ಬೈತಖೋಲ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ 


Team Udayavani, Sep 8, 2018, 5:18 PM IST

8-sepctember-23.jpg

ಕಾರವಾರ: ಇಲ್ಲಿನ ಬೈತಖೋಲದಲ್ಲಿ ಗುಡ್ಡದ ಮೇಲೆ ಪ್ರತಿ ದಿನ ಬೆಳಗ್ಗೆ ಅಥವಾ ಸಂಜೆ ಚಿರತೆಯೊಂದು ಕುಳಿತುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ. ಈ ದೃಶ್ಯವನ್ನು ಇಲ್ಲಿಯ ಜನ ಕಳೆದ 20 ದಿನಗಳಿಂದ ನೋಡುತ್ತಿದ್ದಾರೆ. ಆದರೆ ಇದು ಜನರಿಗೆ ಯಾವುದೇ ತೊಂದರೆ ನೀಡಿಲ್ಲ ಎಂದು ಅಲ್ಲಿನ ನಿವಾಸಿ ಶಾಮಲಾ ಗೌಡ ತಿಳಿಸಿದರು.

ಚಿರತೆ ಗುಡ್ಡದ ಮೇಲೆ ಕುಳಿತುಕೊಳ್ಳುವ ಚಿತ್ರವನ್ನು ಜನ ಸೆರೆ ಹಿಡಿದಿದ್ದಾರೆ. ಬೈತಖೋಲ ಸಮೀಪದ ಭೂದೇವಿ ದೇವಸ್ಥಾನದ ಸುತ್ತ ಬಂದು ಹೋಗುವ ಚಿರತೆ ಒಂದು ನಾಯಿ ಮತ್ತು ಬೆಕ್ಕನ್ನು ಮಾತ್ರ ಬೇಟೆಯಾಡಿದೆ. ಜನರಿಗೆ ಯಾವುದೇ ತೊಂದರೆ ನೀಡಿಲ್ಲ. ಬೈತಖೋಲ ಜನವಸತಿ ಪ್ರದೇಶದ ಸಮೀಪ ಅರಣ್ಯವಿದ್ದು, 600 ಮೀ. ಸಮೀಪದಲ್ಲಿ ದೊಡ್ಡ ಬಂಡೆಗಲ್ಲು ಇದೆ. ಈ ಬಂಡೆಗಲ್ಲಿನ ಮೇಲೆ ಚಿರತೆ ಬಂದು ಕುಳಿತುಕೊಳ್ಳುತ್ತಿದೆ. ಚಿರತೆ ಮರಿ ಹಾಕಿದೆ. ಅದು ಮರಿಗಳನ್ನು ಬಂಡೆಯ ಗುಹೆಯಲ್ಲಿ ಇಟ್ಟಿದೆ ಎಂದು ಬೈತಖೋಲದ ಹಿರಿಯ ನಿವಾಸಿ ಪರುಶುರಾಂ ಗೌಡ ಹೇಳಿದರು.

ದಿನವೂ ಬೆಳಗ್ಗೆ ಮತ್ತು ಸಂಜೆ ಸೂರ್ಯನ ಬಿಸಿಲಿಗೆ ಬರುವ ಚಿರತೆ ಬೈತಖೋಲದ ಜನರಿಗೆ ಕಾಣುವ ಮೂಲಕ ಸಂತೋಷ ನೀಡುತ್ತಿದೆ. ಅರಣ್ಯಾಧಿಕಾರಿಗಳ ಭೇಟಿ: ಚಿರತೆ ಬಂದಿರುವುದನ್ನು ತಿಳಿದ ಅರಣ್ಯಾಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆದರೆ ಚಿರತೆ ಹಿಡಿಯುವುದು ಬೇಡ. ಅದು ನಮಗೆ ಏನೂ ನೀಡಿಲ್ಲ ಎಂದು ಅಲ್ಲಿಯ ಜನ ಹೇಳಿದರು. ಹೀಗಾಗಿ ಅರಣ್ಯಾಧಿಕಾರಿಗಳು ಚಿರತೆ ಹಿಡಿದಿಲ್ಲ.

ಚಿರತೆ ಅರಣ್ಯ ಪರಿಸರದಲ್ಲಿ ಆರಾಮಾಗಿದೆ. ಆಹಾರದ ಕೊರತೆ ಸಹ ಇಲ್ಲ. ಹಾಗಾಗಿ ಜನರು ಸಹನೆಯಿಂದ ಚಿರತೆಯನ್ನು ವೀಕ್ಷಿಸುತ್ತಿದ್ದಾರೆ. ಚಿರತೆ ಕಂಡಾಗ ಬೊಬ್ಬೆ ಹಾಕುವುದು ಮತ್ತು ಗದ್ದಲ ಎಬ್ಬಿಸುವುದು ಮಾಡಬಾರದು. ಕಾಡುಪ್ರಾಣಿಗಳನ್ನು ಅವುಗಳ ಪಾಡಿಗೆ ಬಿಟ್ಟುಬಿಟ್ಟರೆ ಅವು ಮನುಷ್ಯರಿಗೆ ತೊಂದರೆ ಮಾಡುವುದಿಲ್ಲ ಎಂದು ಅರಣ್ಯಾಧಿಕಾರಿಗಳು ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.