ವಾಯುಭಾರ ಕುಸಿತ: ಮೀನುಗಾರಿಕೆಗೆ ನಷ್ಟ


Team Udayavani, Oct 7, 2018, 5:25 PM IST

7-october-22.gif

ಕಾರವಾರ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಆಳ ಸಮುದ್ರಕ್ಕೆ ಮೀನುಗಾರರು ಅ.8ರವರೆಗೆ ತೆರಳದಂತೆ ಜಿಲ್ಲಾಡಳಿತ, ಮೀನುಗಾರಿಕಾ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಹವಾಮಾನ ವೈಪರಿತ್ಯದಿಂದ ಮೀನುಗಾರರು, ಬೋಟ್‌ ಮಾಲೀಕರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಲ ಆಗಸ್ಟ್‌ನಲ್ಲಿ ತುಂಬಾ ಮಳೆಯ ಕಾರಣ ಮೀನುಗಾರಿಕೆ ಸಾಧ್ಯವಾಗಿಲ್ಲ. ಜೂನ್‌, ಜುಲೈನಲ್ಲಿ ಮೀನುಗಾರಿಕೆ ನಿಷೇಧಿತ ಅವಧಿ. ಹಾಗಾಗಿ ಸೆಪ್ಟಂಬರ್‌ನಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದ ಮತ್ಸೋದ್ಯಮ ಇದೀಗ ಮತ್ತೆ ನಷ್ಟ ಅನುಭವಿಸುವಂತಾಗಿದೆ.

ಅ.5 ರಿಂದ 8 ರವರೆಗೆ ಕಡಲಿಗೆ ಇಳಿಯದಂತೆ ಜಿಲ್ಲಾಡಳಿತ ಮೀನುಗಾರರಿಗೆ ಸೂಚಿಸಿದೆ. ಮೀನುಗಾರಿಕಾ ಇಲಾಖೆ ಸಹ ಇದೇ ಎಚ್ಚರಿಕೆ ನೀಡಿದೆ. ಮತ್ಸ್ಯ ಬೇಟೆ ಸಮಯದಲ್ಲಿ ಕೈ ಕಟ್ಟಿ ಕುಳಿತುಕೊಳ್ಳುವ ಪ್ರಮೇಯ ಉದ್ಬವಿಸಿದೆ.

ಅಕ್ಟೋಬರ್‌, ನವ್ಹೆಂಬರ್‌, ಡಿಸೆಂಬರ್‌ನಲ್ಲಿ ಫಿಶ್‌ ಕ್ಯಾಚಿಂಗ್‌ ಜೋರಾಗಿಯೇ ಇರುತ್ತದೆ. ಆದರೆ ಈ ಸಲ ಅಕ್ಟೋಬರ್‌ ಮೊದಲ ವಾರ ನೈಸರ್ಗಿಕ ವಿಕೋಪದಿಂದ ಫಿಶ್‌ ಕ್ಯಾಚ್‌ ಬ್ಯಾನ್‌ ಆಗಿದೆ. ಈ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ಸಮುದ್ರಕ್ಕೆ ಹೋದರೆ ಮೀನುಗಾರಿಕಾ ಬೋಟ್‌ ಮಾಲೀಕರೆ ಅನಾಹುತಕ್ಕೆ ಹೊಣೆಯಾಗಲಿದ್ದಾರೆ. ಕಾರ್ಮಿಕರ ಜೀವ ರಕ್ಷಣೆ ಸಹ ಮುಖ್ಯ. ಮುನ್ಸೂಚನೆ ಅವಧಿಯಲ್ಲಿ ದುರಂತವಾದರೆ ವಿಮೆ ಸಹ ಸಿಗುವುದಿಲ್ಲ ಎನ್ನುವುದು ಮೀನುಗಾರಿಕಾ ಇಲಾಖೆ ಅಧಿಕಾರಿಗಳ ವಾದ.

ಮತ್ಸ್ಯ ಉದ್ಯಮ ನಷ್ಟ: ಹವಮಾನ ಇಲಾಖೆ ಸೂಚನೆಯಿಂತೆ ಶುಕ್ರವಾರ ಸಂಜೆ ಭಾರೀ ಗಾಳಿ ಸಹಿತ ಮಳೆ ಸುರಿಯಿತು. ಶನಿವಾರ ವಾತಾವರಣ ಅಷ್ಟೇನು ಅಪಾಯ ಎನ್ನುವಂತಿರಲಿಲ್ಲ. ಆದರೆ ಹಠಾತ್‌ ಸಮುದ್ರದಲ್ಲಿ ಅಲೆಗಳು ಎದ್ದರೆ, ಗಾಳಿ ಬೀಸಿದರೆ ಎಂಬ ಭಯದಿಂದ ಬೋಟ್‌ ಕಡಲಿಗೆ ಇಳಿಯಲಿಲ್ಲ. ಕೆಲವರು ಸಾಹಸ ಮಾಡಿದ ಘಟನೆಗಳಿವೆ. ಆದರೆ ಇದು ಬೋಟ್‌ ಮಾಲೀಕರ ರಿಸ್ಕ್. ಮೀನುಗಾರಿಕಾ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ನಮ್ಮದೇ ಆದ ಯಾಂತ್ರಿಕೃತ ಬೋಟ್‌ ಇಲ್ಲ. ಏನೇ ಆದರೂ ನಾವು ಕಡಲಕಾವಲು ಪಡೆಯ ಯಾಂತ್ರಿಕ ಬೋಟ್‌ ಬಳಸಿ ಕಡಲ ವೀಕ್ಷಣೆಗೆ ಹೋಗಬೇಕು. ಹೀಗಿರುವಾಗ ಮೀನುಗಾರರಲ್ಲಿ ನಾವು ಜಾಗೃತಿ ಮೂಡಿಸುತ್ತೇವೆ ಎನ್ನುತ್ತಾರೆ.

