ಬಿಕೋ ಎನ್ನುತ್ತಿವೆ ಬೀಚ್‌ಗಳು


Team Udayavani, Jan 4, 2019, 11:39 AM IST

4-january-19.jpg

ಕಾರವಾರ: ಹೊಸ ವರ್ಷಕ್ಕೆ ಕಾಲಿಟ್ಟು ಎರಡು ದಿನ ಮಾತ್ರ ಕಳೆದಿದೆ. ವಿಪರೀತ ಚಳಿಯ ಕಾರಣವಾಗಿಯೋ ಅಥವಾ ಹೊಸ ವರ್ಷದ ಮೂಡ್‌ ಮರೆಯಾಗುತ್ತಿರುವ ಕಾರಣವೋ ಜಿಲ್ಲೆಯ ಕಡಲತೀರಗಳಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಮುರ್ಡೇಶ್ವರ, ಗೋಕರ್ಣದಂಥ ಧಾರ್ಮಿಕ ಕ್ಷೇತ್ರಗಳನ್ನು ಹೊರತುಪಡಿಸಿದರೆ ಜಿಲ್ಲೆಯ ಕಡಲತೀರಗಳಲ್ಲಿ ಪ್ರವಾಸಿಗರ ಬರ ಉಂಟಾಗಿದೆ.

ಸಂಜೆ ವೇಳೆ ಸ್ಥಳೀಯರು ಸೇರಿ ಒಂದಿಷ್ಟು ಪ್ರವಾಸಿಗರು ಕಡಲತೀರಗಳಲ್ಲಿ ಕಾಣಸಿಗುತ್ತಾರೆ. ಹೆಚ್ಚಿನ ಪ್ರವಾಸಿಗರು ಈಗ ವಾಸ್ತವ್ಯ ಮಾಡುವುದಿಲ್ಲ. ಫ್ಲೋಟಿಂಗ್‌ ಟೂರಿಸ್ಟ್‌ ಅರ್ಧ ಗಂಟೆ ನಿಂತು ಕಡಲತೀರದಲ್ಲಿ ಕಳೆದು ಸಾಗಿಬಿಡುತ್ತಾರೆ ಎಂಬ ಮಾತು ಕಡಲತೀರದಲ್ಲಿ ಜಲಸಾಹಸ ಕ್ರೀಡೆ ನಡೆಸುವ ಯುವಕರಿಂದ ಕೇಳಿಬಂತು. ವಿದ್ಯಾರ್ಥಿಗಳ ಪ್ರವಾಸ ಒಂದು ಹಂತದಲ್ಲಿ ಮುಗಿದಿದೆ. ಪರೀಕ್ಷೆಗಳು ಸಮೀಪಿಸುತ್ತಿವೆ. ಹಾಗಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿದೆ ಎಂಬ ಮಾತು ಪ್ರವಾಸೋದ್ಯಮ ಇಲಾಖೆಯ ನೌಕರರಿಂದ ಕೇಳಿಬಂತು.

