ಹಿಂದೂಸ್ಥಾನಿ ಸಂಗೀತಕ್ಕೆ ಉತ್ತೇಜನ 


Team Udayavani, Sep 7, 2018, 4:36 PM IST

7-september-22.jpg

ಹೊನ್ನಾವರ: ಹಿಂದೂಸ್ಥಾನಿ ಸಂಗೀತದ ಪ್ರಚಾರ, ಪ್ರೋತ್ಸಾಹ, ಪೋಷಣೆಯ ಉದ್ದೇಶದಿಂದ ಆರಂಭಗೊಂಡ ಸಪ್ತಕ ಸಂಸ್ಥೆ ಒಂದು ದಶಕದಲ್ಲಿ ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಪ್ರಸಿದ್ಧ ಕಲಾವಿದರ ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಉಚಿತವಾಗಿ ನೀಡಿದೆ.

ಕಲಾವಿದರಿಗೆ, ಕಲಾವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಶಿಷ್ಯವೇತನ, ಉಚಿತ ಸಂಗೀತೋಪಕರಣ ವಿತರಣೆ ಮೊದಲಾದ ಚಟುವಟಿಕೆ ನಡೆಸುತ್ತಾ ಬಂದ ಸಪ್ತಕದ ರೂವಾರಿಗಳಾದ ಜಿ.ಎಸ್‌. ಹೆಗಡೆ ಅಲ್ಪ ಅನಾರೋಗ್ಯದಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಸಿದ ನಂತರ ಸೀಮೋಲ್ಲಂಘನ ಮಾಡಿದ್ದು, ಮುಂಬೈಯಲ್ಲಿ ಸೆ. 9ರಂದು ಕಾರ್ಯಕ್ರಮ ಆಯೋಜಿಸಲಾಗಿದೆ.

ಸಪ್ತಸ್ವರ ಸಂಗೀತ ಸಭಾ ಶಿವಮೊಗ್ಗ ಅರ್ಪಿಸುವ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ಸೆ. 30ರಂದು 6ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಜಿ.ಎಸ್‌. ಹೆಗಡೆ ಹಾಗೂ ಗೀತಾ ಹೆಗಡೆ ದಂಪತಿಯನ್ನು ಶಾಸಕ ಕೆ.ಎಸ್‌. ಈಶ್ವರಪ್ಪ ಸನ್ಮಾನಿಸುವರು. ಧನಂಜಯ ಹೆಗಡೆ ಇವರ ಗಾಯನಕ್ಕೆ ರೇಖಾ ಅರುಣ ಹಂಪಿಹೊಳಿ ಹಾರ್ಮೋನಿಯಂ, ಶ್ರೀಧರ ಮಾಂಡ್ರೆ ಸಾಥ್‌ ನೀಡುವರು.

ಸಪ್ತಕ ಬೆಂಗಳೂರು ಮತ್ತು ಮ್ಯೂಸಿಕ್‌ ಕ್ಲಬ್‌ ಇವರ ಸ್ವರಧಾರಾ ಕಾರ್ಯಕ್ರಮ ಸೆ. 9ರಂದು 5ಕ್ಕೆ ವ್ಯಾಲಿ ಆಫ್‌ ಫ್ಲವರ್ಸ್ ಕ್ಲಬ್‌, ಕಾಂಡಿವಿಲಿ ಪೂರ್ವ ಮುಂಬೈಯಲ್ಲಿ ನಡೆಯಲಿದ್ದು, ಪಂ| ಶಶಿಕಾಂತ ಮೂಳೆ ಹಾಗೂ ಪಂ| ಓಂಕಾರ ಗುಲ್ವಾಡಿ ಇವರಿಂದ ಶ್ರೋತೃಗಳೊಂದಿಗೆ ಸಂವಾದ, ಪೂರ್ಣಿಮಾ ಕುಲಕರ್ಣಿ ಗಾಯನಕ್ಕೆ ಪಂ| ಓಂಕಾರ ಗುಲ್ವಾಡಿ ತಬಲಾ ಹಾಗೂ ಹಷಲ್‌ ಕಡತರೆ ಹಾರ್ಮೋನಿಯಂ ಸಾಥ್‌ ನೀಡುವರು.

