ಜಮಖಾನ ಹೆಣಿಗೆ ಕ್ರಾಂತಿ


Team Udayavani, Jul 22, 2018, 6:00 AM IST

13.jpg

ಒಂದಿಷ್ಟು ಬ್ಲಾಂಕೆಟ್‌ ಬೇಕಲ್ಲ’ 
ಮೊಬೈಲಿನ ಅತ್ತ ಕಡೆಯಿಂದ ಕಂಡುಕೇಳದ ದನಿ. ನಾನು ತಬ್ಬಿಬ್ಟಾದೆ. ಪರಿಚಯವೇ ಇಲ್ಲದ ಆಕೆ ನನ್ನ ನಂಬರ್‌ ಹುಡುಕಿ ಬ್ಲಾಂಕೆಟ್‌ಗೆ ಬೆೇಡಿಕೆ ಇಟ್ಟಿದ್ದರು. ಇದು ಖಂಡಿತ “ಸ್ಪಾಮ…’ ಕಾಲ್‌ ಎಂದು ನಾನು ಎರಡನೇ ಮಾತೇ ಆಡದಂತೆ ಫೋನ್‌ ಕಟ್‌ ಮಾಡುವವನಿ¨ªೆ. ಆಗ ಆ ಕಡೆಯ ದನಿ “ನೆಲ್ಸನ್‌ ಮಂಡೇಲಾಕಾರ’ ಎಂದಿತು. ತತ್‌ಕ್ಷಣ ನನ್ನ ಬೆರಳು ಅಲ್ಲೇ ನಿಂತಿತು. ಕಾಲ್‌ ಬಂದದ್ದು ಕೇರಳದಿಂದ. ಕೇಳುತ್ತಿರುವುದು ಹೊದೆಯುವ ಬ್ಲಾಂಕೆಟ್‌ಗಳನ್ನು. ಹೇಳುತ್ತಿರುವುದು ದಕ್ಷಿಣಆಫ್ರಿಕಾದ ನೆಲ್ಸನ್‌ ಮಂಡೇಲಾ ಹೆಸರು.

ನಾನು ತಬ್ಬಿಬ್ಟಾಗಿದ್ದು ಗೊತ್ತಾಯಿತೇನೋ, ಕೇರಳದ ಕೊಟ್ಟಾಯಂನ ರಾಣಿ ಥಾಮಸ್‌ ಸ್ಪಷ್ಟವಾಗಿ ಹೇಳಿದರು, “”ಜುಲೈ 18 ನೆಲ್ಸನ್‌ ಮಂಡೇಲಾ ಹುಟ್ಟುಹಬ್ಬ . ಈ ವರ್ಷಕ್ಕೆ ಇನ್ನೂ ಒಂದು ಮಹಣ್ತೀವಿದೆ. ಮಂಡೇಲಾ ಬದುಕಿದ್ದಿದ್ದರೆ ಈ ಬಾರಿ ಅವರದ್ದು 100 ನೆಯ ಹುಟ್ಟುಹಬ್ಬ. ಈ ವರ್ಷವನ್ನು ತೀರಾ ಭಿನ್ನವಾಗಿ ಆಚರಿಸಲಾಗುತ್ತಿದೆ, ಉಣ್ಣೆ ಹೊದಿಕೆಗಳನ್ನು ಹೆಣಿಗೆ ಹಾಕುವ ಮೂಲಕ. ಕರ್ನಾಟಕದಿಂದಲೂ ಹಾಗೆ ಹೆಣಿಗೆ ಹಾಕಿ ಕೊಡುವ ಉತ್ಸಾಹಿಗಳನ್ನು ಜೊತೆ ಮಾಡಿ ಕೊಡಬಹುದೆ?” 

