ಓಹ್‌! ಒಂದು ಹಾಲಿನ ಮನವಿಯಿಂದಾಗಿ ಏನೆಲ್ಲಾ…


Team Udayavani, Oct 29, 2017, 6:55 AM IST

milk.jpg

ಹಾಲು ಮತ್ತು ಹಾಲಿನ ಉತ್ಪನ್ನಗಳ ಆದೇಶ 1992ನ್ನು ರದ್ದು ಮಾಡಲು ಅವಕಾಶ ಕೊಡಬೇಡಿ’- ಹೀಗೆ ಒಂದು ಮನವಿಯನ್ನು ಅರ್ಪಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ.  

ಕ್ಷೀರ ಕ್ರಾಂತಿಯ ರೂವಾರಿ ಎಂದೇ ಹೆಸರಾಗಿದ್ದ ಪ್ರೊ. ವಿ. ಕುರಿಯನ್‌ ಅವರು ಮಂಗಳೂರಿಗೆ ಬಂದಿದ್ದರು. ಆ ವೇಳೆಗಾಗಲೇ ನಾವೆಲ್ಲಾ ಅನಂತ್‌ನಾಗ್‌ ಅಭಿನಯದ ಶ್ಯಾಮ… ಬೆನಗಲ… ಅವರ ಮಂಥನ್‌  ನೋಡಿ “ಆಹಾ’ ಎಂದು ಕಣ್ಣರಳಿಸಿ¨ªೆವು. ನಮ್ಮೊಳಗೇ ಹೌದಲ್ಲಾ. “ಏಕ್‌ ಏಕ್‌ ಏಕ್‌ ಅನೇಕ್‌’ ಎನ್ನುವುದಕ್ಕೆ ಇದಕ್ಕಿಂತ ಉದಾಹರಣೆ ಬೇಕೇ? ಎಂದು ಒಂದು ಹೊಸ ಮಾದರಿಯನ್ನೇ ಮುಂದಿಟ್ಟುಬಿಟ್ಟಿತ್ತು. “ಹನಿ ಹನಿಗೂಡಿಸಿದರೆ ಹಳ್ಳ’ ಎನ್ನುವುದನ್ನು ನಾವು ಮೊದಲು ಕಲಿತದ್ದೇ ಆ ಮಂಥನ್‌ ಮೂಲಕ. 

ಹಾಗಾಗಿ, ಅಂತಹ ಮಂಥನ್‌ಗಳಿಗೆ ನಾಂದಿ ಹಾಡಿದ, ದೇಶಾದ್ಯಂತ ಹಾಲು ಕರೆಯುತ್ತಿದ್ದ ರೈತರ ಮುಖದಲ್ಲಿ ಮುಗುಳ್ನಗೆ ಮೂಡಿಸಿದ, ತಲೆ ಎತ್ತಿ ಸಮಾಜದಲ್ಲಿ ನಿಲ್ಲುವಂತೆ ಮಾಡಿದ್ದ ಅಮುಲ… ಜನಕ ಕುರಿಯನ್‌ ಬಂದಿ¨ªಾರೆ ಎಂದರೆ ನಾವು ಅಲ್ಲಿಗೆ ದೌಡಾಯಿಸದಿರಲು ಹೇಗೆ ಸಾಧ್ಯ? ಹಾಗೆ ನಾನು ಭೇಟಿ ಕೊಟ್ಟದ್ದು ಮಂಗಳೂರಿನ ಕೆಎಂಎಫ್ ಡೈರಿಗೆ. ಕುರಿಯನ್‌ ಅವರ ಜೊತೆ ಮಾತನಾಡಿ ಅವರ ಫೋಟೋ ಕ್ಲಿಕ್ಕಿಸಿ, ಅವರೊಡನೆ ಫೋಟೋ ಕ್ಲಿಕ್ಕಿಸಿಕೊಂಡು ಹೊರಬಂದಾಗ ಸಾಕಷ್ಟು ಜನ ಕೈನಲ್ಲಿ ಪತ್ರವೊಂದನ್ನು ಹಿಡಿದು ನಿಂತಿದ್ದರು. ಕುರಿಯನ್‌ ಅವರಿಗೆ ಕೊಡಲು ತಂದಿದ್ದ ಮನವಿ ಪತ್ರ ಅದು. 

