ವನವಾಸಿಗಳಿಗೆ ಮುಖ್ಯವಾಹಿನಿಗೆ ತರುವ ಯತ್ನ
Team Udayavani, Sep 24, 2018, 5:44 PM IST
ಕುಮಟಾ: ವನವಾಸಿಗಳು ಸಮಾಜದಲ್ಲಿ ವಿಶೇಷ ಗೌರವ ಆದರ ಉಳಿಸಿಕೊಂಡಿದ್ದಾರೆ. ಇದರೊಟ್ಟಿಗೆ ಬಿಸಿಲು-ಮಳೆಗೆ ಧೃತಿಗೆಡದೇ ತಾಲೂಕಿನ ಕ್ರೀಡಾಳುಗಳು ವರ್ಷದಿಂದ ವರ್ಷಕ್ಕೆ ಸಾಕಷ್ಟು ಉನ್ನತ ಕ್ರೀಡಾ ಸಾಧನೆಯೊಂದಿಗೆ ಕೀರ್ತಿ ತಂದಿದ್ದಾರೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ವನವಾಸಿ ಕಲ್ಯಾಣದ ಜಿಲ್ಲಾಮಟ್ಟದ ಕ್ರೀಡಾ ಸ್ಪರ್ಧೆಯನ್ನು ಕಲಭಾಗ ವಿದ್ಯಾಗಿರಿಯ ಕೊಂಕಣ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ವನವಾಸಿ ಸಮುದಾಯಗಳ ಬದುಕು ಪಟ್ಟಣದಿಂದ ದೂರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿ ಕಾಡುಮೇಡುಗಳ ನಡುವೆ ಇದ್ದರೂ ವನವಾಸಿ ಕಲ್ಯಾಣದಂತಹ ಸಂಸ್ಥೆಗಳು ವನವಾಸಿಗಳನ್ನು ಮುಖ್ಯವಾಹಿನಿಗೆ ತರುವಲ್ಲಿ ಸಾಕಷ್ಟು ಯಶಸ್ಸು ಸಾಧಿಸುತ್ತಿರುವುದು ಸಂತಸದ ಸಂಗತಿ. ವನವಾಸಿ ಕಲ್ಯಾಣದ ಸೇವಾಕಾರ್ಯಗಳು ಶ್ಲಾಘನೀಯ ಎಂದರು.
ವನವಾಸಿಗಳಲ್ಲಿ ಕ್ರೀಡಾ ಸಾಮರ್ಥ್ಯ ವಿಶೇಷವಾಗಿದೆ. ವನವಾಸಿಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಬೆಳೆಸುವುದಕ್ಕಾಗಿ ಇಲ್ಲಿ ನಡೆಸುತ್ತಿರುವ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಎಲ್ಲ ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರುವಂತಾಗಲಿ ಎಂದರು. ಉದ್ಯಮಿ ವೆಂಕಟೇಶ ನಾಯಕ ಮಾತನಾಡಿ, ದೇಶ ಕಟ್ಟುವ ಕಾರ್ಯದಲ್ಲಿ ನಿರತವಾಗಿರುವ ವನವಾಸಿ ಕಲ್ಯಾಣ ಸಂಸ್ಥೆ ವ್ಯಕ್ತಿತ್ವ ನಿರ್ಮಾಣದ ಜೊತೆಯಲ್ಲಿ ದೇಶಾಭಿಮಾನವನ್ನೂ ಬೆಳೆಸುತ್ತಿದೆ. ವನವಾಸಿಗಳು ತೀರಾ ಹಿಂದುಳಿದ ಜನಾಂಗದವರಾಗಿದ್ದು, ಅವರನ್ನು ಮುಖ್ಯವಾಹಿನಿಗೆ ತರುವ ಕಾರ್ಯವನ್ನು ವನವಾಸಿ ಕಲ್ಯಾಣವು ನಡೆಸುತ್ತಿದೆ ಎಂದರು.
ಪ್ರಮುಖರಾದ ವನವಾಸಿ ಜಿಲ್ಲಾಧ್ಯಕ್ಷ ಗಿರಿಯಾ ಗೌಡ, ಬಿ.ಎಸ್. ಗೌಡ, ಚಂದ್ರಶೇಖರ ನಾಯ್ಕ, ಜಿ.ಬಿ. ಮರಾಠಿ, ದಯಾನಂದ ಶೇಟ್, ಎಂ.ಐ. ಭಟ್ಟ, ಜಯರಾಜ ಮತ್ತಿತರರು ಇದ್ದರು. ವನವಾಸಿ ಕಲ್ಯಾಣದ ಜಿಲ್ಲಾ ಕಾರ್ಯದರ್ಶಿ ಗಣೇಶ ಶಿಂಗನಕುಳಿ ಸ್ವಾಗತಿಸಿದರು. ಜಿಲ್ಲಾ ಗ್ರಾಮವಿಕಾಸ ಪ್ರಮುಖ ಶ್ರೀಧರ ಸಾಲೆಹಕ್ಕಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಯೋಗೇಶ ಪಟಗಾರ ನಿರೂಪಿಸಿದರು. ವಿಜೇತರಾದ ಕ್ರೀಡಾಪಟುಗಳಿಗೆ ಪದಕ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್