8ರಂದು ಕಾರವಾರ ತಾಲೂಕು ಕಸಾಪ ಸಮ್ಮೇಳನ


Team Udayavani, Sep 2, 2018, 5:41 PM IST

2-september-28.jpg

ಕಾರವಾರ: ತಾಲೂಕಿನ ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆ.8 ರಂದು ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಶಾಸಕಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷೆ ರೂಪಾಲಿ ನಾಯ್ಕ ಬಿಡುಗಡೆ ಮಾಡಿದರು. ಪತ್ರಿಕಾ ಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಅವರು, ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿ ಬೆಳೆಸಲು ಸಮ್ಮೇಳನ ಸಹಕಾರಿಯಾಗಿದೆ. ಕನ್ನಡಿಗರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನಕ್ಕೆ ಬರಬೇಕು. ಕನ್ನಡ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಸಮ್ಮೇಳನ ಸಾಹಿತ್ಯ ಕ್ಷೇತ್ರದ ಗಣ್ಯರು ಆಗಮಿಸಲಿದ್ದಾರೆ. ಭಾಷೆಯ ಉನ್ನತಿಯ ಚರ್ಚೆ ಅಲ್ಲಿ ಆಗಲಿದೆ. ಭಾಷೆಯ ಹಿರಿಮೆ ಮತ್ತು ಕವಿಗಳ ಕಾವ್ಯ ವಾಚನ ಹಾಗೂ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಕನ್ನಡದ ತೇರು ಎಳೆಯಬೇಕು ಎಂದರು.

ತಾಲೂಕು ಕಸಾಪ ಅಧ್ಯಕ್ಷ ನಾಗರಾಜ ಹರಪನಹಳ್ಳಿ ಮಾತನಾಡಿ ಸಮ್ಮೇಳನವನ್ನು ಈ ಸಲ ಲಿಂಗಸಮಾನತೆ ಸಾರಲು ಆದ್ಯತೆ ನೀಡಲಾಗಿದೆ. ಜೊತೆಗೆ ಮಂಗಳಮುಖೀ, ರಂಗಭೂಮಿ ಕಲಾವಿದೆ ಆಗಿರುವ ಕಾಜಲ್‌ ಬ್ರಹ್ಮಾವರ ಮುಖ್ಯ ಅತಿಥಿಯಾಗಿದ್ದಾರೆ.

5ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿದ್ದ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ ಅವರೂ ಉಪಸ್ಥಿತರಿದ್ದು, ಕವಿಗೋಷ್ಠಿ ಅಧ್ಯಕ್ಷತೆ ಹಾಗೂ ಆಶಯ ಭಾಷಣವನ್ನು ಕವಯತ್ರಿಯರಿಗೆ ನೀಡಲಾಗಿದೆ. ಕವಿಗೋಷ್ಠಿಯಲ್ಲಿ ಸಹ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕನ್ನಡ ಗೀತೆಗಳ ಗಾಯನವನ್ನು ಕಲಾವಿದೆ ದೀಪ್ತಿ ಅರ್ಗೇಕರ್‌ ನಡೆಸಿಕೊಡಲಿದ್ದಾರೆ ಎಂದರು.

ಯಕ್ಷಗಾನ ಅಕಾಡೆಮಿ ಸದಸ್ಯ ರಾಮಕೃಷ್ಣ ಗುಂದಿ ಮಾತನಾಡಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಅರ್ಥಶಾಸ್ತ್ರಜ್ಞ ಡಾ| ಎಸ್‌. ಡಿ. ನಾಯ್ಕ ವಹಿಸಲಿದ್ದಾರೆ ಎಂದರು. ನಿಕಟಪೂರ್ವ ಸಮ್ಮೇಳನದ ಸರ್ವಾಧ್ಯಕ್ಷೆ ಸುಕ್ರಿ ಬೊಮ್ಮ ಗೌಡ ಧ್ವಜ ಹಸ್ತಾಂತರ ಮಾಡಲಿದ್ದಾರೆ. ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ. ರಾಷ್ಟ್ರಧ್ವಜವನ್ನು ತಹಶೀಲ್ದಾರ್‌ ಶ್ರೀದೇವಿ ಭಟ್‌ ಮಾಡಲಿದ್ದು, ಮೆರವಣಿಗೆಗೆ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತ ರಾಜು ಚಾಲನೆ ನೀಡಲಿದ್ದಾರೆ. ವಿಚಾರ ಸಂಕಿರಣದಲ್ಲಿ ಡಾ| ಶಿವಾನಂದ ನಾಯಕ ಅವರು ಬಹುಸಂಸ್ಕೃತಿಯ ಕಾರವಾರ ವಿಷಯದ ಕುರಿತು ವಿಷಯ ಮಂಡಿಸಲಿದ್ದಾರೆ. ಪತ್ರಕರ್ತ ಎಂ.ಎಸ್‌. ಸದಾಶಿವ ಸಮೂಹ ಮಾಧ್ಯಮಗಳಲ್ಲಿ ಕನ್ನಡದ ಸ್ಥಾನ ಕುರಿತು ವಿಷಯ ಮಂಡಿಸಲಿದ್ದಾರೆ.