ಕುರಿಯನ್‌ ಆ ದೊಡ್ಡ ಹಿಂಡಿನ ನಡುವೆ ನಿಂತು ಆ ಮನವಿ ಸ್ವೀಕರಿಸಿದರು. ಅಲ್ಲಿ ಸೇರಿದ್ದವರು ಹಾಲು ಉತ್ಪಾದಕರ ಒಕ್ಕೂಟದ ಸದಸ್ಯರು. ಅವರ ಮನವಿ ಒಂದೇ- ಹಾಲು ಮತ್ತು ಹಾಲಿನ ಉತ್ಪನ್ನಗಳ ಆದೇಶ-92 ಕ್ಕೆ ತಿದ್ದುಪಡಿ ತರಲು ಬಿಡಬೇಡಿ. ಇಷ್ಟು  ದಿನ ನಮ್ಮ ಬದುಕಿಗೆ ಬೆಳ್ಳನೆ ಬೆಳಕಾಗಿದ್ದ ಹಾಲೇ ನಮಗೆ ವಿಷವೂ ಆಗಿಬಿಡುತ್ತದೆ ಎಂದು ತಮ್ಮೊಳಗಿದ್ದ ಆತಂಕಕ್ಕೆ ಬಾಯಿ ಕೊಟ್ಟಿದ್ದರು. ಅದೇನದು ಎನ್ನುವ ಕುತೂಹಲಕ್ಕೆ ಬಿದ್ದ ನಾನು ಆ ಪತ್ರದೊಳಗೆ ಇಣುಕಿದೆ. ಹಾಲನ್ನು ಚಾಕಲೇಟ್‌ ಆಗಿಸುವ, ಮಿಲ್ಕ… ಪೌಡರ್‌ ಆಗಿಸುವ ಹುನ್ನಾರ ಜರುಗುತ್ತಿದೆ. ಹಾಲು ಬೇಕಾಗಿರುವ ಕಂದಮ್ಮಗಳ ಬಾಯಿಗೆ ಚಾಕಲೇಟ… ತುರುಕಲು ಬಹುರಾಷ್ಟ್ರೀಯ ಕಂಪೆನಿಗಳು ಸಜ್ಜಾಗುತ್ತಿವೆ ಎನ್ನುವ ಕಳವಳ ಅಲ್ಲಿತ್ತು. 

ಆ ವೇಳೆಗಾಗಲೇ ನಾನೂ ಸಹಾ ಸಾಕಷ್ಟು ಚಾಕಲೇಟ್‌ ತಿಂದು ಬಾಯಿ ಚಪ್ಪರಿಸಿದ್ದವನೇ. ಅಷ್ಟೇ ಅಲ್ಲ ಮಂಗಳೂರಿಗೆ ಬಂದ ಹೊಸದರಲ್ಲಿ ಕ್ಯಾಂಪ್ಕೋ ಬಿಡುಗಡೆ ಮಾಡಿದ್ದ ಚಾಕಲೇಟ್‌ಗಳನ್ನು ಕೊಂಡು ದೂರದೂರಿನ ಗೆಳೆಯರಿಗೆಲ್ಲ ಕೊರಿಯರ್‌ ಮೂಲಕ ಕಳಿಸಿಕೊಟ್ಟಿದ್ದವನು ನಾನು. ಮನಸ್ಸು ಗಲಿಬಿಲಿಯಾಗಿ ಹೋಯಿತು. ಅಲ್ಲ , ಚಾಕಲೇಟ…

ಮಾಡುವುದು ಬೇಡ ಎಂದರೆ ಹೇಗೆ? ಯಾಕೆ? ಅನಿಸಿತು. ಹಾಗೆ ನನ್ನೊಳಗೆ ಹೊಕ್ಕ ಹುಳುವನ್ನು ಬೆಂಬತ್ತಿದೆ. ಸಿಕ್ಕ ಸಿಕ್ಕ ಪುಸ್ತಕಗಳನ್ನೆಲ್ಲ ಹುಡುಕಿದೆ, ನೂರೆಂಟು ಜನರಿಗೆ ಫೋನಾಯಿಸಿದೆ. ಎಷ್ಟೋ ಕಚೇರಿಗಳ ಬಾಗಿಲು ತಟ್ಟಿದೆ. ಚಾಕಲೇಟ್‌ ಮಾರುವವರನ್ನೂ, ಚಾಕಲೇಟ್‌ ಉತ್ಪಾದಿಸುವವರನ್ನೂ, ಚಾಕಲೇಟ್‌ ತಿನ್ನುವವರನ್ನೂ, ಚಾಕಲೇಟ್‌ ಬೇಡ ಎನ್ನುವವರನ್ನೂ ಹೀಗೆ. 

