ಯೋಧ ದುಮ್ಮಿಂಗ್‌ ಸಿದ್ದಿಗೆ ಅಂತಿಮ ನಮನ 


Team Udayavani, Dec 6, 2018, 3:19 PM IST

6-december-15.gif

ಕಾರವಾರ: ಭಾರತೀಯ ಭೂ ಸೇನೆಯಲ್ಲಿದ್ದ ಯೋಧ ದುಮ್ಮಿಂಗ್‌ ಎಂ. ಸಿದ್ದಿ(39) ಅವರ ಪಾರ್ಥಿವ ಶರೀರ ಕಾರವಾರದ ಮಖೇರಿಯಲ್ಲಿನ ಅವರ ಮನೆಗೆ ಬುಧವಾರ ಬೆಳಗ್ಗೆ ತಲುಪಿತು. ದುಮ್ಮಿಂಗ್‌ ಪಾರ್ಥಿವ ಶರೀರ ಬರುತ್ತಿದ್ದಂತೆ ಕುಟುಂಬದವರ ಹಾಗೂ ಸಂಬಂಧಿಕರ ರೋಧನ ಮುಗಿಲು ಮುಟ್ಟಿತು. ಕಳೆದ ಶನಿವಾರ ಪಠಾಣ್‌ ಕೋಟ್‌ ನಿಂದ ರೈಲಿನಿಂದ ಹೊರಟಿದ್ದ ದುಮ್ಮಿಂಗ್‌ ಸಿದ್ದಿ ರೈಲಿನಿಂದ ಬಿದ್ದು ಮೃತಪಟ್ಟಿದ್ದರು. ಆತನ ಜೊತೆ ಪಯಣಿಸುತ್ತಿದ್ದ ಸೈನಿಕರು ಕಾರವಾರ ಮಕೇರಿ ಗ್ರಾಮದಲ್ಲಿನ ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದರು.

ದುಮಿಂಗ್‌ ಎಂ. ಸಿದ್ದಿ ಕಳೆದ 15 ವರ್ಷಗಳಿಂದ ಸೇನೆಯಲ್ಲಿ ಯೋಧನಾಗಿದ್ದ. ದುಮಿಂಗ್‌ ಸಿದ್ದಿ ಪಿಯು ಓದಿದ್ದು ಕಾರವಾರದ ಸರ್ಕಾರಿ ಪಿಯು ಕಾಲೇಜಿನಲ್ಲಿ. ಮೂಲತಃ ಯಲ್ಲಾಪುರದವರು. ದುಮ್ಮಿಂಗ್‌ ಕುಟುಂಬ ಕಳೆದ ಎರಡು ದಶಕಗಳ ಹಿಂದೆ ಕಾರವಾರ ಸಮೀಪದ ಮಖೇರಿ ಗ್ರಾಮದಲ್ಲಿ ನೆಲೆ ನಿಂತಿತ್ತು.

ಪೊಲೀಸ್‌ ಗೌರವ: ದುಮ್ಮಿಂಗ್‌ ಶವಕ್ಕೆ ತಾಲೂಕು ಆಡಳಿತ ಗೌರವ ಸೂಚಿಸಿತು. ಅಲ್ಲದೇ ಪೊಲೀಸರು ಸಹ ಗೌರವ ನೀಡಿದರು. ಸಂಜೆ ಶಿರವಾಡ ಚರ್ಚ್‌ನಲ್ಲಿ ದುಮ್ಮಿಂಗ್‌ ಶವವನ್ನು ಇಟ್ಟು ಗೌರವ ಸಲ್ಲಿಸಲಾಯಿತು. ಪಾದ್ರಿಗಳು ಕ್ರಿಶ್ಚಿಯನ್ನ ಸಂಪ್ರದಾಯದಂತೆ ಪ್ರಾರ್ಥನೆ ಸಲ್ಲಿಸಿದರು.

ಜನ್ಮ ದಿನದ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು: 
ದುಮ್ಮಿಂಗ್‌ ಸೋಮವಾರ ಸಂಜೆ ಅಥವಾ ಮಂಗಳವಾರ ಕಾರವಾರಕ್ಕೆ ತಲುಪಲಿದ್ದರು. ಆತನ ಮಗನ ಹುಟ್ಟಿದ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಬೇಕಿದ್ದ ಅವರು ಶವವಾಗಿ ಮನೆ ತಲುಪಿದ್ದು, ಇಡೀ ಕುಟುಂಬದಲ್ಲಿ ಮೌನ ಆವರಿಸಿತ್ತು. ಆಕಾಶ ಕಳಚಿಬಿದ್ದ ಅನುಭವ ಅವರ ಮಕ್ಕಳಿಗೆ ಹಾಗೂ ಪತ್ನಿಗೆ ಆಗಿತ್ತು. ದುಮ್ಮಿಂಗ್‌ ಅವರು ಹೊಸ ಮನೆ ಕಟ್ಟಿಸುತ್ತಿದ್ದು, ಅದು ಸಹ ಮುಕ್ತಾಯ ಹಂತದಲ್ಲಿತ್ತು. ಕ್ರಿಸ್‌ಮಸ್‌ ವೇಳೆಗೆ ಹೊಸ ಮನೆ ಪ್ರವೇಶಕ್ಕೆ ಅವರು ಕನಸು ಕಂಡಿದ್ದರು.

