16ಕ್ಕೆಹಿಂದೂಸ್ಥಾನಿ ಸಂಗೀತ ವಿಶೇಷ ಕಾರ್ಯಕ್ರಮ


Team Udayavani, Sep 12, 2018, 4:53 PM IST

12-sepctember-23.jpg

ಹೊನ್ನಾವರ: ಯಕ್ಷಗಾನ, ಜಾನಪದ ಸಂಗೀತಗಳ ಮನೆಯಾಗಿದ್ದ ಉತ್ತರ ಕನ್ನಡದಲ್ಲಿ ಶಾಸ್ತ್ರೀಯ ಸಂಗೀತದ ಅರಿವಿಲ್ಲದ ಕಾಲದಲ್ಲಿ ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತದ ಅಂಕುರಾರ್ಪಣೆ ಮಾಡಿ, ಜೀವನದ ಇತರ ಎಲ್ಲ ಮುಖ್ಯ ವಿಷಯಗಳಿಗಿಂತ ಸಂಗೀತಕ್ಕೆ ಆದ್ಯತೆ ನೀಡಿ, ಹಿಂದುಸ್ಥಾನಿ ಸಂಗೀತದ ಬೆಳವಣಿಗೆಗೆ ಕಾರಣರಾದವರು ಕಲ್ಭಾಗ ಗೋವಿಂದ ಹೆಗಡೆಯವರು. ಅವರ ನೆನಪಿಗೆ ಗುರುನಮನ ಕಾರ್ಯಕ್ರಮ ಸೆ.16 ರಂದು ಕಲ್ಭಾಗದ ಮನೆಯಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 9ರಿಂದ ರಾತ್ರಿ 8ರ ವರೆಗೆ ನಾದಾರಾಧನೆ ನಡೆಸಿ, ಕುಟುಂಬದ 11 ಕಲಾವಿದರು ಮತ್ತು ಅತಿಥಿ ಕಲಾವಿದರು ಗುರುಗೌರವ ಸಲ್ಲಿಸಲಿದ್ದಾರೆ. ಗೋವಿಂದ ಹೆಗಡೆಯವರ ಮಗ ಪಂ| ಪರಮೇಶ್ವರ ಹೆಗಡೆ, ಪಂ| ಗೋಪಾಲಕೃಷ್ಣ ಹೆಗಡೆ, ವಿನಾಯಕ ಹೆಗಡೆ, ಶ್ರೀಧರ ಹೆಗಡೆ ಮಾತ್ರವಲ್ಲ ಹೆಣ್ಣು ಮಕ್ಕಳಾದ ಪಾರ್ವತಿ, ನಾಗವೇಣಿ, ಗೌರಿ, ಶಾರದಾಂಬಾ, ಉಮಾಂಬಾ, ಅಳಿಯ ರಾಮ ಹೆಗಡೆ, ಕೆರೆಮನೆ ಹಾಡಲಿದ್ದಾರೆ. ಸೊಸೆ ಭಾರತಿ ಗೋಪಾಲಕೃಷ್ಣ ಹೆಗಡೆ ಸಿತಾರ ನುಡಿಸುವರು. ಗೋಪಾಲಕೃಷ್ಣ ಹೆಗಡೆಯವರ ಮಗ ಓಂಕಾರ ಉತ್ತಮ ತಬಲಾ ಪಟುವಾಗಿದ್ದು ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಹೀಗೆ ಇಡೀ ಕುಟುಂಬ ರಾಜ್ಯದ ನಾನಾಭಾಗಗಳಲ್ಲಿ, ವಿನಾಯಕ ಹೆಗಡೆ ಅಮೇರಿಕಾದಲ್ಲಿ ಸಂಗೀತ ಮತ್ತು ಸಾಂಸ್ಕೃತಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಗೋವಿಂದ ಹೆಗಡೆಯವರ ಮಕ್ಕಳನ್ನು ತೊಡೆಯ ಮೇಲೆ ಕೂರಿಸಿಕೊಂಡು ಸಂಗೀತ ಕಲಿಸಿದ ಗುರು ಎಸ್‌.ಎಂ. ಭಟ್‌ ಕಟ್ಟಿಗೆ, ಖ್ಯಾತ ಸಂಗೀತ ಸಂಘಟಕ ಎಸ್‌.ಶಂಭು ಭಟ್‌ ಮತ್ತು ಪ್ರಾಚಾರ್ಯ ಇಂದೂಧರ ಪೂಜಾರ ಉಪಸ್ಥಿತಿಯಲ್ಲಿ ನಾದನಮನ ನಡೆಯಲಿದೆ.

