ಖಜಾನೆ-2 ತರಬೇತಿ ಕೇಂದ್ರಕ್ಕೆ ಚಾಲನೆ


Team Udayavani, Feb 22, 2019, 10:40 AM IST

22-february-14.jpg

ಕಾರವಾರ: ಸರ್ಕಾರದ ಹಣಕಾಸಿನ ವ್ಯವಹಾರಗಳನ್ನು ಸರಳಗೊಳಿಸುವ ನಿಟ್ಟಿನಲ್ಲಿ ಖಜಾನೆ -2 ತರಬೇತಿ ಕೇಂದ್ರ ಪ್ರಾರಂಭಿಸಲಾಗಿದೆ. ಇದರಿಂದ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಬಿಲ್‌ಗ‌ಳನ್ನು ಮತ್ತು ವೇತನವನ್ನು ಕೆ-2 ವ್ಯವಸ್ಥೆಯ ಸೌಕರ್ಯ ಪಡೆಯಬಹುದು. ಕೆ-2 ವ್ಯವಸ್ಥೆಯ ತರಬೇತಿ ನೀಡಲು ಮೂವರು ಎಂಜಿನಿಯರ್‌ಗಳಿದ್ದು ಅವರು ಇಲ್ಲಿಗೆ ಬರುವ ಎಲ್ಲಾ ನೌಕರರಿಗೆ ನೆರವಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಮೊದಲ ಮಹಡಿಯಲ್ಲಿ ಪ್ರಾರಂಭವಾದ ನೂತನ ಕಚೇರಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಖಜಾನೆ ರಾಜ್ಯದಲ್ಲಿಯೇ ಮಾದರಿಯಾಗಿದೆ. ಇದೀಗ ಜಿಲ್ಲಾಧಿಕಾರಿ ಕಚೇರಿಯಲ್ಲೇ ತರಬೇತಿ ಕೇಂದ್ರ ಆರಂಭವಾಗಿರುವ ಕಾರಣ ಖಜಾನೆ-2ರಲ್ಲಿ ವ್ಯವಹರಿಸುವವರಿಗೆ ಅನುಕೂಲವಾಗಲಿದೆ. ರಾಜ್ಯದಲ್ಲಿಯೇ ಪ್ರಥಮವಾಗಿ ಸೌಕರ್ಯ ಮತ್ತು ತರಬೇತಿ ಕೇಂದ್ರ ಕಾರವಾರದಲ್ಲಿ ಆರಂಭವಾದಂತಾಗಿದೆ ಎಂದರು.

ಕಾಗದ ರಹಿತ ಮತ್ತು ಚೆಕ್‌ ರಹಿತ ವಹಿವಾಟು: ಹಣಕಾಸಿನ ಎಲ್ಲ ವ್ಯವಹಾರಗಳನ್ನು, ವಿವಿಧ ಸರ್ಕಾರಿ ಇಲಾಖೆಗಳು ಖಜಾನೆ-2ರಲ್ಲಿಯೇ ಮಾಡುವಂತೆ ಸರ್ಕಾರ ಆದೇಶಿ 2 ವರ್ಷ ಕಳೆದಿವೆ. ಸರ್ಕಾರದಿಂದ ಹೊಸ ತಂತ್ರಾಂಶ ಒದಗಿಸಿ ಎರಡು ವರ್ಷಗಳು ಸಂದಿವೆ. ಆದರೂ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳು ಕೆ-2 ವ್ಯವಸ್ಥೆ ಅಡಿ ಬಂದಿರಲಿಲ್ಲ. ಹಾಗೂ ಕೆಲ ಇಲಾಖೆಗಳಲ್ಲಿ ಖಜಾನೆ-2ರಲ್ಲಿ ವ್ಯವಹರಿಸುವ ಸಂದರ್ಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳು, ಜ್ಞಾನದ ಕೊರತೆ ಇತ್ಯಾದಿ ಸಮಸ್ಯೆಗಳನ್ನು ಅನುಭವಿಸಬೇಕಾಗಿತ್ತು. ಇದನ್ನು ಅರಿತ ಜಿಲ್ಲಾಧಿಕಾರಿ ಎಸ್‌. ಎಸ್‌. ನಕುಲ್‌ ಅವರು ಜಿಲ್ಲಾಡಳಿತ ಭವನದಲ್ಲಿಯೇ ಒಂದು ವಿಶೇಷ ತರಬೇತಿ ಕೇಂದ್ರ ತೆರೆಯುವ ಸಲಹೆ ನೀಡಿ ಕೊಠಡಿಯನ್ನು ಒದಗಿಸಿದ ಹಿನ್ನೆಲೆಯಲ್ಲಿ ಒಂದು ಸುಸಜ್ಜಿತ ಖಜಾನೆ-2 ಸೌಕರ್ಯ ಮತ್ತು ತರಬೇತಿ ಕೇಂದ್ರ ತೆರೆಯಲು ಅನುಕೂಲವಾಯಿತು ಎಂದು ಜಿಲ್ಲಾ ಖಜಾನೆ
ಉಪನಿರ್ದೇಶಕ ಸುನೀಲ್‌ ವಿಶ್ವನಾಥ್‌ ಮೂಗಿ ಹೇಳಿದರು.

