ನನಗೆ ಟಿಕೆಟ್‌ ತಪ್ಪಲು ಕೆಲವರ ಸ್ವಾರ್ಥ ಕಾರಣ; Jagadish Shettar


Team Udayavani, Apr 16, 2023, 1:28 PM IST

4-jagadish-shettar

ಶಿರಸಿ : ನನಗೆ ಆರೋಗ್ಯವಿದೆ, ಯಾವುದೇ ಕಪ್ಪು ಚುಕ್ಕೆ ಇಲ್ಲ, ಸಣ್ಣ ಗ್ರಾಮ ಪಂಚಾಯತ್‌ ನಿಂದ ಎಲ್ಲ ಕಡೆ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ನನಗೆ ವಯಸ್ಸೂ ಇದೆ. ಯಾಕೆ ಟಿಕೆಟ್ ಕೊಟ್ಟಿಲ್ಲ ಎಂದು ಕೇಳಿದರೂ ಹೇಳಿಲ್ಲ. ಆ ನೋವಿದೆ. ಮೂಲ  ಬಿಜೆಪಿಗರನ್ನು ಹೊರಗೆ ಹಾಕಲಾಗುತ್ತಿದೆ. ಮೂಲ ಮನೆಯಿಂದ ಹೊರ ಹೋಗುವ ನೋವು ನನಗೂ ಇದೆ. ಆದರೆ, ಹುಬ್ಬಳ್ಳಿಯಿಂದ ಸ್ಪರ್ಧಿಸುವುದು ಖಚಿತ. ಆದರೆ, ಹೇಗೆ ಎಂಬುದನ್ನು ಹುಬ್ಬಳ್ಳಿಗೆ ತೆರಳಿ ಸಮಾಲೋಚನೆ ನಡಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಬಿಜೆಪಿಗೆ ರಾಜಿನಾಮೆ ನೀಡಿದ ಜಗದೀಶ್ ಶೆಟ್ಟರ್  ಹೇಳಿದರು.

ಭಾನುವಾರ (ಎ.16) ಶಿರಸಿಯ ಸ್ಪೀಕರ್ ಕಚೇರಿಗೆ ಅಗಮಿಸಿದ ಶೆಟ್ಟರ್  ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಅವರು ನನಗೆ ಹುದ್ದೆ, ಅಧಿಕಾರ ನೀಡಲಾಗಿತ್ತು ಎಂದಿದ್ದರೆ, ಟಿಕೆಟ್ ಸಲುವಾಗಿ ನನ್ನ ಪರವಾಗಿ ಆಗ ಮಾತಾಡಿ ಈಗ ಹೀಗೆ ಹೇಳಿದರೆ ಹೇಗೆ? ಹಿಂದೆ ಕೆಜೆಪಿ ಯಾಕೆ ಹೋಗಿದ್ದರು ಎಂದೂ ಕೇಳಿದ ಅವರು ಟಿಕೆಟ್ ಕೊಡದೇ ಇರಲು ಕೆಲವರ ಸ್ವಾರ್ಥ ಕಾರಣ ಎಂದರು.

ಶನಿವಾರ ಬಿಜೆಪಿ ಪ್ರಮುಖರು ಸೇರಿ ಹುಬ್ಬಳ್ಳಿಯಲ್ಲಿ ಶೆಟ್ಟರ್ ಜೊತೆ ಮಾತುಕತೆ ನಡೆಸಿದ್ದು, ಸಂಧಾನ ವಿಫಲವಾಗಿತ್ತು. ರವಿವಾರ ಬೆಳಿಗ್ಗೆ 11.10ಕ್ಕೆ ಶಿರಸಿಗೆ ಬಂದ ಶೆಟ್ಟರ್ ಅವರ ಜೊತೆ ಗಂಟೆಗಳಿಗೂ ಅಧಿಕ ಕಾಲ ಸ್ಪೀಕರ್ ಜೊತೆ ಮಾತುಕತೆ ನಡೆಸಿ ನಂತರ ರಾಜೀನಾಮೆ ನೀಡಿದರು‌.

ಆರ್‌ಎಸ್‌ಎಸ್ ಮೂಲಕ ರಾಜಕೀಯಕ್ಕೆ ಬಂದ ಜಗದೀಶ್ ಶೆಟ್ಟರ್ 1990ರಲ್ಲಿ ಹುಬ್ಬಳ್ಳಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕವಾದರು. ಅಲ್ಲಿಂದ ಪಕ್ಷದ ಬಲವರ್ಧನೆಗೆ ಇನ್ನಷ್ಟು ಕೊಡುಗೆ ಆರಂಭಿಸಿದ್ದರು.  ಕಾರ್ಯಕರ್ತರಾಗಿ ಸೇರಿ ನಾಯಕರಾಗಿ ಬೆಳೆದಿದ್ದ ಶೆಟ್ಟರ, 1994 ರಿಂದ 2023 ತನಕ 6 ಅವಧಿಗೆ  ಶಾಸಕರಾಗಿದ್ದರು.

ಸಚಿವರಾಗಿ ವಿಧಾನಸಭಾ ಸ್ಪೀಕರ್, ವಿರೋಧ ಪಕ್ಷದ ನಾಯಕನಾಗಿ, ಮುಖ್ಯಮಂತ್ರಿ ಸ್ಥಾನಕ್ಕೆ ಡಿ. ವಿ. ಸದಾನಂದ ಗೌಡ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ರಾಜ್ಯದ 21ನೇ ಮುಖ್ಯಮಂತ್ರಿಯಾಗಿ 10 ತಿಂಗಳು ಕಾರ್ಯ ಮಾಡಿದ್ದರು‌.

ಪಕ್ಷದಲ್ಲೂ ಹಿರಿತನ ಸಾಧಿಸಿದ್ದರು. ಕೇಂದ್ರ ಬಿಜೆಪಿಯ ಟಿಕೆಟ್ ಆಯ್ಕೆ ಸಮಿತಿಯಲ್ಲಿ ಕೂಡ ಇದ್ದರು. ಆದರೆ, ಇವರಿಗೇ ಟಿಕೆಟ್ ಸಿಗದೇ ಇದ್ದಾಗ ಸಿಡಿದೆದಿದ್ದರು.

ಪ್ರಮುಖರಾದ ತವನಪ್ಪ ಅಷ್ಟಗಿ, ಎಸ್.ಐ.ಚಿಕ್ಕನಗೌಡ ಇತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.