 ಆಕೆ ನನಗೆ ಹಾಗೆ ಹೇಳುತ್ತಿರುವ ಸಮಯದಲ್ಲಿಯೇ ಜಗತ್ತು ತನ್ನ ಮನೆಯ ಮೂಲೆಯಲ್ಲಿದ್ದ ಉಣ್ಣೆಯನ್ನು ಹೊರ ತೆಗೆದಿತ್ತು. ದಕ್ಷಿಣ ಆಫ್ರಿಕಾದ ಮಂಡೇಲಾ ಸ್ವೇರ್‌ವಿನಿಂದ ವಾಷಿಂಗ್ಟನ್‌ವರೆಗೆ, ಪ್ರಾಥಮಿಕ ಶಾಲೆಗಳಿಂದ ಆಕ್ಸ್‌ಫ‌ರ್ಡ್‌ ಯೂನಿವರ್ಸಿಟಿಯವರೆಗೆ, ಪುಟ್ಟಮಕ್ಕಳಿಂದ ಹಣ್ಣು ಹಣ್ಣು ಮುದುಕರವರೆಗೆ, ಶಾಲೆ-ಆಸ್ಪತ್ರೆ-ಜೈಲು-ಹೊಟೇಲ್‌ಗ‌ಳಿಂದ ಹಿಡಿದು ಉದ್ಯಾನವನಗಳವರೆಗೆ ಎಲ್ಲೆಡೆ ಉಣ್ಣೆಯ ನೂಲು ಹೊರತೆಗೆದವರು ಹೆಣಿಗೆ ಹಾಕಲು ಶುರು ಮಾಡಿದ್ದರು. ಎಲ್ಲರೂ ತಯಾರಾಗುತ್ತಿದ್ದುದು ನೆಲ್ಸನ್‌ ಮಂಡೇಲಾ ಹುಟ್ಟು ಹಬ್ಬಕ್ಕಾಗಿ. ಮಂಡೇಲಾ ನೆನಪಿನಲ್ಲಿ ಒಂದಿಷ್ಟು ಮೈ-ಮನಸ್ಸುಗಳನ್ನು ಬೆಚ್ಚಗಿಡುವುದಕ್ಕಾಗಿ ಹೊದಿಕೆಗಳನ್ನು ಹೆಣೆಯಲು.

ಅದೊಂದು ದಿನ ನೆಲ್ಸನ್‌ ಮಂಡೇಲಾರ ಬಹುಕಾಲದ ಆಪ್ತ ಕಾರ್ಯದರ್ಶಿ ಜೆಲ್ಡಾ ಲಾ ಗ್ರಾಂಜೆ ತನ್ನ ಗೆಳತಿಯೊಂದಿಗೆ ಹರಟೆ ಹೊಡೆಯುತ್ತಿದ್ದಾಗ, “ಮಂಡೇಲಾ ನೆನಪಿಗೆ 67 ಬ್ಲಾಂಕೆಟ್‌ ಹೆಣಿಗೆ ಹಾಕಿಕೊಡು ನೋಡೋಣ’ ಎಂದರು. ಮಂಡೇಲಾ ನಿಧನರಾಗಿದ್ದ ದುಃಖದಿಂದ ಯಾರೂ ಹೊರಬರಲಾಗದಿದ್ದ ದಿನಗಳು ಅವು. ತತ್‌ಕ್ಷಣ ಗೆಳತಿ ಕ್ಯಾರೋಲಿನ್‌ ಸ್ಟೀನ್‌ ಚಾಲೆಂಜ್‌ ಸ್ವೀಕರಿಸಿಯೇ ಬಿಟ್ಟರು. ಆ ಕ್ಷಣಕ್ಕೆ ಹುಮ್ಮಸ್ಸಿನಿಂದ ಪಂಥ ಸ್ವೀಕರಿಸಿ ಬಂದ ಕ್ಯಾರೋಲಿನ್‌ಗೆ ಉಣ್ಣೆಯ ನೂಲು ಕೈನಲ್ಲಿ ಹಿಡಿದಾಗ ಗೊತ್ತಾಯಿತು, “ಇದು ಸುಲಭವಾಗಿ ಆಗುವಂತದ್ದಲ್ಲ’. ಆಗ ಆಕೆ ತನ್ನ ಗೆಳೆಯರ ಗುಂಪಿನ ಕಡೆ ನೋಡಿದರು. ಅನೇಕರು ತಾವೂ ಕೈ ಜೋಡಿಸಿದರು. ಕ್ಯಾರೋಲಿನ್‌ ತನ್ನ ಎಲ್ಲಾ ಗುಂಪಿಗೆ ಈ ವಿಷಯ ತಿಳಿಯಲಿ ಎಂದು ಫೇಸ್‌ಬುಕ್‌ ಪೇಜ್‌ ರೂಪಿಸಿದರು. ಸೋಷಿಯಲ್‌ ಮೀಡಿಯಾಗೆ ಈ ವಿಷಯ ಬಂದದ್ದೇ ತಡ, “ನಾವೂ ಇದ್ದೇವೆ, ನಾವೂ ಬ್ಲಾಂಕೆಟ್‌ ಹೆಣಿಗೆ ಹಾಕಲು ಸಿದ್ಧ’ ಎಂದು ಮುಂದೆ ಬಂದವರು ಅದೆಷ್ಟೋ ಜನ.

