡೆಮಿಗೆ ಅನುದಾನ ಹಂಚಿಕೆಯಲ್ಲಿ ಪಾಲು ಮಾಡಿದ್ದು ಆತಂಕ ಸೃಷ್ಟಿಸಿದ್ದರೂ ನಂತರ 1.10 ಕೋ.ರೂ. ಅನುದಾನವನ್ನು ಸರಕಾರ ನೀಡಿತು ಎಂದ ಅವರು, ಸರಕಾರಿ ಪ್ರಾಯೋಜಿತ ಯಕ್ಷಗಾನ ಪ್ರದರ್ಶನ ಒಂದು ನಡೆಸಿ, ಅದಕ್ಕೆ ಐದಾರು ಫಲಕ ಹಾಕಿ ಹಣ ಮಾಡುವ ಕೆಲವರ ನಡೆ ಸರಿಯಲ್ಲ. ಹೊರ ಜಿಲ್ಲೆಗಳಲ್ಲಿ ಇರುವ ಇಂಥ ಕಾರ್ಯ ನಮ್ಮ ಜಿಲ್ಲೆಗೆ ಬಾರದಂತೆ ನೋಡಿಕೊಳ್ಳಬೇಕು. ಕಾಗದ ಪತ್ರಗಳಲ್ಲಿ ಮಾತ್ರ ಹತ್ತಾರು ಯಕ್ಷಗಾನ ಪ್ರದರ್ಶನ ನೀಡಿದ್ದೇವೆ ಎಂದು ತಿಳಿಸಿ ಹಣ ಮಾಡುತ್ತಿರುವ ಸಂಘಟನೆಗಳ ಬಗ್ಗೂ ನಾವು ಜಾಗೃತರಾಗಿರಬೇಕು ಎಂದರು.

ಮಕ್ಕಳಿಗೆ ಯಕ್ಷಗಾನದ ಪ್ರೋತ್ಸಾಹ ನೀಡಿದರೆ ಮಾತ್ರ ಯಕ್ಷಗಾನ ಉಳಿಯಲು ಸಾಧ್ಯ. ಈ ಕಾರಣದಿಂದ ಅಕಾಡೆಮಿ ಈ ವರ್ಷ 60 ತರಬೇತಿ ಶಿಬಿರಗಳಿಗೆ ಅನುಮತಿ ನೀಡಿದೆ. ಇಷ್ಟೊಂದು ವ್ಯಾಪಕವಾಗಿ ತರಬೇತಿ ನಡೆಸುತ್ತಿರುವ ಅಕಾಡೆಮಿ ಇದೇ ಮೊದಲು. ಉಳಿದ ಅಕಾಡೆಮಿಗಳಿಗೆ ಇಲ್ಲಿ ಯಶಸ್ಸು ಆದರೆ ಮಾದರಿಯಾಗಿ ಅನುಷ್ಠಾನಗೊಳ್ಳಬಹುದು ಎಂದರು.

ರಂಗಕರ್ಮಿ ರಮಾನಂದ ಐನಕೈ ಮಾತನಾಡಿ, ಮಕ್ಕಳನ್ನು ಗುಲಾಮರನ್ನಾಗಿಸುವ ಶೈಕ್ಷಣಿಕ ಕಲಿಕೆಯ ಒತ್ತಡದ ಹೊರಗೆ ಪರಿಪೂರ್ಣತೆಗೆ ಒಯ್ಯುವ ಸಾಂಸ್ಕೃತಿಕ ನಡೆಯನ್ನೂ ರೂಢಿಸಬೇಕು. ಮನುಷ್ಯನ ಪರಿಪೂರ್ಣತೆಯ ಬೆಳವಣಿಗೆಗೆ ಅನೇಕ ಕಾರ್ಯಗಳು ಕೊರತೆಯನ್ನುಂಟು ಮಾಡುತ್ತಿದೆ. ಜೀವನಕ್ಕಾಗಿ ಕಲಿಯಬೇಕೆ ವಿನಃ ಉದ್ಯೋಗಕ್ಕಾಗಿ ಅಲ್ಲ. ಚೆನ್ನಾಗಿ ಓದಿಕೊಂಡು ಇಂಜಿನಿಯರ್‌, ಡಾಕ್ಟರ್‌ ಆಗಬಹುದು. ಆದರೆ ಉತ್ತಮ ಕಲಾವಿದನಾಗಲು ಸಾಧ್ಯವಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಭಾಗವತ ಗಜಾನನ ಭಟ್ಟ ತುಳಗೇರಿ, ಯಕ್ಷಗಾನ ಶಿಕ್ಷಣ ಪಡೆದು ಸಂಸ್ಕಾರಯುತವಾಗಿ ಬದುಕಲೂ ಅವಕಾಶ ಆಗುತ್ತದೆ. ನೋಡುವುದನ್ನೂ ಈ ತರಬೇತಿ ಕಲಿಸುತ್ತದೆ ಎಂದರು. ಯೋಗ ಮಂದಿರ ಆಡಳಿತ ಮಂಡಳಿ ಅಧ್ಯಕ್ಷ ಎಸ್‌.ಎನ್‌. ಭಟ್ಟ, ಎಂ.ಕೆ. ಹೆಗಡೆ ಗೋಳಿಕೊಪ್ಪ, ಸತೀಶ ಹೆಗಡೆ ಸಾಮ್ರಾಟ ಇತರರು ಇದ್ದರು. ಯಕ್ಷ ಗೆಜ್ಜೆ ಅಧ್ಯಕ್ಷೆ ನಿರ್ಮಲಾ ಹೆಗಡೆ ಗೋಳಿಕೊಪ್ಪ ಸ್ವಾಗತಿಸಿದರು. ಲತಾ ಗಿರಿಧರ ಹೊನ್ನೆಗದ್ದೆ ನಿರೂಪಿಸಿದರು.

ಯಕ್ಷಗಾನ ಮಕ್ಕಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ. ವೈಜ್ಞಾನಿಕ ಚಿಂತನಾ ಕ್ರಮ ಕೂಡ ಕಲಿಸುತ್ತದೆ. ಯಕ್ಷಗಾನ ಕಲೆಯನ್ನು ಸೈದ್ಧಾಂತಿಕವಾಗಿ ಮಂಡಿಸುವಂತಾಗಬೇಕು.
 ರಮಾನಂದ ಐನಕೈ,
  ರಂಗಕರ್ಮಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.