ಸಪ್ತಕ ಬೆಂಗಳೂರು ಅರ್ಪಿಸುವ ಸ್ವರಧಾರಾ ಸಂಗೀತ ಕಾರ್ಯಕ್ರಮ ಅ. 6ರಂದು ಸಂಜೆ 5:30ಕ್ಕೆ ಶ್ರೀ ವಿದ್ಯಾಧಿರಾಜ ಕಲಾಕ್ಷೇತ್ರ ಶಿರಸಿಯಲ್ಲಿ ಮತ್ತು ಅ. 7ರಂದು 5:30ಕ್ಕೆ ಲೋಕಮಾನ್ಯ ರಂಗಮಂದಿರ ಕೋನವಾಳ ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮನು ಶ್ರೀವಾಸ್ತವ್‌ ಗಾಯನಕ್ಕೆ ಪಂ| ಭರತ ಕಾಮತ ತಬಲಾ, ಗುರುಪ್ರಸಾದ ಹೆಗಡೆ ಮತ್ತು ಡಾ| ಸುಧಾಂಶು ಕುಲಕರ್ಣಿ ಹಾರ್ಮೋನಿಯಂ ಸಾಥ್‌ ನೀಡಲಿದ್ದು, ಪಂ| ಯೋಗೇಶ ಸಂಶಿ ತಬಲಾ ಸೋಲೋಗೆ ಗುರುಪ್ರಸಾದ ಗಾಂಧಿ ಲೆಹರಾ ಸಾಥ್‌ ನೀಡಲಿದ್ದಾರೆ.

ಕರ್ನಾಟಕ ಬ್ಯಾಂಕ್‌ ಉದ್ಯೋಗದಿಂದ ನಿವೃತ್ತರಾದ ಮೇಲೆ ಪೂರ್ಣಾವಧಿ ಸಂಗೀತ ಸಂಘಟಕರಾಗಿ ದುಡಿಯುತ್ತಿರುವ ಜಿ.ಎಸ್‌. ಹೆಗಡೆ ಅವರಿಗೆ ಅವರ ಪತ್ನಿ ಗೀತಾ ಹಿಂದೂಸ್ಥಾನಿ ಹಾಡುಗಾರ್ತಿ ಸಾಥ್‌ ನೀಡುತ್ತಿದ್ದಾರೆ. ಮಗ ಧನಂಜಯ ಬ್ಯಾಂಕ್‌ ಉದ್ಯೋಗ ಬಿಟ್ಟು ಪೂರ್ಣಾವಧಿ ಸಂಗೀತಗಾರರಾಗಿ ಖ್ಯಾತಿ ಗಳಿಸಿದ್ದಾರೆ. ತಮ್ಮ ಮನೆ ಮಹಡಿಯನ್ನು ಪುಟ್ಟ ಸಭಾಗೃಹವನ್ನಾಗಿ ಪರಿವರ್ತಿಸಿಕೊಂಡಿರುವ ಜಿ.ಎಸ್‌. ಹೆಗಡೆ ಕುಟುಂಬ ಹಿಂದೂಸ್ಥಾನಿ ಸಂಗೀತ ಸೇವೆಗೆ ಸಮರ್ಪಿತವಾಗಿದೆ. ಭೇದ ಎಣಿಸದೆ ನಾಡಿನ ಎಲ್ಲ ಕಲಾವಿದರಿಗೆ ಅವಕಾಶ ಕಲ್ಪಿಸುತ್ತಿರುವ ಇವರು ಮೂಲತಃ ಹೊನ್ನಾವರದ ಗುಣವಂತೆಯವರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.