ಕ್ಯಾರೋಲಿನ್‌ ನೋಡನೋಡುತ್ತಿದ್ದಂತೆಯೇ ಗಡಿ ಗೋಡೆಯಿಂದ ಈ ಯೋಚನೆ ಜಿಗಿದು ಹೊರಗೋಡಿತು. ಬೀದಿಯಲ್ಲಿ, ಗಲ್ಲಿಯಲ್ಲಿ, ಬೇಲಿ ಮಳೆಯ ಮರೆಗಳಲ್ಲಿ ಎಲ್ಲೆಲ್ಲೂ ಹೆಣಿಗೆ ಶುರುವಾಗಿಯೇ ಹೋಯ್ತು. ಇಂಗ್ಲೆಂಡ್‌, ಜರ್ಮನಿ, ಅಮೆರಿಕ, ನ್ಯೂಜಿಲ್ಯಾಂಡ್‌, ಕ್ರೊಯೇಷ್ಯಾ, ಅರ್ಮೇನಿಯಾ, ಜಪಾನ್‌, ಶ್ರೀಲಂಕಾ- ಹೀಗೆ ಜನ ವಿಷಯ ಗೊತ್ತಾಗುತ್ತಿದ್ದಂತೆಯೇ ಹೆಣಿಗೆ ಕಡ್ಡಿಯನ್ನು ಕೈಗೆತ್ತಿಕೊಂಡರು.

ಆಗ ಕಣ್ಣೀರಾಗಿದ್ದು ಕ್ಯಾರೋಲಿನ್‌, “ಇಲ್ಲಿ ನನಗೆ ಹೀಗಾಗುತ್ತದೆ ಎಂದು ಖಂಡಿತ ಗೊತ್ತಿರಲಿಲ್ಲ. ಮಂಡೇಲಾ ಜಗತ್ತಿನ ಎಲ್ಲೆಡೆ ಇಷ್ಟೊಂದು ಹೃದಯಗಳಲ್ಲಿ ಅಡಗಿ ಕುಳಿತಿದ್ದಾರೆ ಎಂದೇ ತಿಳಿದಿರಲಿಲ್ಲ’. ವರ್ಣದ್ವೇಷಿ ಬೋಥಾ ಸರ್ಕಾರ ಮಂಡೇಲಾರನ್ನು ಬಂಧೀಖಾನೆಯ ಒಳಗೆ ನಡೆಸಿಕೊಂಡು ಹೋಯಿತು. ಆದರೆ ಅದೇ ವೇಳೆ ಎಷ್ಟೊಂದು ಜನ ಅವರನ್ನು ಕೈ ಹಿಡಿದು ತಮ್ಮ ಎದೆಗೂಡುಗಳ ಒಳಗೆ ಕರೆದುಕೊಂಡು ಬಿಟ್ಟರು.

ಟೀ-ಪಾರ್ಟಿಯ ಒಂದು ಹರಟೆಯಾಗಿಯಷ್ಟೇ ಮುಗಿದು ಹೋಗಬಹುದಾಗಿದ್ದ ಒಂದು ಮಾತು ಜಗತ್ತಿನ ಒಂದು ವಿಭಿನ್ನ ಚಳವಳಿಯೇ ಆಗಿ ಹೋಯಿತು. ಒಂದೊಂದು ಹೊಲಿಗೆಯೂ ಒಂದು ವಿಭಿನ್ನ ಕಥೆ ಹೇಳುತ್ತ ಹೋಯಿತು. ಪ್ರತಿಯೊಂದು ಹೆಣಿಗೆಯ ಹಿಂದೆ ಪ್ರೀತಿಯ ಹೃದಯಗಳಿದ್ದವು. ಹಾಗಾಗಿಯೇ ನೋಡನೋಡುತ್ತಿದ್ದಂತೆಯೇ 67 ಹೊದಿಕೆಗಳ ಕೆಲಸ ಹೂವೆತ್ತುವಂತೆ ಮುಗಿದು ಹೋಯಿತು. ಆದರೆ, ಹೊದಿಕೆಗಳು ಬರುವುದು ನಿಲ್ಲಲಿಲ್ಲ. ಇದರ ಜೊತೆಗೆ ಸ್ಪೆಟರ್‌ಗಳು, ಶಾಲುಗಳು, ಮಫ್ಲರ್‌ಗಳು ಹೆಣಿಗೆಯಾಗುತ್ತ ಹೋಯಿತು. “ಎದೆಎದೆಗಳ ನಡುವೆ ಇರುವ ಸೇತುವೆಗಳು ಕುಸಿದಿವೆ’ ಎಂದವರಾರು? ಹಾಗಾಗಿಯೇ ಗಿನ್ನೆಸ್‌ ದಾಖಲೆಯೊಂದು ಸೃಷ್ಟಿಯಾಯಿತು. ಈ ಯೋಜನೆ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತು. “ಬ್ಲಾಂಕೆಟ್‌ ವರ್ಲ್ಡ್ ಕಪ್‌’ ಹೆಸರಿನಲ್ಲಿ ಅದು ಒಂದು ಆಟವೇನೋ ಎನ್ನುವಂತೆ ಸಂಭ್ರಮಿಸಿದರು.

