ನಿರಾಶ್ರಿತರಾಗುವ ಭೀತಿಯಲ್ಲಿ ಅರಣ್ಯ ಅತಿಕ್ರಮಣದಾರರು


Team Udayavani, Jan 15, 2019, 11:01 AM IST

15-january-21.jpg

ಕುಮಟಾ: ವಾಸ್ತವ್ಯ ಹಾಗೂ ಸಾಗುವಳಿಗಾಗಿ ತಾಲೂಕಿನಾದ್ಯಂತ ಅರಣ್ಯ ಭೂಮಿ ಅತಿಕ್ರಮಿಸಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿ ನಿರೀಕ್ಷೆಯಲ್ಲಿರುವ ಅತಿಕ್ರಮಣದಾರರಲ್ಲಿ ನಿರಂತರ ಅರ್ಜಿಗಳು ತಿರಸ್ಕಾರವಾಗಿರುವುದರಿಂದ ಅರಣ್ಯ ಅತಿಕ್ರಮಣದಾರರು ಆತಂಕದಲ್ಲಿದ್ದು, ನಿರಾಶ್ರಿತರಾಗುವ ಭೀತಿಯನ್ನು ಎದುರಿಸುತ್ತಿದ್ದಾರೆ.

ಕುಮಟಾ ತಾಲೂಕಿನಾದ್ಯಂತ ಒಟ್ಟೂ 6602 ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಪಾರಂಪರಿಕ 6204, ಪರಿಶಿಷ್ಟ ಪಂಗಡ 1 ಹಾಗೂ ಸಮೂಹ ಉದ್ದೇಶಕ್ಕೆ ಸಲ್ಲಿಸಿದ 397 ಅರ್ಜಿಗಳು ಆಗಿದ್ದು, ಅವುಗಳಲ್ಲಿ 5674 ತಿರಸ್ಕೃತವಾಗಿದ್ದು, ಅವುಗಳಲ್ಲಿ 289 ಸಮುದಾಯ ಉದ್ದೇಶಕ್ಕೆ ಹಾಗೂ 5385 ಪಾರಂಪರಿಕ ಅರಣ್ಯವಾಸಿಗಳಿಗೆ ಸೇರಿದ್ದಾಗಿದೆ.

ಜೀವನ ಪೂರ್ತಿ ಶ್ರಮದಿಂದ ಗಳಿಸಿರುವಂತಹ ಹಣ, ಅರಣ್ಯಭೂಮಿಗೆ ತೊಡಗಿಸಿ ಜೀವನಕ್ಕೆ ಆಧಾರವಾಗಿರುವ ಅತಿಕ್ರಮಣ ಭೂಮಿಯನ್ನೇ ನಂಬಿರುವ ಕುಟುಂಬಗಳಲ್ಲಿ ಡಿಸೆಂಬರ್‌ ಅಂತ್ಯದವರೆಗೆ ತಾಲೂಕಿನಲ್ಲಿ ಶೇ.90.32 ರಷ್ಟು ಅರ್ಜಿಗಳು ತಿರಸ್ಕಾರವಾಗಿರುವುದು ಆಘಾತಕಾರಿಯಾಗಿದೆ. ಬಂದಿರುವ ಅರ್ಜಿಗಳಲ್ಲಿ ಒಟ್ಟೂ 5963 ರಷ್ಟು ತಿರಸ್ಕೃತಗೊಂಡಿದ್ದು ಕೇವಲ 26 ಅರ್ಜಿಗಳಿಗೆ ಮಾನ್ಯತೆ ದೊರಕಿರುವುದನ್ನು ಅವಲೋಕಿಸಿದರೆ ಮಂಜೂರಿ ಪ್ರಗತಿ ಕುಂಠಿತವಾಗಿದ್ದು ಅರಣ್ಯವಾಸಿಗಳು ಅತಂತ್ರ ಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಕರೆದಿರುವ ಅತಿಕ್ರಮಣದಾರರ ಮಹತ್ವದ ಸಭೆ ಮುಂದಿನ ಹೋರಾಟಕ್ಕೆ ದಿಕ್ಸೂಚಿ ಸಭೆಯಾಗುವುದಲ್ಲದೇ ಈಗಾಗಲೇ ಸವೋಚ್ಚ ನ್ಯಾಯಾಲಯದಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರಗೊಂಡಿರುವ ಅತಿಕ್ರಮಣ ಭೂಮಿಯಿಂದ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸಬೇಕೆಂಬ ಅಂತಿಮ ವಿಚಾರಣೆ ಜನೆವರಿ ತಿಂಗಳಲ್ಲಿರುವುದರಿಂದ ಜನಪ್ರತಿನಿಧಿ ಹಾಗೂ ಸರ್ಕಾರ ಇಂತಹ ಸಂಕಷ್ಟ ಸಮಯದಲ್ಲಿಯೂ ಸ್ಪಂದಿಸದೇ ಇರುವುದಕ್ಕೆ ಅತಿಕ್ರಮಣದಾರರ ಸಭೆ ಕರೆಯಲಾಗಿದೆ.

ಜಾಗೃತಿ ಕಾರ್ಯಕ್ರಮ: ಈ ಹಿನ್ನೆಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕೃತವಾಗಿರುವ ಅರ್ಜಿಗಳ ಮಾಹಿತಿ ಹಾಗೂ ಕಾನೂನಾತ್ಮಕ ತಿಳಿವಳಿಕೆ ನೀಡುವ ದಿಶೆಯಲ್ಲಿ ಹೋರಾಟ ಸಮಿತಿಯು ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ಅಧ್ಯಕ್ಷ ಎ. ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕೃತವಾಗಿರುವ ಅರ್ಜಿಗಳ ಮಾಹಿತಿ ಹಾಗೂ ಕಾನೂನಾತ್ಮಕ ತಿಳಿವಳಿಕೆ ನೀಡುವ ದಿಶೆಯಲ್ಲಿ ಹೋರಾಟ ಸಮಿತಿಯು ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಪ್ರತಿ ತಾಲೂಕು ಮಟ್ಟದಲ್ಲಿಯೂ ಹಮ್ಮಿಕೊಳ್ಳಬೇಕಾದ ಅನಿವಾರ್ಯತೆ ಉಂಟಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.