ಜಿಲ್ಲೆಗೆ ಆರೋಗ್ಯ ಯೋಜನೆ ಕನ್ನಡಿಯೊಳಗಿನ ಗಂಟು


Team Udayavani, Feb 11, 2019, 10:23 AM IST

11-february-20.jpg

ಹೊನ್ನಾವರ: ಎಲ್ಲರನ್ನೂ ತಲುಪುತ್ತಿದ್ದ ಯಶಸ್ವಿನಿ ರದ್ದಾಗಿದೆ, ಕೇಂದ್ರ ಸರ್ಕಾರದ ಆಯುಷ್ಮಾನ್‌ ಭಾರತ, ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆಗಳು ಅತಿ ನಿಯಮಾವಳಿಯಿಂದಾಗಿ ಜಿಲ್ಲೆಯ ಜನರಿಗೆ ತಲುಪುವುದು ಕಷ್ಟವಾಗಿದೆ.

ಜನರ ಆಗ್ರಹದ ಮೇರೆಗೆ ಈ ವರ್ಷ ಆಯವ್ಯಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಆರಂಭಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅದನ್ನು ಕೈಬಿಟ್ಟಿದ್ದಾರೆ. ಸ್ತನಕ್ಯಾನ್ಸರ್‌ ಪರೀಕ್ಷೆಗೆ ಮೆಮೋಗ್ರಫಿ ಯಂತ್ರ ಲಭ್ಯ ಇರುವ ಜಿಲ್ಲೆಗಳ ಸಹಿತ 10ಜಿಲ್ಲೆಗೆ ಈ ಯಂತ್ರವನ್ನು ಕೊಟ್ಟಿದ್ದು ತುರ್ತು ಅಗತ್ಯವಿದ್ದ ಉತ್ತರ ಕನ್ನಡವನ್ನು ಕೈಬಿಟ್ಟಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳ ಆರೋಗ್ಯ ಯೋಜನೆ ಸಾಮಾನ್ಯರಿಗೆ ತಲುಪುತ್ತಿಲ್ಲ.

ಪ್ರತಿವರ್ಷ ತಲಾ 350ರೂ.ನಂತೆ 3-4ಕೋಟಿ ರೂ.ಗಳನ್ನು ಯಶಸ್ವಿನಿ ಸದಸ್ಯತ್ವಕ್ಕೆ ತುಂಬುತ್ತಿದ್ದ ಜಿಲ್ಲೆಯ ಸಹಕಾರಿಗಳು ಉತ್ತಮ ಆಸ್ಪತ್ರೆಗಳಲ್ಲಿ 10-15ಕೋಟಿ ರೂ. ಚಿಕಿತ್ಸೆಗಳನ್ನು ಉಚಿತವಾಗಿ ಪಡೆಯುತ್ತಿದ್ದರು. ತಪಾಸಣೆಗೆ ದೊಡ್ಡ ಆಸ್ಪತ್ರೆಗೆ ಹೋದರೆ ರಿಯಾಯತಿ ಸಿಗುತ್ತಿತ್ತು. 2ಲಕ್ಷ ರೂ.ವರೆಗೆ ಪಡೆದ ಬಡ, ಮಧ್ಯಮವರ್ಗದ ಸಹಕಾರಿ ರೈತರಿಗೆ ಯಶಸ್ವಿನಿ ವರವಾಗಿತ್ತು.