“ನಾವು ಹೆಣಿಗೆ ಹಾಕುತ್ತಾ ಹೋದೆವು. ಉಣ್ಣೆಯನ್ನು ಹೆಣಿಗೆ ಹಾಕುತ್ತ ಹಾಕುತ್ತ ತಿರುಗಿ ನೋಡಿದರೆ ನಮಗೆ ನಾವೇ ಹೆಣಿಗೆ ಹಾಕಿಕೊಂಡಿ¨ªೆವು. ಮಂಡೇಲಾ ಎನ್ನುವ ಜಾದೂ ದೇಶ-ದೇಶಗಳನ್ನು, ಅಲ್ಲಿನ ಜನರನ್ನು ಹೆಣಿಗೆ ಹಾಕಿಬಿಟ್ಟಿತು. ಜಗತ್ತು ಎಷ್ಟು ದೊಡ್ಡದು ಎಂದು ಮೊದಲು ಅನಿಸಿತ್ತು. ಆದರೆ, ನೋಡನೋಡುತ್ತಿದ್ದಂತೆಯೇ ಒಬ್ಬರಿಗೊಬ್ಬರು ಪರಿಚಯವಾಗುತ್ತ¤, ಸ್ನೇಹ ಬೆಳೆಯುತ್ತ ಜಗತ್ತು ಒಂದು ಪುಟ್ಟ ಗೂಡು ಎನಿಸಿ ಹೋಯಿತು’ ಎನ್ನುತ್ತಾರೆ ಜೆಲ್ಡಾ.

ಹನ್ನೊಂದು ವರ್ಷದ ಎಲ್ಲಾ ಗ್ರೀಲಿ ಇಬ್ಬರು ಜೈಲುವಾಸಿಗಳ ಜೊತೆ ಕೈಜೋಡಿಸಿ ಹಾಡೊಂದನ್ನು ಬರೆದಳು. ಇದು ಈಗ, “67 ಬ್ಲಾಂಕೆಟ್ಸ್‌ ಫಾರ್‌ ನೆಲ್ಸನ್‌ ಮಂಡೇಲಾ’ ಚಳವಳಿಯ ಧ್ಯೇಯಗೀತೆ. ಶಾಲೆಗಳಲ್ಲಿ, ವೃದ್ಧಾಶ್ರಮದಲ್ಲಿ, ಹೊಟೇಲ್‌ಗ‌ಳ‌ಲ್ಲಿ, ಪಾರ್ಕ್‌ಗಳಲ್ಲಿ, ಆಸ್ಪತ್ರೆಗಳಲ್ಲಿ ಹೆಣಿಗೆ ಸ್ಪರ್ಧೆ, ಹೆಣಿಗೆ ಕ್ರೀಡೆ ನಡೆಸಿದ್ದನ್ನು ನೋಡಿದ ಬಂಧೀಖಾನೆಯ ಕೈದಿಗಳು ನಮಗೂ ಮಂಡೇಲಾ ಬ್ಲಾಂಕೆಟ್‌ ಹೆಣಿಗೆ ಹಾಕಲು ಅವಕಾಶ ಕೊಡಿ’ ಎಂದು ಕೋರಿದರು. ದಕ್ಷಿಣ ಆಫ್ರಿಕಾ ಸರ್ಕಾರ ಒಪ್ಪಿದ್ದೇ ತಡ ಆ ದೇಶದ ಎಲ್ಲಾ 243 ಬಂಧೀಖಾನೆಗಳಲ್ಲಿ “ಮಂಡೇಲಾ, ಮೂಡಿ ಬಾ’ ಘೋಷಣೆ ಕೇಳಿಬಂತು.