ಹಾಲು ಎಂದಾಕ್ಷಣ ಇಡೀ ಜಗತ್ತು ಭಾರತದತ್ತ ನೋಡುತ್ತಿತ್ತು. ಹಾಲು ಮನೆ ಮನೆ ತಲುಪಲು, ಪ್ರತಿಯೊಬ್ಬ ಮಗುವಿಗೆ ಮೀಸೆ ಬರೆಯಲು, ಶಾಲೆಯಂಗಳದಲ್ಲಿ ನರಳುತ್ತಿದ್ದ ಮಕ್ಕಳಿಗೆ ಒಂದಿಷ್ಟು ಕಸುವು ತುಂಬಲು ಹಾಲು ಉತ್ಪಾದಕರು ಕಾರಣರಾಗಿದ್ದರು. ಹಾಲು ಉತ್ಪಾದಿಸುವುದರಲ್ಲೂ, ಅದನ್ನು ಸರಬರಾಜು ಮಾಡುವ ಜಾಲದಲ್ಲೂ ಭಾರತ ಜಗತ್ತಿನ ಗಮನ ಸೆಳೆದುಬಿಟ್ಟಿತ್ತು. ಬೆಂಗಳೂರಿನಿಂದ ಕೊಲ್ಕೊತ್ತಾಗೆ ರೈಲಿನಲ್ಲಿ ಹಾಲು ಸರಬರಾಜು ಮಾಡುವ ಮೂಲಕ ಇಡೀ ಏಷ್ಯಾದಲ್ಲಿ ಮಹತ್ವದ ಸಹಕಾರಿ ವಿಧಾನ ಎನ್ನುವ ಪ್ರಶಂಸೆಗೆ ಪಾತ್ರವಾಗಿತ್ತು. ಹಾಲು ಇಲ್ಲದೆ ಬಳಲುವ ದೆಹಲಿ, ಮುಂಬೈ, ಮದ್ರಾಸ್‌, ಕೊಲ್ಕೊತ್ತಾಗೆ ಈ ಸಹಕಾರಿ ಜಾಲ ನೆಮ್ಮದಿ ತಂದಿತ್ತು. ಅಕ್ಷರಶಃ ದೇಶ ಹಾಲಿಲ್ಲದೆ ಬಳಲದಂತೆ ನೋಡಿಕೊಂಡಿದ್ದು ಈ ಹಾಲು ಉತ್ಪಾದಕರ ಸಹಕಾರಿ ಜಾಲ.

ಯಾವಾಗ ಭಾರತ ಹೊಸ ಆರ್ಥಿಕ ನೀತಿಗೆ ಸಹಿ ಹಾಕಿತೋ ಹಾಲಿನ ಒಕ್ಕೂಟ ತತ್ತರಿಸಿಹೋಯಿತು. ಚಾಕಲೇಟ್‌ಗಳ ಮಾರುಕಟ್ಟೆಯ ದೈತ್ಯ ಬಹುರಾಷ್ಟ್ರೀಯ ಕಂಪೆನಿಗಳು ಇದೇ ನೀತಿಯಡಿ ಹಾಲನ್ನು ಚಾಕಲೇಟ್‌ ಆಗಿಸಲು ಅನುಮತಿ ನೀಡುವಂತೆ ಒತ್ತಡ ಹೇರಲು ಆರಂಭಿಸಿದವು. ಯಾವಾಗ ಸರ್ಕಾರ ಹಾಲು ಮತ್ತು ಹಾಲಿನ ಪದಾರ್ಥಗಳ ಸಂಸ್ಕರಣಾ ಘಟಕಕ್ಕೆ  ಅವಕಾಶ ನೀಡಲು ಮುಂದಾಯಿತೋ “ಹಾಲಿನ ಕ್ಷೇತ್ರದಲ್ಲಿ ಹಾಲಾಹಲದ ಹೊಳೆ ಬೇಡ’ ಎಂಬ ದನಿಗಳು ಗಟ್ಟಿಯಾಗಿ ಎದ್ದು ನಿಂತವು. 

