ಶಾಸಕ ಹೆಬ್ಬಾರಗೆ ವಾಯವ್ಯ ಸಾರಿಗೆ ಚಾಲನೆ ಸವಾಲು!


Team Udayavani, Jan 30, 2019, 10:52 AM IST

30-january-21.jpg

ಹುಬ್ಬಳ್ಳಿ: ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹತ್ತು ಹಲವು ಸಮಸ್ಯೆಗಳ ಸುಳಿಯಲ್ಲಿ ನಲುಗುತ್ತಿರುವ ಸಂದರ್ಭದಲ್ಲಿ ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದು, ಸಾಕಷ್ಟು ಸವಾಲುಗಳು ಅವರ ಮುಂದಿದೆ.

ಉತ್ತರ ಕರ್ನಾಟಕದ ಜನರ ಸಾರಿಗೆಯ ಜೀವನಾಡಿಯಾಗಿರುವ ವಾಯವ್ಯ ಸಾರಿಗೆ ವರ್ಷದಿಂದ ವರ್ಷಕ್ಕೆ ನಷ್ಟದ ಕೂಪಕ್ಕೆ ಜಾರುತ್ತಿದೆ. ಇಂತಹ ಸಂಸ್ಥೆಯ ಸದೃಢತೆಗಾಗಿ ಸವಾಲುಗಳನ್ನು ಸ್ವೀಕರಿಸಿ ಶಾಸಕ ಶಿವರಾಮ ಹೆಬ್ಬಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಪಕ್ಷಗಳ ಕಾರ್ಯಕರ್ತರಿಗೆ ಸೀಮಿತವಾಗಿದ್ದ ಸಂಸ್ಥೆಯ ಅಧ್ಯಕ್ಷಗಿರಿ ಶಾಸಕರಿಗೆ ದೊರಕಿದ್ದು, ಸಂಸ್ಥೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಅಧಿಕಾರಿಗಳು, ಕಾರ್ಮಿಕರು ಹೊಸ ನಿರೀಕ್ಷೆ ಹೊಂದಿದ್ದಾರೆ.

ಅಧ್ಯಕ್ಷರಿಗೆ ಸವಾಲುಗಳು: ಸಂಸ್ಥೆಯ ತೀವ್ರ ಆರ್ಥಿಕ ಅಧೋಗತಿಯೇ ಅಧ್ಯಕ್ಷರ ಮುಂದೆ ದೊಡ್ಡ ಸವಾಲು. ನಿತ್ಯ ಸಂಚರಿಸುವ ಬಸ್‌ಗಳಲ್ಲಿ ಯಾವುದೇ ವ್ಯತ್ಯಯ ಇರದಿದ್ದರೂ ಹತ್ತು ಹಲವು ಕಾರಣಗಳಿಂದ ನಿತ್ಯವೂ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಸರಕಾರದಿಂದ ಬರಬೇಕಾದ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ದೊರೆಯದಿರುವುದು ನಷ್ಟಕ್ಕೆ ಪ್ರಮುಖ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳ ಬಗ್ಗೆ ಸರಕಾರದ ನಿರ್ಲಕ್ಷ್ಯ ಮನಸ್ಥಿತಿ ಇರುವಾಗ ಸಂಸ್ಥೆಯ ಪ್ರಗತಿಗೆ ಸರಕಾರದಿಂದ ಅನುದಾನ ಪಡೆಯುವುದು ಅಧ್ಯಕ್ಷರಿಗಿರುವ ಸವಾಲು.

