ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ.. ಆರೋಗ್ಯಕ್ಕೆ ಹಿತಕರ!


Team Udayavani, Aug 11, 2018, 7:01 PM IST

clay-pot.jpg

ಮಣ್ಣಿನ ಪಾತ್ರೆಗಳು ಪರಿಸರ ಸ್ನೇಹಿಯಾಗಿವೆ. ಯಾವುದೇ ರಾಸಾಯನಿಕ ಅಂಶಗಳ ಮಿಶ್ರಣವಿಲ್ಲದಿರುವುದರಿಂದ ಪ್ರಕೃತಿಗೆ ಯಾವುದೇ ಹಾನಿಯಾಗುವುದಿಲ್ಲ ಮಾತ್ರವಲ್ಲದೇ ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರದಲ್ಲಿ ಪೌಷ್ಟಿಕಾಂಶ ನಾಶವಾಗುವುದಿಲ್ಲ ಎಂಬುದು ನಂಬಿಕೆ. 

ಮಣ್ಣಿನ ಪಾತ್ರೆಗಳಲ್ಲಿ ಔಷಧೀಯ ಗುಣಗಳಿದ್ದು, ಹಿಂದಿನ ಕಾಲದಲ್ಲಿ ನಮ್ಮ ಹಿರಿಯರೆಲ್ಲರೂ ದಿನಪಯೋಗಿ ವಸ್ತುಗಳಾಗಿ ಮಣ್ಣಿನ ಪಾತ್ರೆಗಳನ್ನೇ ಬಳಸುತ್ತಿದ್ದರು. ನಮ್ಮ ಈಗಿನ ಸ್ಟೀಲ್ ಹಾಗೂ ಅಲ್ಯೂಮಿನಿಯಂ ಕಾಲದಲ್ಲಿ ಮಣ್ಣಿನ ಪಾತ್ರೆಗಳು ತಮ್ಮ ಸ್ಥಾನವನ್ನು ಕಳೆದುಕೊಂಡಿದೆ. ಆದರೂ ಈ ಆಧುನಿಕ ಯಗದಲ್ಲಿ ಆರೋಗ್ಯದ ದೃಷ್ಟಿಯಲ್ಲಿ ಕೂಡ ಒಮ್ಮೊಮ್ಮೆ ಮಣ್ಣಿನ ಪಾತ್ರೆಗಳನ್ನು ಉಪಯೋಗಿಸುವುದು ಕಾಣಬಹುದು. ಆಹಾರವನ್ನು ನಿಧಾನವಾಗಿ ಬೆಂಕಿಯಿಂದ ಬೇಯಿಸಬೇಕೆಂದು ಆಯುರ್ವೇದ ಹೇಳಿದೆ. ಆದರೆ ಸ್ಟೀಲ್ ಹಾಗೂ ಅಲ್ಯೂಮಿನಿಯಂ ಪಾತ್ರೆಯಲ್ಲಿ ಸಾಧ್ಯವಿಲ್ಲ ಅವುಗಳಲ್ಲಿ ಆಹಾರವನ್ನು ವೇಗವಾಗಿ ತಯಾರಿಸಲಾಗುತ್ತದೆ. ಮಣ್ಣಿನ ಪಾತ್ರೆಯಲ್ಲಿ ಮಾಡಿದ ಆಹಾರವು ರುಚಿಕರವಾಗಿರುವುದು ಮಾತ್ರವಲ್ಲ ಮತ್ತು ಪೌಷ್ಟಿಕಾಂಶವನ್ನು ನೀಡುತ್ತದೆ. ಮಣ್ಣಿನ ಪಾತ್ರೆಯ ಮಾಡುವ ಅಡುಗೆಯ ರುಚಿ ಇತರ ಪಾತ್ರೆ ನೀಡುವುದಿಲ್ಲ.

ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಅಡುಗೆಯ ಉಪಯೋಗಗಳು:
1. ರುಚಿ, ಪೋಷಕಾಂಶಗಳ ದೃಷ್ಟಿಕೋನ:

 ಮಣ್ಣಿನ ಪಾತ್ರೆಗಳು ಸೂಕ್ತವಾಗಿದ್ದು ಅಲ್ಲದೆ ಆಯುರ್ವೇದದ ಪ್ರಕಾರ ಹೆಚ್ಚಾಗಿ ಎಲ್ಲಾ ತರಹದ ಅಡುಗೆಗಳಿಗೆ ಮಣ್ಣಿನ ಪಾತ್ರೆಯಲ್ಲಿ ನಿಧಾನ ಗತಿಯಲ್ಲಿ ಅಡುಗೆ ತಯಾರಿಸುವುದರಿಂದ ಗುಣಮಟ್ಟ ಹೆಚ್ಚಿಸುವುದಲ್ಲದೇ ರುಚಿಯಾದ ಅಡುಗೆಯ ಜೊತೆಗೆ ಸಮತೋಲನ ಪೋಷಕಾಂಶಗಳು ದೊರೆಯುತ್ತದೆ. ಮಣ್ಣಿನಲ್ಲಿರುವ ನೈಸರ್ಗಿಕ ನಿರೋಧಕ ಗುಣಗಳಿಂದಾಗಿ ಶಾಖ ಮತ್ತು ತೇವಾಂಶ ಮಣ್ಣಿನ ಪಾತ್ರೆಯಲ್ಲಿ ಸಮಾನವಾಗಿ ಪ್ರಸರಿಸಿ ಪೋಷಕಾಂಶಗಳನ್ನು ಕರಗದಂತೆ ಹಾಗೂ ಆಹಾರ ಸುಡದಂತೆ ತಡೆಯುತ್ತದೆ.

2. ಅಸಿಡಿಟಿ ಸಮಸ್ಯೆ ಪರಿಹಾರ:
ಅಸಿಡಿಟಿ ಸಮಸ್ಯೆ ಇದ್ದವರು ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ ಸೇವಿಸುವುದರಿಂದ ಅಸಿಡಿಟಿ ಸಮಸ್ಯೆಯಿಂದ ದೂರ ಉಳಿಯಬಹುದು.

3. ಮಾನವನ ದೇಹಕ್ಕೆ ಆರೋಗ್ಯಕರ:
ಮಣ್ಣಿನ ಪಾತ್ರೆಯನ್ನು ಮಾಡಲು ಉಪಯೋಗಿಸುವ ಮಣ್ಣಿನಲ್ಲಿ ಕ್ಷಾರೀಯ ಅಂಶವು ಅಡುಗೆ ತಯಾರಿಸುವಾಗ ಆಹಾರದಲ್ಲಿನ ಆಮ್ಲಿàಯ ಗುಣವನ್ನು ಸಮದೂಗಿಸುವುದಲ್ಲದೇ ಜೀರ್ಣಕ್ರಿಯೆಯನ್ನು ಸುಲಭ ಮಾಡುತ್ತದೆ. ಮಣ್ಣಿನ ಪಾತ್ರೆಗಳಲ್ಲಿ ತಯಾರಿಸಿದ ಆಹಾರದಲ್ಲಿ ಕಬ್ಬಿಣಾಂಶ, ಕ್ಯಾಲ್ಸಿಯಂ, ಮೆಗ್ನೇಷಿಯಂ ಹೇರಳವಾಗಿರುತ್ತದೆ. ಮಣ್ಣಿನ ಪಾತ್ರೆಯಲ್ಲಿ ನೈಸರ್ಗಿಕ ತೇವಾಂಶ ಅಡುಗೆ ತಯಾರಿಸಲು ಸಾಕಾಗುವುದಲ್ಲದೇ ಎಣ್ಣೆಯ ಉಪಯೋಗ ಕಡಿಮೆ ಮಾಡಬಹುದು.

4. ಮಲಬದ್ಧತೆಗೆ ಪರಿಹಾರ:
ಮಲಬದ್ಧತೆಯಿಂದ ತೊಂದರೆಗೆ ಒಳಗಾಗಿರುವ ವ್ಯಕ್ತಿ ಮಣ್ಣಿನ ಪಾತ್ರೆಯಲ್ಲಿ ತಯಾರಿಸಿದ ಆಹಾರ ಸೇವಿಸುವುದರಿಂದ ಮಲಬದ್ಧತೆಯನ್ನು ನಿವಾರಣೆ ಮಾಡಬಹುದು.

5. ಅಗ್ಗ ಮತ್ತು ಸುಲಭವಾಗಿ ಸಿಗುವಂತಹವು:
ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುವಂತಹವು ,ಬೇರೆ ಅಡುಗೆ ಪಾತ್ರೆಗಳಿಗೆ ಸೇರಿಸಿ ನೋಡಿದರೆ ಅಗ್ಗದಲ್ಲಿ ದೊರೆಯುತ್ತದೆ. ಅಲ್ಲದೇ ವಿವಿಧ ಗಾತ್ರದಲ್ಲಿ ದೊರೆಯುತ್ತದೆ.

ಎಚ್ಚರ ! ಹೊಳೆಯುವ ಮಣ್ಣಿನ ಪಾತ್ರೆಗಳನ್ನು ತಿರಸ್ಕರಿಸಿ
ಹೊಳಿಪಿನ ಮಿಶ್ರಣ ತಯಾರಿಸಲು ಹಲವು ಬಗೆಯ ರಾಸಾಯನಿಕ ವಸ್ತುಗಳನ್ನು ಉಪಯೋಗಿಸುತ್ತಾರೆ ಇದು ವಿಷಯುಕ್ತ ಹೊಗೆಯನ್ನು ಬಿಸಿ ಮಾಡಿದಾಗ ಉತ್ಪತ್ತಿ ಮಾಡುತ್ತದೆ ಹೆಚ್ಚಿನ ಹೊಳೆಯುವ ಬಣ್ಣದಲ್ಲಿ ಸೀಸದಂಶ ಇರುತ್ತದೆ ಆದ್ದರಿಂದ ಮಾರುಕಟ್ಟೆಯಲ್ಲಿ ಸಿಗುವ ಮಣ್ಣಿನ ಪಾತ್ರೆಯನ್ನು ಸರಿಯಾಗಿ ನೋಡಿ ಕೊಂಡುಕೊಳ್ಳುವುದು ಉತ್ತಮ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.