ಉತ್ತರ ಕನ್ನಡದಲ್ಲಿ ಪ್ರಬಲ ಸ್ಪರ್ಧೆ; ಕಾರವಾರ ಅತಂತ್ರ
Team Udayavani, Sep 3, 2018, 4:39 PM IST
ಕಾರವಾರ : ಉತ್ತರ ಕನ್ನಡದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಮೂರು ಕಡೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.
ಕಾರವಾರದಲ್ಲಿ ಅತಂತ್ರ ನಗರಸಭೆ
31 ವಾರ್ಡ್ಗಳ ಪೈಕಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 11 ಸ್ಥಾನಗಳನ್ನು ಗೆದ್ದುಕೊಂಡಿವೆ. ಜೆಡಿಎಸ್ 4 ಸ್ಥಾನಗಳನ್ನು ಗೆದ್ದಿದ್ದು, ಪಕ್ಷೇತರರು 5 ಮಂದಿ ಆಯ್ಕೆಯಾಗಿದ್ದು ಅವರೇ ನಿರ್ಣಾಯಕರಾಗಿದ್ದಾರೆ.
ಶಿರಸಿ ಬಿಜೆಪಿಗೆ
ಶಿರಸಿ ನಗರಸಭೆಯಲ್ಲಿ 17 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರಕ್ಕೇರಿದ್ದು,ಕಾಂಗ್ರೆಸ್ 9 , ಜೆಡಿಎಸ್ 1 ಮತ್ತು ಪಕ್ಷೇತರರು 4 ಸ್ಥಾನಗಳನ್ನು ಗೆದ್ದಿದ್ದಾರೆ.
ದಾಂಡೇಲಿ ನಗರಸಭೆ ಉಳಿಸಿಕೊಂಡ ಕಾಂಗ್ರೆಸ್
31 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಿದೆ. ಬಿಜೆಪಿ 11 ಮತ್ತು ನಾಲ್ವರು ಪಕ್ಷೇತರರು ಗೆದ್ದಿದ್ದಾರೆ.
ಕುಮಟಾ ಬಿಜೆಪಿಗೆ
ಕುಮಟಾ ಪುರಸಭೆಯಲ್ಲಿ 16 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಅಧಿಕಾರಕ್ಕೇರಿದೆ. ಕಾಂಗ್ರೆಸ್ 6 , ಜೆಡಿಎಸ್ 1 ಸ್ಥಾನಗಳನ್ನು ಗೆದ್ದಿದೆ.
ಹಳಿಯಾಳ ಕಾಂಗ್ರೆಸ್ಗೆ
ಹಳಿಯಾಳ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಂಡಿದೆ. ಕಾಂಗ್ರೆಸ್ 14 , ಬಿಜೆಪಿ 7 , ಜೆಡಿಎಸ್ 1 ಮತ್ತು ಪಕ್ಷೇತರ 1 ಸ್ಥಾನಗಳನ್ನು ಗೆದ್ದಿದ್ದಾರೆ.
ಅಂಕೋಲಾ ಪುರಸಭೆ ಅತಂತ್ರ
23 ಕ್ಷೇತ್ರಗಳಿರುವ ಆಂಕೋಲಾ ಪುರಸಭೆ ಅತಂತ್ರವಾಗಿದ್ದು ಕಾಂಗ್ರೆಸ್ 10 , ಬಿಜೆಪಿ 8 ಮತ್ತು 5 ಪಕ್ಷೇತರರು ಗೆದ್ದಿದ್ದಾರೆ.
ಮುಂಡಗೋಡ ಬಿಜೆಪಿ ಪಾಲು
ಮುಂಡಗೋಡ ಪಟ್ಟಣ ಪಂಚಾಯತ್ನಲ್ಲಿ 10 ಸ್ಥಾನಗಳಲ್ಲಿ ಬಿಜೆಪಿ ಅಧಿಕಾರಕ್ಕೇರಿದ್ದು , ಕಾಂಗ್ರೆಸ್ ನಿಂದ 9 ಮಂದಿ ಜಯಗಳಿಸಿದ್ದಾರೆ.
ಯಲ್ಲಾಪುರ ಉಳಿಸಿಕೊಂಡ ಕಾಂಗ್ರೆಸ್
ಯಲ್ಲಾಪುರ ಪಟ್ಟಣ ಪಂಚಾಯತ್ನಲ್ಲಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಕಾಂಗ್ರೆಸ್ ಅಧಿಕಾರ ಹಿಡಿದಿದ್ದು , ಬಿಜೆಪಿ 5 , ಜೆಡಿಎಸ್ 1 ಮತ್ತು ಪಕ್ಷೇತರ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