ನಾಳೆಯಿಂದ ಮಹಾ ಶಿವರಾತ್ರಿ ಉತ್ಸವ ಆರಂಭ 


Team Udayavani, Feb 27, 2019, 11:18 AM IST

27-february-15.jpg

ಗೋಕರ್ಣ: ಶ್ರೀಕ್ಷೇತ್ರ ಗೋಕರ್ಣ ಸಾರ್ವಭೌಮ ಮಹಾಬಲೇಶ್ವರ ದೇವರ ಶಿವರಾತ್ರಿ ಮಹೋತ್ಸವವು ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ಫೆ.28ರಿಂದ ವಿಧ್ಯುಕ್ತವಾಗಿ ಆರಂಭವಾಗಲಿದ್ದು, ಮಾ.4 ರಂದು ಮಹಾ ಶಿವರಾತ್ರಿ ಜಾಗರಣೆ ನಡೆಯಲಿದೆ.

ಕಳೆದ ಒಂಬತ್ತು ವರ್ಷಗಳಿಂದ ಒಂಭತ್ತು ದಿನಗಳ ಕಾಲ ಊರಿನಲ್ಲಿ ಪರಂಪರಾಗತವಾಗಿ ನಡೆಸಿಕೊಂಡುಬಂದ ಮನೆತನದ ಅರ್ಚಕರು, ದೇವಾಲಯದ ಉಪಾದಿಗಳನ್ನು ನಡೆಸುವ ಉಪಾಧಿ ವಂತರು ಹಾಗೂ ದೇವಾಲಯದ ಆಡಳಿತಮಂಡಳಿಯವರ ಸಹಕಾರ- ಸಹಯಯೋಗದೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ.

ಫೆ.28ರಂದು ಬೆಳಗ್ಗೆ ಮುಖ್ಯ ಅರ್ಚಕ ವೇ. ಮೂ. ಶಿತಿಕಂಠ ಹಿರೇ ನೇತೃತ್ವದಲ್ಲಿ ಗಣೇಶ ಪೂಜೆ, ಪುಣ್ಯಾಹ, ನಾಂದಿ, ಋತ್ವಿಗ್ವರ್ಣನೆ, ಕೌತುಕಬಂಧ, ವೃಷಭ ಧ್ವಜಾರೋಹಣ, ಮೃತ್ತಿಕಾ ಹರಣೋತ್ಸವದೊಂದಿಗೆ ಶಿವರಾತ್ರಿ ಮಹೋತ್ಸವ ಆರಂಭಗೊಳ್ಳಲಿದೆ. ಅಂದಿನಿಂದ ಒಂಬತ್ತುದಿನ ದೇವಾಲಯದಲ್ಲಿ ಧಾರ್ಮಿಕ ವಿಧಿ - ವಿಧಾನಗಳು, ಹವನಾದಿಗಳು ನೆರವೇರವವು. ಸಂಜೆಯವೇಳೆ ಪ್ರತಿದಿನ ಆಗಮೋಕ್ತ ವಿವಿಧ ಉತ್ಸವಾದಿಗಳು, ರಥೋತ್ಸವಾದಿಗಳು, ಬಲಿ, ಭೂತಬಲಿ, ಚೂರ್ಣೊತ್ಸವ, ಅವಭ್ರತೋತ್ಸವಗಳು ನಡೆಯಲಿವೆ. ಮಾ.1 ರಂದು ಸ್ಥಾನಶುದ್ಧಿ, ಗಜವಾಹನ ಯಂತ್ರೋತ್ಸವ, 2ರಂದು ಕಲಾಶಕ್ತ್ಯಾದಿ ಹವನ, ಹಂಸವಾಹನ ಯಂತ್ರೋತ್ಸವ, 3ರಂದು ಶಾಂತಿ ಪ್ರಾಯಶ್ಚಿತ್ತ್ಯಾದಿ ಹವನ, ಸಿಂಹವಾಹನ ಯಂತ್ರೋತ್ಸವ, ಪುಷ್ಪರಥೋತ್ಸವ ನಡೆಯಲಿದೆ. ಮುಖ್ಯವಾಗಿ ಮಾ.4 ರಂದು ಶಿವಯೋಗದ ಮಹಾಪರ್ವ, ಜಾಗರಣೆ ನಡೆಯಲಿದೆ. ಅಂದು ರುದ್ರಹವನ, ಮಹಾ ಕುಂಬಾಭಿಷೇಕ ಪೂರ್ವಕ ಮಹಾಪೂಜೆ, ಸಂಜೆ ಪುಷ್ಪರಥೋತ್ಸವ, ಜಲಯಾನೋತ್ಸವ, ದೀಪೋತ್ಸವ, ಭೂತಬಲಿ ನಡೆಯುವುದು.

5ರಂದು ಮಯೂರ ಯಂತ್ರೋತ್ಸವ, ಪುಷ್ಪರಥೋತ್ಸವ, ಭೂತಬಲಿ ನಡೆಯಲಿದೆ. ಮಾ.6 ರಂದು ಅಮಾವಾಸ್ಯೆ ಪರಿವಾರ ಹವನ, ಸೂಕ್ತಹವನ, ಪವಮಾನ ಹವನ, ವೃಷಭವಾಹನ ಯಂತ್ರೋತ್ಸವ, ಪುಷ್ಪರಥೋತ್ಸವ ನಡೆಯಲಿದೆ. ಮಾ.7 ರಂದು ಫಾಲ್ಗುಣ ಶುಕ್ಲ ಪ್ರತಿಪದೆಯಂದು ಶಾಂತಿ ಘಂಟಾದ್ಯಭಿಷೇಕ, ದಂಡಬಲಿ, ಭೂತಬಲಿ, ಗ್ರಾಮಬಲಿ ನಂತರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ನಡೆಯಲಿದೆ.

ಮಾ.20 ರಂದು ಚೂರ್ಣೋತ್ಸವ, ಚೂರ್ಣಬಲಿ, ಅವಭೃತ, ಜಲಯಾನೋತ್ಸವ, ಮಹಾಪೂರ್ಣಾಹುತಿ, ಅಂಕುರಾರ್ಪಣೆಯೊಂದಿಗೆ ಶಿವರಾತ್ರಿ ಮಹೋತ್ಸವವು ಪರಿಪೂರ್ಣಗೊಳ್ಳಲಿದೆ. 

ಟಾಪ್ ನ್ಯೂಸ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.