ಗೋವಿಂದ ಹೆಗಡೆಯವರು ಎಸ್‌. ಎಂ. ಭಟ್‌, ಚಂದ್ರಶೇಖರ ಪುರಾಣಿಕ ಮಠ, ಅಶೋಕ ಹುಗ್ಗಣ್ಣನವರ್‌ ಮೊದಲಾದ ಹಿರಿಯ ಕಲಾವಿದರನ್ನು ಮನೆಯಲ್ಲಿ ಉಳಿಸಿಕೊಂಡು ಮಕ್ಕಳಿಗೆ ಸಂಗೀತ ಪಾಠ ಹೇಳಿಸಿದರು. ಗೋವಿಂದ ಹೆಗಡೆಯವರಿಂದ ಸ್ಫೂರ್ತಿಗೊಂಡ ಆ ಕಾಲದ ಹಲವರು ಹಿಂದುಸ್ಥಾನಿ ಸಂಗೀತದ ಆರಾಧಕರಾದರು.

ಕಾರ್ಯಕ್ರಮದಲ್ಲಿ ಪಂಡಿತ ಪರಮೇಶ್ವರ ಹೆಗಡೆ, ಡಾ| ಅಶೋಕ ಹುಗ್ಗಣ್ಣವರ್‌, ರಾಘವೇಂದ್ರ ಉಪಾಧ್ಯಾಯ, ಶಾರದಾ ಭಟ್‌, ಕೆ.ಆರ್‌. ಶ್ರೀಲತಾ, ರಾಮ ಹೆಗಡೆ ಕೆರೆಮನೆ, ಸಹಿತ ತಬಲಾದಲ್ಲಿ ಗುರುರಾಜ, ಜಿ.ಕೆ. ಹೆಗಡೆ, ಬಾಲಚಂದ್ರ ಹೆಬ್ಟಾರ, ಅನಂತಮೂರ್ತಿ, ಸಂವಾದಿನಿಯಲ್ಲಿ ಗೌರೀಶ ಯಾಜಿ, ಮಾರುತಿ ನಾಯ್ಕ, ವಾಸುದೇವ ಸಾಮಂಣಕರ್‌ ಸಹಿತ 25ಕ್ಕೂ ಹೆಚ್ಚು ಕಲಾವಿದರು ಪಾಲ್ಗೊಳ್ಳಲಿದ್ದಾರೆ. ತಂದೆಯ ಆಶಯದಂತೆ ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಕಲಾವಿದರಾಗಿ ಕಲಾಕುಟುಂಬವನ್ನು ವಿಸ್ತರಿಸುತ್ತಾ ಹಿಂದುಸ್ಥಾನಿ ಸಂಗೀತಕ್ಕೆ ದೊಡ್ಡ ಕೊಡುಗೆಯಾಗಿದ್ದಾರೆ. ಇದಕ್ಕೆಲ್ಲಾ ಕಾರಣರಾದ ಮಹಾಗುರು ಗೋವಿಂದ ಹೆಗಡೆ ಮತ್ತು ಗಣಪಿ ಹೆಗಡೆ ಇವರ ನೆನಪಿನ ಕಾರ್ಯಕ್ರಮ ವಿರಳವಾದದ್ದು. ಕಲಾಪ್ರೇಮಿಗಳು ಬರಬೇಕು ಎಂದು ಕಲ್ಭಾಗ ಕುಟುಂಬ ಬಯಸಿದೆ.

ಜೀಯು, ಹೊನ್ನಾವರ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.