ಜೂಜಾಟದ ವಿರುದ್ಧ ಕ್ರಮಕ್ಕೆ ಒತ್ತಾಯ


Team Udayavani, Nov 4, 2018, 3:47 PM IST

4-november-18.gif

ಹಳಿಯಾಳ: ಹಬ್ಬದ ನೆಪ ಮಾಡಿ ಅಂದರ ಬಾಹರ ಜೂಜಾಟ ನಡೆಸಿ ನೂರಾರು ಕುಟುಂಬದ ಸದಸ್ಯರನ್ನು ಬೀದಿಪಾಲು ಮಾಡಿ, ಲಕ್ಷ-ಲಕ್ಷ ಹಣ ಗಳಿಸಲು ಪಟ್ಟಣದಲ್ಲಿ ನಡೆದಿದೆ ಭಾರಿ ತಯಾರಿ. ಸದ್ಯ ನಡೆಯುವ ದೀಪಾವಳಿಗೆ 7-8 ಗುಂಪುಗಳಿಂದ ಜೂಜಾಟ ನಡೆಸಲು ಪೈಪೋಟಿ ಕುರಿತು ಪಟ್ಟಣದಲ್ಲೆಡೆ ಸುದ್ದಿಯಾಗುತ್ತಿದೆ.

ಕ್ರೀಡೆ-ಸಾಹಿತ್ಯ-ರಾಜಕೀಯ ಕ್ಷೇತ್ರ ಸೇರಿದಂತೆ ಔದ್ಯಮಿಕ ನಗರವಾಗಿಯೂ ರಾಜ್ಯದಲ್ಲಿ ತನ್ನದೆ ಆದ ಹೆಸರು ಗಳಿಸಿರುವ ಹಳಿಯಾಳದಲ್ಲಿ ಕೆಲವು ದಕ್ಷ ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನದಿಂದ ಕಾನೂನು ಬಾಹಿರ, ಅಕ್ರಮ ಚಟುವಟಿಕೆಗಳಿಗೆ ಸ್ವಲ್ಪ ಮಟ್ಟಿಗೆ ಕಡಿವಾಣ ಹಾಕಲಾಗಿದೆ. ಕಳೆದ 3 ವರ್ಷಗಳಲ್ಲಿ ಜೂಜಾಟ, ಮಟಕಾ ನಡೆಸುವವರ ಮೇಲೆ ದಾಳಿ ನಡೆಸಿರುವ ಹಳಿಯಾಳ ಪೊಲೀಸರು ಸುಮಾರು 50ಕ್ಕೂ ಅಧಿಕ ಜನರ ಮೇಲೆ 15 ಪ್ರಕರಣಗಳನ್ನು ದಾಖಲಿಸಿದ್ದಾರೆ.

ರಾಜಕೀಯ ಪ್ರಭಾವ ತೋರಿಸುವ ಕೆಲವರು ಹಬ್ಬದ ನೆಪವೊಡ್ಡಿ ಜೂಜಾಟಕ್ಕೆ ತಯಾರಿ ನಡೆಸಿದ್ದು ಈಗ ಆರಂಭವಾಗುವ ಈ ಅಕ್ರಮಗಳು ನಿರಾತಂಕವಾಗಿ ವರ್ಷವೀಡಿ ನಡೆಯುತ್ತಿರುತ್ತವೆ. ಇಲ್ಲಿನ ಜೂಜಾಟಕ್ಕೆ ದಾಂಡೇಲಿ, ಜೋಯಿಡಾ, ಅಳ್ನಾವರ, ಕಲಘಟಗಿ, ಧಾರವಾಡ, ಹುಬ್ಬಳ್ಳಿ, ಖಾನಾಪುರ, ಬೆಳಗಾವಿ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಇದರಿಂದ ಆಟ ನಡೆಸುವ ಫಂಡ್‌ ಮಾಲಿಕರ ಜೇಬು ಅನಾಯಾಸವಾಗಿ ಭರ್ತಿಯಾಗುತ್ತದೆ. ಈ ಸಂಬಂಧ ಅಲಿಖೀತ ಹಾಗೂ ಅಕ್ರಮ ಪರವಾನಗಿ ಪಡೆಯಲು ಎಲ್ಲ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಜನಜಂಗುಳಿಯಿಂದ ಕೂಡಿದ ಬಸ್‌ ನಿಲ್ದಾಣ ರಸ್ತೆ, ವನಶ್ರೀ ವೃತ್ತದ ಬಳಿ, ಮೀನು ಮಾರುಕಟ್ಟೆ ಸಮೀಪದ ಪ್ರದೇಶಗಳಲ್ಲಿ ಹಾಗೂ ಯಲ್ಲಾಪುರ ನಾಕಾ ಸಮೀಪದ ಪ್ರದೇಶಗಳಲ್ಲಿ ಆಟ ನಡೆಸಲು ಜಾಗ ಪಡೆಯಲು ಈ 7-8 ಗುಂಪುಗಳ ಮಧ್ಯೆ ತೀವ್ರ ಪೈಪೋಟಿ ನಡೆದಿದೆ.

ಅಕ್ರಮ ಚಟುವಟಿಕೆಗಳ ವಿರುದ್ಧ ಸಮರ ಸಾರಿದ್ದು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಯಾವುದೇ ಕಾರಣಕ್ಕೂ ದೀಪಾವಳಿಯಲ್ಲಿ ಅಕ್ರಮ ಜೂಜಾಟ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಸಿಪಿಐ ಲೋಕಾಪುರ ಬಿಎಸ್‌, ಪಿಎಸ್‌ಐ ಆನಂದಮೂರ್ತಿ ತಿಳಿಸಿದ್ದಾರೆ.

ಎಸ್ಪಿ ಖಡಕ್‌ ಎಚ್ಚರಿಕೆ
ಹಬ್ಬ ಆಗಲಿ ಯಾವುದೇ ದಿನವಾಗಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶವಿಲ್ಲ. ಹಬ್ಬದ ನೆಪ ಮಾಡಿ ಅಕ್ರಮ ಚಟುವಟಿಕೆ ನಡೆಸಲು ಮುಂದಾದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಎಲ್ಲಾ ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಾರ್ವಜನೀಕರು ಇಂತಹ ಚಟುವಟಿಕೆಗಳು ಕಂಡು ಬಂದರೆ ತಕ್ಷಣ ಸನಿಹದ ಇಲಾಖೆಗೆ ಅಥವಾ ನೇರವಾಗಿ ತಮ್ಮನ್ನು ಸಂಪರ್ಕಿಸಿ ಮಾಹಿತಿ ಅಥವಾ ದೂರು ನೀಡಬಹುದು.
.ವಿನಾಯಕ ಪಾಟೀಲ್‌, ಎಸ್ಪಿ 

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.