ಹಿಂದಿನ ಸರ್ಕಾರದಲ್ಲಿ ಆರೋಗ್ಯ ಮಂತ್ರಿಗಳಾಗಿದ್ದ ಈಗಿನ ವಿಧಾನಸಭಾಪತಿ ರಮೇಶಕುಮಾರ ಹೊಸ ಆರೋಗ್ಯ ಯೋಜನೆ ಆರಂಭಿಸಿ ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ವಿಲೀನಗೊಳಿಸಿದರು. ಯಶಸ್ವಿನಿ ರದ್ದಾಯಿತು. ಆದಾಯ ಮಿತಿ ಇರಲಿಲ್ಲ, ಸಹಕಾರಿ ಸಂಘ ಅಥವಾ ಅರ್ಬನ್‌ ಬ್ಯಾಂಕಿನ ಸದಸ್ಯರಾದ ಯಾರೇ ಆದರೂ ಯಶಸ್ವಿನಿಯಿಂದ ಚಿಕಿತ್ಸೆ ಪಡೆಯಬಹುದಿತ್ತು. ನಾರಾಯಣ ಹೃದಯಾಲಯದ ದೇವಿಪ್ರಸಾದ ಶೆಟ್ಟಿ ಕರ್ನಾಟಕ ಗ್ರಾಮೀಣ ಭಾಗದ ರೈತರಿಗಾಗಿ ಆರಂಭಿಸಿದ ಈ ಯೋಜನೆಯನ್ನು ಎಸ್‌.ಎಂ. ಕೃಷ್ಣ ಅವಧಿಯಲ್ಲಿ ಸರ್ಕಾರ ವಹಿಸಿಕೊಂಡಿತು. ಸರ್ಕಾರ ಕೆಲವು ಕೋಟಿ ರೂ. ಕೊಡುತ್ತಿತ್ತು. ಅತ್ಯಂತ ಉಪಯುಕ್ತವಾದ ಈ ಯೋಜನೆ ಉಳಿಸಿಕೊಳ್ಳಬೇಕು ಎಂಬ ಕೂಗು ಜೋರಾಗಿತ್ತು. ಕುಮಾರಸ್ವಾಮಿಯವರ ಭರವಸೆ ಆಸೆ ಹುಟ್ಟಿಸಿತ್ತು.

ಈಗ ಜಿಲ್ಲೆಯ ಜನರ ತಪಾಸಣೆ ಅಥವಾ ಚಿಕಿತ್ಸೆಗೆ ಮೊದಲು ತಾಲೂಕು ಆಸ್ಪತ್ರೆಗೆ ಹೋಗಬೇಕು. ಅವರಲ್ಲಿ ಸಾಧ್ಯವಿಲ್ಲವಾದರೆ ಜಿಲ್ಲಾಸ್ಪತ್ರೆ ಕಾರವಾರಕ್ಕೆ ಪತ್ರ ಕೊಡುತ್ತಾರೆ. ಅಲ್ಲಿ ಸಾಧ್ಯವಿಲ್ಲವಾದರೆ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ಪತ್ರ ಕೊಡುತ್ತಾರೆ. ಅಲ್ಲೂ ಸಾಧ್ಯವಿಲ್ಲವಾದರೆ ಎಲ್ಲಿ ಬೇಕಾದರೂ ಹೋಗಬಹುದು ಎಂಬ ಪರವಾನಗಿ ದೊರೆಯುತ್ತದೆ.

11 ತಾಲೂಕುಗಳ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಟ್ಕಳ, ಸಿದ್ದಾಪುರ, ಹಳಿಯಾಳದಿಂದ ಕಾರವಾರಕ್ಕೆ ಹೋಗಲು 100ಕಿಮೀಗಿಂತ ದೂರ ಪ್ರಯಾಣಿಸಬೇಕು. ಅಲ್ಲಿಂದ ಪತ್ರಪಡೆದು 200ಕಿಮೀ ದೂರದ ಮಂಗಳೂರು ವೆನ್ಲಾಕ್‌ಗೆ ಹೋಗಬೇಕು. ಅಲ್ಲೂ ಸಾಧ್ಯವಿಲ್ಲವಾದರೆ ಮಣಿಪಾಲವೋ, ಬೆಂಗಳೂರೋ ನೋಡಿಕೊಳ್ಳಬೇಕು. ಬಿಪಿಎಲ್‌ ಕಾರ್ಡುದಾರರಿಗೆ ಈ ಯೋಜನೆಯಲ್ಲಿ ಉಚಿತವಾಗಿ ಚಿಕಿತ್ಸೆ ದೊರೆಯುತ್ತದೆ ಎಂಬುದು ಸತ್ಯ. ಆದರೆ ಬಡವ ಎಲ್ಲೆಲ್ಲಿ ಓಡಾಡಬೇಕು. ಆದಿನ ವೈದ್ಯರು ಸಿಗದಿದ್ದರೆ ಊರಿಗೆ ಬಂದು ಮತ್ತೆ ಹೋಗಬೇಕು. ಎಷ್ಟು ಜನ ಬಿಪಿಎಲ್‌ ಕಾರ್ಡುದಾರರಿಗೆ ಇದು ಸಾಧ್ಯ? ತಾಲೂಕು, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪುಕ್ಕಟೆ ಕೆಲಸ ಆಗುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತು. ಎಲ್ಲವನ್ನೂ ತಾವೇ ಮಾಡುತ್ತೇವೆ ಅನ್ನುತ್ತಾರೆ. ವಿಶ್ವಾಸವಿದ್ದಲ್ಲಿ ಚಿಕಿತ್ಸೆ ಪಡೆಯುವುದು ರೋಗಿಯ ಮೂಲಭೂತ ಹಕ್ಕು. ಜಿಲ್ಲೆಯ ಬಡವರಿಗೆ ಇದು ಸಾಧ್ಯವಿಲ್ಲ. ಜಿಲ್ಲಾ ಕೇಂದ್ರದಲ್ಲಿದ್ದವರಿಗೆ ಇದು ಸ್ವಲ್ಪಮಟ್ಟಿಗೆ ಅನುಕೂಲ.