ದೇಶದ ವಿವಿಧೆಡೆ ಸೇವೆ: ಪಂಜಾಬ್‌ ಪಠಾಣಕೋಟ್‌ ನಲ್ಲಿ ಸೈನಿಕ ಕ್ಯಾಂಪ್‌ನಲ್ಲಿ ದುಮ್ಮಿಂಗ್‌ ಸೈನಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಿಯುಸಿ ಶಿಕ್ಷಣದ ನಂತರ ಬೆಂಗಳೂರಿನಲ್ಲಿ ಸೈನ್ಯಕ್ಕೆ ಸೇರಿದ್ದ ದುಮ್ಮಿಂಗ್‌ ಅಪ್ಪಟ ದೇಶಪ್ರೇಮಿಯಾಗಿದ್ದರು. ಜಮ್ಮು ಕಾಶ್ಮೀರ್‌, ಅಸ್ಸಾಂನಲ್ಲಿ ಕೆಲ ಸಮಯ ಸೈನಿಕನಾಗಿ ಕೆಲಸ ಮಾಡಿದ್ದರು. ಸದ್ಯದಲ್ಲೇ ಸೈನ್ಯದಿಂದ ನಿವೃತ್ತಿ ಹೊಂದಿ ಅವರು ನಾಡಿಗೆ ಬರಲಿದ್ದರು. ದುಮ್ಮಿಂಗ್‌ ಸಿದ್ದಿ ಸಾವು ದುಮ್ಮಿಂಗ್‌ ಅವರ ತಂದೆ ಮೊಹತೀಸ್‌ ಸಿದ್ದಿ ಹಾಗೂ ಆತನ ಪತ್ನಿ, ಮಕ್ಕಳಲ್ಲಿ ಹಾಗೂ ಸಹೋದರರಲ್ಲಿ ನೋವು ತಂದಿದೆ. ಸೈನ್ಯದಿಂದ ಕುಟುಂಬಕ್ಕೆ ಸಿಗಬೇಕಾದ ಎಲ್ಲ ನೆರವುಗಳು ಸಿಗಲಿವೆ ಎಂದು ಪಠಾಣ್‌ಕೋಟ್‌ ಕ್ಯಾಂಪ್‌ ನಿಂದ ಬಂದಿದ್ದ ಸೈನಿಕ ಅಧಿಕಾರಿಗಳು ಹಾಗೂ ದುಮ್ಮಿಂಗ್‌ ಸಿದ್ದಿ ಮಿತ್ರರು ತಿಳಿಸಿದ್ದಾರೆ. ಕಾರವಾರ ಸೈನಿಕ ಕಲ್ಯಾಣ ಇಲಾಖೆ ಅಧಿಕಾರಿಗಳು ಸಹ ದುಮ್ಮಿಂಗ್‌ ಸಿದ್ದಿ ಮನೆಯಲ್ಲಿ ಉಪಸ್ಥಿತರಿದ್ದು, ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಸಚಿವ ಹೆಗಡೆ ಕಂಬನಿ
ಶಿರಸಿ:
ಪಂಜಾಬ ರಾಜ್ಯದ ಪಟಾಣಕೋಟ್‌ನಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದ ಕಾರವಾರ ಮೂಲದ ಯೋಧ ದುಮ್ಮಿಂಗ್‌ ಸಿದ್ದಿ ಅಕಾಲಿಕ ಮರಣಕ್ಕೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂತಾಪ ವ್ಯಕ್ತಪಡಿಸಿದ್ದಾರೆ. ದುಮ್ಮಿಂಗ್‌ ಸಿದ್ದಿ ಇವರು ಕಳೆದ 15 ವರ್ಷಗಳಿಂದ ದೇಶ ಕಾಯುವ ಕಾಯಕದಲ್ಲಿ ತಲ್ಲೀನರಾಗಿದ್ದು, ಅವರ ಬಲಿದಾನವನ್ನು ಎಂದಿಗೂ ಸಮಾಜ ನೆನಪಿಡುತ್ತದೆ. ಅವರ ನಿಧನವು ಭಾರತೀಯ ಸೇನೆಗೆ ಹಾಗೂ ದೇಶಕ್ಕೆ ತುಂಬಲಾರದ ನಷ್ಟವುಂಟಾಗಿದ್ದು, ಅವರ ಆತ್ಮಕ್ಕೆ ಸದ್ಗತಿಯನ್ನೂ ಹಾಗೂ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ.

ದೇಶಪಾಂಡೆ ಸಂತಾಪ
ಹಳಿಯಾಳ: ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದುಮ್ಮಿಂಗ್‌ ಸಿದ್ದಿ ನಿಧನರಾದ ಸುದ್ದಿ ತುಂಬಾ ದುಃಖದ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಸಂತಾಪ ಸೂಚಿಸಿದ್ದಾರೆ. ಕಾರವಾರದ ಮಾಖೇರಿ ಗ್ರಾಮದವಾರದ ಡುಮ್ಮಿಂಗ್‌ ದೂರದ ಊರುಗಳಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಹುತಾತ್ಮರಾಗಿದ್ದು, ಅವರ ಕೊಡುಗೆಯನ್ನು ಈ ರಾಷ್ಟ್ರವು ಸದಾ ನೆನಪಿನಲ್ಲಿಟ್ಟುಕೊಂಡಿರಲಿದೆ ಎಂದಿದ್ದಾರೆ. ಮಗನನ್ನು ಕಳೆದುಕೊಂಡಿರುವ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿ ಭಗವಂತ ನೀಡಲಿ ಹಾಗೂ ಅಗಲಿದ ಸೈನಿಕನ ಆತ್ಮಕ್ಕೆ ಪರಮಾತ್ಮನು ಶಾಂತಿ ಕೊಡಲೆಂದು ಪ್ರಾರ್ಥಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.