2 ವರ್ಷದಿಂದ ಕಾದ ಕ್ರೀಡಾಪಟು


Team Udayavani, Dec 19, 2018, 3:28 PM IST

19-december-15.gif

ಶಿರಸಿ: ನಾಡಿನ ಹೆಮ್ಮೆಯ ಗರಿ ಮೂಡಿಸುವ ಕ್ರೀಡಾಪಟುವಿಗೆ ಸರಕಾರವೇ ಘೋಷಣೆ ಮಾಡಿದ್ದ ಬಹುಮಾನ ಬಾರದೇ ಕಳೆದೆರಡು ವರ್ಷಗಳಿಂದ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಗದೇ ಈ ಬಾರಿಯ ಸ್ಪರ್ಧೆಗಾದರೂ ಸರಕಾರದ ಬಹುಮಾನ ಬರುತ್ತದೆ ಎಂದು ಜಾತಕ ಪಕ್ಷಿಯಂತೆ ಕಾಯುವಂತಾಗಿದೆ. ಸರಕಾರ ಕ್ರೀಡೆಗೆ ಪ್ರೋತ್ಸಾಹ ಕೊಡುತ್ತೇವೆ ಎನ್ನುವ ಬೆನ್ನಲ್ಲೇ ಪ್ರತಿಭಾವಂತರತ್ತ ನಿರ್ಲಕ್ಷ್ಯ ಮಾಡುವ ಪ್ರಕರಣ ಕೂಡ ಬೆಳಕಿಗೆ ಬಂದಿದೆ.

2019ರ ಫೆಬ್ರುವರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜಾವಲಿನ ಸ್ಪರ್ಧೆ ದುಬೈನಲ್ಲಿ ನಡೆಯಲಿದ್ದು, ಇದಕ್ಕಾಗಿ ಈ ಕ್ರೀಡಾಪಟು ಪಾಲ್ಗೊಳ್ಳಬೇಕಿದೆ. ಕ್ರೀಡಾ ಸಾಧನೆಗೆ ರಾಜ್ಯ ಸರಕಾರದಿಂದ ಬರಬೇಕಿದ್ದ 3 ಲಕ್ಷ ರೂ. ನೆರವು ಬಂದಲ್ಲಿ ಭಾಗವಹಿಸಲು ಅನುಕೂಲ ಆಗಲಿದೆ. ಆದರೆ, ಸರಕಾರದ ನಿರ್ಲಕ್ಷ್ಯ  ಕ್ರೀಡಾಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಏನಿದು ಪ್ರಕರಣ?: ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್‌ನ ಜಾವಲಿನ್‌ ಎಸೆತದಲ್ಲಿ ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದ ಇಲ್ಲಿಯ ಕ್ರೀಡಾಪಟುವೊಬ್ಬರಿಗೆ ಸಿಗಬೇಕಿದ್ದ ಬಹುಮಾನ ಮೊತ್ತ ಕಳೆದ ಮೂರು ವರ್ಷದಿಂದ ಕೈಗೆ ಸೇರಿಲ್ಲ. ಆದರೆ ಈ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ ಪ್ರತಾಪ ಪರಮಾನಂದ ಹೆಗಡೆ ರಾಷ್ಟ್ರಮಟ್ಟದ ಜಾವಲಿನ್‌ನಲ್ಲಿ ಸಾಧನೆ ಮಾಡಿದ ಕ್ರೀಡಾಪಟು ಆಗಿದ್ದಾರೆ. ಇದರಲ್ಲೇ ಎರಡು ಬಾರಿ ಕಂಚಿನ ಪದಕ ಪಡೆದು ಗಮನ ಸೆಳೆದಿದ್ದನು.

2017 ರಲ್ಲಿ 17ನೇ ನ್ಯಾಷನಲ್‌ ಪ್ಯಾರಾ ಅಥ್ಲೆಟಿಕ್ಸ್‌ನ ಜಾವಲಿನ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದ ಪ್ರತಾಪ, 2018 ರಲ್ಲಿ ಕೂಡ ಮತ್ತೊಮ್ಮೆ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದರು. ಈ ಸಾಧನೆಗೆ ಬಹುಮಾನದ ಮೊತ್ತವಾಗಿ ಸರಕಾರವೇ ತಲಾ 50ಸಾವಿರ ರೂ.ನಂತೆ ಎರಡೂ ಕ್ರೀಡಾಕೂಟದ ಸಾಧನೆಗೆ 1ಲಕ್ಷ ರೂ. ಬಹುಮಾನ ನೀಡಬೇಕಿತ್ತು.

ಪ್ರತಾಪ ಹೆಗಡೆ 53.62ಮೀಟರ್‌ ದೂರ ಜಾವಲಿನ್‌ ಎಸೆದು ಗಮನ ಸೆಳೆಯುವ ಜೊತೆಗೆ ವಿಶ್ವ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅವರು ಎಂಟನೇ ಸ್ಥಾನದಲ್ಲಿ ನಿಲ್ಲುವುದರಿಂದ ಅವರಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪಧೆಯಲ್ಲಿ ಭಾಗವಹಿಸುವುದಕ್ಕೆ ಅವಕಾಶ ಉಂಟು.

