16 ರಂದು ಕರಾವಳಿ ಪರಿಸರ ಸ್ಥಿತಿಗತಿ ವಿಚಾರ ಸಂಕಿರಣ


Team Udayavani, Feb 13, 2019, 11:21 AM IST

13-february-25.jpg

ಶಿರಸಿ: ಸಂಕೀರ್ಣ ಸ್ಥಿತಿಯಲ್ಲಿರುವ ಕರಾವಳಿಯ ಅರಣ್ಯ, ಪರಿಸರ ಪರಿಸ್ಥಿತಿ, ಸವಾಲುಗಳು ಹಾಗೂ ಪರಿಹಾರದ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಫೆ.16ರಂದು ಭಟ್ಕಳ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮುಂಜಾನೆ 10:30ರಿಂದ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಹಾಗೂ ವೃಕ್ಷಲಕ್ಷ ಆಂದೋಲನದ ಮುಖ್ಯಸ್ಥ ಅನಂತ ಹೆಗಡೆ ಅಶೀಸರ, ಕರಾವಳಿ ಹಾಗೂ ಪಶ್ಚಿಮ ಘಟ್ಟದ ಪರಿಸರ ಸ್ಥಿತಿಗತಿ ಅತ್ಯಂತ ಸೂಕ್ಷ್ಮ ಹಾಗೂ ಸವಾಲಿನಿಂದ ಕೂಡಿದೆ. ಸಂರಕ್ಷಣೆಗೆ ಹಲವು ಕಾನೂನು ತೊಡಕುಗಳೂ ಇವೆ. ಪಶ್ಚಿಮ ಘಟ್ಟದ ನದಿ ಕಣಿವೆಗಳ ಉಳಿವಿಗೆ ಕರಾವಳಿ ರಕ್ಷಣೆ ಅಗತ್ಯ. ಅತಿಯಾದ ವಾಣಿಜ್ಯೀಕರಣದಿಂದ ಇಲ್ಲಿನ ಜೀವ ವೈವಿದ್ಯಕ್ಕೂ ಕುತ್ತು ಬಂದಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ ಅನೇಕ ಸಂಕಟಗಳೂ ಎದುರಾಗಿವೆ. ಜನ ಜಾಗೃತಿ ಆಗಬೇಕು ಎಂದರು.

ಕಾರವಾರದ ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌, ಭಟ್ಕಳದ ಶಿವಶಾಂತಿಕಾ ಸಾವಯವ ಪರಿವಾರ, ಅರಣ್ಯ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿವಿ ಸಹಕಾರದಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ ಹಿರಿಯ ಅಧಿಕಾರಿಗಳು, ವಿಜ್ಞಾನಿಗಳು, ತಜ್ಞರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ಗೋಷ್ಠಿ, ಸಂವಾದ: ಮುಂಜಾನೆ 10ಕ್ಕೆ ಶಾಸಕ ಸುನೀಲ ನಾಯ್ಕ ಉದ್ಘಾಟಿಸಲಿದ್ದು, ಜಿಲ್ಲಾ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಹೋರಾಟಗಾರ ಅನಂತ ಅಶೀಸರ ಪ್ರಾಸ್ತಾವಿಕ ಮಾತನಾಡಲಿದ್ದು, ಅತಿಥಿಗಳಾಗಿ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಮನೋಜಕುಮಾರ, ಅರಣ್ಯಾಧಿಕಾರಿ ಶ್ರೀಧರ, ವಿಜ್ಞಾನಿಗಳಾದ ಡಾ| ಸುಭಾಶ್ಚಂದ್ರನ್‌, ಕೇಶವ, ಮಂಜು, ಉಡುಪಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶಪ್ರಸಾದ ಪಾಂಡೇಲು, ಹೋರಾಟಗಾರ ಬಿ.ಎಚ್. ರಾಘವೇಂದ್ರ ಪಾಲ್ಗೊಳ್ಳುವರು.

ಪ್ರಥಮ ಗೋಷ್ಠಿ ಕರಾವಳಿ ಪರಿಸರ ಪರಿಸ್ಥಿತಿ ಕುರಿತು ನಡೆಯಲಿದ್ದು ಹಿರಿಯ ಪರಿಸರ ಅಧಿಕಾರಿ ವಿಜಯಾ ಹೆಗಡೆ ಅಧ್ಯಕ್ಷತೆ ವಹಿಸುವರು. ವಿಜ್ಞಾನಿಗಳಾದ ಡಾ| ಮಹಾಬಲೇಶ್ವರ, ಡಾ| ಪ್ರಕಾಶ ಮೇಸ್ತ, ಡಾ| ವಿ.ಎನ್‌. ನಾಯಕ, ಅಧಿಕಾರಿ ದಿನೇಶ ಕುಮಾರ ಮಾತನಾಡುವರು. ರಾಜ್ಯ ಪತ್ರಕರ್ತರ ಸಂಘದ ಸದಸ್ಯ ಜಿ.ಸುಬ್ರಾಯ ಭಟ್ಟ ಬಕ್ಕಳ, ಅಬ್ದುಲ್‌ ಜಬ್ಟಾರ ಉಪಸ್ಥಿತರಿರುವರು.