ಇಂತಹ ಆತಂಕದೊಂದಿಗೆ ಒಕ್ಕೂಟದ ಸದಸ್ಯರು ಕುರಿಯನ್‌ ಎದುರು ನಿಂತಿದ್ದರು. ಒಂದು ಮನವಿ ಪತ್ರ ನನ್ನೊಳಗೂ ನೂರೆಂಟು ಪ್ರಶ್ನೆ ಎಬ್ಬಿಸಿತ್ತು. ದಿನಕ್ಕೆ ಹತ್ತಾರು ಹೇಳಿಕೆ, ಮನವಿ ಪತ್ರ, ಕರಪತ್ರಗಳನ್ನು ಒಂದು ಚಿಟಿಕೆ ಸುದ್ದಿಯಾಗಿ ತಳ್ಳಿಹಾಕಿಬಿಡುವ ಪತ್ರಿಕೋದ್ಯಮದ ಕಾಲದಲ್ಲಿ ಈ ಮನವಿ ನನ್ನ ಕೈ ಹಿಡಿದು ಜಗ್ಗಿತ್ತು. 

ಒಂದು ಹನ್ನೊಂದಾಯಿತು. ಹಾಲು ರೈತರ ಕಾರಣದಿಂದಾಗಿ ನನ್ನೊಳಗೆ ಹೊಕ್ಕಿದ್ದ ಗುಂಗೀ ಹುಳು ಒಂದಿಷ್ಟು ಹೆಚ್ಚೇ ಸದ್ದು ಮಾಡಲಾರಂಭಿಸಿತ್ತು. ಅದೇ ಸಮಯಕ್ಕೆ ನಾನು ಶಿವರಾಮ ಕಾರಂತರ ಜೊತೆ ಕೂರಬೇಕಾಗಿ ಬಂದಿತ್ತು, ಬಂಟವಾಳದಲ್ಲಿ. ಗ್ರಾಮೀಣ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಬೇಕಾದ ಸಂದರ್ಭ ಅದು. ಜಾಗತೀಕರಣ ಎನ್ನುವುದು ಹೆ¨ªಾರಿಗಳನ್ನು ಮಾತ್ರ ಸೃಷ್ಟಿಸುತ್ತಾ ಚಕ್ಕಡಿಯ ದಾರಿಗಳನ್ನು ನಿವಾರಿಸಿ ಹಾಕಿಬಿಡುತ್ತದೆ ಎನ್ನುವ ಆತಂಕದಲ್ಲಿದ್ದ ನಾನು ಹಾಲಿನ ಕತೆಯನ್ನು ಅವರೊಂದಿಗೆ ಹಂಚಿಕೊಂಡೆ. ನನ್ನೊಳಗಿನ ಗುಂಗೀ ಹುಳು ಈಗ ಸುಮಾರು ಜನರ ತಲೆ ಹೊಕ್ಕಿತು. ಲಾವಂಚ ಎನ್ನುವುದು ಪಶ್ಚಿಮ ಘಟ್ಟದವರಿಗೆ ಒಂದು ಹುಲ್ಲು, ಅಬ್ಬಬ್ಟಾ ಎಂದರೆ ವಿಶೇಷ ತಳಿಯ ಹುಲ್ಲು. ಆದರೆ ಅದಕ್ಕಿರುವ ಶಕ್ತಿ ನನ್ನನ್ನು ದಂಗುಬಡಿಸಿತ್ತು. ದಕ್ಷಿಣ ಕನ್ನಡದ ಯಾವುದೇ ಹೊಟೇಲ…, ಮನೆಗೆ ಹೋಗಿ ನೀವು ಕುಡಿಯುವ ನೀರಿನ ರುಚಿ, ಬಣ್ಣ ಬೇರೆ. ಏಕೆಂದರೆ, ಅದರಲ್ಲಿ ಲಾವಂಚದ ಸೊಗಡಿರುತ್ತದೆ. ಅಷ್ಟೇ ಅಲ್ಲ, ಪಶ್ಚಿಮ ಘಟ್ಟಗಳು ಇಂದು ಉರುಳದೆ ಗಟ್ಟಿಯಾಗಿ ನಿಂತಿದ್ದರೆ ಯಕಃಶ್ಚಿತ್‌ ಎಂದುಕೊಂಡುಬಿಡುವ ಈ ಲಾವಂಚದ ಪಾತ್ರ ದೊಡ್ಡದು. ಅದು ಭೂಮಿ ಸರಿಯದಂತೆ ಗಟ್ಟಿಯಾಗಿ ಬಂಧಿಸಿಡುತ್ತದೆ. ಆದರೆ ಅಮೆರಿಕ ಆ ವೇಳೆಗಾಗಲೇ ಲಾವಂಚದ ಪೇಟೆಂಟ್‌ ಪಡೆದುಕೊಂಡುಬಿಟ್ಟಿತ್ತು. 