ಇದೊಂದೇ ಅಲ್ಲ: ಮಲೆನಾಡಿನ ಊರಿನಲ್ಲಿದ್ದೂ ನಾಡು ಹೆಮ್ಮೆಪಡುವ ಸಾಧನೆ ಮಾಡುತ್ತಿರುವ ಪ್ರತಾಪ್‌, ಕೇವಲ ಜಾವಲಿನ್‌ನಲ್ಲಿ ಮಾತ್ರವಲ್ಲ, ವಾಲಿಬಾಲ್‌ನಲ್ಲೂ ಗಮನ ಸೆಳೆದಿದ್ದಾನೆ. ಜತೆಯಲ್ಲಿ ಕಳೆದ ವರ್ಷ ರಾಷ್ಟ್ರಮಟ್ಟದ ಪಿವಿಎಫ್‌ಐ ಫೆಡರೇಶನ್‌ ಕಪ್‌ ಸಿಟ್ಟಿಂಗ್‌ ಪ್ಯಾರಾ ವಾಲಿಬಾಲ್‌ ನಲ್ಲಿ ಎರಡನೇ ಬಹುಮಾನ ಗಳಿಸಿದ್ದರು. ಕೆಲ ತಿಂಗಳ ಹಿಂದೆ ಉಡುಪಿಯ ಮಲ್ಪೆ ಕಡಲತಡಿಯಲ್ಲಿ ನಡೆದ ದೇಶದ ಮೊದಲ ಸ್ಟ್ಯಾಂಡಿಂಗ್  ವಾಲಿಬಾಲ್‌ ಸೀನಿಯರ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ರನ್ನರ್‌ಅಪ್‌ ಆಗಿ ಹೊರಹೊಮ್ಮಿದ್ದರು. ಇದಕ್ಕೆ ಸಂಬಂಧಿಸಿದ ಬಹುಮಾನದ ಮೊತ್ತವೂ ಬರಬೇಕಿದೆ.

ವೈಕಲ್ಯ ತೊಡಕಾಗಲಿಲ್ಲ: ಹುಟ್ಟಿನಿಂದಲೇ ಎಡಗೈ ವೈಕಲ್ಯ ಹೊಂದಿರುವ ಪ್ರತಾಪ ಹೆಗಡೆ ಸಾಧನೆಗೆ ಮಾತ್ರ ವಾಲಿಬಾಲ್‌ ಅಥವಾ ಜಾವಲಿನ್‌ ಸಮಸ್ಯೆ ಆಗಲಿಲ್ಲ. ಸಣ್ಣವನಿದ್ದಾಗಲೇ ಓಟ, ಆಟದ ಕುರಿತು ಆಸಕ್ತಿ ಬೆಳೆಸಿಕೊಂಡಿದ್ದ ಪ್ರತಾಪ್‌ ಉನ್ನತ ಶಿಕ್ಷಣ ಪಡೆದ ನಂತರ ರಾಷ್ಟ್ರಮಟ್ಟದಲ್ಲೂ ಸಾಧನೆ ತೋರಿದ್ದು ವಿಶೇಷ. ಎಸ್ಸೆಸ್ಸೆಲ್ಸಿ ಓದುವಾಗಲೇ ಗಂಭೀರ ಖಾಯಿಲೆಗೂ ಒಳಗಾಗಿದ್ದ ಪ್ರತಾಪನನ್ನು ಬದುಕಿಸಿದ್ದೇ ಕ್ರೀಡೆ ಎನ್ನುತ್ತಾರೆ ತಂದೆ ಪರಮಾನಂದ ಹೆಗಡೆ.

ಕ್ರೀಡೆಗೆ ಸರಕಾರ ನೀಡಬೇಕಿದ್ದ ನೆರವು ಬಂದಿಲ್ಲ ಎಂದು ಮುಖ್ಯಮಂತ್ರಿಗೂ ಪತ್ರ ಬರೆದಿದ್ದೆವು. ಅದಕ್ಕೆ ಈಗ ಸಿಎಂ ಕಚೇರಿ ಸ್ಪಂದಿಸಿದೆ. ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದು ನಮಗೆ ಆಶಾದಾಯಕವಾಗಿದೆ.
 ಪರಮಾನಂದ ಹೆಗಡೆ, ಪಾಲಕ

2014ರಿಂದಲೇ ಸರಕಾರ ಕ್ರೀಡಾ ಪ್ರೋತ್ಸಾಹ ಮೊತ್ತ ಕೊಟ್ಟಿಲ್ಲ. ಇದು ಕ್ರೀಡಾಪಟುಗಳಿಗೆ ಮಾಡುವ ಅನ್ಯಾಯ. ತಕ್ಷಣ ಸರಿಮಾಡಬೇಕು.
 ನರೇಂದ್ರ ಎಸ್‌.ಬಿ. ಕ್ರೀಡಾಭಿಮಾನಿ

ರಾಘವೇಂದ್ರ ಬೆಟ್ಟಕೊಪ್ಪ 

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.