ಸೋಮವಾರದಿಂದ ಮೀನುಗಾರಿಕೆ: ರವಿವಾರತನಕ ಕಾಯುತ್ತೇವೆ. ಹವಾಮಾನದಲ್ಲಿ ಏರುಪೇರು ಆಗದಿದ್ದರೆ, ಸೋಮವಾರ ಮೀನುಗಾರಿಕೆಗೆ ತೆರಳಿಯೇ ಸಿದ್ಧ ಎಂಬುದು ಹೆಸರು ಹೇಳಲು ಇಚ್ಛಿಸದ ಬೋಟ್‌ ಮಾಲೀಕರ ಮಾತು. ಕಾರ್ಮಿಕರಿಗೆ ದಿನದ ವೇತನ ಕೊಡಲೇಬೇಕು. ಬ್ಯಾಂಕ್‌ ಸಾಲ ಬೇರೆ ಇದೆ. ಹವಾಮಾನದ ಮುಖ ನೋಡಿ ಕುಳಿತರೆ ಸಾಲ ಮೈಮೇಲೆ ಬರುತ್ತದೆ. ನಾವು ಬದುಕುವುದಾದರೂ ಹೇಗೆ ಎಂಬುದು ಬೋಟ್‌ ಮಾಲೀಕರ ಅಳಲು. 

ಶುಕ್ರವಾರ ಹಗಲು ಸಮುದ್ರ ಸರಿಯಾಗಿಯೇ ಇತ್ತು. ಅಲೆಗಳ ಅಬ್ಬರ ಇರಲಿಲ್ಲ. ಸಂಜೆ ಇದ್ದಕ್ಕಿಂದ್ದಂತೆ ಬಲವಾದ ಗಾಳಿ ಬೀಸಿತು. ರಭಸದ ಮಳೆ ಸುರಿಯಿತು. ಶನಿವಾರ ಹಗಲು ಸಹಜವಾಗಿದೆ. ಹೀಗಿದ್ದರೂ ನೀರಿಗೆ ಇಳಿಯದ ಪರಿಸ್ಥಿತಿ. ಮೀನುಗಾರಿಕಾ ಬೋಟ್‌ ಮಾಲೀಕರದ್ದು ಇಕ್ಕಟ್ಟಿನ ಸಂದರ್ಭ ಬಿಕ್ಕಟ್ಟಿನ ವಾತಾವರಣ ಸನ್ನಿವೇಶ ಎಂಬಂತಾಗಿದೆ.

ಹವಮಾನ ಇಲಾಖೆ ಸೂಚನೆ ಕಡೆಗಣಿಸಲಾಗದು: ಮನ್ಸೂಚನೆ ಸಮಯದಲ್ಲಿ ಕಡಲಿಗೆ ಇಳಿಯುವಂತಿಲ್ಲ. ಇಳಿದರೆ, ಏನಾದರೂ ಅನಾಹುತವಾದಲ್ಲಿ ಪರಿಹಾರ ಸಿಗದು. ಇಂಥ ಪರಿಸ್ಥಿತಿಯನ್ನು ಮೀನುಗಾರಿಕಾ ಬೋಟ್‌ ಮಾಲೀಕರು ಅರ್ಥ ಮಾಡಿಕೊಳ್ಳಬೇಕು ಎಂಬುದು ಅಪರ ಜಿಲ್ಲಾಧಿಕಾರಿ ಡಾ| ಸುರೇಶ್‌ ಹಿಟ್ನಾಳರ ಮಾತು.

ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ 
ಹವಮಾನ ವೈಪರಿತ್ಯ ಇದ್ದರೂ ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್‌ ನಡೆಯುತ್ತಿದೆ ಎಂಬ ಮೀನುಗಾರಿಕಾ ಬೋಟ್‌ಗಳ ಓರ್ವ ಮಾಲೀಕರ ಆರೋಪಕ್ಕೆ ಪ್ರತಿಕ್ರಿಯಿಸಿರುವ ಜಿಲ್ಲಾಡಳಿತ, ಪ್ರವಾಸಿಗರು ಆನ್‌ ಲೈನ್‌ನಲ್ಲಿ ಮೊದಲೇ ಸ್ಕೂಬಾಕ್ಕೆ ಬರುವುದಾಗಿ ಹೆಸರು ನೊಂದಾಯಿಸಿ ಹಣ ತುಂಬಿರುತ್ತಾರೆ. ಅವರು ದೂರದ ಊರುಗಳಿಂದ ಬಂದಾಗ ಹವಾಮಾನ ಕಾರಣ ನೀಡಿ ವಾಪಸ್‌ ಕಳಿಸಿದರೆ, ಗ್ರಾಹಕರ ವೇದಿಕೆಗೆ ತೆರಳಿ ಒಂದಕ್ಕೆ ಹತ್ತರಷ್ಟು ಹಣ ಕೇಳುತ್ತಾರೆ. ಅವರಿಗೆ ಅಪಾಯವಾಗದಂತೆ ಸ್ಕೂಬಾ ಮಾಡಿಸುವುದು ಅನಿವಾರ್ಯ. ಆನ್‌ಲೈನ್‌ನಲ್ಲಿ ಪ್ರವಾಸಿಗ ಬುಕ್‌ ಮಾಡಿದಾಗ ಹವಮಾನ ವೈಪರಿತ್ಯದ ಮಾಹಿತಿ ಬಂದಿರಲಿಲ್ಲ. ಇಂಥ ಸಂದರ್ಭಗಳನ್ನು ನಿಭಾಯಿಸಬೇಕಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.