ಕುಂಬಾರವಾಡಾ ಶಾಲೆಗೆ 111ವರ್ಷದ ಸಂಭ್ರಮ


Team Udayavani, Jan 3, 2019, 11:00 AM IST

3-january-22.jpg

ಜೋಯಿಡಾ: ತಾಲೂಕಿನ ಕುಂಬಾರವಾಡಾ ಹಿರಿಯ ಪ್ರಾಥಮಿಕ ಶಾಲೆ 111 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಡಿಎಂಸಿ ಜ. 5ರಂದು ಶತಮಾನೋತ್ಸವ ಆಚರಿಸಲು ಮುಂದಾಗಿದ್ದು, ಹಳೆವಿದ್ಯಾರ್ಥಿಗಳು ಹಾಗೂ ಊರ ನಾಗರಿಕರಲ್ಲಿ ಸಂಭ್ರಮ ಮನೆಮಾಡಿದೆ.

1906ರಲ್ಲಿ ಮುಂಬೈ ಕರ್ನಾಟಕ ಪ್ರಾಂತದ ಅವಧಿಯಲ್ಲಿ ಮರಾಠಿ ಮಾಧ್ಯಮ ಶಾಲೆಯಾಗಿ ಆರಂಭಗೊಂಡ ಈ ಶಾಲೆ, ನಂತರ ಕನ್ನಡ ಮಾಧ್ಯಮವಾಗಿ ಪರಿವರ್ತನೆಗೊಂಡು, ಸುತ್ತಲ ನೂರಾರು ಗ್ರಾಮಗಳ ಬಡಮಕ್ಕಳಿಗೆ ವಿದ್ಯಾದಾನ ಮಾಡಿ ಅಕ್ಷರಜ್ಞಾನ ಬಿತ್ತಿದ ಕಾತೇಲಿ, ಅಣಶಿ ಗ್ರಾ.ಪಂ. ವ್ಯಾಪ್ತಿಯ ಪ್ರಪ್ರಥಮ ಶಾಲೆ ಎನ್ನುವ ಹೆಗ್ಗಳಿಕೆ ಹೊಂದಿದೆ. ತಾಲೂಕಿನ ಅತ್ಯಂತ ಹಿರಿಯ ಶಾಲೆಗಳಲ್ಲೊಂದಾದ ಈ ಶಾಲೆ ಗುಡಿಸಲಿನಲ್ಲಿ ಆರಂಭಗೊಂಡಿದ್ದು, ಗುರು-ಶಿಷ್ಯರ ಬಳಗವೊಂದು ಬಿಟ್ಟರೆ ಬೇರೆ ಅನುಕೂಲತೆಗಳೇ ಇರಲಿಲ್ಲ. ಆದರೀಗ ವ್ಯವಸ್ಥಿತ ಕಟ್ಟಡ ಜೊತೆಗೆ ಆಧುನಿಕ ಶೈಲಿಯ ಪಿಠೊಪಕರಣ, ಪಾಠೊಪಕರಣ, ವಿಶಾಲ ಮೈದಾನವಿದೆ. ಗಣಕಯಂತ್ರ, ವಿಶೇಷ ಪರಿಣಿತ ಶಿಕ್ಷಕರ ದಂಡಿದ್ದು, ಶಿಕ್ಷಣಕ್ಕೆ ಯಾವುದೇ ಸಾಟಿಯಿಲ್ಲದಂತೆ ಬೆಳೆದು ನಿಂತಿದೆ.

ಈ ಶಾಲೆಯಲ್ಲಿ ಈವರೆಗೆ 6000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆದಿದ್ದು, ಇದರಲ್ಲಿ ಅನೇಕರು ಮುಂಬೈ, ಪೂಣೆ, ಬೆಂಗಳೂರು, ಚೆನ್ನೈ ಮುಂತಾದ ಕಡೆಗಳಲ್ಲಿ ಉದ್ಯೋಗದಲ್ಲಿದ್ದರೆ, ಇನ್ನು ಕೆಲವರು ಸಿಂಗಾಪುರ, ರಷಿಯಾ, ಕೊಲೋಂಬಿಯಾ, ಅಮೆರಿಕಾ, ಅರಬ್‌ ರಾಷ್ಟ್ರಗಳಲ್ಲಿ ವಿವಿಧ ಉದ್ಯೋಗದಲ್ಲಿದ್ದಾರೆ. ಈ ಶಾಲೆ ಕಾರ್ಯಕ್ರಮಕ್ಕೆ ಈ ಎಲ್ಲ ದೂರದೂರದ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿರುವುದು ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.

