ಮೆಕಾನ್‌ ವರದಿ ರದ್ದತಿಗೆ ಒತ್ತಾಯ


Team Udayavani, Dec 8, 2018, 2:54 PM IST

8-december-13.gif

ಶಿರಸಿ: ಸರ್ಕಾರದ ಸಂಸ್ಥೆ ಸರ್ಕಾರದ್ದೇ ಯೋಜನೆ ಬಗ್ಗೆ ಪರಿಸರ ವರದಿ ತಯಾರಿಸುವುದು ಎಂದರೆ ಅದು ಏಕಪಕ್ಷೀಯ. ಕೈಗಾ 5-6ನೇ ಘಟಕ ಯೋಜನೆಯ ಮೆಕಾನ್‌ ಪರಿಸರ ವರದಿ ರದ್ದು ಮಾಡಬೇಕು. ಸರ್ಕಾರ ನಡೆಸುವ ಅಹವಾಲು ಸಭೆಯಲ್ಲಿ ಪಾಲ್ಗೊಂಡು ವೈಜ್ಞಾನಿಕವಾಗಿ ವಿರೋಧಿಸಬೇಕು ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾದೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು. ಅವರು ಸೋಂದಾ ಸ್ವರ್ಣವಲ್ಲೀ ಸುಧರ್ಮಾ ಸಭಾಂಗಣದಲ್ಲಿ ನಡೆದ ಪರಿಸರ ಸಂಘಟನೆಗಳ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಕ್ಯಾನ್ಸರ್‌ ಬಂದಿಲ್ಲ ಎಂದು ಸರ್ಕಾರ ತನಗೆ ಬೇಕಾದಂತೆ ವರದಿ ನೀಡಬಹುದು. ಯಲ್ಲಾಪುರ ಮುಕ್ತ ಚರ್ಚೆಯಲ್ಲಿ ಕೈಗಾದವರ ತಂತ್ರಗಾರಿಕೆ ನೋಡಿದ್ದೇವೆ. ಜಿಲ್ಲೆಯ ಜನತೆ ಆಲೋಚನೆ ಮಾಡಬೇಕು. ಹೊರತೂ ಆಮಿಷಗಳಿಗೆ ಒಳಗಾಗಬಾರದು ಎಂದರು.

ಕೈಗಾ ಕಿಸೆಯಲ್ಲಿನ ಬೆಂಕಿ ಕೆಂಡ. ಮನುಷ್ಯನ ಮೇಲೆ ಮಾಡುವ ಅಣುವಿಕಿರಣ ದುಷ್ಪರಿಣಾಮಗಳು ಅಪಾರ, ಗಂಭೀರ ಎಂದು ವಿಜ್ಞಾನಿಗಳು ಎಚ್ಚರಿಸುತ್ತಲೇ ಇದ್ದಾರೆ. ಜೊತೆಗೆ ಕೃಷಿ, ತೋಟಗಾರಿಕೆ, ಅರಣ್ಯ-ಜಲ ವನ್ಯಜೀವಿ, ಜಾನುವಾರು ಮೇಲೆ ಸಹಾ ಅಷ್ಟೇ ಭಾರೀ ಮಾರಕ ಪರಿಣಾಮ ಬೀರುತ್ತವೆ, ಅದಕ್ಕಾಗೇ ಕೈಗಾದವರ ಜೊತೆ 2 ಬಾರಿ ಮುಕ್ತ ಸಂವಾದ ನಡೆಸಿದ್ದೇವೆ. ಕೈಗಾ ಕಣಿವೆಗೆ, ಸ್ಥಳ ಭೇಟಿ ಮಾಡಿದ್ದೇವೆ. ವಜ್ರಳ್ಳಿಯಲ್ಲಿ 2012 ರಲ್ಲಿ ಸಮಾವೇಶ ನಡೆಸಿದ್ದೇವೆ. ಆರೋಗ್ಯ ಸಮೀಕ್ಷೆಗೆ ಆಗ್ರಹ ಮಾಡಿದ್ದೇವೆ. ಜಿಲ್ಲೆಯ ಜನರು ಕ್ಯಾನ್ಸರ್‌ನಂಥ ಗಂಭೀರ ಕಾಯಿಲೆಗಳಿಗೆ ತುತ್ತಾಗುವುದನ್ನು ತಡೆಗಟ್ಟಬೇಕು ಎಂದು ಮನವಿ ಮಾಡಿದ್ದೇವೆ ಎಂದರು.

