ರಾಜಿ ಮಾಡಿಕೊಳ್ಳದ ಕೆದ್ಲಾಯರ ಅಗಲುವಿಕೆ ಯಕ್ಷರಂಗಕ್ಕೆ ತುಂಬಲಾರದ ನಷ್ಟ


Team Udayavani, May 20, 2018, 4:14 PM IST

kedlay.jpg

ಬಡಗುತಿಟ್ಟು ಯಕ್ಷಗಾನ ರಂಗ ಓರ್ವ ಪರಿಪೂರ್ಣ ಭಾಗವತನನ್ನು ಕಳೆದುಕೊಂಡಿದೆ. ಭಾಗವತ ಸತೀಶ್‌ ಕೆದ್ಲಾಯರು ನಮ್ಮಿಂದ ಮರೆಯಾಗಿರುವುದು ಹವ್ಯಾಸಿ ರಂಗಕ್ಕೆ ಅತೀ ದೊಡ್ಡ ನಷ್ಟವಾದರೆ, ವೃತ್ತಿ ರಂಗಕ್ಕೂ ನಷ್ಟ ಎನ್ನಬಹುದು. 

 ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಅರಳಿದ್ದ ಗಾಯನಲೋಕದ ದೈತ್ಯರಾಗಿದ್ದ ಕೆದ್ಲಾಯರು ಅತೀ ಸಣ್ಣ 46 ನೇ ವಯಸ್ಸಿನಲ್ಲಿ ಯಕ್ಷರಂಗವನ್ನು ಅಗಲಿದ್ದಾರೆ. ಮಧುಮೇಹದ ಸಮಸ್ಯೆಯಿಂದ ಬಳುತ್ತಿದ್ದ ಅವರು ತನ್ನ ದೇಹದ ಮೇಲಿನ ಪರಿಣಾಮ ಮರೆತು ವೃತ್ತಿ ಮತ್ತು ಹವ್ಯಾಸಿ ಮೇಳಗಳ ಆಟಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುತ್ತಿದ್ದರು. 

ಗುರು ನೀಲಾವರ ಲಕ್ಷ್ಮೀ ನಾರಾಯಣರಲ್ಲಿ ತಾಳಾಭ್ಯಾಸ, ಗಮಕದ ಬಗ್ಗೆ ಅಭ್ಯಸಿಸಿದ ಕೆದ್ಲಾಯರು ಚಂದ್ರಹಾಸ ಪುರಾಣಿಕರಲ್ಲಿ ಭಾಗವತಿಕೆಯ ಅಭ್ಯಾಸ ಮಾಡಿದರು. ಬಳಿಕ ಕೇಂದ್ರದಲ್ಲಿ ಗುರು ಸಂಜೀವ ಸುವರ್ಣ ಅವರಲ್ಲಿ ನಾಟ್ಯಾಭ್ಯಾಸವನ್ನು ತಿಳಿದುಕೊಂಡ ಅವರು ಗೋರ್ಪಾಡಿ ವಿಟ್ಠಲ್‌ ಪಾಟೀಲ್‌ ಅವರಲ್ಲಿ ಯಕ್ಷಗಾನದ ಪರಂಪರೆಯ ಕುಂಜಾಲು ಶೈಲಿಯ ಭಾಗವತಿಕೆಯ ಗುಟ್ಟನ್ನು ತಿಳಿದು ಓರ್ವ ಪರಿಪೂರ್ಣ ಭಾಗವತನಾಗಿ ಹೊರ ಹೊಮ್ಮಿದರು. 

ಡಾ.ಶಿವರಾಮ ಕಾರಂತರು ಹುಟ್ಟು ಹಾಕಿದ್ದ  ಯಕ್ಷರಂಗದ ಭಾಗವತರಾಗಿದ್ದ ಕೆದ್ಲಾಯರು ವಿದೇಶದಲ್ಲೂ ತನ್ನ ಕಂಠಸಿರಿಯನ್ನು ಮೊಳಗಿಸಿದ್ದಾರೆ. ಆಸ್ಟ್ರೇಲಿಯಾ, ಸ್ವಿಟ್ಝರ್‌ಲ್ಯಾಂಡ್‌, ಚೀನಾ, ಬೆಲ್ಜಿಯಂ ಮೊದಲಾಡೆ ಕಾರ್ಯಕ್ರಮಗಳನ್ನು ಕೆದ್ಲಾಯರು ನೀಡಿದ್ದಾರೆ. 

