ಅರಣ್ಯಾಧಿಕಾರಿಗಳಿಂದ ಮನೆ-ಅಡಿಪಾಯ ಧ್ವಂಸ


Team Udayavani, Jan 27, 2019, 7:04 AM IST

aranya.jpg

ಶಿರಸಿ: ನಾಲ್ಕು ವರ್ಷಗಳಿಂದ ಹಂತ ಹಂತವಾಗಿ ನಿರ್ಮಿಸಲಾಗುತ್ತಿದ್ದ ಮನೆಯ ಅಡಿಪಾಯವನ್ನು ಮಾಲಿಕರಿಗೆ ಸೂಚನೆಯನ್ನೂ ನೀಡದೆ ಏಕಾಏಕಿ ಅರಣ್ಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿದ ಘಟನೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ. ಇದರಿಂದ ಲಕ್ಷಾಂತರ ರೂ. ಹಾನಿ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.

ಬನವಾಸಿ ಅರಣ್ಯ ವ್ಯಾಪ್ತಿಯ ಇಸಳೂರು ಗ್ರಾಪಂನ ಹೊಡಸಲಮನೆ ಗ್ರಾಮದ ನಿವಾಸಿಗಳಾದ ಹನುಮಂತ ಭೋವಿ ವಡ್ಡರ ಹಾಗೂ ಲತಾ ರಾಮಚಂದ್ರ ನಾಯ್ಕ ಇವರಿಗೆ ಸೇರಿದ ಮನೆ ಹಾಗೂ ಅಡಿಪಾಯ ತೆರವುಗೊಳಿಸಲಾಗಿದೆ.

ಗ್ರಾಮೀಣ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ತಾಯಿ ಮತ್ತು ಮೂವರು ಮಕ್ಕಳೊಂದಿಗೆ ಗುಡಿಸಲಲ್ಲಿ ವಾಸವಾಗಿರುವ ಹನುಮಂತ ಭೋವಿ ವಡ್ಡರ್‌ ಕಳೆದ ನಾಲ್ಕು ವರ್ಷಗಳಿಂದ ಸತತ ಶ್ರಮವಹಿಸಿ ಸ.ನಂ. 42ರಲ್ಲಿ ಇಟ್ಟಿಗೆ ಮತ್ತು ಕಲ್ಲಿನಿಂದ ಮನೆಯ ರೂಪ ಕೊಟ್ಟಿದ್ದರು. ಇನ್ನೇನು ಹೆಂಚು ಹಾಕಿ ಗೃಹಪ್ರವೇಶ ಮಾಡಬೇಕೆಂಬ ವೇಳೆಯಲ್ಲಿ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಿದ್ದಾರೆ. ಅದೇ ಗ್ರಾಮದ ಲತಾ ರಾಮಚಂದ್ರ ನಾಯ್ಕ ಅವರಿಗೆ ಆಶ್ರಯಮನೆ ಯೋಜನೆಯಡಿ ಮಂಜೂರಾಗಿದ್ದ ಮನೆಯ ಅಡಿಪಾಯ ಕಾರ್ಯ ಮುಗಿದು ಗೋಡೆ ಕಟ್ಟುವ ಹಂತದಲ್ಲಿತ್ತು. ಅದನ್ನೂ ಸಹ ಅಧಿಕಾರಿಗಳು ತೆರವುಗೊಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಮನೆ ಕಟ್ಟುವದನ್ನು ಅರಣ್ಯ ಅಧಿಕಾರಿಗಳು ನೋಡುತ್ತಾ ಬಂದಿದ್ದಾರೆ. ಆದರೆ ಇದುವರೆಗೂ ಇಲ್ಲಿ ಮನೆ ಕಟ್ಟಬಾರದೆಂಬ ಸೂಚನೆಯನ್ನೂ ನೀಡಿಲ್ಲ. ಕಾನೂನು ಕ್ರಮ ಜರುಗಿಸುತ್ತೇವೆಂದು ಮೊದಲೆ ಹೇಳಿದ್ದರೆ ಮನೆ ಕಟ್ಟುವ ಧೈರ್ಯ ಮಾಡುತ್ತಿರಲಿಲ್ಲ. ಇನ್ನೇನು ಮಕ್ಕಳಿಗೊಂದು ಸೂರು ನಿರ್ಮಿಸಿಯಾಯ್ತು ಎಂದು ಸಂತಸಪಡುವ ವೇಳೆಗೆ ಜೀವಮಾನದ ಕನಸಿಗೆ ತಣ್ಣೀರೆರಚಿದ್ದಾರೆ. ವರ್ಷದೀಚೆಗೆ ಹೆಂಡತಿ ತೀರಿಕೊಂಡಿದ್ದಾಳೆ. ತಾಯಿಗೆ ವಯಸ್ಸಾಗಿದೆ. ಮೂವರು ಮಕ್ಕಳನ್ನು ಸಾಕುತ್ತಾ, ಕೂಲಿ ಕೆಲಸ ಮಾಡಿ ಮೂರು ಲಕ್ಷಕ್ಕೂ ಅಧಿಕ ಹಣ ಸಂಪಾದಿಸಿ ಮನೆ ಕಟ್ಟಲು ವಿನಿಯೋಗಿಸಿದ್ದೆ. ಈಗ ಸಂಪೂರ್ಣ ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜೀವನದ ಆಸಯೆ ಬರಡಾಗಿ ಆತ್ಮಹತ್ಯೆ ಮಾಡಿಕೊಳ್ಳುವದೊಂದೆ ದಾರಿಯೆ ಎಬಂತಾಗಿದೆ. ತನಗಾದ ನಷ್ಟ ತುಂಬಿಕೊಡುವವರು ಯಾರು ಎಂದು ಹನುಮಂತಪ್ಪ ರೋದಿಸುತ್ತಾರೆ.