ಇದೀಗ ಕೈಗಾ ಬಗ್ಗೆ ಸರ್ಕಾರದವರು ಡಿ.15 ರಂದು 5-6ನೇ ಘಟಕ ಸ್ಥಾಪನೆ ಬಗ್ಗೆ ಅಹವಾಲು ಸಭೆ ಕರೆದಿದ್ದಾರೆ. ಪರಿಸರ ವರದಿ ಪ್ರಕಟಿಸಿದ್ದಾರೆ. ಇದೆಲ್ಲ ಹೆಸರಿಗೆ ಮಾತ್ರ. ಕೈಗಾ ಪರಿಸರ ವರದಿ ಸುಳ್ಳಿನಿಂದ, ತಪ್ಪು ಮಾಹಿತಿಗಳಿಂದ ಕೂಡಿದೆ ಎಂದು ತಜ್ಞರು ಹೇಳಿದ್ದಾರೆ. ಈ ವರದಿ ರದ್ದು ಮಾಡಬೇಕು ಎಂದು ಹೇಳಿದ್ದಾರೆ. ಸರ್ಕಾರದ ಡಿ.15 ರಂದು ಕೈಗಾದಲ್ಲಿ ನಡೆಸುವ ಅಹವಾಲು ಸಭೆಗೆ ಜಿಲ್ಲೆಯ ಜನತೆ, ಸಂಘ-ಸಂಸ್ಥೆಗಳು ಹಾಜರಾಗಿ ತಮ್ಮ ಲಿಖಿತ ಅಭಿಪ್ರಾಯ ನೀಡಬೇಕು. ಕೈಗಾ 5-6 ನೇ ಘಟಕ ನಿರ್ಮಾಣ ಬೇಡ ಎಂದು ಏಕ/ದ್ವನಿಯಿಂದ ತಜ್ಞರು, ಜನ ಪ್ರತಿನಿಧಿಗಳು, ಸಂಸ್ಥೆಗಳು, ರೈತರು, ಮಹಿಳೆಯರು ಪ್ರಜ್ಞಾವಂತ ನಾಗರಿಕರು ಒತ್ತಾಯ ಮಾಡಬೇಕು ಎಂದರು.

ಇಂಧನ ತಜ್ಞ ಡಾ| ಶಂಕರ ಶರ್ಮಾ, ದೇಬಾಯ್‌ ಗುಪ್ತಾ, ಪರಿಸರ ಕಾನೂನು ಅಧ್ಯಯನ ಕೇಂದ್ರದ ಡಾ| ಮಹಾಬಲೇಶ್ವರ್‌, ಗುರುದತ್ತ ಫಾಯದೆ, ಅನಂತ ಹೆಗಡೆ ಅಶೀಸರ, ಶಾಂತಾರಾಂ ಸಿದ್ದಿ, ಉಮೇಶ ಭಾಗ್ವತ್‌, ಶಿವಾನಂದ ದೀಕ್ಷಿತ, ಶೈಲಜಾ ಗೊರ್ನಮನೆ, ಈಶಣ್ಣ ನೀರ್ನಳ್ಳಿ, ಸಾಗರದ ವೆಂಕಟೇಶ, ಕಳಸದ ಗಜೇಂದ್ರ, ದೊಂಡು ಪಾಟೀಲ, ಟಿ.ಆರ್‌. ಹೆಗಡೆ, ನಾರಾಯಣ ಗಡಿಕೆ ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.