ಯುಗಾದಿ ವಿಶೇಷ: ಬೇಳೆ ಒಬ್ಬಟ್ಟು


Team Udayavani, Mar 17, 2018, 1:09 PM IST

beleholige.jpg

ಯುಗಾದಿ ಹಬ್ಬದಂದು ಪ್ರತಿಯೊಬ್ಬರ ಮನೆಯಲ್ಲೂ ಒಬ್ಬಟ್ಟು ತೊಗರಿಬೇಳೆ ಒಬ್ಬಟ್ಟು ಮಾಡಲು ಸುಲಭ ವಿಧಾನ

ಬೇಗಾಗುವ ಸಾಮಾಗ್ರಿಗಳು:
1. ತೊಗರಿ ಬೇಳೆ – 1/2 ಕೆಜಿ
2. ಚಿರೋಟಿ ರವೆ – ಕಾಲು ಕಪ್
3. ಮೈದಾಹಿಟ್ಟು – 2 ಬಟ್ಟಲು
4. ಬೆಲ್ಲ – 1/2 ಕೆಜಿ 
5. ತೆಂಗಿನಕಾಯಿ ತುರಿ – ಒಂದು ಬಟ್ಟಲು
6. ಏಲಕ್ಕಿ ಪುಡಿ – ಸ್ವಲ್ಪ
7. ತುಪ್ಪ – ಎರಡು ಚಮಚ
8. ಎಣ್ಣೆ – 1 ಕಪ್
9. ಉಪ್ಪು – 1 ಚಿಟಿಕೆ
10. ಅರಿಸಿನ – 1 ಚಿಟಿಕೆ

ಮಾಡುವ ವಿಧಾನ:
* ಒಂದು ಪಾತ್ರೆಯಲ್ಲಿ ಮೈದಾಹಿಟ್ಟು, ಚಿರೋಟಿ ರವೆ, ಅರಿಶಿನ, ಒಂದು ಚಿಟಿಕೆ ಉಪ್ಪು ಮತ್ತು ತುಪ್ಪ ಹಾಕಿ ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಚಪಾತಿ ಹಿಟ್ಟಿಗಿಂತ ತುಂಬಾ ಮೃದುವಾಗಿ ಕಲಸಿಕೊಳ್ಳಿ. ನಂತರ ಇದಕ್ಕೆ 1/2 ಕಪ್ ಎಣ್ಣೆ ಹಾಕಿ ಚೆನ್ನಾಗಿ ನಾದಿಕೊಂಡು 2 ನಿಮಿಷ ನೆನೆಯಲು ಬಿಡಿ.
* ಬೆಲ್ಲವನ್ನು ಪುಡಿ ಮಾಡಿಟ್ಟುಕೊಳ್ಳಿ.
* ಒಂದು ಪಾತ್ರೆಯಲ್ಲಿ ತೊಗರಿಬೇಳೆ, ಚಿಟಿಕೆ ಅರಿಶಿನ ಮತ್ತು ಒಂದು ಚಮಚ ಎಣ್ಣೆ ಹಾಗೂ ಅಗತ್ಯಕ್ಕೆ ತಕ್ಕಷ್ಟು ನೀರು ಹಾಕಿ ಬೇಯಿಸಿಕೊಳ್ಳಿ.
* ಬೇಳೆ ನುಣ್ಣಗಾಗುವಂತೆ ಬೇಯಿಸಬೇಡಿ. ಸ್ವಲ್ಪ ಗಟ್ಟಿಯಿರುವಾಗಲೇ ಇದಕ್ಕೆ ಪುಡಿ ಮಾಡಿದ ಬೆಲ್ಲ, ತೆಂಗಿನಕಾಯಿ ತುರಿ, ಮತ್ತು ಏಲಕ್ಕಿ ಪುಡಿ ಹಾಕಿ ಮಿಕ್ಸ್ ಮಾಡಿ ಒಲೆಯಿಂದ ಇಳಿಸಿ.
* ಈ ಮಿಶ್ರಣ ತಣ್ಣಗಾದ ನಂತರ ನೀರು ಸೇರಿಸದಂತೆ ನುಣ್ಣಗೆ ರುಬ್ಬಿಕೊಳ್ಳಬೇಕು.
* ಹೀಗೆ ನುಣ್ಣಗೆ ರುಬ್ಬಿದ ಮಿಶ್ರಣವನ್ನ ಸಣ್ಣ ಸಣ್ಣ ಉಂಡೆಗಳಾಗಿ ಮಾಡಿಕೊಳ್ಳಿ.

