ಸೋನು ಗುಲ್ಟಾ ಹೇಳುತ್ತಾರೆ!


Team Udayavani, Apr 15, 2018, 7:30 AM IST

2.jpg

ಸೋನು ಗೌಡ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಗುಲ್ಟಾ. ಆನ್‌ಲೈನ್‌ ಕ್ರೈಮ್‌ ಹಿನ್ನೆಲೆಯಲ್ಲಿ ಸಾಗುವ ಗುಲ್ಟಾ. ಚಿತ್ರದಲ್ಲಿ ತನಗೆ ಒಳ್ಳೆಯ ಪಾತ್ರವಿದೆ ಎಂದು ಹಿಂದೊಮ್ಮೆ ಸೋನು ಹೇಳಿಕೊಂಡಿದ್ದರು. ಒಳ್ಳೆಯ ಪಾತ್ರವಷ್ಟೇ ಅಲ್ಲ, ಆ ಚಿತ್ರ ಈಗ ದೊಡ್ಡ ಹಿಟ್‌ ಆಗಿದೆ. ಅಷ್ಟೇ ಅಲ್ಲ, ಎಲ್ಲರಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿದೆ. ಈ ಚಿತ್ರದ ಯಶಸ್ಸು ಅವರಲ್ಲಿ ಇನ್ನಷ್ಟು ಉತ್ಸಾಹ ತುಂಬಿದೆ. ಅದೇ ಉತ್ಸಾಹದಲ್ಲಿ ಅವರು ತಮ್ಮ ಇನ್ನೊಂದು ಚಿತ್ರ ಕಾನೂರಾಯಣದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ.

ಅಂದಹಾಗೆ, ಕಾನೂರಾಯಣವು ಹಿರಿಯ ನಿರ್ದೇಶಕ ಟಿ.ಎಸ್‌. ನಾಗಾಭರಣ ನಿರ್ದೇಶನದ ಚಿತ್ರ. ಈ ಚಿತ್ರದ ವಿಶೇಷತೆಯೆಂದರೆ, ಈ ಚಿತ್ರವು ಬರೀ ಸಹಕಾರಿ ವ್ಯವಸ್ಥೆಯಲ್ಲಷ್ಟೇ ಅಲ್ಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವ -ಸಹಾಯ ಸಂಘಗಳ ಒಕ್ಕೂಟ ಟ್ರಸ್ಟ್‌ನ ವತಿಯಿಂದ ನಿರ್ಮಾಣವಾಗಿದೆ. ಆ ಟ್ರಸ್ಟ್‌ನ ವಿವಿಧ ಸಂಘಗಳಲ್ಲಿ ಸುಮಾರು 20 ಲಕ್ಷ ಸದಸ್ಯರಿದ್ದು, ಒಬ್ಬೊಬ್ಬ ಸದಸ್ಯ ತಲಾ 20 ರೂ. ಹಾಕಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಒಂದು ಚಿತ್ರಕ್ಕೆ ಅಷ್ಟೊಂದು ಸಂಖ್ಯೆಯ ನಿರ್ಮಾಪಕರು ಇದೇ ಮೊದಲು. ಹಾಗಾಗಿ ಇದು ದಾಖಲಾರ್ಹ ಚಿತ್ರ ಎಂದರೆ ತಪ್ಪಿಲ್ಲ. 20 ಲಕ್ಷ ಜನ 20 ರೂ. ಹಾಕಿರುವುದರಿಂದ ನಾಲ್ಕು ಕೋಟಿಯಷ್ಟು ಸಂಗ್ರಹವಾಗಿದ್ದು, ಅದರಲ್ಲಿ ಸುಮಾರು ಎರಡೂ ಕಾಲು ಕೋಟಿ ಚಿತ್ರಕ್ಕೆ ಖರ್ಚಾಗಿದೆ. ಈ ಚಿತ್ರದಲ್ಲಿ ಸೋನು ಕಾನೂರು ಎಂಬ ಊರಿನ ಮಹಿಳೆಯಾಗಿ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಅದು ಬಿಟ್ಟರೆ,  ಚಂಬಲ್‌ ಹಾಗೂ ಶಾಲಿನಿ ಐಎಎಸ್‌ ಚಿತ್ರಗಳಲ್ಲೂ ಸೋನು ನಟಿಸುತ್ತಿದ್ದಾರೆ. ಈ ಎರಡರಲ್ಲೂ ವಿಭಿನ್ನವಾದ ಪಾತ್ರಗಳು ಅವರ ಪಾಲಾಗಿವೆ. ಇದರ ಜೊತೆಗೆ ಇನ್ನೊಂದಿಷ್ಟು ಅವಕಾಶಗಳು, ಹುಡುಕಾಟಗಳು ಎಲ್ಲವೂ ನಡೆಯುತ್ತಲಿವೆ. “ನಾನು ಒಳ್ಳೆಯ ಸಿನೆಮಾಗಳನ್ನು ಆಯ್ಕೆ ಮಾಡಲು ಪ್ರಯತ್ನ ಪಡುತ್ತೀನಿ. ಹಾಗಂತ ನಾವು ಆಯ್ಕೆ ಮಾಡಿದ ಸಿನೆಮಾಗಳೆಲ್ಲವೂ ನಮ್ಮ ಸಾಮರ್ಥ್ಯವನ್ನು ಎತ್ತಿ ತೋರಿಸುತ್ತವೆ ಎನ್ನುವಂತಿಲ್ಲ. ಅಲ್ಲಿ ನಿರ್ದೇಶಕರ ಕಲ್ಪನೆ ಕೂಡಾ ಮುಖ್ಯವಾಗುತ್ತದೆ. ಆ ನಿಟ್ಟಿನಲ್ಲಿ ನಾನು ನಟಿಸಿದ ಸಿನಿಮಾಗಳ ಬಗ್ಗೆ ಖುಷಿ ಇದೆ. ಸಹಜವಾಗಿಯೇ ಕೆಲವು ಕಡೆ ಎಡವಿದ್ದೇನೆ. ಅದೊಂದು ಪಾಠ ಎಂದುಕೊಂಡು ಮುಂದೆ ಸಾಗಿದ್ದೇನೆ’ ಎನ್ನುತ್ತಾರೆ ಸೋನು.

ಟಾಪ್ ನ್ಯೂಸ್

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World earth day: ಇರುವುದೊಂದೇ ಭೂಮಿ

World earth day: ಇರುವುದೊಂದೇ ಭೂಮಿ

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಾಲವನ್ನು ತಡೆಯೋರು ಯಾರೂ ಇಲ್ಲ…

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

ಕಪಾಟಿನಲ್ಲಿ ಸಿಗುತ್ತಿದ್ದರು ರಾಜ್‌ಕುಮಾರ್‌!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

Mahavir Jayanti: ಮಹಾವೀರ ಸ್ಮರಣೆ; ಅರಮನೆಯ ಮೆಟ್ಟಿಲಿಳಿದು ಅಧ್ಯಾತ್ಮದ ಅಂಬರವೇರಿದ!

14

ನಾನು ಕೃಪಿ, ಅಶ್ವತ್ಥಾಮನ ತಾಯಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.