ಆದರೂ ಸಂಕ್ರಮಣದ ನಂತರ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಲಿದೆ ಎನ್ನಲಾಗುತ್ತಿದೆ. 2017ರಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ 80,30,760 ಪ್ರವಾಸಿಗರು ಬಂದು ಹೋಗಿದ್ದಾರೆ. 2018ರಲ್ಲಿ 92,73,298 ಪ್ರವಾಸಿಗರು ಭೇಟಿ ನೀಡಿದ ದಾಖಲೆ ಇದೆ. ಜಿಲ್ಲೆಯ ಧಾರ್ಮಿಕ ಪ್ರವಾಸಿ ಕೇಂದ್ರಗಳನ್ನು ಸೇರಿ ಒಟ್ಟು 25 ಪ್ರವಾಸಿ ತಾಣಗಳಲ್ಲಿ ಇಟ್ಟ ಅಂಕಿ ಅಂಶಗಳನ್ನು ಆಧರಿಸಿ ಪ್ರವಾಸೋದ್ಯಮ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. 2017ಕ್ಕೆ ಹೋಲಿಸಿದರೆ 2018ರಲ್ಲಿ ಜಿಲ್ಲೆಗೆ ಭೇಟಿ ನೀಡಿದ ಪ್ರವಾಸಿಗರ ಸಂಖ್ಯೆಯಲ್ಲಿ 4.50 ಲಕ್ಷ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಕನ್ನಡದ ಪ್ರವಾಸಿತಾಣಗಳಿಗೆ ಬಂದಿದ್ದಾರೆ. ಡಿಸೆಂಬರ್‌ 2018ರಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಬಂದ ಪ್ರವಾಸಿಗರ ಸಂಖ್ಯೆ 9,52,289 ದಷ್ಟಿದೆ. ಕಾರವಾರ ರಾಕ್‌ ಗಾರ್ಡನ್‌ಗೆ 2018 ರಲ್ಲಿ 1.70ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದು ದಾಖಲಾಗಿದೆ. 2018 ಡಿಸೆಂಬರ್‌ನಲ್ಲೇ 35 ಸಾವಿರ ಪ್ರವಾಸಿಗರು ರಾಕ್‌ಗಾರ್ಡನ್‌ಗೆ ಭೇಟಿ ನೀಡಿದ್ದಾರೆ. 13861 ವಿದೇಶಿ ಪ್ರವಾಸಿಗರು 2018ರಲ್ಲಿ ಭೇಟಿ ನೀಡಿದ್ದಾರೆ. 2018 ಡಿಸೆಂಬರ್‌ನಲ್ಲೇ 1558 ವಿದೇಶಿ ಪ್ರವಾಸಿಗರು ಜಿಲ್ಲೆಯನ್ನು ದರ್ಶಿಸಿದ್ದಾರೆ. 2017ರಲ್ಲಿ 17364 ಪ್ರವಾಸಿಗರು ಬಂದಿದ್ದರು.

ಜಲ ಸಾಹಸ ಕ್ರೀಡೆಗಳು ಕಾರಣ: ಜಿಲ್ಲೆಯ ನೇತ್ರಾಣಿ ಐಲ್ಯಾಂಡ್‌ನ‌ಲ್ಲಿ ಸ್ಕೂಬಾ ಡೈವಿಂಗ್‌ ಪ್ರಾರಂಭವಾದುದು ಪ್ರವಾಸಿಗರನ್ನು ಆಕರ್ಷಿಸಲು ಕಾರಣವಾಯಿತು. ಅಲ್ಲದೇ ಜಲ ಸಾಹಸ ಕ್ರೀಡೆಗಳು, ಸಮುದ್ರಯಾನ, ಪ್ಯಾರಾ ಗ್ಲೈಡಿಂಗ್‌ ಪ್ರಾರಂಭ ಸಹ ಪ್ರವಾಸಿಗರನ್ನು ಆಕರ್ಷಿಸಲು ನೆರವಾಯಿತು. ಪ್ರವಾಸಿತಾಣಗಳು ಮತ್ತು ಅಲ್ಲಿನ ಸೌಲಭ್ಯಗಳು ಇಂಟರ್‌ನೆಟ್ ಮತ್ತು ವೆಬ್‌ಸೈಟ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯವಸ್ಥಿತ ಪ್ರಚಾರದಿಂದ ಜಿಲ್ಲೆಗೆ ಪ್ರವಾಸಿಗರು ಬರಲು ಕಾರಣವಾಯಿತು.

