ಪ್ರಿಯಾಂಕಾ ಎರಡನೆಯ ಅಂಕ


Team Udayavani, Jul 30, 2017, 6:25 AM IST

priyanka-upendra.jpg

ಮದುವೆ ಆದಮೇಲೆ ಸಿನೆಮಾ ಮಾಡ್ತೀನಿ ಅಂತ ಅಂದುಕೊಂಡಿರಲಿಲ್ಲ. ಈಗ ಸಾಧ್ಯವಾಗುತ್ತಿದೆ. ವರ್ಷಕ್ಕೊಂದು ಸಿನೆಮಾ ಮಾಡ್ತಾ ಇದೀನಿ. ಮಕ್ಕಳನ್ನು ಚೆನ್ನಾಗಿ ಓದಿಸಬೇಕು, ಗಂಡನ ಸಕ್ಸಸ್‌ ಹಿಂದೆ ನಿಲ್ಲಬೇಕು, ಇಡೀ ಫ್ಯಾಮಿಲಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇದರತ್ತ ಮಾತ್ರ ನನ್ನ ಗಮನ. ಅದರ ಹೊರತು ಬೇರೇನೂ ಇಲ್ಲ …”

ಹಾಗಂತ ಮಮ್ಮಿ – ಸೇವ್‌ ಮೀ ಚಿತ್ರದ ಬಿಡುಗಡೆಯ ಸಂದರ್ಭದಲ್ಲಿ ಹೇಳಿಕೊಂಡಿದ್ದರು ಪ್ರಿಯಾಂಕಾ ಉಪೇಂದ್ರ. ಅದರಂತೆ ಫ್ಯಾಮಿಲಿ ನೋಡಿಕೊಳ್ಳುತ್ತ, ಗಂಡನ ಯಶಸ್ಸಿಗೆ ಸ್ಫೂರ್ತಿಯಾಗುತ್ತ ಇದ್ದಾರೆ ಪ್ರಿಯಾಂಕಾ. ಅದರ ಜೊತೆಗೆ ಈಗ ಪ್ರಿಯಾಂಕಾ ಚಿತ್ರಗಳಲ್ಲಿ ನಟಿಸುವುದನ್ನು ಹೆಚ್ಚು ಮಾಡಿದ್ದಾರೆ. ವರ್ಷಕ್ಕೊಂದು ಸಿನೆಮಾ ಮಾಡುತ್ತಿದ್ದವರು, ಈಗ ಕ್ರಮೇಣ ಸಂಖ್ಯೆ ಹೆಚ್ಚು ಮಾಡಿದ್ದಾರೆ. ಕೆಲವು ತಿಂಗಳ ಕೆಳಗೆ ಸೆಕೆಂಡ್‌ ಹಾಫ್ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಯಾ ಗಿತ್ತು. ಈಗ ಅವರು ಇನ್ನೊಂದು ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ.

ಮಮ್ಮಿ – ಸೇವ್‌ ಮೀ ಬಿಡುಗಡೆಯಾದ ನಂತರ ಆ ಚಿತ್ರದ ನಿರ್ದೇಶಕ ಲೋಹಿತ್‌ ಮತ್ತು ನಟಿ ಪ್ರಿಯಾಂಕಾ ಉಪೇಂದ್ರ ಇಬ್ಬರೂ ಇನ್ನೊಂದು ಸಿನೆಮಾ ಮಾಡಬಹುದು ಎಂಬ ಸುದ್ದಿ ಇತ್ತು. ಅದು ಮಮ್ಮಿ-2 ಆಗಿರುತ್ತದಾ ಅಥವಾ ಇನ್ನಾéವುದಾದರೂ ಚಿತ್ರವಾಗಿರುತ್ತದಾ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಈಗ ಕೊನೆಗೂ ಉತ್ತರ ಸಿಕ್ಕಿದೆ. ಪ್ರಿಯಾಂಕಾ ಮತ್ತು ಲೋಹಿತ್‌, ಹೌರಾ ಬ್ರಿಡ್ಜ್ ಎಂಬ ಹೊಸ ಚಿತ್ರದ ಮೂಲಕ ಮತ್ತೆ ಒಟ್ಟಿಗೆ ಚಿತ್ರ ಮಾಡುತ್ತಿದ್ದಾರೆ. ಹೆಸರೇ ಹೇಳುವಂತೆ, ಈ ಚಿತ್ರದ ಚಿತ್ರೀಕರಣ ಕೊಲ್ಕತಾದಲ್ಲಿ ನಡೆಯಲಿದೆ. ಕೊಲ್ಕತಾ ಮೊದಲೇ ಪ್ರಿಯಾಂಕಾ ಅವರ ತವರುಮನೆ. ಈಗ ಅಲ್ಲೇ ಪ್ರಿಯಾಂಕಾ ನಟಿಸುತ್ತಿರುವ ಕನ್ನಡ ಚಿತ್ರವೊಂದರ ಚಿತ್ರೀಕರಣ ನಡೆಯಲಿರುವುದು ವಿಶೇಷ.