ಸ್ಟ್ರಿಪ್‌ ಭೂಮಿಯಲ್ಲಿ..!: ಇಸಳೂರು ಗ್ರಾಪಂ ವ್ಯಾಪ್ತಿಯ ಹೊಡಸಲಮನೆ ಗ್ರಾಮಕ್ಕೆ ಒಳಪಟ್ಟ ಸ್ಟ್ರಿಪ್‌ ಭೂಮಿಯಲ್ಲಿ ಕಟ್ಟಲಾದ ಮನೆ ಇದಾಗಿದೆ. ರೈತರು ಸಾಗುವಳಿ ಮಾಡುತ್ತಿರುವ ಕೃಷಿ ಕ್ಷೇತ್ರಕ್ಕೆ ಪ್ರಾಣಿಗಳು ನುಗ್ಗಬಾರದೆಂಬ ದೃಷ್ಟಿಯಲ್ಲಿ ಬ್ರಿಟಿಷ್‌ ಆಡಳಿತದಲ್ಲಿಯೆ ಈ ಸ್ಟ್ರಿಪ್‌ ಭೂಮಿ ಬಿಡಲಾಗಿದೆ. ಈ ಪ್ರದೇಶ ಅರಣ್ಯ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಆದರೂ ಇಲ್ಲಿ ಕಟ್ಟಲಾಗುತ್ತಿದ್ದ ಮನೆ ಹಾಗೂ ಅಡಿಪಾಯವನ್ನು ಅಧಿಕಾರಿಗಳು ಧ್ವಂಸಗೊಳಿಸಿ ಅಪಾರ ಪ್ರಮಾಣದ ಹಾನಿ ಉಂಟು ಮಾಡಿದ್ದಾರೆಂದು ಗ್ರಾಮಸ್ಥರು ದೂರುತ್ತಿದ್ದಾರೆ.

ಅಧಿಕಾರ ದರ್ಪ ತೋರಿಸ್ತಾರೆ..!: ಘಟನಾ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ತಾಪಂ ಉಪಾಧ್ಯಕ್ಷ ಚಂದ್ರ ಎಸಳೆ ಅರಣ್ಯ ಇಲಾಖೆ ಅಧಿಕಾರಿಗಳ ತೆರವು ಕಾರ್ಯ ಸಂಬಂಧ ಪ್ರತಿಕ್ರಿಯಿಸಿ, ಬಡವರ ಜೀವನದಲ್ಲಿ ಚೆಲ್ಲಾಟ ಆಡುತ್ತಿರುವ ಅರಣ್ಯ ಅಧಿಕಾರಿಗಳು ನಿಶ್ಯಕ್ತರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಇದು ಸರಿಯಲ್ಲ. ಮನೆ ಕಟ್ಟಬೇಡಿ ಎಂದು ಮೊದಲೆ ಹೇಳಬೇಕಿತ್ತು ಎಂದಿದ್ದಾರೆ.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.