ಖಜಾನೆ-2ರಲ್ಲಿ ಹಣಕಾಸಿನ ವ್ಯವಹಾರಗಳನ್ನು ಮಾಡುವ ಇಲಾಖೆಗಳಲ್ಲಿ ಕಂಪ್ಯೂಟರ್‌ ಸಮಸ್ಯೆ, ಮುದ್ರಣ ಯಂತ್ರದ ಸಮಸ್ಯೆ ಅಥವಾ ಜ್ಞಾನದ ಸಮಸ್ಯೆಯಿಂದ ಒಂದಿಲ್ಲೊಂದು ಸಮಸ್ಯೆಯಿಂದ ವಿಳಂಬಕ್ಕೆ ಕಾರಣವಾಗುತ್ತಿತ್ತು. ದಾಖಲೆಗಳು ಸರಿಯಿದ್ದರೂ ಮಾಡುವ ವಿಧಾನದಲ್ಲಿ ತಪ್ಪಾಗಿ ಖಜಾನೆಯಿಂದ ಆಕ್ಷೇಪಣೆಗೆ ಕಾರಣವಾಗುತ್ತಿತ್ತು. ಆ ಕಾರಣದಿಂದಲೇ ಈ ಸೌಲಭ್ಯ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲಾಗಿದ್ದು ಇಲ್ಲಿ ಕಂಪ್ಯೂಟರ್‌ಗಳು, ಮುದ್ರಣ ಯಂತ್ರಗಳು ಹಾಗೂ ಮೂರು ಮಂದಿ ಕಂಪ್ಯೂಟರ್‌ ಎಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ. ಸಮಸ್ಯೆಯಿರುವ ಇಲಾಖೆ ಅಧಿಕಾರಿಗಳು ಈ ಕೇಂದ್ರದ ಉಪಯೋಗವನ್ನು ಸಂಪೂರ್ಣ ಉಚಿತವಾಗಿ ಪಡೆಯಬಹುದಾಗಿದೆ. ಅಲ್ಲದೆ ಸರ್ಕಾರದ ಇಲಾಖೆಗೆ ಸಾರ್ವಜನಿಕರು ಖಜಾನೆ-2ರಲ್ಲಿ ಡಿಡಿ ಚಲನ್‌ ತೆಗೆಯಲೂ ಈ ಕೇಂದ್ರವನ್ನು  ಪಯೋಗಿಸಿಕೊಳ್ಳಬಹುದಾಗಿದೆ ಎಂದು ಸುನೀಲ್‌ ಮೂಗಿ ಹೇಳಿದರು. ಜಿಪಂ ಸಿಇಒ ಎಂ.ರೋಷನ್‌, ಎಸ್ಪಿ ವಿನಾಯಕ್‌ ಪಾಟೀಲ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್

ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ವಾಪಸ್ಸಾಗುತ್ತಿರುವ ವಾಹನ ಸವಾರರು

Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.