ಕೃಷಿ ತೋಟಗಾರಿಕೆಯಲ್ಲಿ ಕೀಟನಾಶಕಗಳ ದುರ್ಬಳಕೆ ಹಾಗೂ ತಡೆ, ಸಾವಯವ ಪ್ರಯೋಗದ ಕುರಿತು ಎರಡನೇ ಗೋಷ್ಠಿ ಅಧ್ಯಕ್ಷತೆಯನ್ನು ಪ್ರೊ| ರಘುನಾಥ ವಹಿಸುವರು. ವಿಜ್ಞಾನಿಗಳಾದ ಡಾ| ಜವರೇಗೌಡ, ಶ್ರೀಧರ ಹೆಬ್ಟಾರ, ಕಿಶನ್‌ ಬಲ್ಸೆ, ಈರಯ್ಯ ದೇವಾಡಿಗ ಮಾತನಾಡುವರು. ನಾಗರಾಜ್‌ ಬೇಂಗ್ರೆ, ನಾರಾಯಣ ಕೊಲ್ಲೆ ಪಾಲ್ಗೊಳ್ಳುವರು. ಮಧ್ಯಾಹ್ನ 3:30ಕ್ಕೆ ಮುಕ್ತ ಸಂವಾದದಲ್ಲಿ ಆರ್‌ಎಫ್‌ಒ ಶಂಕರ ಗೌಡ, ಪತ್ರಕರ್ತರಾದ ಕೃಷ್ಣಮೂರ್ತಿ ಹೆಬ್ಟಾರ, ರಘುನಂದನ ಭಟ್ಟ, ನರಸಿಂಹ ಸಾತೊಡ್ಡಿ, ಭಾಸ್ಕರ ನಾಯಕ, ಕದಂಬದ ವಿಶ್ವೇಶ್ವರ ಭಟ್ಟ ಕೋಟೆಮನೆ, ಗ್ರಾಮ ಅರಣ್ಯ ಸಮಿತಿಯ ರಾಮಾ ನಾಯಕ, ಕಿಸಾನ್‌ ಸಂಘದ ನಾರಾಯಣ ಭಟ್ಟ, ವನವಾಸಿಯ ಸೋಮು ಗೌಡ, ರವೀಂದ್ರ ಶೆಟ್ಟಿ, ಶಾಂತಾರಾಂ ಸಿದ್ದಿ, ರಮೇಶ ಖಾರ್ವಿ, ಎನ್‌.ಜಿ. ಸತ್ಯನಾರಾಯಣ ಸುಳ್ಯ, ಸತ್ಯನಾರಾಯಣ ಉಡುಪ, ಗಣಪತಿ ಕೆ., ಪಾಲ್ಗೊಳ್ಳುವರು.

ಸಮಾರೋಪ ಸಮಾರಂಭ ಸಂಜೆ 4ಕ್ಕೆ ಸ್ನೇಹಕುಂಜದ ಅಧ್ಯಕ್ಷ ಎಂ.ಆರ್‌.ಹೆಗಡೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅತಿಥಿಗಳಾಗಿ ಮಾಜಿ ಶಾಸಕ ಮಂಕಾಳು ವೈದ್ಯ, ಪತ್ರಕರ್ತ ಅಶೋಕ ಹಾಸ್ಯಗಾರ, ಅರಣ್ಯಾಧಿಕಾರಿ ಬಾಲಚಂದ್ರ, ಶಿವಾನಿ ಶಾಂತಾರಾಮ ಭಟ್ಕಳ, ಡಾ| ಜಗದೀಶ, ವಿನೋದ ಪಟಗಾರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ನಿರ್ಣಯ ಅಂಗೀಕಾರ ಕೂಡ ಇದೆ ಎಂದು ವಿವರಿಸಿದರು.

ಪತ್ರಕರ್ತರ ಸಂಘ ಕೂಡ ಪರಿಸರ ಸಂರಕ್ಷಣೆಗೆ ಕೈ ಜೋಡಿಸುತ್ತಿರುವುದು ಅಭಿನಂದನೀಯ.
•ಅನಂತ ಅಶೀಸರ, ಹೋರಾಟಗಾರ

ಪತ್ರಕರ್ತರು ಪರಿಸರದಿಂದ ಹೊರತಾಗಿಲ್ಲ. ಪರಿಸರ ಸಂರಕ್ಷಣೆ ಕೂಡ ನಮ್ಮ ಜವಾಬ್ದಾರಿ. ಈ ಅರಿವಿನ ದೃಷ್ಟಿಯಲ್ಲಿ ಕಾರ್ಯಕ್ರಮ ಆಯೋಜನೆ.
•ರಾಧಾಕೃಷ್ಣ ಭಟ್ಟ ಭಟ್ಕಳ ಅಧ್ಯಕ್ಷರು, ಜಿಲ್ಲಾ ಪತ್ರಕರ್ತರ ಸಂಘ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.