ಹಿಂದಿನ ಬಿಜೆಪಿ ಸರಕಾರ ಐದು ವರ್ಷಗಳ ಕಾಲ ಸಂಸ್ಥೆಗೆ ಮೋಟಾರ್‌ ವಾಹನ ವಿನಾಯಿತಿ ನೀಡಿತ್ತು. ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ 50 ಕೋಟಿ ರೂ. ವಿಶೇಷ ಅನುದಾನ ನೀಡಿದ್ದರು. ಆದರೆ ಹಿಂದಿನ ಕಾಂಗ್ರೆಸ್‌ ಸರಕಾರ ಸಂಕಷ್ಟದಲ್ಲಿದ್ದ ಸಂಸ್ಥೆಗೆ ಮೋಟಾರ್‌ ವಾಹನ ರಿಯಾಯಿತಿ ವಿಸ್ತರಣೆಗೆ ಸುತಾರಾಮ್‌ ಒಪ್ಪಲಿಲ್ಲ. ವಿಶೇಷ ಅನುದಾನ ದೂರದ ಮಾತು. ಇದೀಗ ಕಳೆದ ಒಂದು ವರ್ಷದಿಂದ ಮೋಟಾರ್‌ ವಾಹನ ವಿನಾಯಿತಿ ನೀಡುವಂತೆ ಸಂಸ್ಥೆ ಅಧಿಕಾರಿಗಳು ಸರಕಾರದ ಮಟ್ಟದಲ್ಲಿ ಪತ್ರ ವ್ಯವಹಾರ ನಡೆಸಿದ್ದರೂ ಫ‌ಲಿತಾಂಶ ಮಾತ್ರ ಶೂನ್ಯವಾಗಿದೆ. ಹಲವು ವರ್ಷಗಳ ನಂತರ ಶಾಸಕರನ್ನು ಅಧ್ಯಕ್ಷ ಸ್ಥಾನಕ್ಕೆ ಸರಕಾರ ನೇಮಕ ಮಾಡಿದ್ದು, ಸವಾಲುಗಳನ್ನು ಮೆಟ್ಟಿ ಸಂಸ್ಥೆ ಬೆಳೆಸುವಲ್ಲಿ ಅಧ್ಯಕ್ಷರು ಯಶಸ್ವಿಯಾಗುತ್ತಾರಾ ಅಥವಾ ಅಧಿಕಾರ ಅನುಭವಿಸಿ ತೆರಳುತ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.

ಬಲ ತುಂಬುತ್ತಾರಾ ಅಧ್ಯಕ್ಷರು?
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸಂಸ್ಥೆಗೆ ಸರಕಾರದ ವಿಶೇಷ ಅನುದಾನವೇ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಶಾಸಕರಾಗಿರುವ ಶಿವರಾಮ ಹೆಬ್ಬಾರ ಅಧ್ಯಕ್ಷರಾಗಿ ಸರಕಾರದಿಂದ ವಿಶೇಷ ಅನುದಾನಕ್ಕೆ ಗುದ್ದಾಡಬೇಕಿದೆ. ಹೆಸ್ಕಾಂ, ಜಲಮಂಡಳಿಯಂತೆ ಈ ಸಂಸ್ಥೆಗೆ ನಿರ್ದಿಷ್ಟ ಬಜೆಟ್ ಅನುದಾನ ಸರಕಾರದಿಂದ ಇಲ್ಲ. ಪ್ರತಿ ವರ್ಷವೂ ಇಂತಿಷ್ಟು ಅನುದಾನ ಬಜೆಟ್‌ನಲ್ಲಿ ಮೀಸಲಿಡುವಂತೆ ಸರಕಾರದ ಮೇಲೆ ಒತ್ತಡ ಹೇರುವ ಕೆಲಸ ಆಗಬೇಕಿದೆ. ಮುಖ್ಯಮಂತ್ರಿಗಳ ಮನವೊಲಿಸಿ ಬಿಎಂಟಿಸಿಗೆ ಸರಕಾರ ನೀಡಿರುವ 100 ಕೋಟಿ ವಿಶೇಷ ಅನುದಾನದಂತೆ ಈ ಸಂಸ್ಥೆಗೂ ಅನುದಾನ ಪಡೆಯುವ ಹೊಣೆಗಾರಿಕೆ ಅಧ್ಯಕ್ಷರ ಮೇಲಿದೆ.

