ಕಡಲತೀರಗಳಲ್ಲಿ  ಬಣ್ಣಗಳ ಸಂಗಮ-ಸಂಭ್ರಮ


Team Udayavani, Mar 22, 2019, 10:35 AM IST

22-march-19.jpg

ಕಾರವಾರ: ಕಾರವಾರ ಸೇರಿದಂತೆ ಉತ್ತರ ಕನ್ನಡದ ಕರಾವಳಿಯಲ್ಲಿ ಬಣ್ಣಗಳ ಹಬ್ಬ ಹೋಳಿಯನ್ನು ಉಲ್ಲಾಸದಿಂದ ಆಚರಿಸಲಾಯಿತು. ಹಿರಿ, ಕಿರಿಯರು, ಯುವಕ ಯುವತಿಯರು, ಮಹಿಳೆಯರು ಭೇದವಿಲ್ಲದೇ ಎಲ್ಲರೂ ಓಕುಳಿಯಾಟದಲ್ಲಿ ಪಾಲ್ಗೊಂಡಿದ್ದರು.

ಮುಂಜಾನೆಯಿಂದಲೇ ಯುವಕರ ಗುಂಪು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸುತ್ತಾ ಓಕುಳಿಯಾಟದಲ್ಲಿ ತೊಡಗಿತ್ತು. ದಾರಿ ಹೋಕರು ಹಾಗೂ ಬೈಕ್‌ನಲ್ಲಿ ಸಾಗುತ್ತಿದ್ದವರಿಗೆ ಬಣ್ಣ ಹಚ್ಚಿ ‘ಹ್ಯಾಪಿ ಹೋಳಿ’ ಎನ್ನುತ್ತಾ ಸಂಭ್ರಮಿಸಿದರು. ಕೆಲವರು ರಸ್ತೆ ಬದಿಯಲ್ಲಿ ನಿಂತು ಬಣ್ಣದ ನೀರು ಎರಚುತ್ತಿದ್ದರು. ಕೆಲವರು ನೀರನ್ನಷೇr ಜನರ ಮೇಲೆ ಹಾರಿಸಿ ಸಡಗರಪಟ್ಟರು. ಮಕ್ಕಳು ಪಿಚ್ಕಾರಿಗಳಲ್ಲಿ ಬಣ್ಣದ ನೀರು ಹಾರಿಸಿ ಖುಷಿ ಪಟ್ಟರು. ಒಂದು ವಾರದಿಂದ ಸುಗ್ಗಿ ಮೇಳ ಕಟ್ಟಿ ತಿರುಗಾಟ ನಡೆಸಿದವರು ಹೋಳಿ ಹಬ್ಬದ ದಿನ ವರ್ಷದ ಸುಗ್ಗಿಯ ಸಡಗರಕ್ಕೆ ತೆರೆಬಿತ್ತು. 

ಕಾರವಾರದ ಹಬ್ಬುವಾಡ, ಅಂಬೇಡ್ಕರ್‌ ವೃತ್ತ, ಗೀತಾಂಜಲಿ ಚಿತ್ರಮಂದಿರದ ಬಳಿ ಬಣ್ಣ ಹಚ್ಚಲೆಂದೇ ಯುವಕರ ತಂಡ ನೆರೆದಿತ್ತು. ಕುಂಠಿ ಮಹಾಮಾಯಿ ದೇವಸ್ಥಾನ, ಕಾಜುಬಾಗ ಮತ್ತಿತರ ಕಡೆಗಳಲ್ಲಿ ಯುವಕ, ಯುವತಿಯರು ಸಿನಿಮಾ ಹಾಡುಗಳಿಗೆ ಹಜ್ಜೆ ಹಾಕಿದರು. ಕಾರವಾರದ ಕೋಣೆವಾಡ, ಕಳಸವಾಡ ಮತ್ತಿತರೆಡೆ ಗುಜರಾತಿಗಳು ಹೋಳಿಯನ್ನು ವಿಶೇಷವಾಗಿ ಆಚರಿಸಿದರು. ಎಲ್ಲರೂ ಒಂದೆಡೆ ಸೇರಿ ವಿಶೇಷ ಪಾಯಸ ಸವಿದು ಕುಣಿದು ಕುಪ್ಪಳಿಸಿದರು.

ಸಮುದ್ರಕ್ಕೂ ಸಡಗರ: ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಓಕುಳಿಯಾಡಿದ ಜನ ಜಿಲ್ಲೆಯ ವಿವಿಧ ಕಡಲತೀರಗಳಿಗೆ ತೆರಳಿ ಸಮುದ್ರ ಸ್ನಾನ ಮಾಡಿದರು. ಸಮುದ್ರದಲ್ಲಿ ಯಾವುದೇ ಅವಘಡ ಆಗದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು. ಬೆಳಗ್ಗೆಯಿಂದಲೇ ಕಾರವಾರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಸಂಜೆ ಆರರ ತನಕ ಮುಚ್ಚಿದ್ದವು. ಪ್ರಮುಖ ಬೀದಿಗಳಲ್ಲಿ ಜನಸಂಚಾರವೂ ವಿರಳವಾಗಿತ್ತು.

ಹೋಳಿ ವಸೂಲಿ ತಂಡಗಳಿಂದ ಕಿರಿಕಿರಿ: ಬುಧವಾರ ರಾತ್ರಿ ಹೋಳಿಯ ಸಲುವಾಗಿ ಮನೆ ಮನೆಗಳ ಮುಂದೆ ಬಂದ ಯುವಕರು ಹೋಳಿ ಹೋಳಿ ಎಂದು ಕೂಗಿ ಗದ್ದಲ ಎಬ್ಬಿಸಿ ಹಣ ವಸೂಲಿ ಮಾಡಿದರು. ನಗರದ ಕೆಎಚ್‌ಬಿ ಕಾಲೋನಿಯಲ್ಲಿ ಕೆಲ ಯುವಕರ ಗುಂಪುಗಳ ಹಾವಳಿ ಹೆಚ್ಚಿತ್ತು. ಕೊನೆಗೆ ಪೊಲೀಸರಿಗೆ ದೂರು ಹೋಯಿತು. ಪೊಲೀಸರು ಗಸ್ತು ಆರಂಭಿಸಿದ ನಂತರ ಪರಿಸ್ಥಿತಿ ಹತೋಟಿಗೆ ಬಂತು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.