ಹವ್ಯಾಸಿ ರಂಗದ ನೂರಾರು ಸಂಘಗಳಿಗೆ ಭಾಗವತರಾಗಿ ಸಾವಿರಾರು ವಿದ್ಯಾರ್ಥಿಗಳು, ಹವ್ಯಾಸಿ ಕಲಾವಿದ, ಕಲಾವಿದೆಯರನ್ನು ಕುಣಿಸಿದ ಕೀರ್ತಿ ಕೆದ್ಲಾಯರದ್ದು. 

ಯಕ್ಷರಂಗದ ದಿಗ್ಗಜರಾದ ಚಿಟ್ಟಾಣಿ ರಾಮಚಂದ್ರ ಹೆಗಡೆ ಕೋಡಿ ಶಂಕರ ಗಾಣಿಗ, ಮೊಳಹಳ್ಳಿ ಹೆರಿಯ ನಾಯ್ಕ, ನೀಲಾವರ ಮಹಾಬಲ ಶೆಟ್ಟಿ, ಮಾರ್ಗೋಳಿ ಗೋವಿಂದ ಸೇರಿಗಾರ್‌ , ಬಳ್ಕೂರು ಕೃಷ್ಣಯಾಜಿ, ಕೊಂಡದಕುಳಿ ರಾಮಚಂದ್ರ ಹೆಗಡೆ , ಹವ್ಯಾಸಿ ರಂಗದ ಡಾ.ಭಾಸ್ಕರಾನಂದ ಕುಮಾರ್‌, ಸುಜಯೀಂದ್ರ ಹಂಜೆ, ಶಶಾಂಕ್‌ ಪಟೇಲ್‌, ಸುಧೀರ್‌ ಉಪ್ಪೂರು  ಮುಂತಾದವರನ್ನು ಕುಣಿಸಿದ ಕೀರ್ತಿ ಕೆದ್ಲಾಯರದ್ದು. 

ಪರಂಪರೆಯ ಚೌಕಟ್ಟಿನೊಳಗೆ ಪದ್ಯದ, ಸಾಹಿತ್ಯ ವನ್ನು ಸ್ಪಷ್ಟವಾಗಿ ಸಂದರ್ಭಕ್ಕನುಗುಣವಾಗಿ ಹಾಡುತ್ತಿದ್ದುದು ಕೆದ್ಲಾಯ ಭಾಗವತರ ಹೆಚ್ಚುಗಾರಿಕೆ. 

ಉತ್ತಮ ಸ್ವರತ್ರಾಣ ಹೊಂದಿದ್ದ ಕೆದ್ಲಾಯರು ವೀರರಸವಾಗಲಿ, ಶೃಂಗಾರವಾಗಿ ಬಣ್ಣದ ವೇಷದ ಆರ್ಭಟವಾಗಲಿ ಪರಿಪೂರ್ಣ ನ್ಯಾಯ ಒದಗಿಸುತ್ತಿದ್ದರು. 

ಭಾಗವತ ಮೊದಲ ವೇಷಧಾರಿ ಎನ್ನುವುದನ್ನು ತಿಳಿದಿದ್ದ ಕೆದ್ಲಾಯರು ವಿದ್ಯಾರ್ಥಿಗಳನ್ನು ರಂಗದಲ್ಲೇ ತಿದ್ದುತ್ತಿದ್ದರು. ಕೆದ್ಲಾಯರ ಪದ್ಯಗಳಿಗೆ ಒಮ್ಮೆ ವೇಷ ಮಾಡಿದವರು ಇನ್ನೊಂದು ಬಾರಿ ಅವರೆದುರು ಕುಣಿಯಲು ಇದೆ ಎಂದು ತಿಳಿದಲ್ಲಿ ಖಚಿತ ಅಭ್ಯಾಸ ಮಾಡಿಯೇ ರಂಗವೇರುತ್ತಿದ್ದರು. ಯಾವುದರಲ್ಲೂ ರಾಜಿ ಮಾಡಿಕೊಳ್ಳುತ್ತಿರಲಿಲ್ಲ ಕೆದ್ಲಾಯರು,ಕೆದ್ಲಾಯರ ರಂಗದ ಮೇಲಿನ ಶಿಸ್ತು ಪ್ರದರ್ಶನದ ಯಶಸ್ಸಿಗೆ ಕಾರಣವಾಗುತ್ತಿತ್ತು. 