ಹೋಳಿಗೆ ಮಾಡುವುದು:
* ಕಲಸಿಟ್ಟ ಮೈದಾ ಮಿಶ್ರಣವನ್ನು ತೆಗೆದುಕೊಂಡು ಮತ್ತೊಮ್ಮೆ ಚೆನ್ನಾಗಿ ನಾದಿಕೊಳ್ಳಿ.
* ಒಂದು ಮಣೆ ಮೇಲೆ ಬಾಳೆ ಎಲೆ/ ಪ್ಲಾಸ್ಟಿಕ್ ಕವರ್ ಹಾಕಿ ಅದರ ಮೇಲೆ ಸ್ವಲ್ಪ ಎಣ್ಣೆ ಸವರಿ, ಸ್ವಲ್ಪ ಮೈದಾ ಮಿಶ್ರಣವನ್ನು ತೆಗೆದುಕೊಂಡು ಅದರ ಮೇಲೆ ತಟ್ಟಿಕೊಳ್ಳಿ.

* ಇದರ ಮಧ್ಯೆ ಹೂರಣದ ಉಂಡೆಯನ್ನು ಇಟ್ಟು ಎಲ್ಲಾ ಬದಿಯಿಂದ ಮೇಲ್ಮುಖವಾಗಿ ಮೈದಾ ಹಿಟ್ಟಿನಿಂದ ಹೂರಣವನ್ನು ಮುಚ್ಚಿ.
* ಹೂರಣವನ್ನು ಮುಚ್ಚಿದ ತುದಿಯನ್ನು ಕೆಳಭಾಗಕ್ಕೆ ತಿರುಗಿಸಿ ಕೈಗೆ ಎಣ್ಣೆ ಸವರಿಕೊಂಡು ಲಘುವಾಗಿ ತಟ್ಟಿಕೊಳ್ಳಿ.
* ಒಬ್ಬಟ್ಟು ತಟ್ಟುವಾಗಿ ತೀರಾ ತೆಳ್ಳಗೆ ತಟ್ಟಿದರೆ ಬೇಯಿಸುವಾಗ ಮುರಿದು ಹೋಗುತ್ತದೆ. ಆದ್ದರಿಂದ ತೀರಾ ತೆಳ್ಳಗೂ ಅಲ್ಲದೆ ದಪ್ಪವೂ ಅಲ್ಲದೆ ಮಧ್ಯಮ ಗಾತ್ರದಲ್ಲಿ ತಟ್ಟಿಕೊಳ್ಳಿ.
* ಒಲೆ ಮೇಲೆ ತವಾ ಇಟ್ಟು ಸ್ವಲ್ಪ ಎಣ್ಣೆ ಅಥವಾ ತುಪ್ಪ ಸವರಿ. ತವಾ ಬಿಸಿಯಾದ ನಂತರ ಅದರ ಮೇಲೆ ತಟ್ಟಿಕೊಂಡ ಒಬ್ಬಟ್ಟು ಎಲೆ ಸಹಿತ ಹಾಕಿ ನಿಧಾನವಾಗಿ ಎಲೆಯನ್ನು ತೆಗೆದು ಎರಡೂ ಬದಿ ಹದವಾಗಿ ಬೇಯಿಸಿದ್ರೆ ಬೇಳೆ ಒಬ್ಬಟ್ಟು ರೆಡಿ.

* ಇದನ್ನು ಬಿಸಿ ಇರುವಾಗಲೇ ತುಪ್ಪ ಅಥವಾ ಹಾಲು ಅಥವಾ ಮಾವಿನಹಣ್ಣಿನ ರಸಾಯನದ ಜೊತೆ ಸವಿಯಬಹುದು.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.