ಆಗಲೇ ಶಿವರಾಮ ಕಾರಂತರು ನನಗೆ ಡೌನ್‌ ಟು ಅರ್ತ್‌ ಪತ್ರಿಕೆಯ ವರದಿಯ ಬಗ್ಗೆ ಹೇಳಿದ್ದು. ಸೌತೇಕಾಯಿ ಕುಟುಂಬದ 150ಕ್ಕೂ ಹೆಚ್ಚು ಬಗೆ ಅಪ್ಪಟ ಭಾರತೀಯ ಮೂಲದ್ದು, ಆದರೆ ಈಗಾಗಲೇ ಸೌತೆ ಜಾತಿಗೆ ಸೇರಿದ ಎÇÉಾ ಸಸ್ಯಗಳೂ ಅಮೆರಿಕದ ಹಕ್ಕಾಗಿದೆ ಎಂದು ದೆಹಲಿಯ ಡೌನ್‌ ಟು ಅರ್ತ್‌  ಪತ್ರಿಕೆ ವರದಿ ಮಾಡಿತ್ತು. ಭಾರತದ ವಿಶಿಷ್ಟ ಅಕ್ಕಿ ಬಾಸುಮತಿ ಅಮೆರಿಕದಲ್ಲಿ ಟೆಕÕ…ಮತಿಯಾಗಿ ಮರುನಾಮಕರಣಗೊಂಡಿತ್ತು. ಅದಿರಲಿ, ನಮ್ಮ ಹಳ್ಳಿಗಳಲ್ಲಿ ಒಟ್ಟೆ ತೊಳೆಯಲು, ಮೈ ತೊಳೆಯಲು ಬಳಸುತ್ತಿದ್ದ ಅಂಟುವಾಳಕಾಯಿಗೆ ಆಗ ಅಮೆರಿಕದ ಕಂಪೆನಿಗಳು ಪೇಟೆಂಟ್‌ ಪಡೆಯುವ ಸನ್ನಾಹ ನಡೆಸಿದ್ದವು. ಬೇವಿನ ಸಸ್ಯದ ಎಲೆ, ಬೀಜ, ತೊಗಟೆ, ಬೇರು, ಕಾಂಡ ಹೀಗೆ ಇಡೀ ಬೇವಿನ ದೇಹದ ಅಂಗಾಂಗಕ್ಕೆ 13 ಬಗೆಯ ಪೇಟೆಂಟ…ಗಳನ್ನು ಅಮೆರಿಕದ ಕಂಪೆನಿಗಳು ಪಡೆದು ಕೂತಿದ್ದವು. 