ಯಾವುದೇ ಪ್ರಸಂಗಕ್ಕೆ ಸೈ ಎನಿಸಕೊಂಡಿದ್ದ ಕೆದ್ಲಾಯರು ಅಪಾರ ಪ್ರೀತಿ ಇರಿಸಿದ್ದು ಪೌರಾಣಿಕ ಪ್ರಸಂಗಳ ಮೇಲೆ. ತಾಮ್ರಧ್ವಜ ಕಾಳಗ, ಜಾಂಬವತಿ ಕಲ್ಯಾಣ, ಧ್ರುವ ಚರಿತ್ರೆ, ವಾಲಿವಧೆ, ಪಂಚವಟಿ , ಸುಧನ್ವಾರ್ಜುನ, ಶಶಿಪ್ರಭಾ ಪರಿಣಯ ಮೊದಲಾದ ಪ್ರಸಂಗಗಳು ಕೆದ್ಲಾಯರ ನೆಚ್ಚಿನ ಪ್ರಸಂಗವಾಗಿದ್ದವು. ಇಂತಹ ಕ್ಲಿಷ್ಟಕರ ಬಂಧಗಳಿಗರುವ ಪದ್ಯಗಳಿಗೆ ಕೆದ್ಲಾಯರು ಸರ್ವ ರೀತಿಯಲ್ಲೂ  ನ್ಯಾಯ ಒದಗಿಸಿಕೊಡುತ್ತಿದ್ದರು.

ಕೇಂದ್ರದಲ್ಲಿ ಗುರುವಾಗಿಯೂ ವಿದ್ಯೆಯನ್ನು ಧಾರೆ ಎರೆದಿದ್ದ ಕೆದ್ಲಾಯರಿಗೆ ಹಲವು ಶಿಷ್ಯರಿದ್ದಾರೆ. ಅವರಲ್ಲಿ  ಪ್ರಖ್ಯಾತ ಭಾಗವತ ರಾದ ಜನ್ಸಾಲೆ ರಾಘವೇಂದ್ರ ಆಚಾರಿ, ಚಂದ್ರಕಾಂತ ಮೂಡುಬೆಳ್ಳೆ,ಪ್ರಸಾದ್‌ ಮೊಗೆ ಬೆಟ್ಟು ಪ್ರಮುಖರು. 

ಹಟ್ಟಿಯಂಗಡಿ, ಕಮಲಶಿಲೆ ಮೇಳಗಳಲ್ಲಿ ಅತಿಥಿ ಭಾಗವತರಾಗಿ ಎಲ್ಲಾ ರೀತಿಯ ಪ್ರಸಂಗಳ ಪದ್ಯಗಳಿಗೆ ನ್ಯಾಯ ಒದಗಿಸುತ್ತಿದ್ದರು. 

ತನ್ನ ಎಡೆ ಬಿಡದ ನಿರಂತರ ಸೇವೆಯಲ್ಲಿ  ಎಂದೂ ಕಳಪೆ ಪ್ರದರ್ಶನ ನೀಡದ,ಯಕ್ಷಗಾನ ಭಾಗವತಿಕೆಯ ಚೌಕಟ್ಟನ್ನು ಮೀರದ ಕೆದ್ಲಾಯರು ಕೊನೆಯಲ್ಲಿ ತೀವ್ರ ಅನಾರೋಗ್ಯದ  ನಡುವೆಯೂ ಆಕಾಶವಾಣಿಯಲ್ಲಿ ಧ್ವನಿ ಮುದ್ರಣ ಕಾರ್ಯಕ್ರಮಕ್ಕೆ ಭಾಗವತಿಕೆ ಮಾಡಿದ್ದರು. 

ಮನೆಯಲ್ಲಿ ಮಲಗಿದ್ದ ಅವರು ಅಭಿಮಾನಿಗಳ ಕರೆಗೆ ಓಗೊಡದೆ ಮಲಗಿದ್ದಲ್ಲೇ ಮರೆಯಾಗಿದ್ದಾರೆ. ಅವರ ಭಾಗವತಿಕೆಯ ಅನೇಕ ಧ್ವನಿ ಸುರುಳಿಗಳು,ಕ್ಯಾಸೆಟ್‌ಗಳು ಮುದ್ರಣಗೊಂಡಿದ್ದು ಅವರ ಅಭಿಮಾನಿಗಳು ಅವುಗಳ ಮೂಲಕ ಕೆದ್ಲಾಯರ ಶಾರೀರವನ್ನು ಕಾಣಬೇಕಾಗಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.