ಗೈರು ಹಾಜರಾಗುವ ಅಧಿಕಾರಿಗಳು: ಸದಸ್ಯರು ಗರಂ


Team Udayavani, Oct 12, 2018, 4:43 PM IST

12-october-21.gif

ಹೊನ್ನಾವರ: ತಾಪಂ ಸಾಮಾನ್ಯ ಸಭೆಯಲ್ಲಿ ಅನುಪಾಲನಾ ವರದಿ ಸಲ್ಲಿಸದ, ಸಭೆಗೆ ಸತತವಾಗಿ ಗೈರಾಗುವ ಇಲಾಖೆ ಅಧಿಕಾರಿಗಳ ವಿರುದ್ಧ ಅಧ್ಯಕ್ಷರಾದಿಯಾಗಿ ಸದಸ್ಯರೆಲ್ಲರೂ ಒಕ್ಕೊರಲಿನಿಂದ ಅಸಮಾಧಾನ ವ್ಯಕ್ತಪಡಿಸಿದರು.

ಹಿಂದಿನ ಸಭೆಯ ಠರಾವಿನ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಸದಸ್ಯ ಗಣಪಯ್ಯ ಗೌಡರು, ಹಿಂದಿನ ಸಭೆಯಲ್ಲಿ ಚರ್ಚಿತವಾದ ವಿಷಯವನ್ನೇ ಠರಾವಿನಲ್ಲಿ ಬರೆದಿದ್ದಾರೆ ಎನ್ನುವ ನಂಬಿಕೆ ನಮಗೆಲ್ಲರಿಗೂ ಇದೆ. ಹಾಗಾಗಿ ಮುಂದಿನ ವಿಷಯದ ಚರ್ಚೆಗೆ ಮುಂದಾಗಿ ಎಂದರು. ಚಿಕ್ಕ ನೀರಾವರಿ ಇಲಾಖೆ ಮತ್ತು ಅರಣ್ಯ ಇಲಾಖೆಯವರು ತಾಪಂ ಸಭೆಗಳಿಗೆ ಸತತವಾಗಿ ಗೈರಾಗುತ್ತಿದ್ದಾರೆ. ಅಧಿಕಾರಿಗಳು ಸತತವಾಗಿ ಗೈರಾದರೆ ಸಭೆ ನಡೆಸಿ ಪ್ರಯೋಜನವೇನು ಅಧ್ಯಕ್ಷರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸದಸ್ಯರ ಒತ್ತಾಯಕ್ಕೆ ಮಣಿದ ಅಧ್ಯಕ್ಷರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ತಿಳಿಸುತ್ತೇವೆ ಎಂದಾಗ ಅದಕ್ಕೆ ಒಪ್ಪದ ಸದಸ್ಯರು ಡಿಸಿ ಕಚೇರಿಯಲ್ಲಿ ಧರಣಿ ಕೂರೋಣ ಎಂದರು. ಅರಣ್ಯಾಧಿಕಾರಿ ತರಾಟೆಗೆ: ಸತತವಾಗಿ ಗೈರಾಗುತ್ತಿದ್ದ ಅರಣ್ಯ ಇಲಾಖೆ ಅಧಿ ಕಾರಿಯನ್ನು ಕರೆಮಾಡಿ ಕರೆಸಿ ಅಧ್ಯಕ್ಷರು, ತಾಪಂ ಸದಸ್ಯರೆಲ್ಲರೂ ಗ್ರಾಮೀಣ ಪ್ರದೇಶದಿಂದ ಚುನಾಯಿತರಾಗಿರುತ್ತಾರೆ. ಅರಣ್ಯ ಇಲಾಖೆಯೊಂದಿಗೆ ನೇರ ಸಂಬಂಧ ಹೊಂದಿರುತ್ತಾರೆ. ನೀವು ಪದೇಪದೇ ಸಬೂಬು ಹೇಳಿ ತಪ್ಪಿಸಿಕೊಳ್ಳುವುದು ಯಾಕೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಸ್ಪಷ್ಟನೆ ನೀಡಿದ ಅಧಿಕಾರಿಗಳು ಮಂಕಿ ವಲಯ ಹೊನ್ನಾವರ ಮತ್ತು ಭಟ್ಕಳ ಎರಡು ತಾಲೂಕಿನ ನಡುವೆ ಹಂಚಿಕೆಯಾಗಿರುವುದರಿಂದ ಮತ್ತು ತರಬೇತಿ ಇದ್ದ ಸಮಯದಲ್ಲಿ ಹಾಜರಾಗಲು ಕಷ್ಟವಾಗುತ್ತದೆ. ಮುಂದೆ ನಾವು ಹಾಜರಾಗಲು ಸಾಧ್ಯವಾಗದಿದ್ದರೆ ಬದಲಿ ಸಿಬ್ಬಂದಿ ಕಳುಹಿಸುತ್ತೇವೆ ಎಂದರು.

ಜನಪ್ರತಿನಿಧಿಗಳಿಗೂ ಮಾಹಿತಿ ನೀಡದ ನೀರಾವರಿ ಇಲಾಖೆ: ತಾಲೂಕಿನಲ್ಲಿ ಐದಾರು ಸಾವಿರ ಎಕರೆ ಪ್ರದೇಶಕ್ಕೆ ನೀರುಣಿಸುತ್ತಿದ್ದ ಏತ ನೀರಾವರಿ ಯೋಜನೆಗಳು ಹಳ್ಳ ಹಿಡಿಯುತ್ತಿದ್ದು ಇಂದು ಅದು ಐದಾರು ನೂರು ಎಕರೆಗೆ ಬಂದು ಮುಟ್ಟಿದೆ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಕೆಲಸದ ಬಗ್ಗೆ ಮಾಹಿತಿ ಕೇಳಿದರೆ ಉಡಾಪೆಯಿಂದ ವರ್ತಿಸುತ್ತಾರೆ. ಅವರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಸದಸ್ಯರಾದ ಅಣ್ಣಯ್ಯ ನಾಯ್ಕ ದೂರಿದರು. ಇದಕ್ಕೆ ಅಧ್ಯಕ್ಷರೂ ದನಿಗೂಡಿಸಿದರು.

ಸದಸ್ಯರಾದ ಆರ್‌.ಪಿ.ನಾಯ್ಕ ಮಂಗಗಳ ಹಾವಳಿ ಬಗ್ಗೆ ಪ್ರಸ್ಥಾಪಿಸಿ ಅರಣ್ಯಾಧಿಕಾರಿಗಳಿಂದ ಸಹಾಯ ಕೇಳಿದರು. ಮಂಗನಕಾಯಿಲೆ ನಿಯಂತ್ರಣ, ಶಿಕ್ಷಣ ಇಲಾಖೆ, ಹೆಸ್ಕಾಂ, ಆರೋಗ್ಯ, ಸಮಾಜ ಕಲ್ಯಾಣ ಇಲಾಖೆ ಕಾರ್ಯವೈಖರಿ ಬಗ್ಗೆ ಆಯಾ ಇಲಾಖೆ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಯಿತು. ಉಪಾಧ್ಯಕ್ಷ ಲಲಿತಾ ಈಶ್ವರ ನಾಯ್ಕ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಖಾಜಿ ಮಹಮದ್‌ ಇರ್ಷಾದ್‌, ಪ್ರಭಾರ ಕಾರ್ಯನಿರ್ವಾಹಕ ಸುರೇಶ ನಾಯ್ಕ ಹಾಗೂ ಬಹುತೇಕ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.