ಹಾಲಿನ ರೈತರು ಎತ್ತಿದ ಆತಂಕದ ದನಿಯೇ ನನ್ನೊಳಗೆ ಅಳಿಸಿ ಹೋಗಿರಲಿಲ್ಲ. ಆ ವೇಳೆಗೆ ಬೀಡಿ ಕಾರ್ಮಿಕರು ಎದ್ದು ನಿಂತರು. ಭಾರತ ಒಳಗೆ ಮಿನಿ ಸಿಗರೇಟ… ಹೆಜ್ಜೆ ಹಾಕಲು ಸಜ್ಜಾಗಿ ನಿಂತಿತ್ತು. ಬೀಡಿ ಉದ್ಯಮ ಕಂಗಾಲಾಗಿ ಹೋಯಿತು. ಒಮ್ಮೆ ಬಹುರಾಷ್ಟ್ರೀಯ ಕಂಪೆನಿಗಳ ಮಿನಿ ಸಿಗರೇಟುಗಳು ದೇಶದ ಒಳಗೆ ಕಾಲಿಟ್ಟರೆ ಬೀಡಿ, ಬೀಡಿ ಎಲೆಯಿಂದಲೇ ಬದುಕು ಕಂಡುಕೊಂಡ ಲಕ್ಷಾಂತರ ಕುಟುಂಬಗಳು ತತ್ತರಿಸಿ ಹೋಗಲಿದ್ದವು. ಲಕ್ಷಾಂತರ ಕುಟುಂಬಗಳಿಗೆ ಬೀಡಿ ಎನ್ನುವುದು ಬರೀ ಬೀಡಿಯಾಗಿರಲಿಲ್ಲ. ಅದು ಆರ್ಥಿಕ ಸ್ವಾತಂತ್ರ್ಯವಾಗಿತ್ತು. ಮಹಿಳೆಯರ ಸಮಾನತೆಯ ದಾರಿಯಾಗಿತ್ತು. ಮನುಷ್ಯನ ಘನತೆಯ ಬದುಕಿಗೆ ದೀವಿಗೆಯಾಗಿತ್ತು. ಇದನ್ನು ದಕ್ಷಿಣ ಕನ್ನಡದ ಮೂಲೆ ಮೂಲೆಯ ಮನೆಗಳ ಬಾಗಿಲು ತಟ್ಟಿದ್ದ ನಾನು ಕಣ್ಣಾರೆ ಕಂಡಿ¨ªೆ. 

ಆ ವೇಳೆಗೆ ಕಡಲ ಊರಿನ ಧಕ್ಕೆಗಳಲ್ಲಿ ಹಾಹಾಕಾರ ಎದ್ದಿತ್ತು. ವಿದೇಶಿ ಕಂಪೆನಿಗಳ ಹಡಗುಗಳು ಮೀನುಗಾರಿಕೆಗೆ ಇಳಿದಿದ್ದವು. ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಮೀನು ಸಾಂದ್ರತೆಯನ್ನು ಪತ್ತೆ ಮಾಡುವ, ಒಂದು ಗುಂಡಿ ಒತ್ತುವುದರ ಮೂಲಕ ಯಾಂತ್ರಿಕ ಬಲೆಯನ್ನು ಹರಡಿಬಿಡುವ, ಹಡಗಿನÇÉೇ ಅದನ್ನು ಒಣಗಿಸುವ, ಪುಡಿ ಮಾಡುವ, ಡಬ್ಬಿಗೆ ಹಾಕುವ, ಎÇÉೆಲ್ಲಿಗೋ ರಫ್ತು ಮಾಡುವ ತಾಕತ್ತು ಇರುವ ಹಡಗುಗಳು ಅವು. ದಿನವಿಡೀ ಕಡಲಿನಲ್ಲಿ ಮೀನು ಅರಸುತ್ತಾ ತಿರುಗುವ ಮೀನುಗಾರರೂ, ಇವರು ಹಿಡಿದು ತರುವ ಮೀನನ್ನೇ ನಂಬಿದ ಮೀನು ಮಾರುವ ಮಹಿಳೆಯರೂ, ಆ ಮೀನಿನ ಮೂಲಕವೇ ಒಂದು ನೆಮ್ಮದಿಯ ಆರೋಗ್ಯಕ್ಕೆ ದಾರಿ ಮಾಡಿಕೊಂಡಿದ್ದ ಮನೆಗಳವರು, ಎಲ್ಲರನ್ನೂ ಒಂದು ನಿರ್ಧಾರ ಹೊಸಕಿ ಹಾಕಿಬಿಡಲು ಸಜ್ಜಾಗಿತ್ತು. 

