8ರಂದು ಕಾರವಾರ ತಾಲೂಕು ಕಸಾಪ ಸಮ್ಮೇಳನ


Team Udayavani, Sep 2, 2018, 5:41 PM IST

2-september-28.jpg

ಕಾರವಾರ: ತಾಲೂಕಿನ ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಸೆ.8 ರಂದು ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಶಾಸಕಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷೆ ರೂಪಾಲಿ ನಾಯ್ಕ ಬಿಡುಗಡೆ ಮಾಡಿದರು. ಪತ್ರಿಕಾ ಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಅವರು, ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿ ಬೆಳೆಸಲು ಸಮ್ಮೇಳನ ಸಹಕಾರಿಯಾಗಿದೆ. ಕನ್ನಡಿಗರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನಕ್ಕೆ ಬರಬೇಕು. ಕನ್ನಡ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಸಮ್ಮೇಳನ ಸಾಹಿತ್ಯ ಕ್ಷೇತ್ರದ ಗಣ್ಯರು ಆಗಮಿಸಲಿದ್ದಾರೆ. ಭಾಷೆಯ ಉನ್ನತಿಯ ಚರ್ಚೆ ಅಲ್ಲಿ ಆಗಲಿದೆ. ಭಾಷೆಯ ಹಿರಿಮೆ ಮತ್ತು ಕವಿಗಳ ಕಾವ್ಯ ವಾಚನ ಹಾಗೂ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಕನ್ನಡದ ತೇರು ಎಳೆಯಬೇಕು ಎಂದರು.

ತಾಲೂಕು ಕಸಾಪ ಅಧ್ಯಕ್ಷ ನಾಗರಾಜ ಹರಪನಹಳ್ಳಿ ಮಾತನಾಡಿ ಸಮ್ಮೇಳನವನ್ನು ಈ ಸಲ ಲಿಂಗಸಮಾನತೆ ಸಾರಲು ಆದ್ಯತೆ ನೀಡಲಾಗಿದೆ. ಜೊತೆಗೆ ಮಂಗಳಮುಖೀ, ರಂಗಭೂಮಿ ಕಲಾವಿದೆ ಆಗಿರುವ ಕಾಜಲ್‌ ಬ್ರಹ್ಮಾವರ ಮುಖ್ಯ ಅತಿಥಿಯಾಗಿದ್ದಾರೆ.

5ನೇ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿದ್ದ ಜಾನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ ಅವರೂ ಉಪಸ್ಥಿತರಿದ್ದು, ಕವಿಗೋಷ್ಠಿ ಅಧ್ಯಕ್ಷತೆ ಹಾಗೂ ಆಶಯ ಭಾಷಣವನ್ನು ಕವಯತ್ರಿಯರಿಗೆ ನೀಡಲಾಗಿದೆ. ಕವಿಗೋಷ್ಠಿಯಲ್ಲಿ ಸಹ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕನ್ನಡ ಗೀತೆಗಳ ಗಾಯನವನ್ನು ಕಲಾವಿದೆ ದೀಪ್ತಿ ಅರ್ಗೇಕರ್‌ ನಡೆಸಿಕೊಡಲಿದ್ದಾರೆ ಎಂದರು.

ಯಕ್ಷಗಾನ ಅಕಾಡೆಮಿ ಸದಸ್ಯ ರಾಮಕೃಷ್ಣ ಗುಂದಿ ಮಾತನಾಡಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಅರ್ಥಶಾಸ್ತ್ರಜ್ಞ ಡಾ| ಎಸ್‌. ಡಿ. ನಾಯ್ಕ ವಹಿಸಲಿದ್ದಾರೆ ಎಂದರು. ನಿಕಟಪೂರ್ವ ಸಮ್ಮೇಳನದ ಸರ್ವಾಧ್ಯಕ್ಷೆ ಸುಕ್ರಿ ಬೊಮ್ಮ ಗೌಡ ಧ್ವಜ ಹಸ್ತಾಂತರ ಮಾಡಲಿದ್ದಾರೆ. ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಕನ್ನಡ ಧ್ವಜಾರೋಹಣ ಮಾಡಲಿದ್ದಾರೆ. ರಾಷ್ಟ್ರಧ್ವಜವನ್ನು ತಹಶೀಲ್ದಾರ್‌ ಶ್ರೀದೇವಿ ಭಟ್‌ ಮಾಡಲಿದ್ದು, ಮೆರವಣಿಗೆಗೆ ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹಿಮಂತ ರಾಜು ಚಾಲನೆ ನೀಡಲಿದ್ದಾರೆ. ವಿಚಾರ ಸಂಕಿರಣದಲ್ಲಿ ಡಾ| ಶಿವಾನಂದ ನಾಯಕ ಅವರು ಬಹುಸಂಸ್ಕೃತಿಯ ಕಾರವಾರ ವಿಷಯದ ಕುರಿತು ವಿಷಯ ಮಂಡಿಸಲಿದ್ದಾರೆ. ಪತ್ರಕರ್ತ ಎಂ.ಎಸ್‌. ಸದಾಶಿವ ಸಮೂಹ ಮಾಧ್ಯಮಗಳಲ್ಲಿ ಕನ್ನಡದ ಸ್ಥಾನ ಕುರಿತು ವಿಷಯ ಮಂಡಿಸಲಿದ್ದಾರೆ.