ಹಲವು ವರ್ಷಗಳ ಹಿಂದೆ ಹಿಂದಿಯಲ್ಲಿ ಅದೇ ಹೆಸರಿನ ಚಿತ್ರವೊಂದು ಬಂದಿತ್ತು. ಅಶೋಕ್‌ ಕುಮಾರ್‌, ಮಧುಬಾಲಾ ಮುಂತಾದವರು ನಟಿಸಿದ್ದ ಈ ಚಿತ್ರ, ಆ ಕಾಲಕ್ಕೆ ಅದ್ಭುತ ಥ್ರಿಲ್ಲರ್‌ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾ ಗಿತ್ತು. ಈಗ ಲೋಹಿತ್‌ ನಿರ್ದೇಶಿಸುತ್ತಿರುವ ಹೌರಾ ಬ್ರಿಡ್ಜ್  ಚಿತ್ರವು ಯಾವ ಜಾನರ್‌ಗೆ ಸೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ಲೋಹಿತ್‌ ಸಹ ಈ ಬಾರಿ ಒಂದು ಥ್ರಿಲ್ಲರ್‌ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ. ಈ ಚಿತ್ರ ಬರೀ ಕನ್ನಡವಷ್ಟೇ ಅಲ್ಲ, ತಮಿಳಿನಲ್ಲೂ ಒಟ್ಟಿಗೆ ನಿರ್ಮಾಣವಾಗುವ ಸಾಧ್ಯತೆ ಇದೆ.

ಈ ಮಧ್ಯೆ ಪ್ರಿಯಾಂಕಾ ಅಭಿನಯದ ಸೆಕೆಂಡ್‌ ಹಾಫ್ ಚಿತ್ರವು ಮುಗಿಯುವ ಹಂತಕ್ಕೆ ಬಂದಿದ್ದಾರೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಿಯಾಂಕಾ ಅವರು ಪೊಲೀಸ್‌ ಕಾನ್‌ಸ್ಟೆಬಲ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು. ಸಾಮಾನ್ಯವಾಗಿ ನಾಯಕಿಯರು ಪೊಲೀಸ್‌ ಪಾತ್ರದಲ್ಲಿ ಕಾಣಿಸಿಕೊಂಡರೆ, ಅದು ಇನ್‌ಸ್ಪೆಕ್ಟರ್‌ ಪಾತ್ರವಾಗಿರುತ್ತದೆ. ಆದರೆ, ಪ್ರಿಯಾಂಕಾ ಅವರು ಪೇದೆ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಯೋಗಿ ದೇವಗಂಗೆ ಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಪಾಚೋ ಶ್ರೀಮತಿ ಖ್ಯಾತಿಯ ಶಾಲಿನಿ ಸಹ ನಟಿಸುತ್ತಿದ್ದಾರೆ.
 

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Road Trip: ಎಲ್ಲಿಗೋ ಪಯಣ… ಯಾವುದೋ ದಾರಿ!

Holidays: ಹ್ಯಾಪಿ ಹಾಲಿಡೇಸ್‌!

Holidays: ಹ್ಯಾಪಿ ಹಾಲಿಡೇಸ್‌!

5

ಅರಳುವ ಹೂವುಗಳೆ ಆಲಿಸಿರಿ: ಪರ್ಸೆಂಟೇಜಿಗಿಂತ ಬದುಕು ದೊಡ್ಡದು!

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

Moryar gudda: ಬಂಡೆಗಳ ಮೇಲೆ ಬೆರಗಿನ ಮನೆಗಳು! 

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.