ಯಕ್ಷಗಾನ ಎಳ್ಗೆಗೆ ಸಾಮಾಜಿಕ ತಾಣಗಳು ವರಪ್ರಧಾನ


Team Udayavani, Jul 8, 2018, 4:19 PM IST

ykshhotelkhoj.jpg

ಕರಾವಳಿಯ ಸರ್ವಶ್ರೇಷ್ಠ ಕಲೆ ಯಕ್ಷಗಾನ, ಆಕರ್ಷಕ ವೇಷಭೂಷಣ, ಸಂಗೀತ, ನಾಟ್ಯ, ಅಭಿನಯ , ಮಾತುಗಾರಿಕೆಯಿಂದ ಕೂಡಿದ ಸರ್ವಾಂಗ ಸುಂದರ ಕಲೆಗೆ ವಿಶ್ವದೆಲ್ಲೆಡೆಯ ಜನ ಮಾರು ಹೋಗಿದ್ದಾರೆ. ಇಂತಹ ಮಹೋನ್ನತ ಕಲೆಯ ಏಳ್ಗೆಗೆ ಸಾಮಾಜಿಕ ಜಾಲತಾಣಗಳು ಸದ್ಯ ವರಪ್ರಧಾನವಾಗಿವೆ. 

ಯೂಟ್ಯೂಬ್‌, ಫೇಸ್‌ಬುಕ್‌, ವಾಟ್ಸಾಪ್‌ ನಂತಹ ಸಾಮಾಜಿಕ ತಾಣಗಳಲ್ಲಿ ಇಂದು ಯಕ್ಷಗಾನ ಬಹುವಾಗಿ ಪ್ರಚಲಿತದಲ್ಲಿದೆ. ಹಿಂದೆ ಯಕ್ಷಾಭಿಮಾನಿಗಳಿಗೆ ಮಾತ್ರ ಸೀಮಿತವಾಗಿದ್ದ ಕಲೆ, ಅದರಲ್ಲಿನ ಕಲಾವಿದರ ತಾಕತ್ತು  ಇಂದು ಹೊಸ ಅಭಿಮಾನಿಗಳನ್ನು ಸೆಳೆಯಲು ಕಾರಣವಾಗಿದೆ. 

ಯಕ್ಷಗಾನದ ಹಲವು ತುಣುಕುಗಳು, ಗಾಯನಗಳು ಹಲವರ ಮೊಬೈಲ್‌ಗ‌ಳಲ್ಲಿ ವೈರಲ್‌ ಆಗಿ ಹರಿದಾಡುತ್ತಿದೆ. ಯುವ ಮನಸ್ಸುಗಳು ಬಹುವಾಗಿ ಒಗ್ಗಿಕೊಂಡಿರುವ ಸಾಮಾಜಿಕ ತಾಣಗಳಲ್ಲಿ ಐಕ್ಯವಾಗಿರುವ ಯಕ್ಷಗಾನ ಕಲೆ ಹಲವು ಹೊಸ ಅಭಿಮಾನಿಗಳನ್ನು ಹುಟ್ಟು ಹಾಕಿದೆ. 

ಯೂಟ್ಯೂಬ್‌ನಲ್ಲಿ ಆಸಕ್ತರು ಶ್ರಮ ಹಾಕಿ ಪ್ರಕಟಿಸಿರುವ ಸಾವಿರಾರು ಯಕ್ಷಗಾನದ ವಿಡಿಯೋಗಳು ಲಭ್ಯವಿದೆ. ವಿಶ್ವದ ಮೂಲೆ ಮೂಲೆಗಳಲ್ಲಿರುವ ಕರಾವಳಿಯ ಯಕ್ಷಗಾನಾಭಿಮಾನಿಗಳು ಇಂದು ನಡೆದ ಯಕ್ಷಗಾನವನ್ನು ವಿಶ್ವದ ಯಾವದೋ ಮೂಲೆಯಲ್ಲಿ ಕುಳಿತು ನೋಡಿ ಸಂಭ್ರಮಿಸುವಷ್ಟರವಷ್ಟರ ಮಟ್ಟಿಗೆ ಜಾಲತಾಣಗಳು ಸಹಕಾರಿಯಾಗಿವೆ. 

ಕೆಲ ವಿಡಿಯೋಗಳಿಗೆ ಮೂರ್‍ನಾಲ್ಕು ಲಕ್ಷ ವೀಕ್ಷಣೆ ಸಂಖ್ಯೆ ದಾಖಲಾಗಿರುವುದು ಜನರ ಅಪಾರ ಆಸಕ್ತಿ ಕುರಿತು ಸಾಕ್ಷಿಯಾಗಿದೆ. ಉಭಯ ತಿಟ್ಟುಗಳ ಹಲವು ಪ್ರಸಿದ್ಧ ಕಲಾವಿದರ ಅತ್ಯುನ್ನತ ವಿಡಿಯೋಗಳು ಯೂಟ್ಯೂಬ್‌ನಲ್ಲಿವೆ. ಹಲವು ಪ್ರಸಂಗಗಳೂ ಯೂಟ್ಯೂಬ್‌ನಲ್ಲಿದ್ದು  ಅಪಾರ ಸಂಖ್ಯೆಯ ವೀಕ್ಷಕರು ವೀಕ್ಷಿಸಿರುವುದು ಕಲಾ ಮೌಲ್ಯ ಹೆಚ್ಚಿಸಿದೆ.

