ಭೀಮಾ ಒಳ ಹರಿವು ಇಳಿಕೆ: ಆತಂಕ


Team Udayavani, Nov 9, 2018, 3:51 PM IST

9-november-17.gif

ಭಟ್ಕಳ: ಮಳೆಗಾಲ ಮುಗಿಯುತ್ತಿದ್ದಂತೆಯೇ ನದಿಗಳೂ ಬತ್ತಲು ಆರಂಭವಾಗಿದ್ದು ಕುಡಿಯುವ ನೀರಿಗಾಗಿ ಜನತೆ ಆತಂಕಕ್ಕೊಳಗಾಗಿದ್ದಾರೆ. ಭಟ್ಕಳ ನಗರಕ್ಕೆ ಹಾಗೂ ಶಿರಾಲಿ, ಮಾವಿನಕುರ್ವೆ ಗ್ರಾಪಂಗೆ ಕುಡಿಯುವ ನೀರೊದಗಿಸುವ ಕಡವಿನಕಟ್ಟೆ ಡ್ಯಾಂಗೆ ನೀರುಣಿಸುವ ಭೀಮಾ ನದಿಯಲ್ಲಿ ಕೂಡಾ ಮಳೆ ನಿಂತು ಕೆಲವೇ ತಿಂಗಳಲ್ಲಿ ಒಳಹರಿವು ಪ್ರತಿ ವರ್ಷಕ್ಕಿಂತ ಸುಮಾರು ಶೇ.50 ರಷ್ಟು ಕಡಿಮೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

ಅತ್ಯಂತ ದುರ್ಗಮ ಕಾಡಿನಿಂದ ಹರಿದು ಬರುತ್ತಿರುವ ಭೀಮಾ ನದಿ ಪ್ರತಿವರ್ಷ ಮಾರ್ಚ್‌, ಎಪ್ರಿಲ್‌ ತನಕವೂ ಉತ್ತಮ ಒಳ ಹರಿವು ಇರುವ ನದಿಯಾಗಿದೆ. ನದಿಯಲ್ಲಿ ಸದಾ ನೀರು ಹರಿಯುತ್ತಿದ್ದರೆ, ಕಡವಿನಕಟ್ಟೆ ಡ್ಯಾಂನಲ್ಲಿ ಕೂಡಾ ಸದಾ ನೀರು ಇದ್ದು ಕುಡಿಯುವ ನೀರಿನೊಂದಿಗೆ ತಾಲೂಕಿನ ವೆಂಕಟಾಪುರ, ಶಿರಾಲಿ, ಮಾವಿನಕಟ್ಟೆ, ಬೇಂಗ್ರೆ ಮುಂತಾದ ಪ್ರದೇಶದ ರೈತರಿಗೆ ಸರಬರಾಜು ಮಾಡಲು ಸಾಕಾಗವಷ್ಟು ನೀರು ಇರುತ್ತಿತ್ತು. ರೈತರು ಇದೇ ನೀರಿನಿಂದಲೇ ಮೂರು ಬೆಳೆ ಬೆಳೆಯುತ್ತಿದ್ದರೆ, ಇತ್ತೀಚಿನ ವರ್ಷಗಳಲ್ಲಿ ನೀರಿನ ಒಳಹರಿವು ಕಡಿಮೆಯಾಗುವುದರೊಂದಿಗೆ ರೈತರಿಗೂ ನೀರು ಇಲ್ಲದಂತಾಗಿದೆ.

ಕುಡಿಯುವ ನೀರು ಸರಬರಾಜು: ಕಳೆದ ಹಲವಾರು ವರ್ಷಗಳ ಹಿಂದೆ ಭಟ್ಕಳ ನಗರಕ್ಕೆ ಕುಡಿಯುವ ನೀರಿನ ಸರಬರಾಜು ಆರಂಭಿಸುವಾಗ ನೀರಿನ ಸಂಪನ್ಮೂಲ ಇಲ್ಲದ ಕಾರಣ ಕಡವಿನಕಟ್ಟೆ ಡ್ಯಾಂ ನಿಂದಲೇ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಲಾಯಿತು. ನಂತರದ ದಿನಗಳಲ್ಲಿ ಶಿರಾಲಿ ಗ್ರಾಪಂ ಹಾಗೂ ಮಾವಿನಕುರ್ವೆ ಗ್ರಾಪಂಗೂ ಇದೇ ಡ್ಯಾಂನಿಂದ ನೀರೊದಗಿಸಲು ಆರಂಭಿಸಲಾಯಿತು.

