ಸಾಹಿತ್ಯದ ಪರಿಗಣನೆಗೆ ಬಾರದ ಯಕ್ಷಗಾನ ಬರವಣಿಗೆ


Team Udayavani, Sep 2, 2018, 4:20 PM IST

2-september-22.jpg

ಶಿರಸಿ: ಯಕ್ಷಗಾನ ಸರಳ ಬರವಣಿಗೆಯ ಶಕ್ತಿ ಅಪಾರವಾಗಿದ್ದರೂ ಸಹ ಯಕ್ಷಗಾನ ಬರವಣಿಗೆ ಸಾಹಿತ್ಯ ಎಂದು ಪರಿಗಣನೆ ಆಗದಿರುವುದು ಬೇಸರದ ಸಂಗತಿ ಎಂದು ಯಕ್ಷಗಾನ ಸಂಘಟಕ, ಅಕಾಡೆಮಿ ಸದಸ್ಯ ನಾಗರಾಜ್‌ ಜೋಶಿ ವಿಷಾದ ವ್ಯಕ್ತಪಡಿಸಿದರು. ಅವರು ಶನಿವಾರ ನಗರದ ಯೋಗ ಮಂದಿರದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಕಾರದಲ್ಲಿ ಮಹಿಳಾ ಹಾಗೂ ಮಕ್ಕಳ ಯಕ್ಷಗಾನ ತಂಡ ಯಕ್ಷ ಗೆಜ್ಜೆ ಹಮ್ಮಿಕೊಂಡ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರತ್ಯೇಕ ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಲು ಯಕ್ಷಗಾನ ಸಂಘಟಕರು, ಕಲಾವಿದರ ಶ್ರಮ ಹೆಚ್ಚಿದೆ. ಆದರೆ ಬಯಲಾಟ ಹಾಗೂ ಯಕ್ಷಗಾನ ಅಕಾಡೆಮಿಗೆ ಅನುದಾನ ಹಂಚಿಕೆಯಲ್ಲಿ ಪಾಲು ಮಾಡಿದ್ದು ಆತಂಕ ಸೃಷ್ಟಿಸಿದ್ದರೂ ನಂತರ 1.10 ಕೋ.ರೂ. ಅನುದಾನವನ್ನು ಸರಕಾರ ನೀಡಿತು ಎಂದ ಅವರು, ಸರಕಾರಿ ಪ್ರಾಯೋಜಿತ ಯಕ್ಷಗಾನ ಪ್ರದರ್ಶನ ಒಂದು ನಡೆಸಿ, ಅದಕ್ಕೆ ಐದಾರು ಫಲಕ ಹಾಕಿ ಹಣ ಮಾಡುವ ಕೆಲವರ ನಡೆ ಸರಿಯಲ್ಲ. ಹೊರ ಜಿಲ್ಲೆಗಳಲ್ಲಿ ಇರುವ ಇಂಥ ಕಾರ್ಯ ನಮ್ಮ ಜಿಲ್ಲೆಗೆ ಬಾರದಂತೆ ನೋಡಿಕೊಳ್ಳಬೇಕು. ಕಾಗದ ಪತ್ರಗಳಲ್ಲಿ ಮಾತ್ರ ಹತ್ತಾರು ಯಕ್ಷಗಾನ ಪ್ರದರ್ಶನ ನೀಡಿದ್ದೇವೆ ಎಂದು ತಿಳಿಸಿ ಹಣ ಮಾಡುತ್ತಿರುವ ಸಂಘಟನೆಗಳ ಬಗ್ಗೂ ನಾವು ಜಾಗೃತರಾಗಿರಬೇಕು ಎಂದರು.

ಮಕ್ಕಳಿಗೆ ಯಕ್ಷಗಾನದ ಪ್ರೋತ್ಸಾಹ ನೀಡಿದರೆ ಮಾತ್ರ ಯಕ್ಷಗಾನ ಉಳಿಯಲು ಸಾಧ್ಯ. ಈ ಕಾರಣದಿಂದ ಅಕಾಡೆಮಿ ಈ ವರ್ಷ 60 ತರಬೇತಿ ಶಿಬಿರಗಳಿಗೆ ಅನುಮತಿ ನೀಡಿದೆ. ಇಷ್ಟೊಂದು ವ್ಯಾಪಕವಾಗಿ ತರಬೇತಿ ನಡೆಸುತ್ತಿರುವ ಅಕಾಡೆಮಿ ಇದೇ ಮೊದಲು. ಉಳಿದ ಅಕಾಡೆಮಿಗಳಿಗೆ ಇಲ್ಲಿ ಯಶಸ್ಸು ಆದರೆ ಮಾದರಿಯಾಗಿ ಅನುಷ್ಠಾನಗೊಳ್ಳಬಹುದು ಎಂದರು.