ಯಾರೇ ನನ್ನ ಗೆಳೆಯರನ್ನು ಪರಿಚಯ ಮಾಡಿಕೊಡುವಾಗ ನಾನು, “ನಮ್ಮ ಊರುದ, ನಮ್ಮ ನೀರುದ’ ಎನ್ನುವ ಮಾತು ಬಳಸುತ್ತೇನೆ. ಇದು ನನ್ನೊಳಗೆ ಹೊಕ್ಕು ಪಯಣ ಆರಂಭಿಸಿದ್ದೇ ಕರಾವಳಿಯ ನೂರೆಂಟು ರೀತಿಯ ಕೋಲಾಗಳಿಂದಾಗಿ. ಈಗಿನ ಬ್ರಾಂಡೆಡ್‌ ಕೋಲಾಗಳು ಬರುವ ಮುನ್ನ ಯಾವ ಕೈಗಾರಿಕಾ ಪ್ರದೇಶಕ್ಕೆ ಹೋದರೂ ನಮಗೆ ಬೇಕಾದ ನಮ್ಮ ಕಸುವು ಹೆಚ್ಚಿಸುವ, ನಮ್ಮ ಬಾಯಾರಿಕೆ ತಣಿಸುವ, ನಮ್ಮ ನೀರಿನಿಂದ ಮಾಡಿದ ನಮ್ಮ ಊರಿನ ಕೋಲಾಗಳು ಇರುತ್ತಿದ್ದವು. ಆದರೆ ಈಗ ಅದೇ ಕೈಗಾರಿಕಾ ಪ್ರದೇಶಕ್ಕೆ ಹೋಗಿ ನೋಡಿ. ದೊಡ್ಡ ಕಂಪೆನಿಗಳ ಹೊಡೆತಕ್ಕೆ ನಮ್ಮ ನೀರೂ, ನಮ್ಮ ಊರೂ ಎರಡೂ ತತ್ತರಿಸಿ ಕುಳಿತಿರುವುದು ಕಾಣುತ್ತದೆ. 

ಕೊಡೆಯೂ ತನ್ನ ಒಂದು ಕಥೆ ಹೇಳಿದ್ದು ನಾನು “ಧೋ’ ಎಂದು ದಿನಗಟ್ಟಲೆ ಸುರಿವ ಮಂಗಳೂರಿನ ಮಳೆಯಲ್ಲಿ ಕೊಡೆ ಕೊಳ್ಳಲು ಅಂಗಡಿಯೊಂದನ್ನು ಹೊಕ್ಕಾಗ. ಬೆಂಗಳೂರಿನಲ್ಲಿ ಆಡಿ ಬೆಳೆದವನಿಗೆ ಗೊತ್ತಿದ್ದದ್ದು ಒಂದು ಬ್ರಾಂಡಿನ ಕೊಡೆ ಮಾತ್ರ. ಆದರೆ ಮಂಗಳೂರಿನ ಅಂಗಡಿ ಹೊಕ್ಕವನು ಪಿಳಿ ಪಿಳಿ ಕಣ್ಣು ಬಿಡಲಾರಂಭಿಸಿ¨ªೆ. ಎಷ್ಟೊಂದು ಬ್ರಾಂಡುಗಳು. ಎಷ್ಟೊಂದು ರೀತಿಯವು. ಮಂಗಳೂರು ಮಳೆ ಹೇಗೆ ಎಂದು ಗೊತ್ತಿದ್ದು ಆ ಮಳೆಗೆ ತಕ್ಕುದಾಗಿಯೇ ರೂಪಿಸಿದ್ದ ಕೊಡೆಗಳು. ಟೂ ವ್ಹೀಲರ್‌ನಲ್ಲಿ ಹೋಗುವವರಿಗಾಗಿಯೇ ಗಾಳಿ ಧಿಕ್ಕನ್ನು ಆಧರಿಸಿ, ಸ್ಕೂಟರ್‌ನ ಎರಡೂ ಸವಾರರನ್ನು ರಕ್ಷಿಸಲು ಆಗುವಂತಹ ಕೊಡೆಗಳು. ನನಗೋ ಯಾರೋ ನನ್ನ ಬಳಿ ಬಂದು ನನ್ನ ಅಳತೆ ತೆಗೆದುಕೊಂಡು ನನಗೆ ಬೇಕಾದ ರೀತಿಯಲ್ಲಿ ಬಟ್ಟೆ ಹೊಲಿದು ಕೊಟ್ಟ ಅನುಭವ. ಆದರೆ ಈಗ ಅದೇ ಕೊಡೆ ಕಂಪೆನಿಗಳು ಎಷ್ಟು ಉಳಿದಿವೆ ಹುಡುಕಿನೋಡಿ. 