ಶಿಕ್ಷಣ, ಅಭಿವೃದ್ಧಿಗೆ ಪೂರಕ: ಶಾಲೆಯ ಸಮಸ್ತ ಬೇಡಿಕೆಗಳಿಗೆ ಸ್ಥಳೀಯ ಗ್ರಾಪಂ ಬೆಂಬಲವಾಗಿ ನಿಂತಿದೆ. ಅಗತ್ಯ ಕೊಠಡಿ, ಮೂಲ ಸೌಕರ್ಯ, ಕಂಪ್ಯೂಟರ್‌ ಶಿಕ್ಷಣ ನೀಡುವ ಈ ಶಾಲೆಯಲ್ಲಿ ಐದು ಕಾಯಂ ಶಿಕ್ಷಕರು, 2 ಗೌರವ ಶಿಕ್ಷಕರು ಹಾಗೂ ಇತ್ತೀಚೆಗೆ ಬಂದ 2 ಎರಡು ವಿಷಯ ಪರಿಣಿತ ಶಿಕ್ಷಕರಿಂದಾಗಿ ಉತ್ತಮ ಶೈಕ್ಷಣಿಕ ವಾತಾವರಣ ಮೇಳೈಸಿದ್ದು, ಗುಣಾತ್ಮಕ ಶಿಕ್ಷಣಕ್ಕೆ ಯಾವುದೇ ಕೊರತೆ ಇಲ್ಲದಂತಾಗಿದೆ. ಅಭಿವೃದ್ಧಿ ಕಾರ್ಯಕ್ಕೆ ಪಾಲಕರು, ಊರ ನಾಗರಿಕರು ಟೊಂಕಕಟ್ಟಿ ನಿಲ್ಲುತ್ತಿದ್ದು, ಶಾಲಾಭಿವೃದ್ಧಿಗೆ ಇಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ.

ಕುಂಬಾರವಾಡಾ ಹಬ್ಬ: ಶಾಲಾ ಶತಮಾನೋತ್ಸವ ನಿಮಿತ್ತ ಅಂದು ಸಂಜೆ ಕುಂಬಾರವಾಡಾ ಹಬ್ಬ ಆಚರಿಸಲಾಗುತ್ತಿದ್ದು, ಪ್ರಖ್ಯಾತ ಕಲಾ ತಂಡಗಳಿಂದ ಸಂಗೀತ, ನೃತ್ಯಗಳ ರಸಮಂಜರಿ ಹಾಗೂ ಜಾದು, ಮಿಮಿಕ್ರಿ, ಹಾಸ್ಯಭರಿತ ಕೊಂಕಣಿ ನಾಟಕ ಕೂಡಾ ಪ್ರದರ್ಶನಗೊಳ್ಳಿದೆ. ಶತಮಾನೋತ್ಸವ ಊರ ಹಬ್ಬವಾಗಿ ಸಂಭ್ರಮಿಸಲಿದೆ.

ನಮ್ಮ ಶಾಲೆಗೆ 111 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಳೆ ವಿದ್ಯರ್ಥಿಗಳ ಒಕ್ಕೂಟ, ಎಸ್‌ಡಿಎಂಸಿ ಹಾಗೂ ಊರ ನಾಗರಿಕರ ಆಶಯದಂತೆ ಶತಮಾನೋತ್ಸವ ಸಂಭ್ರಮ ಆಚರಣೆಗೆ ಮುಂದಾಗಿದ್ದೇವೆ. ನಮ್ಮ ಶಾಲೆಯಲ್ಲಿ ಸೇವೆ ಮಾಡಿದ ಎಲ್ಲ ಗುರುಗಳಿಗೆ ಗೌರವಾರ್ಪಣೆ ಮಾಡುವ ಉದ್ದೇಶವಿದ್ದು, ಶತಮಾನೋತ್ಸವವನ್ನು ಊರಹಬ್ಬವನ್ನಾಗಿ ಆಚರಿಸುತ್ತಿದ್ದೇವೆ.
 ಪುರುಷೋತ್ತಮ ಕಾಮತ್‌
ಶತಮಾನೋತ್ಸವ ಸಮಿತಿ ಅಧ್ಯಕ್ಷ

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.