ರಂಗಕರ್ಮಿ ರಮಾನಂದ ಐನಕೈ ಮಾತನಾಡಿ, ಮಕ್ಕಳನ್ನು ಗುಲಾಮರನ್ನಾಗಿಸುವ ಶೈಕ್ಷಣಿಕ ಕಲಿಕೆಯ ಒತ್ತಡದ ಹೊರಗೆ ಪರಿಪೂರ್ಣತೆಗೆ ಒಯ್ಯುವ ಸಾಂಸ್ಕೃತಿಕ ನಡೆಯನ್ನೂ ರೂಢಿಸಬೇಕು. ಮನುಷ್ಯನ ಪರಿಪೂರ್ಣತೆಯ ಬೆಳವಣಿಗೆಗೆ ಅನೇಕ ಕಾರ್ಯಗಳು ಕೊರತೆಯನ್ನುಂಟು ಮಾಡುತ್ತಿದೆ. ಜೀವನಕ್ಕಾಗಿ ಕಲಿಯಬೇಕೆ ವಿನಃ ಉದ್ಯೋಗಕ್ಕಾಗಿ ಅಲ್ಲ. ಚೆನ್ನಾಗಿ ಓದಿಕೊಂಡು ಇಂಜಿನಿಯರ್‌, ಡಾಕ್ಟರ್‌ ಆಗಬಹುದು. ಆದರೆ ಉತ್ತಮ ಕಲಾವಿದನಾಗಲು ಸಾಧ್ಯವಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಭಾಗವತ ಗಜಾನನ ಭಟ್ಟ ತುಳಗೇರಿ, ಯಕ್ಷಗಾನ ಶಿಕ್ಷಣ ಪಡೆದು ಸಂಸ್ಕಾರಯುತವಾಗಿ ಬದುಕಲೂ ಅವಕಾಶ ಆಗುತ್ತದೆ. ನೋಡುವುದನ್ನೂ ಈ ತರಬೇತಿ ಕಲಿಸುತ್ತದೆ ಎಂದರು. ಯೋಗ ಮಂದಿರ ಆಡಳಿತ ಮಂಡಳಿ ಅಧ್ಯಕ್ಷ ಎಸ್‌.ಎನ್‌. ಭಟ್ಟ, ಎಂ.ಕೆ. ಹೆಗಡೆ ಗೋಳಿಕೊಪ್ಪ, ಸತೀಶ ಹೆಗಡೆ ಸಾಮ್ರಾಟ ಇತರರು ಇದ್ದರು. ಯಕ್ಷ ಗೆಜ್ಜೆ ಅಧ್ಯಕ್ಷೆ ನಿರ್ಮಲಾ ಹೆಗಡೆ ಗೋಳಿಕೊಪ್ಪ ಸ್ವಾಗತಿಸಿದರು. ಲತಾ ಗಿರಿಧರ ಹೊನ್ನೆಗದ್ದೆ ನಿರೂಪಿಸಿದರು.

ಯಕ್ಷಗಾನ ಮಕ್ಕಳಲ್ಲಿ ವ್ಯಕ್ತಿತ್ವ ರೂಪಿಸುತ್ತದೆ. ವೈಜ್ಞಾನಿಕ ಚಿಂತನಾ ಕ್ರಮ ಕೂಡ ಕಲಿಸುತ್ತದೆ. ಯಕ್ಷಗಾನ ಕಲೆಯನ್ನು ಸೈದ್ಧಾಂತಿಕವಾಗಿ ಮಂಡಿಸುವಂತಾಗಬೇಕು.
 ರಮಾನಂದ ಐನಕೈ,
  ರಂಗಕರ್ಮಿ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.