ಹೀಗೆ ಒಂದು ಹಾಲಿನ ಮನವಿ ಪತ್ರ ನನ್ನೊಳಗೆ ಒಂದು ಕಣ್ಣನ್ನು ಕೂರಿಸಿಯೇಬಿಟ್ಟಿತು. ನನ್ನೊಳಗನ್ನು ದಿನೇ ದಿನೇ ಬದಲಿಸುತ್ತಾ ಹೋಯಿತು. ಹಾಗೆ ಆಗುತ್ತಾ ಇರುವಾಗಲೇ ನಾನು ಕ್ಯೂಬಾಗೆ ಹೆಜ್ಜೆ ಹಾಕಿದ್ದು. ಅಲ್ಲಿ ಫಿಡೆಲ… ಕ್ಯಾಸ್ಟ್ರೊ  ಮಾತನಾಡುತ್ತಿದ್ದರು. ಜಗತ್ತಿನ ಎಲ್ಲಾ ದೇಶಗಳ ಯುವಕರು ತುಂಬಿದ್ದ ದೊಡ್ಡ ಸಭೆ ಅದು. ಅಲ್ಲಿ ಮತ್ತೆ ಜಿಗಿದು ಬಂದದ್ದು ಹಾಲು. ಫಿಡೆಲ… ಭಾರವಾದ ಆದರೆ ಅಷ್ಟೇ ಗಟ್ಟಿ ದನಿಯಲ್ಲಿ ಹೇಳುತ್ತಿದ್ದರು. “ಪ್ರತಿಯೊಂದು ಗ್ರಾಮ… ಹಾಲಿಗಾಗಿ ನಾನು ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡುತ್ತೇನೆ.’ ಅರೆ! ಎಂದು ಅಚ್ಚರಿಪಡುತ್ತಿರುವಾಗಲೇ ಅವರು ಮುಂದುವರಿಸಿದ್ದರು- “ಪ್ರತೀ ಬಾರಿ ಮಕ್ಕಳನ್ನು ನೋಡಿ¨ªಾಗ ಅವರು ಮಹಾಯುದ್ಧದ ಮಧ್ಯೆ ನಿಂತಿ¨ªಾರೆ ಎನಿಸುತ್ತದೆ. ಹಾಲುಗಲ್ಲದ ಮಕ್ಕಳು ಯುದ್ಧದ ಮಧ್ಯೆ ಇರುವ ಯೋಧರಾಗಿ ಕಾಣುತ್ತಿ¨ªಾರೆ’ ಎಂದರು. ಅಮೆರಿಕ ವಿಧಿಸಿದ ದಿಗ½ಂಧನ ಕ್ಯೂಬಾದ ಮಕ್ಕಳಿಂದ ಹಾಲನ್ನು ಕಿತ್ತುಕೊಂಡಿತ್ತು. ನನ್ನೊಳಗೊಂದು ನಿಟ್ಟುಸಿರು. 

ಇಷ್ಟೆಲ್ಲಾ ಆಗಿ ವರ್ಷಗಳು ಕಳೆದಿತ್ತು. ಪತ್ರಿಕೆಯಲ್ಲಿ ಕುರಿಯನ್‌ ಅವರ ಭಾಷಣವೊಂದು ದಾಖಲಾಗಿತ್ತು. ಏನು ಎಂದು ಬಿಡಿಸಿ ನೋಡಿದೆ- “ನಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ನಾವು ವಿದೇಶಿ ಚಾನಲ…ಗಳನ್ನು ನೋಡಲೆಂದೋ, ಕೋಲಾ ಕುಡಿಯಲೆಂದೋ ಪ್ರಾಣ ತೆರಲಿಲ್ಲ. ಅವರು ಸೆಣೆಸಿದ್ದು, ತ್ಯಾಗ ಮಾಡಿದ್ದು ಎಲ್ಲರೂ ಏಕಾತ್ಮಕವಾಗಿ ದುಡಿದು ದೇಶವನ್ನು ಕಟ್ಟಬಲ್ಲಂತಹ ವ್ಯವಸ್ಥೆಯನ್ನು ಸೃಷ್ಟಿಸಲೆಂದು…’ ಓಹ್‌! ಒಂದು ಹಾಲಿನ ಹನಿ ಏನೆÇÉಾ ಮಾಡಿಬಿಟ್ಟಿತು. 

– ಜಿ. ಎನ್‌. ಮೋಹನ್‌

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.