ಕವಿಗೋಷ್ಠಿಯಲ್ಲಿ ಕಾರವಾರದ ಕವಿಗಳಾದ ಕೃಷ್ಣಾನಂದ ಬಾಂದೇಕರ್‌, ಜೆ.ಡಿ. ಪಾಲೇಕರ್‌, ನಿವೇದಿತಾ ಕೋಳಂಬಕರ್‌, ಶೈಲಾ ಸಾಳುಂಕೆ, ಸಂಧ್ಯಾ ಕದಂ, ದೇವಿದಾಸ ನಾಯ್ಕ ಭಾಗವಹಿಸಲಿದ್ದಾರೆ. ಕವಿಗಳಾದ ರೇಣುಕಾ ರಮಾನಂದ, ಶ್ರೀದೇವಿ ಕೆರೆಮನೆ, ಗಂಗಾಧರ ಕೊಡ್ಲಿ, ಮಾಣೇಶ್ವರ ನಾಯಕ ಸಹ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕವಯತ್ರಿ ಪ್ರೇಮಾ ಟಿಎಂಆರ್‌ ವಹಿಸಲಿದ್ದು, ಅಕ್ಷತಾ ಕೃಷ್ಣಮೂರ್ತಿ ಆಶಯ ಭಾಷಣ ಮಾಡಲಿದ್ದಾರೆ.

ಸನ್ಮಾನ: ಸರ್ಕಾರಿ ನೌಕರ ಸಿದ್ಧಲಿಂಗಯ್ಯ ಹಿರೇಮಠ, ಶಿಕ್ಷಕಿ ಯಮುನಾ ಪಟಗಾರ, ನಾಟಕಕಾರ ಕೃಷ್ಣಾನಂದ ನಾಯ್ಕ, ಪೌರಕಾರ್ಮಿಕ ನಾಗೇಶ್‌, ಸಮಾಜ ಸೇವಕ ಅರವಿಂದ ನಾಯ್ಕರನ್ನು ಸನ್ಮಾನಿಸಲಾಗುವುದು. 

ಸಮಾರೋಪ ಸಮಾರಂಭದಲ್ಲಿ ಪತ್ರಕರ್ತ ಅರುಣಕುಮಾರ್‌ ಹಬ್ಬು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು. ಹಿರಿಯರಾದ ಗಣಪತಿ ಉಳ್ವೇಕರ್‌, ಪರಿಷತ್‌ ಸದಸ್ಯರಾದ ಗಜಾನನ ಆಳ್ವಾ, ನಜೀರ್‌ ಶೇಖ್‌, ವಿನಾಯಕ ಗಂಗೊಳ್ಳಿ, ಖೈರುನ್ನೀಸಾ ಶೇಖ್‌, ಮಚ್ಚೇಂದ್ರ ಮಹಾಲೆ, ದೀಪಕ್‌ಕುಮಾರ್‌ ಶೆಣ್ವೆ, ಅಲ್ತಾಫ್‌ ಶೇಖ್‌, ಇಬ್ರಾಹಿಂ ಕಲ್ಲೂರು ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಗೌರವಾಧ್ಯಕ್ಷ ದೀಪಕ್‌ ಕುಮಾರ್‌ ಶೆಣ್ವೆ  ಸ್ವಾಗತಿಸಿದರು. ಗೌರವ ಕೋಶಾಧ್ಯಕ್ಷ ಕಡತೋಕ ಮಂಜು ವಂದಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.