ಈ ಬಾರಿ ನೀರಿಗೆ ಬರ: ಈ ಬಾರಿಯ ಮಳೆಗಾಲ ಇನ್ನೇನು ಮುಗಿಯುತ್ತಾ ಬರುತ್ತಿರುವಾಗಲೇ ಭೀಮಾ ನದಿಯ ಒಳಹರಿವು ಶೇ.75ರಷ್ಟು ಕಡಿಮೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಲಕ್ಷಾಂತರ ಗ್ಯಾಲನ್‌ ನೀರು ಕುಡಿಯುವ ಉದ್ದೇಶಕ್ಕೆ ಉಪಯೋಗವಾಗುತ್ತಿದ್ದರೆ, ಇಂದು ನದಿಯಲ್ಲಿ ಒಳ ಹರಿವೇ ಇಲ್ಲದೇ ನೀರು ಒಣಗುತ್ತಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ. ಪ್ರತಿ ವರ್ಷ ಮಾರ್ಚ್‌, ಎಪ್ರಿಲ್‌ ತನಕವೂ ನೀರು ಹರಿದು ಬರುತ್ತಿದ್ದರೆ, ಈ ಬಾರಿ ನವೆಂಬರ್‌ನಲ್ಲಿಯೇ ನೀರಿನ ಹರಿವು ಕಡಿಮೆಯಾಗಿದ್ದು ಇನ್ನೇನು ತಿಂಗಳೊಂದರಲ್ಲಿಯೇ ನದಿಯ ಒಳಹರಿವು ಬತ್ತಿ ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೂಳು ತುಂಬಿದ್ದ ಡ್ಯಾಂ ಸೈಟ್‌: ಕಳೆದ ಕೆಲವು ವರ್ಷಗಳ ಹಿಂದೆ ಕಡವಿನಕಟ್ಟೆ ಡ್ಯಾಂ ರಿಪೇರಿಗಾಗಿ ಸರಕಾರದ ವತಿಯಿಂದ ಹಣ ಮಂಜೂರಿಯಾಗಿದ್ದು ರಿಪೇರಿ ಕೂಡಾ ಮಾಡಲಾಗಿತ್ತು. ಡ್ಯಾಂ ರಿಪೇರಿ ಮಾಡುವಾಗ ನೀರಿನ ರಭಸವನ್ನು ಕಡಿಮೆ ಮಾಡಿಕೊಳ್ಳಲು ಡ್ಯಾಂ ಒಳಗಡೆಯಲ್ಲಿ ಸುಮಾರು 300 ಲಾರಿಗಳಷ್ಟು ಮಣ್ಣನ್ನು ಹಾಕಿಕೊಂಡಿದ್ದು ಡ್ಯಾಂ ರಿಪೇರಿಯಾದ ತಕ್ಷಣದಲ್ಲಿ ಮಳೆಗಾಲ ಆರಂಭವಾಗಿದ್ದರಿಂದ ಡ್ಯಾಂ ಸೈಟ್‌ನಲ್ಲಿ ಹಾಕಿದ್ದ ಮಣ್ಣನ್ನು ತೆಗೆಯದೇ ಹಾಗೆಯೇ ಬಿಡಲಾಗಿತ್ತು. ಕಳೆದ 3-4 ವರ್ಷಗಳಿಂದ ಡ್ಯಾಂ ಒಳಗಡೆಯಿದ್ದ ನೂರಾರು ಲೋಡ್‌ ಮಣ್ಣನ್ನು ತೆಗೆಯುವಂತೆ ಸರಕಾರಕ್ಕೆ, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಜನರ ಕೂಗಾಗಿದೆ. ಈ ಬಾರಿಯಾದರೂ ಡ್ಯಾಂ ಒಳಗಿರುವ ಮಣ್ಣು ತೆಗೆದು ನೀರಿನ ಸಂಗ್ರಹ ಹೆಚ್ಚಿಸುವರೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಆರ್ಕೆ, ಭಟ್ಕಳ 

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.