ಎಪಿಎಲ್‌ ಕಾರ್ಡುದಾರರಿಗೆ ಮತ್ತು ಕಾರ್ಡು ಇಲ್ಲದವರಿಗೆ ಈ ಯೋಜನೆಯಲ್ಲಿ ಚಿಕಿತ್ಸೆ ಪಡೆಯಲು ಶೇ. 30ರಷ್ಟು ರಿಯಾಯತಿ ದೊರೆಯುತ್ತದೆ. ಈ ರಿಯಾಯತಿಗಾಗಿ ಆತ ಎರಡುಮೂರು ದಿಕ್ಕಿನಲ್ಲಿ ಓಡಾಡಲು ಸಾಧ್ಯವೇ? ಯಶಸ್ವಿನಿ ಇದ್ದಿದ್ದರೆ ಕಾರ್ಡು ಹಿಡಿದುಕೊಂಡು ಬೆಂಗಳೂರು, ಮಂಗಳೂರು ಎಲ್ಲಿ ಬೇಕಾದರೂ ನೂರಾರು ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಿತ್ತು. ಯಶಸ್ವಿನಿಯಲ್ಲಿದ್ದಷ್ಟು ರೋಗಗಳಿಗೆ ಈ ಯೋಜನೆಯಲ್ಲಿ ಚಿಕಿತ್ಸೆ ಬರೆದಿಲ್ಲ. ತಪಾಸಣೆಗೆ ರಿಯಾಯತಿಯೂ ಇಲ್ಲ. ಎಲ್ಲವನ್ನೂ ಕೋಡ್‌ನ‌ಲ್ಲಿ ಗುರುತಿಸಲಾಗಿದ್ದು ಎಲ್ಲ ಪತ್ರಪಡೆದು ದೊಡ್ಡ ಆಸ್ಪತ್ರೆಗೆ ಹೋದರೆ ಕೋಡ್‌ ಇಲ್ಲವಾದರೆ ಚಿಕಿತ್ಸೆ ಇಲ್ಲ. ಈಗಿನ ಯೋಜನೆಯಲ್ಲಿ ಚಿಕಿತ್ಸೆ ಪಡೆಯುವ ನಿಯಮಾವಳಿ ಸರಳಗೊಳಿಸದಿದ್ದರೆ, ಯಶಸ್ವಿನಿ ಪುನರಾರಂಭಿಸದಿದ್ದರೆ, ಉಚಿತ ಚಿಕಿತ್ಸೆ, ರಿಯಾಯತಿ ಚಿಕಿತ್ಸೆ ಕನ್ನಡಿಯ ಗಂಟಾಗುತ್ತದೆ. ಜಿಲ್ಲೆಯ ಶಾಸಕರು, ಸಚಿವರು ವಿಧಾನಸಭೆಯಲ್ಲಿ ಪ್ರಶ್ನಿಸಿ ಜಿಲ್ಲೆಗೆ ನ್ಯಾಯ ಕೊಡಿಸಲಿ ಎಂಬುದು ಜನರ ಹೆಬ್ಬಯಕೆ.

•ಜೀಯು, ಹೊನ್ನಾವರ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.