ಅಭಿವೃದ್ಧಿಯಲ್ಲಿ ಬೇಡ ರಾಜಕಾರಣ


Team Udayavani, Nov 22, 2018, 3:25 PM IST

22-november-16.gif

ಅಂಕೋಲಾ: ರಾಜಕಾರಣ ಚುನಾವಣೆಗೆ ಸೀಮಿತವಾಗಿರಬೇಕು. ಅಭಿವೃದ್ಧಿ ವಿಚಾರ ಬಂದಾಗ ಪಕ್ಷಾತೀತವಾಗಿ ಪ್ರತಿಯೊಬ್ಬ ಜನಪ್ರತಿನಿಧಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಕಂದಾಯ ಮತ್ತು ಕೌಶಾಲಾಭಿವೃದ್ಧಿ ಸಚಿವ ಆರ್‌.ವಿ. ದೇಶಪಾಂಡೆ ಹೇಳಿದರು.

ಬುಧವಾರ ಎಸ್‌.ಎಫ್‌.ಸಿ. ವಿಶೇಷ ಅನುದಾನ ಯೋಜನೆಯಡಿ ಕೈಗೊಂಡ ಪುರಸಭೆ ನೂತನ ಕಟ್ಟಡದ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ರಾಜ್ಯ ಸರಕಾರ ನೋಟು ಮುದ್ರಣ ಮಾಡುವ ಯಂತ್ರ ಇಟ್ಟುಕೊಂಡಿಲ್ಲ. ಕೇಂದ್ರ ಸರಕಾರವಾದರು ಆರ್‌ಬಿಐನ ಮೇಲೆ ತನ್ನ ಹಿಡಿತ ಸಾಧಿಸಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ತಮ್ಮ ಸ್ಥಳೀಯ ಸಂಸ್ಥೆಗೆ ಮೂಲ ಸೌಕರ್ಯಕ್ಕಾಗಿ ತೆರಬೇಕಾದ ತೆರಿಗೆಯನ್ನು ಸರಿಯಾಗಿ ಪಾವತಿಸುವ ಮೂಲಕ ರಾಜ್ಯದ ಅಭಿವೃದ್ಧಿಯ ಅನುದಾನಕ್ಕೆ ಕೈ ಜೋಡಿಸುವಂತಾಗಬೇಕು. ಅಂಕೋಲಾದಲ್ಲಿ ನಗರೋತ್ತಾನದ ಮೂರನೇ ಹಂತದ ಕಾಮಗಾರಿಗೆ ಐದು ಕೋಟಿ ಹಣ ಬಿಡುಗಡೆಯಾಗಿದೆ. ಇದರ ಪ್ರಯೋಜನ ಇಲ್ಲಿನ ಜನತೆ ಪಡೆದುಕೊಳ್ಳುವಂತಾಗಲಿ ಎಂದರು.

ಶಾಸಕಿ ರೂಪಾಲಿ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಕೋಲಾ ಪಟ್ಟಣವು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. 14 ವಾರ್ಡ್‌ಗಳಿದ್ದ ಪಟ್ಟಣ ಪಂಚಾಯತ್‌, ಈಗ 23 ವಾರ್ಡ್‌ಗಳಾಗಿ ಪುರಸಭೆಯಾಗಿ ಮೇಲ್ದರ್ಜೆಗೇರಿದೆ. ಕೆಲವು ಗ್ರಾಮೀಣ ಪ್ರದೇಶಗಳು ಇಲ್ಲಿ ಸೇರ್ಪಡೆಯಾಗಿರುವುದರಿಂದ ಅಭಿವೃದ್ಧಿ ಕುಂಠಿತವಾಗಿದೆ. ಈ ಕುರಿತು ಉಸ್ತುವಾರಿ ಸಚಿವರು ವಿಶೇಷವಾಗಿ ಚಿಂತಿಸಿ, ಹೆಚ್ಚಿನ ಅನುದಾನ ನೀಡಿ ಅಂಕೋಲಾವನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯತೆ ಇದೆ ಎಂದರು. ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಸಹಾಯಕ ಆಯುಕ್ತೆ ಪ್ರೀತಿ ಗೆಲ್ಹೋಟಾ, ಪ್ರಭಾರಿ ತಾಲೂಕು ದಂಡಾಧಿಕಾರಿ ಜಯಲಕ್ಷ್ಮೀ ವೇದಿಕೆಯಲ್ಲಿದ್ದರು. ಎನ್‌.ಎಂ. ಮೇಸ್ತಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾಸ್ಕರ ಗೌಡ ನಿರೂಪಿಸಿದರು.

ಕೀಳು ಮಟ್ಟದ ರಾಜಕಾರಣ ಬಿಡಿ
ಕಳೆದ ಒಂದು ತಿಂಗಳ ಹಿಂದೆ ಭಾನುವಾರದ ರಜಾದಿನದಂದು ಇಲ್ಲಿ ಉಪ ನೋಂದಣಾ ಕಚೇರಿ ಉದ್ಘಾಟನೆಗಾಗಿ ನಾನು ಬಂದಾಗ ಕಾಂಗ್ರೆಸ್‌ ಪಕ್ಷದ ಅನೇಕ ಪ್ರಮುಖರು ರಜಾದಿನದಂದು ಉದ್ಘಾಟನೆಗೊಳಿಸಬಾರದಾಗಿ ಪ್ರತಿಭಟನೆ ನಡೆಸಿದ್ದರು. ಆದರೆ ಇಂದು ಸರಕಾರಿ ರಜಾ ಇದ್ದರೂ ಕಾಂಗ್ರೆಸ್‌ನ ದೇಶಪಾಂಡೆಯವರೆ 2 ಸರಕಾರಿ ಕಾರ್ಯಕ್ರಮ ನಡೆಸಿದ್ದಾರೆ. ಇಂತಹ ಕೀಳು ಮಟ್ಟದ ರಾಜಕಾರಣದಿಂದ ಕಾಂಗ್ರೆಸ್‌ ಕಾರ್ಯಕರ್ತರು ದೂರ ಸರಿಯಲಿ ಎಂದು ಶಾಸಕಿ ರೂಪಾಲಿ ನಾಯ್ಕ ಸಭೆಯಲ್ಲಿ ಟಾಂಗ್‌ ನೀಡಿದರು

ಅಂಕೋಲಾ-ಕಾರವಾರ ಕುಡಿಯುವ ನೀರಿನ ಯೋಜನೆಗಾಗಿ ರಾಜ್ಯ ಸರಕಾರ 158.65 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಿದೆ. ಇದರಿಂದ ಕ್ಷೇತ್ರದ ಜನತೆಯ ಕುಡಿಯುವ ನೀರಿನ ದಾಹ ನೀಗಲಿದೆ.
 ಆರ್‌.ವಿ. ದೇಶಪಾಂಡೆ,
ಸಚಿವ 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.