ಕವಿಗೋಷ್ಠಿಯಲ್ಲಿ ಕಾರವಾರದ ಕವಿಗಳಾದ ಕೃಷ್ಣಾನಂದ ಬಾಂದೇಕರ್‌, ಜೆ.ಡಿ. ಪಾಲೇಕರ್‌, ನಿವೇದಿತಾ ಕೋಳಂಬಕರ್‌, ಶೈಲಾ ಸಾಳುಂಕೆ, ಸಂಧ್ಯಾ ಕದಂ, ದೇವಿದಾಸ ನಾಯ್ಕ ಭಾಗವಹಿಸಲಿದ್ದಾರೆ. ಕವಿಗಳಾದ ರೇಣುಕಾ ರಮಾನಂದ, ಶ್ರೀದೇವಿ ಕೆರೆಮನೆ, ಗಂಗಾಧರ ಕೊಡ್ಲಿ, ಮಾಣೇಶ್ವರ ನಾಯಕ ಸಹ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕವಯತ್ರಿ ಪ್ರೇಮಾ ಟಿಎಂಆರ್‌ ವಹಿಸಲಿದ್ದು, ಅಕ್ಷತಾ ಕೃಷ್ಣಮೂರ್ತಿ ಆಶಯ ಭಾಷಣ ಮಾಡಲಿದ್ದಾರೆ.

ಸನ್ಮಾನ: ಸರ್ಕಾರಿ ನೌಕರ ಸಿದ್ಧಲಿಂಗಯ್ಯ ಹಿರೇಮಠ, ಶಿಕ್ಷಕಿ ಯಮುನಾ ಪಟಗಾರ, ನಾಟಕಕಾರ ಕೃಷ್ಣಾನಂದ ನಾಯ್ಕ, ಪೌರಕಾರ್ಮಿಕ ನಾಗೇಶ್‌, ಸಮಾಜ ಸೇವಕ ಅರವಿಂದ ನಾಯ್ಕರನ್ನು ಸನ್ಮಾನಿಸಲಾಗುವುದು. 

ಸಮಾರೋಪ ಸಮಾರಂಭದಲ್ಲಿ ಪತ್ರಕರ್ತ ಅರುಣಕುಮಾರ್‌ ಹಬ್ಬು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು. ಹಿರಿಯರಾದ ಗಣಪತಿ ಉಳ್ವೇಕರ್‌, ಪರಿಷತ್‌ ಸದಸ್ಯರಾದ ಗಜಾನನ ಆಳ್ವಾ, ನಜೀರ್‌ ಶೇಖ್‌, ವಿನಾಯಕ ಗಂಗೊಳ್ಳಿ, ಖೈರುನ್ನೀಸಾ ಶೇಖ್‌, ಮಚ್ಚೇಂದ್ರ ಮಹಾಲೆ, ದೀಪಕ್‌ಕುಮಾರ್‌ ಶೆಣ್ವೆ, ಅಲ್ತಾಫ್‌ ಶೇಖ್‌, ಇಬ್ರಾಹಿಂ ಕಲ್ಲೂರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಗೌರವಾಧ್ಯಕ್ಷ ದೀಪಕ್‌ ಕುಮಾರ್‌ ಶೆಣ್ವೆ  ಸ್ವಾಗತಿಸಿದರು. ಗೌರವ ಕೋಶಾಧ್ಯಕ್ಷ ಕಡತೋಕ ಮಂಜು ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.