ಕೊರತೆ: ಕಡಲತೀರಗಳಲ್ಲಿ ಪ್ರವಾಸಿಗರು ಸಮುದ್ರ ಸ್ನಾನದ ನಂತರ ಬಟ್ಟೆ ಬದಲಿಸಲು ಕೋಣೆಗಳು ಹಾಗೂ ಸ್ನಾನ ಗೃಹದ ಕೊರತೆ ಕಾಣಿಸುತ್ತಿದೆ. ಸಂಚಾರಿ ಪ್ರವಾಸಿಗರು (ಪ್ಲೋಟಿಂಗ್‌ ಟೂರಿಸ್ಟ್‌) ಸಮುದ್ರ ಸ್ನಾನಕ್ಕೆ ಇಳಿದರೆ ಮಹಿಳೆಯರು ಡ್ರೆಸ್‌ ಬದಲಿಸಲು ಕಿರಿಕಿರಿಯ ವಾತಾವರಣ ಇದೆ. ಪ್ರವಾಸಿಗರಿಗೆ ಕಾರವಾರ ಸೇರಿದಂತೆ ಜಿಲ್ಲೆಯ ಕಡಲತೀರಗಳಲ್ಲಿ ಕೈಗೆಟುಕುವ ದರದಲ್ಲಿ ಸ್ನಾನಗೃಹಗಳು ಮತ್ತು ಶೌಚಾಲಯ ವ್ಯವಸ್ಥೆ ಹಾಗೂ ಡ್ರೆಸ್ಸಿಂಗ್‌ ರೂಂಗಳು ದೊರೆಯುವಂತೆ ಮಾಡಬೇಕಿದೆ.

ಕಾರವಾರ ನಗರ ಸೌಂದರ್ಯೀಕರಣಕ್ಕೆ ಕಳೆದ ಬಜೆಟ್‌ನಲ್ಲಿ ಇಟ್ಟ 10 ಲಕ್ಷ ರೂ,ಹಣವಿದ್ದು, ಬೀಚ್‌ಗಳಲ್ಲಿ ಡ್ರೆಸ್ಸಿಂಗ್‌ ರೂಂ ನಿರ್ಮಿಸಲು ಬೀಚ್ ಅಭಿವೃದ್ಧಿ ಸಮಿತಿ ಅನುದಾನ ಕೇಳಿದರೆ, ಪ್ರವಾಸೋದ್ಯಮ ಚಟುವಟಿಕೆಗೆ ಪೂರಕವಾಗುವ ನಿಟ್ಟಿನಲ್ಲಿ ತಕ್ಷಣ ಅನುದಾನ ನೀಡಲು ಸಿದ್ಧ ಎನ್ನುತ್ತಿದೆ ನಗರಸಭೆ.

ಹೊರ ಜಿಲ್ಲೆ, ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ಪ್ರೀತಿಯಿಂದ ಸ್ವಾಗತಿಸುವ ಸಂಸ್ಕೃತಿ ನಮ್ಮಲ್ಲಿ ಇನ್ನು ಬೆಳೆಯಬೇಕಿದೆ. ಪ್ರವಾಸೋದ್ಯಮ ಬೆಳೆಸುವ ನಿಟ್ಟಿನಲ್ಲಿ ನಾವು ಇನ್ನಷ್ಟು ತೆರೆದುಕೊಳ್ಳಬೇಕಿದೆ. ಕಡಲತೀರಗಳಲ್ಲಿ ಸಮುದ್ರ ಸ್ನಾನದ ನಂತರ ಬಟ್ಟೆ ಬದಲಿಸಲು ತುರ್ತಾಗಿ ಡ್ರೆಸ್ಸಿಂಗ್‌ ರೂಂಗಳನ್ನು ಪ್ರಾರಂಭಿಸಬೇಕಿದೆ.
ಶೋಭಾ ನಾಯ್ಕ
ಪ್ರವಾಸಿಗರು. ಬೆಂಗಳೂರು

ಕಡಲತೀರಗಳಲ್ಲಿ ಪ್ರವಾಸಿಗರಿಗೆ ಸಮುದ್ರ ಸ್ನಾನದ ನಂತರ ಬಟ್ಟೆ ಬದಲಿಸಲು ಡ್ರೆಸ್ಸಿಂಗ್‌ ರೂಂಗಳ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ಮಾರ್ಗದರ್ಶನ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
•ಎಸ್‌.ಯೋಗೇಶ್ವರ,
ಪೌರಾಯುಕ್ತರು, ನಗರಸಭೆ, ಕಾರವಾರ.

ನಾಗರಾಜ್‌ ಹರಪನಹಳ್ಳಿ

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.