ಧನ್ವಂತರಿ ಮೂರ್ತಿ ಪ್ರತಿಷ್ಠಾಪನೆ


Team Udayavani, Jan 13, 2019, 10:44 AM IST

13-january-20.jpg

ಗೋಕರ್ಣ: ಪಂಚ ತತ್ವ, ಪಂಚ ಭೂತಗಳಿಂದ ನಾವೆಲ್ಲ ಈಭೂಮಿಗೆ ಬಂದಿದ್ದೇವೆ. ಭೂಮಿಯ ಮೇಲಿನ ಒಡೆತನ ಕೇವಲ ನಮಗಷ್ಟೇ ಸೀಮಿತ ಎಂಬ ಸ್ವಾರ್ಥ ಬೇಡ. ಬಾಳಿ ಬದುಕುವ ಎಲ್ಲ ಕುಲ ಸಂತತಿಗೂ ಎಂಬ ನಿಸ್ವಾರ್ಥತೆ ಮೂಡಿದಾಗ ಮಾತ್ರ ‘ಸರ್ವೇ ಜನಾಃ ಸುಖೀನೋ ಭವಂತುಃ’ ಎನ್ನುವ ಋಷಿಮುನಿಗಳ ತತ್ವದ ಅರಿವು ಮೂಡಲು ಸಾಧ್ಯ ಎಂದು ಶ್ರೀ ಯೋಗಾತ್ಮಾನಂದ ಸ್ವಾಮೀಜಿ ನುಡಿದರು.

ಇಲ್ಲಿನ ಅಶೋಕಾವನದ ‘ಸಸ್ಯ ಸಂಜೀವಿನಿ ಪಂಚಕರ್ಮ ಕೇಂದ್ರ’ದ ದೈವರಾತ ಸಭಾಭವನದಲ್ಲಿ ‘ಬ್ರಹ್ಮರ್ಷಿ ದೈವರಾತ ಜಯಂತಿ’ ಅಂಗವಾಗಿ ಶ್ರೀ ಪಶುಪತಿನಾಥ ಹಾಗೂ ಧನ್ವಂತರಿ ದೇವರ ಪ್ರತಿಷ್ಠಾಪನೆ ನೆರವೇರಿಸಿ ಅವರು ಮಾತನಾಡಿದರು.

ಭೂಮಿ ಮೇಲಿನ ಪ್ರಕೃತಿದತ್ತವಾದ ಗಾಳಿ, ನೀರು, ಬೆಳಕು, ಹಸಿರು ಕೇವಲ ನಮಗಷ್ಟೇ ಸೀಮಿತವಲ್ಲ. ಅದು ಮುಂದಿನ ಪಶು-ಪಕ್ಷಿ ಸೇರಿದಂತೆ ಎಲ್ಲ ಜೀವಕೋಟಿಗೂ ಅವಶ್ಯ. ಇದನ್ನು ಅರಿತು ಅದನ್ನೇ ಶ್ರೀಗಳು ತಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಹಾಗಾಗಿಯೇ ಬ್ರಹ್ಮರ್ಷಿಗಳಾದರು ಎಂದರು. ಹೊನ್ನಾವರ ಆಯುರ್ವೇದ ತಜ್ಞ ಡಾ| ಮಹೇಶ ಪಂಡಿತ ಮಾತನಾಡಿ, ಆಯುರ್ವೇದ ನಮ್ಮ ಭಾರತದ ಜೀವಾಳ. ಅದು ಇಂದು ನಶಿಸುತ್ತಿರುವ ಸಂದರ್ಭದಲ್ಲಿ ಡಾ| ಪತಂಜಲಿ ಶರ್ಮ ಉಳಿಸಿ, ಬೆಳೆಸುವಲ್ಲಿ ಬಹಳ ಶ್ರಮಿಸಿದ್ದಾರೆ. ಅದು ಜನರಿಗೆ ತಲುಪುವಂತಾದರೆ ಅವರ ಕನಸು, ಕಾಯಕ ಸಾರ್ಥಕತೆ ಪಡೆದಂತೆ ಎಂದರು.

ಬೆಂಗಳೂರಿನ ಅಶ್ವಿ‌ನಿ ಕ್ಲಿನಿಕ್‌ನ ಪ್ರಾಧ್ಯಾಪಕಿ, ದಂತವೈದ್ಯ ವಿಶಾರದೆ ಡಾ| ಕವಿತಾ, ಬೆಂಗಳೂರಿನ ಮಾನಸಾ ಆಯುರ್ವೇದ ನಿರ್ದೇಶಕಿ ಡಾ| ಅರ್ಚನಾ ಸಿ. ಹಾಗೂ ಸಾಗರದ ಆಯುರ್ವೇದ ಮಾನಸಿಕ ತಜ್ಞ ಡಾ| ನಿರಂಜನ ಹೊಸಬಾಳೆ, ಪರಿಸರ ಪ್ರೇಮಿ ಶಿವಾನಂದ ಕಳವೆ, ದೇವಶ್ರವ ಶರ್ಮ ಮಾತನಾಡಿದರು.

ಡಾ| ಸೌಮ್ಯಶ್ರೀ ಶರ್ಮ ಸ್ವಾಗತಿಸಿದರು. ಶಿಕ್ಷಕಿ ವೀಣಾ ಅಶೋಕ ಜೋಷಿ ನಿರೂಪಿಸಿದರು. ಸಸ್ಯ ಸಂಜೀವಿನಿಯ ಡಾ| ವೇದಶ್ರವ ಶರ್ಮ ಪ್ರಾಸ್ತಾವಿಕ ಮಾತನಾಡಿದರು. ಅಶ್ವಿ‌ನಿ ಕುಮಾರ ಶರ್ಮ, ವಾಗೇಶ್ವರಿ ಸಭಾಹಿತ, ರಮೇಶ ಪ್ರಸಾದ, ಶೀಲಾ, ಸುಬ್ರಹ್ಮಣ್ಯ ಮುಂತಾದವರು ಗಣ್ಯರಿಗೆ ನೆನಪಿನ ಕಾಣಿಕೆ ನೀಡಿದರು. ಡಾ| ಪತಂಜಲಿ ಶರ್ಮ ವಂದಿಸಿದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.