“ಇದೊಂದು ಹೆಣಿಗೆ ಕ್ರಾಂತಿ’ ಎಂದೇ ಜಗತ್ತು ಬಣ್ಣಿಸಿತು. ಹಾಗೆ ಎಲ್ಲೆಡೆ ಸಿದ್ಧ‌ªವಾದ ಉಣ್ಣೆಯ ಹೊದಿಕೆ, ಉಡುಗೆಗಳನ್ನು ಹೊತ್ತ ತಂಡಗಳು ಬೀದಿ ಬೀದಿ ಅಲೆದವು. ಚಳಿಯಲ್ಲಿ ನಡುಗುತ್ತಿದ್ದವರು ಮಂಡೇಲಾರ ಸ್ಪರ್ಶದಲ್ಲಿ ಬೆಚ್ಚಗಾದರು. ಈ ಮಧ್ಯೆ 160×160 ಸೆಂ.ಮೀ.ಗಳ ಹಲವು ಬ್ಲಾಂಕೆಟ್‌ ತುಣುಕುಗಳು ಸೇರಿಸಲಾಯಿತು. ಪ್ರತಿಯೊಬ್ಬರಿಗೂ ಅದರಲ್ಲಿ ಏನು ಇರಬೇಕು ಎಂದು ಸೂಚಿಸಲಾಗಿತ್ತು. ಎಲ್ಲಾ ತುಣುಕುಗಳೂ ಒಂದೆಡೆ ಸೇರಿಸಿ ಜೋಡಿಸಿದಾಗ ವಾರೆವ್ವಾ ! ಇನ್ನೊಂದು ಯಕ್ಷಿಣಿ. ಜಗತ್ತಿನ ಅತ್ಯಂತ ದೊಡ್ಡ ಬ್ಲಾಂಕೆಟ್‌ನ ಹೃದಯದಲ್ಲಿ ಮಂಡೇಲಾ ಚಿತ್ರ ಮೂಡಿಬಂದಿತ್ತು.

“ಅಲ್ಲಿ ಆ ಆಗಸದಲ್ಲಿ ಬೆಳ್ಳಿ ಚುಕ್ಕೆಯಾಗಿರುವ ಮಂಡೇಲಾ ಅಲ್ಲಿಂದ ಕೆಳಗೆ ಇಣುಕಿದರೆ ಅವರ ಚಿತ್ರ ಕಾಣಬೇಕಲ್ಲವೇ? ಹಾಗಾಗಿ ಇಷ್ಟು ದೊಡ್ಡ ಮಂಡೇಲಾರ ಚಿತ್ರ ಬಿಡಿಸಿದ್ದೇವೆ’ ಎಂದು ಸಂಭ್ರಮಿಸಿದರು. “ನಾವು ಗುಲಾಮರು ಎಷ್ಟು ದೂರ ಬಂದಿದ್ದೇವೆ…’ ಎಂದಿದ್ದರು ಮಂಡೇಲಾ. ಅತಿ ದೀರ್ಘ‌ ಬಂಧೀಖಾನೆ ವಾಸದ ನಂತರ ಕ್ಯೂಬಾಗೆ ಬಂದಿಳಿದಾಗ, ಫಿಡೆಲ್‌ ಕ್ಯಾಸ್ಟ್ರೋ ಅವರ ಕೈಕುಲುಕಿದಾಗ, ಗುಲಾಮರು ಎಂದು ಕರೆದಿದ್ದ ಜಗತ್ತು ಬೆಚ್ಚಿಬಿದ್ದಿತ್ತು. ಅಂತೆಯೇ ಈಗ ಜಗತ್ತಿನ ಹಲವಾರು ಜನರು ಎಷ್ಟು ದೂರ ನಡೆದು ಬಂದರು ಆ ಮಂಡೇರಿಗಾಗಿ.

ಜಿ. ಎನ್‌. ಮೋಹನ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Theatre Day: ರಂಗದಿಂದಷ್ಟು ದೂರ…

World Theatre Day: ರಂಗದಿಂದಷ್ಟು ದೂರ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Bhuvaneshwari hegde: ಓದುಗರ ಅಭಿರುಚಿಯ ಮಟ್ಟ ಹೆಚ್ಚಿಸುವ  ಹೊಣೆ ಬರಹಗಾರರ ಮೇಲಿದೆ…

Girish Kasaravalli: ತೆರೆ ಸರಿಯುವ ಮುನ್ನ…!

Girish Kasaravalli: ತೆರೆ ಸರಿಯುವ ಮುನ್ನ…!

Holi celebration: ಹೋಳಿ ಎಂಬ ಬಣ್ಣದೋಕುಳಿ!

Holi celebration: ಹೋಳಿ ಎಂಬ ಬಣ್ಣದೋಕುಳಿ!

13

World Sparrow Day: ಮತ್ತೆ ಮನೆಗೆ ಮರಳಲಿ ಗುಬ್ಬಚ್ಚಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.