ಫೇಸ್‌ಬುಕ್‌ ನಂತಹ ಲೋಕಪ್ರಿಯ ತಾಣಗಳಲ್ಲೂ ಇಂದು ಹಲವರು  ಪ್ರದರ್ಶನಗಳನ್ನು ಲೈವ್‌ ಆಗಿ ಪ್ರದರ್ಶಿಸುತ್ತಿದ್ದಾರೆ. ಹೀಗೆ ಮಾಡುವುದು ಒಂದರ್ಥದಲ್ಲಿ ಸರಿಯಲ್ಲ, ಕಾರಣ ಪ್ರೇಕ್ಷಕರು ಲೈವ್‌ ನೋಡಿಕೊಂಡು ಕೂರುತ್ತಾರೆಯೇ ವಿನಹ ವೇದಿಕೆಯ ಎದುರು ಬರುವುದಕ್ಕೆ ಹಿಂದೇಟು ಹಾಕುತ್ತಾರೆ. 

ತಮ್ಮ ನೆಚ್ಚಿನ ಯಕ್ಷತಾರೆಗಳ ನೂರಾರು ಅಭಿಮಾನಿ ಬಳಗಗಳ ವಾಟ್ಸಾಪ್‌ ಗುಂಪುಗಳ ಮೂಲಕ ಯಕ್ಷಗಾನ ಅಭಿಮಾನವನ್ನು ಸಾವಿರಾರು ಜನರು ಮೆರೆಯುತ್ತಿದ್ದಾರೆ. 

ಅತ್ಯಮೂಲ್ಯ ಚರ್ಚೆಗಳಿಗೂ,ವಿಮರ್ಶೆಗಳಿಗೂ ಸಾಮಾಜಿಕ ತಾಣ ವೇದಿಕೆಯಾಗಿದೆ. ಕಲಾವಿದರಿಂದ ಕಲೆಗೆ ಅಪಚಾರವಾದಲ್ಲಿ ಖಂಡಿಸಲು ಹಲವರು ಜಾಲತಾಣಗಳ ಮೂಲಕ ಮುಂದೆ ಬಂದಿದ್ದಾರೆ. ಇದು ಕಲಾವಿದರಿಗೆ ಜಾಗೃತರಾಗಲೂ ಮಾಧ್ಯಮವಾದ ಕೆಲ ಉದಾಹರಣೆಗಳಿವೆ. 

ಹಳೆಯ ಕಲಾವಿದರು, ಸಂಪ್ರದಾಯಿಕ ಯಕ್ಷಗಾನದ ಕುರಿತಾಗಿ ಒಲವು ಹೊಂದಿರುವ ಹಲವು ಯಕ್ಷಗಾನದ ವಾಟ್ಸಾಪ್‌ ಗುಂಪುಗಳೂ ಇವೆ. ಸಾವಿರಾರು ಗುಂಪುಗಳು ಇಂದು ಕಲೆಗಾಗಿ ಕಾರ್ಯನಿರ್ವಹಿಸುತ್ತಿದ್ದು,   ಕಲಾ ಪ್ರದರ್ಶನದ ತುಣುಕುಗಳು, ಆಡಿಯೋಗಳನ್ನು, ಅತ್ಯಾಕರ್ಷಕ ಭಾವಚಿತ್ರಗಳನ್ನು ಸೆರೆಹಿಡಿವ ಆಸಕ್ತರು ಅಭಿಮಾನಿಗಳೊಂದಿಗೆ ಹಂಚಿ ಕೊಂಡು ಕಲಾವಿದರನ್ನು ಕಲೆಯನ್ನು  ಬೆಳಗುತ್ತಿದ್ದಾರೆ. 

ಸಾಮಾಜಿಕ ತಾಣಗಳ ಮೂಲಕ ಕಲೆ ಇಂದು ವಿಶ್ವದ ಮೂಲೆ,ಮೂಲೆಗೂ ತಲುಪಿ ಯಕ್ಷಗಾನಾಭಿಮಾನಿಗಳ ಮನ ತಣಿಸುತ್ತಿದೆ. ಸಾಮಾಜಿಕ ತಾಣಗಳಲ್ಲಿ ವಿಡಿಯೋಗಳನ್ನು ನೋಡಿ ಮೆಚ್ಚಿಕೊಂಡು ಅಭಿಮಾನ ಮೂಡಿಸಿಕೊಂಡವರು ಯಕ್ಷಗಾನದ ರಂಗಸ್ಥಳದ ಮುಂದೆ ಬಂದು ಕುಳಿತು ಅಭಿಮಾನಿಗಳಾದ ಉದಾಹರಣೆಗಳೂ ಇವೆ. 

ಕಲಾ ಬಾಳ್ಗೆಗೆ ಮಾಧ್ಯಮವಾಗಿರುವ ಸಾಮಾಜಿಕ ತಾಣಗಳಲ್ಲಿ ಕಲೆ ಇನ್ನಷ್ಟು ಬೆಳಗಲಿ, ಅಭಿಮಾನಿಗಳು ಹೆಚ್ಚಿ  ಕಲೆ ಇನ್ನಷ್ಟು ವ್ಯಾಪಿಸಲಿ ಎನ್ನುವುದು ಆಶಯ. 

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.