ಯೋಜನೆ ಯೋಚನೆ
ಸಂಸ್ಥೆಯ ನಿತ್ಯದ ಆದಾಯ 4.93 ಕೋಟಿ ರೂ. ಇದ್ದರೆ ಖರ್ಚು 5.71 ಕೋಟಿ ರೂ.ಇದೆ. ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಅಧ್ಯಕ್ಷರು ವಿಶೇಷ ಯೋಜನೆ ಕಾರ್ಯ ಯೋಜನೆ ರೂಪಿಸಬೇಕಾಗಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಾಗಿದೆ. ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಅವ್ಯವಹಾರಗಳಿಗೆ ಬ್ರೇಕ್‌ ಹಾಕುವ ಕೆಲಸ ಆಗಬೇಕಿದೆ. ಇದರೊಂದಿಗೆ ಸಂಸ್ಥೆಯ ಕಾರ್ಮಿಕರ ಹಿತಚಿಂತನೆಯೂ ಪ್ರಮುಖವಾಗಿದೆ.

ಅಧಿಕಾರಿಗಳ ಕೊರತೆ
ಆರ್ಥಿಕ ಸಮಸ್ಯೆಯಂತೆ ಸಂಸ್ಥೆ ಅಧಿಕಾರಿಗಳ ಕೊರತೆ ಅನುಭವಿಸುತ್ತಿದೆ. ಕೇಂದ್ರ ಕಚೇರಿಯ ಪ್ರಮುಖ ಹುದ್ದೆಗಳೇ ಪ್ರಭಾರಿಯಲ್ಲಿ ನಡೆಯುತ್ತಿರುವುದು ಸಂಸ್ಥೆಯ ದುರಂತವೇ ಸರಿ. ವಿಭಾಗ ಕಚೇರಿ ಹಾಗೂ ಘಟಕಗಳ ಪರಿಸ್ಥಿತಿಯಂತೂ ಹೇಳ ತೀರದಾಗಿದೆ. ಇತ್ತೀಚೆಗೆ ನಡೆದ ಅಧಿಕಾರಿಗಳ ನೇಮಕಾತಿಯಲ್ಲಿ ನಿಯಮ ಪ್ರಕಾರ ವಾಯವ್ಯ ಸಾರಿಗೆ ಅಧಿಕಾರಿಗಳ ಹಂಚಿಕೆಯಾಗದಿರುವುದು ಸಂಸ್ಥೆಯ ಬಗ್ಗೆ ಸರಕಾರ ಹೊಂದಿರುವ ತಾತ್ಸಾರ ಭಾವನೆ ವ್ಯಕ್ತವಾಗುತ್ತಿದೆ.

ಬಾಕಿಯೇ ದೊಡ್ಡ ಹೊರೆ
ಸರಕಾರದಿಂದ ಅನುದಾನ ಹಾಗೂ ವಿಶೇಷ ಅನುದಾನವಿಲ್ಲದ ಪರಿಣಾಮ ನಿವೃತ್ತ ಹಾಗೂ ಹಾಲಿ ನೌಕರರಿಗೆ ನೀಡಬೇಕಾದ ಆರ್ಥಿಕ ಸೌಲಭ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ಬಾಕಿ ಉಳಿಸಿಕೊಂಡಿದೆ. ಸುಮಾರು 66 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಹೀಗಾಗಿ ಹಾಲಿ ಹಾಗೂ ನಿವೃತ್ತ ನೌಕರರ ಹಿತಚಿಂತನೆ ಭಾರ ನೂತನ ಅಧ್ಯಕ್ಷರ ಮೇಲಿದೆ. ಇನ್ನೂ ಬಿಡಿಭಾಗ ಪೂರೈಕೆ, ಇಂಧನ, ಗುತ್ತಿಗೆದಾರರು ಸೇರಿದಂತೆ ಸುಮಾರು 370 ಕೋಟಿ ರೂ. ಭಾರ ಸಂಸ್ಥೆಯ ಮೇಲಿದ್ದು, ಬಾಕಿ ಪಾವತಿಸದ ಕಾರಣ ಕೆಲ ಗುತ್ತಿಗೆದಾರರು ಸಾಮಗ್ರಿ ಪೂರೈಸಲು ಹಿಂದೇಟು ಹಾಕುವಂತಾಗಿದೆ.

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.