ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳು ಬೆಳೆಯಲಿ
Team Udayavani, Sep 9, 2018, 3:49 PM IST
ಕುಮಟಾ: ಭಾರತದ ಜನಸಂಖ್ಯೆಗೆ ತಕ್ಕಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿಹೆಚ್ಚಿನ ಕ್ರೀಡಾ ಸಾಧನೆ ಆಗಬೇಕಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಫಲ ಕ್ರೀಡಾಪಟುಗಳನ್ನು ತಯಾರು ಮಾಡುವ ಹೊಣೆ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಕಡ್ಲೆ ಗಾಂಧೀವನ ಕ್ರೀಡಾಂಗಣದಲ್ಲಿ ಹೊಲನಗದ್ದೆ ಸರಕಾರಿ ಹಿಪ್ರಾ ಶಾಲೆ ಮುಂದಾಳತ್ವದಲ್ಲಿ ತಾಲೂಕು ಮಟ್ಟದ 14 ವರ್ಷದೊಳಗಿನ ಪ್ರಾಥಮಿಕ ಶಾಲಾ ಮಕ್ಕಳ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರ್ಥಿಕತೆಯ ಸಮಸ್ಯೆಯಿಂದ ಕ್ರೀಡಾಪಟುಗಳಿಗೆ ಸಾಧನೆ ಅಡ್ಡಿಯಾಗಬಾರದು. ಈ ನಿಟ್ಟಿನಲ್ಲಿ ಕ್ರೀಡಾ ಪ್ರತಿಭೆಗಳಿಗೆ ಎಲ್ಲರೂ ಕೈಲಾದ ಸಹಾಯ, ಸಹಕಾರ ನೀಡಬೇಕು ಎಂದರು. ಕಡ್ಲೆ ಕ್ರೀಡಾಂಗಣವು ಅರಣ್ಯ ಇಲಾಖೆ ಕ್ಷೇತ್ರಕ್ಕೊಳಪಟ್ಟಿರುವುದರಿಂದ ಇದನ್ನು ಅಭಿವೃದ್ಧಿ ಪಡಿಸಲು ಸಮಸ್ಯೆಯಾಗಿದೆ. ಸಂಬಂಧಪಟ್ಟ ದಾಖಲಾತಿಗಳನ್ನು ಪೂರೈಸಿ ಪ್ರಸ್ತಾವನೆ ಇಟ್ಟರೆ ಅದನ್ನು ಅರಣ್ಯ ಇಲಾಖೆಯಿಂದ ಮಂಜೂರಿಗೊಳಿಸುತ್ತೇನೆ ಎಂದು ಭರವಸೆ ನೀಡಿದರು.
ಜಿಪಂ ಸದಸ್ಯ ರತ್ನಾಕರ ನಾಯ್ಕ ಮಾತನಾಡಿ, ಇಷ್ಟೊಂದು ಸುಂದರ ಕ್ರೀಡಾಂಗಣ ಜಿಲ್ಲೆಯಲ್ಲೇ ಬೇರೆಲ್ಲೂ ಇಲ್ಲ. ಇದರ ಅಭಿವೃದ್ಧಿ ಅಗಲೇಬೇಕು. ಈ ನಿಟ್ಟಿನಲ್ಲಿ ಸ್ಥಳೀಯವಾಗಿ ಹಲವರು ಕೈಜೋಡಿಸಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ ಎಂದರು.
ಅಚ್ಚುಕಟ್ಟಾಗಿ ಕ್ರೀಡಾಕೂಟ ಸಂಘಟಿಸಿದ್ದರೂ ಮೇಲಧಿಕಾರಿಗಳು ನಮಗೆ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಬದಲು ಸಿದ್ಧತೆಗಳಿಗೂ ಮುಖತಿರುವಿ, ಕಾರ್ಯಕ್ರಮಕ್ಕೂ ಬಾರದೇ ಇರುವುದು ವಿಷಾದನೀಯ ಎಂದು ಕ್ರೀಡಾಕೂಟದ ಮುಖ್ಯಸಂಯೋಜಕ, ದೈಹಿಕ ಶಿಕ್ಷಕರ ಸಂಘದ ರಾಜ್ಯ ಘಟಕದ ರವೀಂದ್ರ ಭಟ್ಟ ಸೂರಿ ಶಾಸಕರ ಗಮನಸೆಳೆದರು.
ಅಧ್ಯಕ್ಷತೆ ವಹಿಸಿದ್ದ ವಿಜಯಾ ಪಟಗಾರ, ಜಿಪಂ ಸದಸ್ಯ ಗಜಾನನ ಪೈ, ಹೊಲನಗದ್ದೆ ಪಂಚಾಯತ ಅಧ್ಯಕ್ಷ ರಾಘವೇಂದ್ರ ಪಟಗಾರ, ಸದಸ್ಯರಾದ ರಾಮಾ ಮಡಿವಾಳ, ಡಯಟ್ ಪ್ರಾಚಾರ್ಯ ಈಶ್ವರ ನಾಯ್ಕ, ಎಸ್ಡಿಎಂಸಿ ಅಧ್ಯಕ್ಷೆ ದೀಪಾ ಹಿಣಿ, ಗಣಪತಿ ಮುಕ್ರಿ, ಶಿಕ್ಷಕರ ಸಂಘದ ಆನಂದು ಗಾಂವಕರ, ದೈಹಿಕ ಶಿಕ್ಷಕರ ಸಂಘದ ಬಿ.ಜಿ. ನಾಯಕ ಮತ್ತಿತರರು ಇದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್. ಭಟ್ಟ ಸ್ವಾಗತಿಸಿದರು. ಶಿಕ್ಷಕ ವಸಂತ ಶಾನಭಾಗ ಪ್ರತಿಜ್ಞಾವಿಧಿ ಬೋಧಿಸಿದರು. ನಿವೃತ್ತ ದೈಹಿಕ ಶಿಕ್ಷಕ ಗೋಪಾಲ ಆಗೇರ ಹಾಗೂ ಹೊಲನಗದ್ದೆ ಶಾಲೆಯ ಮುಖ್ಯ ಶಿಕ್ಷಕ ಗಣಪತಿ ನಾಯ್ಕರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ
Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ
Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ
Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು