ಪ್ರಕೃತಿ ಸೌಂದರ್ಯದ ಭೂಲೋಕದ ಕೈಲಾಸ “ಈ ನರಹರಿ ಪರ್ವತ”


Team Udayavani, Sep 7, 2018, 4:03 PM IST

narahari-parvatha-800.jpg

ಪ್ರಕೃತಿಯ ಮಡಿಲಲ್ಲಿ ಸುಂದರವಾದ ಒಂದು ತಾಣವೆಂದರೆ ಅದು ನರಹರಿ ಪರ್ವತ ಅದರಲ್ಲಿ ಶ್ರೀ ಸದಾಶಿವ ದೇವರ ಸನ್ನಿದಾನವೆಂಬುದು ಆಕರ್ಷಕ ದೇಹಕ್ಕೆಜೀವ ತುಂಬಿದಂತೆ, ಇಲ್ಲಿಗೆಬಂದು ನಿಂತಾಗಒಂದುಅನಿರ್ವಚನೀಯಆನಂದಉಂಟಾಗುತ್ತದೆ.ಅದು ಈ ಕ್ಷೇತ್ರದ ಪಾವಿತ್ರ್ಯದ ಸಂಕೇತ. ನರಹರಿ ಕ್ಷೇತ್ರವೆಂದರೆ ಸಂಕಟದಲ್ಲಿರುವವರ  ಸಂಕಟಗಳನ್ನು ದೂರಮಾಡುವಂಥ ಸ್ಥಳ ಎಂದೇ ವಾಡಿಕೆ.

ಈ ದೃಷ್ಟಿಯಿಂದ ಶ್ರೀ ನರಹರಿ ಪರ್ವತ ಮತ್ತು ಅಲ್ಲಿರುವ ಸಾದಾಶಿವ ದೇವಸ್ಥಾನ ಭಕ್ತಾದಿಗಳ ಪಾಲಿಗೆ ಸುಯೋಗ್ಯ, ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಪುಣ್ಯ ಕ್ಷೇತ್ರಗಳಲ್ಲಿ ಶ್ರೇಷ್ಠವಾದ ಕ್ಷೇತ್ರವಾಗಿ ರೂಪುಗೊಂಡಿದೆ. ಸೂರ್ಯೋದಯಶ್ರೀ ನರಹರಿ ಪರ್ವತವು ಬರಿಯ ದೇಗುಲವಲ್ಲ ಭಾವುಕರಿಗೆ ನಂದಗೋಕುಲ, ನಿಸರ್ಗ ಪ್ರಿಯರಿಗೆ ಪ್ರಕೃತಿಯ ಮಡಿಲು, ಬಾಳಿನಲ್ಲಿ ಬಳಲಿದವರಿಗೆ ಪ್ರಂತಶಾಂತಿ ಧಾಮ ಭಕ್ತರಿಗೆ ದೇವ ಸನ್ನಿಧಿ. ಅಂತೆಯೇ ಇಲ್ಲಿಯ ಸೂರ್ಯೋದಯ ಸೂರ್ಯಾಸ್ತಗಳಾಗಲಿ, ಬೆಳದಿಂಗಳ ರಾತ್ರಿಯಾಗಲೀ ಪ್ರತಿಯೊಬ್ಬರನ್ನು ಮಂತ್ರ ಮುಗ್ಧರನ್ನಾಗಿಸುವ ಮಾಂತ್ರಿಕ ಶಕ್ತಿಯಂತಿದೆ.

ಕ್ಷೇತ್ರದ ಇತಿಹಾಸ:

ಶಕ್ತಿಯುತ ಸ್ಥಳಕ್ಕೆ ಪುರಾಣದ ಹಿನ್ನೆಲೆಯೂ ಇಲ್ಲದಿಲ್ಲ, ಮಹಾಭಾರತದ ಕುರುಕ್ಷೇತ್ರದ ಯುದ್ಧದ ಬಳಿಕ ಪಾಂಡವರು ತಮ್ಮ ಪಾಪ ವಿಮೋಚನೆಗಾಗಿ ದಕ್ಷಿಣದ ಪುಣ್ಯಕ್ಷೇತ್ರವನ್ನು ಸಂದರ್ಶಿಸುತ್ತಾ, ಹರಿನರರು ಈ ಗಿರಿಯನ್ನೇರಿದರೆಂದೂ, ಶ್ರೀಹರಿಯು ತಾನು ತಂಗಿದ ಕುರುಹಿಗಾಗಿ ತನ್ನ ಆಯುಧದಿಂದ ಶಂಖ, ಚಕ್ರ, ಗದಾ, ಪದ್ಮಾಕಾರದ ತೀರ್ಥಕೂಪಗಳನ್ನು ನಿರ್ಮಿಸಿದನೆಂದೂ, ಈ ತೀರ್ಥಗಳ ಸ್ನಾನದಿಂದ ಬಾಹ್ಯಾಂತರ ಶು ಶುಚಿರ್ಭೂತನಾಗಿ ಅರ್ಜುನನು ಶಿಲೆಯಿಂದ ಶಿವಲಿಂಗವನ್ನು ಪ್ರತಿಷ್ಠಿಸಿ ಹರಿ ಸಮೇತನಾಗಿ ಹರನ ಪೂಜೆ ಮಾಡಿ ವರ ಪ್ರಸಾದ ಪಡೆದನೆಂದೂ ತತ್ಪರಿಣಾಮವಾಗಿ ಈ ಕ್ಷೇತ್ರವು ನರಹರಿ ಸದಾಶಿವ ಎಂಶ ನಾಮಾಂಕಿತವನ್ನು ಪಡೆಯಿತೆಂದೂ ಪುರಾಣ ಪ್ರತೀತಿಯಿದೆ.

ಕ್ಷೇತ್ರದ ವಿಶೇಶತೆ:

ನಾಸ್ತಿಕನನ್ನು ಆಸ್ತಿಕನನ್ನಾಗಿ ಪರಿವರ್ತಿಸುವ ಈ ಪ್ರೇಕ್ಷಣೀಯ ಪುಣ್ಯ ಕ್ಷೇತ್ರದಲ್ಲಿ ಕರ್ಕಾಟಕ, ಸಿಂಹ ಮಾಸಗಳ ಅಮಾವಾಸ್ಯೆಗಳಲ್ಲೂ, ಕಾರ್ತಿಕ ಮಾಸದ ಸೋಮುವಾರಗಳಲ್ಲೂ ಭಕ್ತಾದಿಗಳುಬಂದು ಹರಿಹರರ ಸೇವೆ ಮಾಡಿ ಚತುರ್ವಿಧ ಪುಣ್ಯ ಫ‌ಲ ಪಡೆಯುತ್ತಿದ್ದಾರೆ.ಈ ಕ್ಷೇತ್ರದಲ್ಲಿ ಬಲಿವಾಡು ಸೇವೆಯಿಂದ ಸರ್ವಭಯವೂ, ಪಾಶಾರ್ಪಣೆಯಿಂದ ಉಬ್ಬಸ ವ್ಯಾಧಿಯೂ, ತೊಟ್ಟಿಲು ಮಗು ಸೇವೆಯಿಂದ ಬಂಜೆತನವೂ ನೀಗುವುದಲ್ಲದೆ, ಎಳನೀರು ಅಭಿಷೇಕದಿಂದ ಸರ್ವ ಇಷ್ಟಾರ್ಥ ಸಿದ್ಧಿಯೂ ಆಗುವುದೆಂಬ ನಂಬಿಕೆ ಈಗಲೂ ಇದೆ.

ಸೌಂದರ್ಯದ ಚಿಲುಮೆ:

ಶ್ರೀ ನರಹರಿ ಬೆಟ್ಟದಮೇಲೆ ನಿಂತಾಗ ಎದುರುಗಡೆ ಪೂರ್ವದಲ್ಲಿ ಪ್ರಖ್ಯಾತವಾದ ಸುಳ್ಯಮಲೆ, ಬಲ್ಲಮಲೆ ಹಾಗೂ ದಕ್ಷಿಣದಲ್ಲಿ ಕಡೆಂಜ ಮಲೆ ಇದ್ದು ಅದೆಲ್ಲವನ್ನು ಈ ಬೆಟ್ಟದಮೇಲೆ ನಿಂತು ಕಣ್ತುಂಬಿ ಕೊಳ್ಳಬಹುದಾಗಿದೆ.

ಇಲ್ಲಿನ ಇನ್ನೊಂದು ವಿಶೇಷತೆಯೆಂದರೆ ಬೆಟ್ಟದ ಒಂದು ಬದಿಯಲ್ಲಿ ರಾಷ್ಟ್ರೀಯ ಹೆದ್ದಾರಿ ,ಇನ್ನೊಂದು ಬದಿಯಲ್ಲಿ ಮಂಗಳೂರು ಹಾಸನ ರೈಲುಮಾರ್ಗ, ಮಗದೊಂದು ಬದಿಯಲ್ಲಿ ಜೀವನದಿ ನೇತ್ರಾವತಿ ಹರಿಯುತ್ತದೆ, ಸುತ್ತಲೂ ಹಚ್ಚಹಸುರಿನ ಗದ್ದೆಗಳು, ತೆಂಗು ಅಡಿಕೆ ತೋಟಗಳು ಪ್ರಕೃತಿ ಮಾತೆಯ ರಮಣೀಯ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ರಾತ್ರಿ ಸಮಯದಲ್ಲಿ ಪಾಣೆಮಂಗಳೂರು, ಕಲ್ಲಡ್ಕ, ಬಿ.ಸಿ.ರೋಡು ಪ್ರದೇಶಗಳಲ್ಲಿ ಉರಿಯುವ ವಿದ್ಯುದ್ದೀಪಗಳನ್ನು ಕಂಡಾಗ ನಾವೇನು ಸ್ವರ್ಗದಲ್ಲಿದ್ದೇವೋ ಎಂಬ ಭಾವನೆ ಮೂಡುತ್ತದೆ. ಈ ಕ್ಷೇತ್ರವು ತ್ರಿವೇಣಿ ಸಂಗಮದಂತೆ ಮೂರು ಗ್ರಾಮಗಳಾದ ಪಾಣೆಮಂಗಳೂರು, ಅಮೂrರು, ಗೋಳ್ತಮಜಲು ಪ್ರದೇಶಗಳು ಸೇರಿ ತ್ರಿವೇಣಿ ಬೆಟ್ಟದಂತಿವೆ.

ಕ್ಷೇತ್ರಕ್ಕೆ ಮಾರ್ಗ:

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ 28 ಕಿಲೋಮೀಟರ್‌ ಪೂರ್ವಕ್ಕೆ ಸಾಗಿದರೆ ನರಹರಿ ಸದಾಶಿವ ದೇವಸ್ಥಾನ ಸಿಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕೇಂದ್ರದಲ್ಲಿರುವ ಬಿಸಿ ರೋಡ್‌ ಜಂಕ್ಷನ್‌ನಿಂದ 4 ಕಿಲೋಮೀಟರ್‌ ದೂರಸಾಗಿದರೆ ರಸ್ತೆಯ ಬಲಬದಿಗೆ ನರಹರಿ ಪರ್ವತ ಕಾಣ ಸಿಗುತ್ತದೆ. ಅಲ್ಲಿಂದ 1 ಕಿಲೋಮೀಟರ್‌ ಪ್ರಯಾಣಿಸಿ ನಂತರ ಮೆಟ್ಟಿಲುಗಳನ್ನು ಹತ್ತಿ ಹೋಗುವ ಮೂಲಕ ದೇವಸ್ಥಾನ ತಲುಪಬಹುದು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

web exclusive keer

ಒಂದು ಜಾಹೀರಾತು ದೇಶಕ್ಕೆ ಬೆಂಕಿ ಹಚ್ಚಿತ್ತು.. ಏನಿದು ಪೆಪ್ಸಿಯ ನಂಬರ್ ಫೀವರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.