ನೋಡಬನ್ನಿ ಮೈದುಂಬಿ ಹರಿಯೋ ಸಿರಿಮನೆ ಜಲಪಾತ…


Team Udayavani, Aug 3, 2018, 5:27 PM IST

sirimane.jpg

ಮಲೆನಾಡಿದೆ ಕಾಲಿಟ್ಟರೆ ಸಾಕು ಜಿಟಿ ಜಿಟಿ ಜಿನುಗುವ ಮಳೆ , ಮೈಕೊರೆಯುವ ಚಳಿ,  ಜೊತೆಗೆ ಭತ್ತದ ಗದ್ದೆಗಳಲ್ಲಿ ನಾಟಿಯ ಸಂಭ್ರಮ,  ಎತ್ತ ನೋಡಿದರು ಬಾನೆತ್ತರಕ್ಕೆ ಶಿರವೆತ್ತಿ ನಿಂತಿರುವ ಗಿರಿ ಶಿಖರಗಳು,  ಈ ಗಿರಿ ಶಿಖರಗಳ ಸಂಧಿಯಲ್ಲಿ ಹರಿಯುವ ಜಲಧಾರೆಗಳು,  ವಾಹ್,  ಮಲೆನಾಡಿನ ವರ್ಣನೆಗೆ ಪದಗಳೇ ಸಾಲದು.

ಸುತ್ತಲೂ ಹಚ್ಚ ಹಸುರಿನ ಕಾನನದ ನಡುವೆ ಜುಳುಜುಳು ಹರಿಯುವ ಜಲಪಾತದ ನಿನಾದ, ಧುಮ್ಮಿಕ್ಕಿ ಹರಿಯುವ ನೀರಿನಲ್ಲಿ ಮಿಂದೇಳುತ್ತಿರುವ ಪ್ರವಾಸಿಗರು ಇದನ್ನು ಕಣ್ತುಂಬಿಕೊಳ್ಳಲು ಹರಿದು ಬರುತ್ತಿರುವ ಜನಸಾಗರ.  ಇದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಿರಿಮನೆ ಜಲಪಾತದ ದೃಶ್ಯವೈಭವ.

ಅಂದ ಹಾಗೆ ಸಿರಿಮನೆ ಜಲಪಾತ ತನ್ನದೇ ಆದ ಶೈಲಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಸುಮಾರು 50ಅಡಿ ಎತ್ತರದಿಂದ ಧುಮ್ಮಿಕ್ಕುವ ಜಲಪಾತ ಪ್ರವಾಸಿಗರ ಸ್ವರ್ಗವೇ ಸರಿ. ಜಲಪಾತದ ನೀರಿಗೆ ಮೈಯೊಡ್ಡಿ ನಿಂತರೆ ಮೈಮನಗಳ ಸುಳಿಯಲ್ಲಿ ಕಚಗುಳಿ ಇಟ್ಟಂತಹ ಅನುಭವ.

ರಾಜ್ಯದ ವಿವಿಧೆಡೆಗಳಿಂದ ಶೃಂಗೇರಿ ಶ್ರೀಶಾರದಾ ಪೀಠಕ್ಕೆ ಆಗಮಿಸುವ ಪ್ರವಾಸಿಗರು ಕಿಗ್ಗಾದ ಶ್ರೀಋಷ್ಯ ಶೃಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವುದಲ್ಲದೆ, ಸಿರಿಮನೆ ಜಲಪಾತಕ್ಕೂ ಭೇಟಿ ನೀಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಸಿರಿಮನೆ ಜಲಪಾತ ಮಳೆಗಾಲ ಮುಗಿದ ನಂತರವೂ ಆಕರ್ಷಣೀಯವಾಗಿರುತ್ತಿದ್ದು, ಬೇಸಿಗೆ ಕಾಲದಲ್ಲಿಯೂ ಪ್ರವಾಸಿಗರನ್ನು ಸೆಳೆಯುತ್ತದೆ.

ವಿದ್ಯುತ್ ಉತ್ಪಾದನೆ

ಇಲ್ಲಿನ ಇನ್ನೊಂದು ವಿಶೇಷತೆ ಏನೆಂದರೆ ಈ ಜಲಪಾತದಲ್ಲಿ ಹರಿಯುವ ನೀರನ್ನು ಬಳಸಿ ಸಣ್ಣ ಯಂತ್ರಗಳನ್ನು ಉಪಯೋಗಿಸಿಕೊಂಡು ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದು ಇಲ್ಲಿನ ಸುಮಾರು ಹತ್ತು ಮನೆಗಳು ಉಪಯೋಗಿಸುತ್ತಾರೆ. ಮಲೆನಾಡಿನಲ್ಲಿ ಸಾಮಾನ್ಯವಾಗಿ ಎಲ್ಲಾ ಮನೆಯವರು ಗುಡ್ಡದಿಂದ ಹರಿಯುವ ನೀರಿಗೆ ಅಡ್ಡಲಾಗಿ ಯಂತ್ರಗಳನ್ನು ಉಪಯೋಗಿಕೊಂಡು ವಿದ್ಯುತ್ ಉತ್ಪಾದಿಸುವುದು ಸಾಮಾನ್ಯವಾಗಿರುತ್ತದೆ.

ಅಂದ ಹಾಗೆ ಸಿರಿಮನೆ ಜಲಪಾತವು ಶೃಂಗೇರಿಯಿಂದ ಸುಮಾರು 14 ಕಿ.ಮೀ ದೂರದಲ್ಲಿರುವ ಕಿಗ್ಗ ಎಂಬ ಹಳ್ಳಿಯ ಮೂಲಕ ಸಾಗಿ ನಿರಾಯಾಸವಾಗಿ ತಲುಪಬಹುದು. ಜಲಪಾತದವರೆಗೂ ಉತ್ರಮ ರಸ್ತೆ ಸಂಪರ್ಕವಿದ್ದು, ಪ್ರತಿದಿನವೂ ನೂರಾರು ಪ್ರವಾಸಿಗರನ್ನು ತನ್ನೆಡೆಗೆ ಆಕರ್ಷಿಸುತ್ತಿದೆ.

ಟಾಪ್ ನ್ಯೂಸ್

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.